ವಿಶ್ವ ಗೆದ್ದ ಭಾರತದ ಅಂಗವಿಕಲರು


Team Udayavani, Sep 12, 2019, 5:00 AM IST

e-23

ವಿಶ್ವಕಪ್‌ ಏಕದಿನ ಕ್ರಿಕೆಟ್‌ ಟ್ರೋಫಿ ಗೆಲ್ಲುವಲ್ಲಿ ಭಾರತ ವಿಫ‌ಲವಾಗಿರಬಹುದು. ಆದರೆ ಇಂಗ್ಲೆಂಡ್‌ನ‌ಲ್ಲಿ ನಡೆದ ವಿಕಲಚೇತನರ ವಿಶ್ವ ಕ್ರಿಕೆಟ್‌ ಕೂಟವನ್ನು ಭಾರತ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಕೋಟ್ಯಂತರ ಅಭಿಮಾನಿಗಳ ಕನಸನ್ನು ನನಸಾಗಿಸಿದೆ.

ನಾಲ್ಕು ರಾಷ್ಟ್ರಗಳ ಕದನ
ಈ ಕೂಟದಲ್ಲಿ ಇಂಗ್ಲೆಂಡ್‌, ಅಫ್ಘಾನಿಸ್ಥಾನ, ಬಾಂಗ್ಲಾದೇಶ, ಪಾಕಿಸ್ಥಾನ ಪಾಲ್ಗೊಂಡಿದ್ದವು. ರೌಂಡ್‌ ರಾಬಿನ್‌ ಪಂದ್ಯಗಳನ್ನು ಏರ್ಪಡಿಸಲಾಗಿತ್ತು. ಭಾರತ ಆಡಿದ ಎಲ್ಲ ಪಂದ್ಯಗಳಲ್ಲೂ ಗೆದ್ದು ಅಜೇಯವಾಗಿ ಸರಣಿ ಕೊನೆಗೊಳಿಸಿತು.

ಹಲವು ದೇಶಗಳಲ್ಲಿ ಶೇ.18 ರಷ್ಟು ದೈಹಿಕ ನ್ಯೂನತೆಗಳಿದ್ದರೆ ಅಂಥವರನ್ನು ಅಂಗವಿಕಲರೆಂದೇ ಪರಿಗಣಿಸಿ ವಿಕಲಚೇತನರ ತಂಡಕ್ಕೆ ಸೇರಿಸಿಕೊಳ್ಳಲಾಗುತ್ತದೆ. ಆದರೆ ಭಾರತದಲ್ಲಿ ಶೇ.40 ರಷ್ಟು ಅಂಗವಿಕಲತೆಯಿದ್ದರೆ ಮಾತ್ರ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗುತ್ತದೆ. ಬಲಿಷ್ಠ ಸ್ಪರ್ಧೆ ಇದ್ದರೂ ಭಾರತ ಫೈನಲ್‌ನಲ್ಲಿ ಮಿಂಚಿನ ಪ್ರದರ್ಶನ ನೀಡಿತು. ಇಬ್ಬರು ಬ್ಲೇಡ್‌ ಕ್ರಿಕೆಟಿಗರನ್ನು ಹೊಂದಿದ್ದ ಇಂಗ್ಲೆಂಡ್‌ ತಂಡಕ್ಕೆ ಆಘಾತ ನೀಡಿತು.

