ಹೆಚ್ಚುತ್ತಿದೆ ಜಾನಪದ ಕ್ರೀಡೆಗಳತ್ತ ಒಲವು


Team Udayavani, Sep 12, 2019, 5:00 AM IST

e-20

ಜಾನಪದ ಆಟೋಟ ಈ ನೆಲದ ಸಂಸ್ಕೃತಿಯ ಪ್ರತೀಕ. ಒಂದು ಕಾಲದಲ್ಲಿ ಮನೆಯ ಅಂಗಳ, ವಠಾರ, ಗದ್ದೆ ಮೊದಲಾದೆಡೆ ಬಹುವಾಗಿ ಸದ್ದು ಮಾಡಿದ್ದ ಜಾನಪದ ಆಟಗಳು ಕಾಲ ಕ್ರಮೇಣ ಆಧುನಿಕತೆಯ ಆರ್ಭಟಕ್ಕೆ ತೆರೆಮರೆಗೆ ಸರಿದವು ಈಗ ಮತ್ತೆ ಗ್ರಾಮ್ಯ ಪ್ರದೇಶದಲ್ಲಿ ತನ್ನ ಛಾಪು ಮೂಡಿ ಸುತ್ತಿರುವುದು ಗಮನಾರ್ಹ ಸಂಗತಿ.

ಆಟಿಕೂಟ, ಕೆಸರ್‌ಡೊಂಜಿ ದಿನ ಎಂಬಿತ್ಯಾದಿ ಕೂಟಗಳ ಮೂಲಕ ಮಣ್ಣಿನಾಟವನ್ನು ಮತ್ತೆ ನೆನಪಿಸುವ ಪ್ರಯತ್ನಗಳು ನಡೆಯುತ್ತಿವೆೆ. ವರ್ಷಂಪ್ರತಿ ಗ್ರಾಮಗಳಲ್ಲಿ ಸಂಘ ಸಂಸ್ಥೆಗಳು ಜಾನಪದ ಆಟಗಳನ್ನು ಆಯೋಜಿಸಿ ಬಹುಮಾನ ವಿತರಿಸಿ ಸಂಭ್ರಮ ಸಡಗರ ಹಂಚಿಕೊಳ್ಳಲಾಗುತ್ತಿದೆ.

ವೈವಿಧ್ಯಮಯ ಜಾನಪದ ಕ್ರೀಡೆಗಳು
ಎಲ್ಲ ಜನಾಂಗಳಲ್ಲೂ, ಪ್ರದೇಶ ಗಳಲ್ಲೂ ಹಿಂದಿನ ದಿನಗಳಿಂದಲೇ ಪ್ರಚಲಿತವಾಗಿರುವ ಅನೇಕ ಜಾನಪದ ಆಟಗಳಿವೆ. ಆಟಗಳು ಪ್ರಾಚೀನ ಸಂಸ್ಕೃತಿಯನ್ನು ತಕ್ಕಮಟ್ಟಿಗೆ ಬಿಂಬಿಸುವುದು ಕೂಡ ಆಗಿದೆ. ಅಜ್ಜಿಯಾಟ, ತೋಳತೊಟ್ಟಿಲಾಟ, ಕೋಳಿಕಾದುವಿಕೆ, ಕುದುರೆ ಆಟ, ಬೀಸು ಹೊಡೆತ, ಉಪ್ಪಾಟ, ಕಪ್ಪೆಲಾಗ, ಉಸಿರು ಕಟ್ಟಿಸುವುದು, ಟೊಂಕ ಹಾಕುವುದು, ಕಾಗೆ-ಗಿಳಿ, ಕಬಡ್ಡಿ, ಹುಲಿದನ, ಪುಣಿಚ್ಚೆಲ್‌ ಆಟ, ಪಲ್ಲಿಪತ್‌, ಮರಕೋತಿಯಾಟ, ನೇಲಾಟ, ಅವಿತುಕೊಳ್ಳುವಾಟ, ದುರ್ಸುಬಾಣ, ನೀರಮೇಲೆ ಕಪ್ಪೆಲಾಗ, ತಪ್ಪಂಗಾಯಿ, ಚೆಂಡು ಹೊಡೆತ, ಕುಟ್ಟಿದೊಣ್ಣೆ, ಏಳುಪಲ್ಲೆ ಯಾಟ, ಬುಗುರಿ, ಜುಬುಲಿ, ಗೋಲಿಯಾಟ, ಏಳು ಗುಳಿಯ ಆಟ, ಕಣ್ಣಾ ಮುಚ್ಚಾಲೆ, ಗಾಡಿ ಯಾಟ, ಮೊದಲಾದ ಹೊರಾಂಗಣ ಆಟಗಳಿವೆ.