ಯಾವ ರಾಜ್ಯದಿಂದ ಎಷ್ಟು ಆಟಗಾರರು?
ಭಾರತ ತಂಡಕ್ಕೆ ವಿವಿಧ ರಾಜ್ಯಗಳಿಂದ ಆಟಗಾರರನ್ನು ಆಯ್ಕೆ ಮಾಡಲಾಗಿತ್ತು. ಕರ್ನಾಟಕದಿಂದ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದರು. ಆಂಧ್ರಪ್ರದೇಶದಿಂದ ಇಬ್ಬರು, ಕೇರಳದಿಂದ ಒಬ್ಬರು, ಜಮ್ಮು ಕಾಶ್ಮೀರದಿಂದ ಇಬ್ಬರು, ಮಹಾರಾಷ್ಟ್ರದಿಂದ ಮೂವರು, ಹರ್ಯಾಣ, ದಿಲ್ಲಿ ಹಾಗೂ ಪಂಜಾಬ್‌ನಿಂದ ತಲಾ ಒಬ್ಬ ಆಟಗಾರರು ಸ್ಥಾನ ಪಡೆದಿದ್ದರು. ಭಾರತ ತಂಡವನ್ನು ಮುಂಬೈನ ವಿಕ್ರಾಂತ ಖೇಣಿ ಮುನ್ನಡೆಸಿದ್ದರು.

ಶಿಬಿರದಿಂದ ಆಟಗಾರರ ಆಯ್ಕೆ
ಕೂಟಕ್ಕೂ ಮೊದಲು ವಿಕಲಚೇತನ ತಂಡಕ್ಕೆ ಆಯ್ಕೆ ನಡೆದಿತ್ತು. ದೇಶದ ವಿವಿಧ ರಾಜ್ಯದ ಸುಮಾರು 500ಕ್ಕೂ ಹೆಚ್ಚು ಆಸಕ್ತ ವಿಕಲಚೇತನ ಕ್ರಿಕೆಟ್‌ ಆಟಗಾರರು ಶಿಬಿರಕ್ಕೆ ಆಗಮಿಸಿದ್ದರು. ಹುಬ್ಬಳ್ಳಿಯಲ್ಲಿ ಸೇರಿ ವಿವಿಧ ಕಡೆ ಕ್ಯಾಂಪ್‌ ಆಯೋಜಿಸಲಾಗಿತ್ತು. ತಂಡದ ಆಯ್ಕೆಯ ಅನಂತರ ಹಲವು ಅಭ್ಯಾಸ ಪಂದ್ಯಗಳನ್ನು ಆಡಿಸಲಾಯಿತು. ಸರಣಿ ಆರಂಭಕ್ಕೆ 8 ದಿನ ಮುನ್ನ ಇಂಗ್ಲೆಂಡೆY ತೆರಳಿದ ತಂಡ ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿತು. ಸರಣಿಯಲ್ಲಿ ಅಫ್ಘಾನಿಸ್ಥಾನ ವಿರುದ್ಧದ ಪಂದ್ಯದಲ್ಲಿ ಭಾರತ ಅತ್ಯಂತ ರೋಚಕವಾಗಿ ಜಯಿಸಿತು. ಪಂದ್ಯಗಳು ಅಫ್ಘಾನಿಸ್ಥಾನ ವಿರುದ್ಧದ ಪಂದ್ಯದಲ್ಲಿ (ಅಫ್ಘಾನಿಸ್ಥಾನ 80) ಅಲ್ಪ ಮೊತ್ತಕ್ಕೆ ವಿಕೆಟ್‌ ಕಳೆದುಕೊಂಡು

(8 ರನ್‌ಗಳಿಗೆ 4 ವಿಕೆಟ್) ಸೋಲುವ ಭೀತಿಯಲ್ಲಿದ್ದ ಭಾರತ ತಂಡವನ್ನು ನಾಯಕ ವಿಕ್ರಾಂತ ಖೇಣಿ ಹಾಗೂ ಅನೀಶ್‌ ರಾಜನ್‌ ಜೊತೆಯಾಟದಲ್ಲಿ 63 ರನ್‌ ಗಳಿಸಿ ತಂಡವನ್ನು ಗೆಲುವಿನ ದಡಕ್ಕೆ ಮುಟ್ಟಿಸಿದರು.