ಚೆನ್ನ ಮಣೆ, ಪಗಡೆ, ಕಲ್ಲಾಟ, ಕವಡೆ ಆಟ, ಹೊಂಗಾರನ ಕಾಯಿ, ಗಜ್ಜುಗ, ಮಂಜೊಟ್ಟಿ, ಹುಣಸೇ ಬೀಜ ಗಳಿಂದ ಆಡುವ ಆಟ ಮುಂತಾದ ಒಳಾಂಗಣ ಆಟ ಆಡುತ್ತಿದ್ದರು. ಇವು ಎಳೆಯರ ಸಣ್ತೀ ಪೂರ್ಣ ಬೆಳವಣಿ ಗೆಗೆ ಸಹಕಾರಿಯಾಗಬಲ್ಲುವು. ತುಳುನಾಡಿ ನಲ್ಲಿ ಕಂಬಳ, ಕೆಸರುಗದ್ದೆ ಕ್ರೀಡೆ ಹೀಗೆ ಹತ್ತಾರು ಬಗೆಯ ಜಾನಪದೀಯ ಸ್ಪರ್ಧೆ ಗಳಿವೆ. ಎಲ್ಲ ಆಟಗಳು ನಿಯಮಗಳ ಚೌಕಟ್ಟಿನಲ್ಲಿ ಸಾಗುವ ಕಾರಣ ಜೀವನದಲ್ಲಿ ಒಂದು ಬಗೆಯ ಶಿಸ್ತು ಮೂಡಿಸಲು ಅನುಕೂಲಕರ ಎನ್ನಬಹುದು.

ಇತ್ತೀಚಿನ ಕೆಲವು ವರ್ಷಗಳಲ್ಲಿ ಗ್ರಾಮ್ಯದ ಆಟಗಳಿಗೆ ಯುವ ಸಮುದಾಯ ಕೂಡ ಹೆಚ್ಚು ಆಸ್ಥೆ ವಹಿಸುತ್ತಿದೆ. ಅಲ್ಲಲ್ಲಿ ಸ್ಪರ್ಧೆ ಆಯೋಜಿಸಿ ಊರ-ಪರವೂರಿನ ಜನರನ್ನು ಭಾಗವಹಿಸಲು ಪ್ರೇರೆಪಿಸುತ್ತದೆ.

ಸರಕಾರ ಯುವಜನ ಇಲಾಖೆ ಮೂಲಕ ವರ್ಷಂಪ್ರತಿ ಯುವಜನ ಮೇಳ ಹಮ್ಮಿಕೊಂಡು ಉತ್ತೇಜನ ನೀಡುತ್ತಿದೆ. ಜಿಲ್ಲಾ, ರಾಜ್ಯಮಟ್ಟದ ಸ್ಪರ್ಧೆ ಏರ್ಪಡಿಸಿ ರಾಜ್ಯದ ವಿವಿಧ ಭಾಗದ ಕಲಾ ಪ್ರಕಾರಗಳನ್ನು ಪ್ರದರ್ಶಿಸುವ ಅವಕಾಶ ನೀಡಲಾಗಿದೆ. ಇದು ಯುವ ಸಮು ದಾಯ ಪಾಲ್ಗೊಳ್ಳಲು ಇರುವ ವೇದಿಕೆ. ಹಾಗಾಗಿ ಇಲ್ಲಿ ಗ್ರಾಮೀಣ ಪ್ರದೇಶದ ಸಂಸ್ಕೃತಿಯನ್ನು ಪರಿಚಿಸುವ ಅವಕಾಶ ದೊರೆಯುತ್ತದೆ. ಇದರ ಜತೆಗೆ ಶಾಲಾ ಕಾಲೇಜುಗಳಲ್ಲಿ ವಿವಿಧ ಘಟಕಗಳ ಮೂಲಕ ಜಾನಪದ ಆಟೋಟ, ನೃತ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.

-  ಕಿರಣ್‌ ಕುಂಡಡ್ಕ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.