ಇಂಗ್ಲೆಂಡ್‌ ತಂಡವನ್ನು ಮಣಿಸಿ ವಿಶ್ವ ಸರಣಿ ಜಯಿಸಿ ಮರಳಿದ ಭಾರತಕ್ಕೆ ಅದ್ಭುತ ಸ್ವಾಗತ ಸಿಕ್ಕಿದೆ. ಅಭಿಮಾನಿಗಳು ತಂಡದ ಆಟಗಾರರನ್ನು ಕೊಂಡಾಡಿದ್ದಾರೆ. ಆದರೆ ವಿಕಲಚೇತನ ಕ್ರಿಕೆಟನ್ನು ಇನ್ನಷ್ಟು ಪ್ರೋತ್ಸಾಹಿಸುವುದು ಆವಶ್ಯಕವಾಗಿದೆ. ತಂಡದ ಆಟಗಾರರಿಗೆ ಸರಕಾರ ಉದ್ಯೋಗಾವಕಾಶ ನೀಡಿದರೆ ಅನುಕೂಲವಾಗುತ್ತದೆ. ಅನುಕಂಪ ಬೇಡ ಪ್ರೋತ್ಸಾಹ ಬೇಕು ಎಂಬುದು ಅಂಗವಿಕಲ ಕ್ರಿಕೆಟಿಗರ ಆಗ್ರಹವಾಗಿದೆ.

ಅನೀಶ್‌ ಶ್ರೇಷ್ಠ ಬೌಲರ್‌
ಕೇರಳದ ಅನೀಶ್‌ ರಾಜನ್‌ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್‌ ಪಡೆದು ದಾಖಲೆ ನಿರ್ಮಿಸಿದರು. ಒಟ್ಟಾರೆ ಸರಣಿಯಲ್ಲಿ 12 ವಿಕೆಟ್‌ ಪಡೆದು ಅತ್ಯುತ್ತಮ ಬೌಲರ್‌ ಪ್ರಶಸ್ತಿ ಪಡೆದರು.

ವಿಲೀನದಿಂದ ಸಶಕ್ತ ತಂಡ
ವಿಕಲಚೇತನ ಕ್ರಿಕೆಟ್‌ನ ಮೂರು ಸಂಸ್ಥೆಗಳು ಅಜಿತ್‌ ವಾಡೇಕರ ಆರಂಭಿಸಿದ ಮುಂಬೈ ಅಂಗವಿಕಲರ ಸಂಸ್ಥೆಯಲ್ಲಿ ವಿಲೀನಗೊಂಡಿದ್ದರಿಂದ ಸದೃಢ ತಂಡ ಹೊರಹೊಮ್ಮಲು ಸಾಧ್ಯವಾಯಿತು.

ರಾಜ್ಯದ ಪ್ರತಿಭೆಗಳು ಆಕರ್ಷಣೆ
ಚಿಕ್ಕೂಡಿಯ ನರೇಂದ್ರ ಮಂಗೋರೆ ತಮ್ಮ ಆಲೌರೌಂಡರ್‌ ಆಟದ ಮೂಲಕ ಕೂಟದಲ್ಲಿ ಗಮನ ಸೆಳೆದವರು. ಹುಬ್ಬಳ್ಳಿ ಪ್ರೀಮಿಯರ್‌ ಲೀಗ್‌ ಸ್ಥಳೀಯ ಪಂದ್ಯದಲ್ಲೂ ನರೇಂದ್ರ ಮಂಗೋರೆ ಮಿಂಚಿನ ಪ್ರದರ್ಶನ ನೀಡಿದ್ದರು. ಉಳಿದಂತೆ ಚಿಕ್ಕಬಳ್ಳಾಪುರದ ಜಿತೇಂದ್ರ ವಿ.ಎನ್‌. ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರು. ಆಂಧ್ರಪ್ರದೇಶ ಆಟೋ ಚಾಲಕನ ಪುತ್ರನಾಗಿರುವ ರಮೇಶ್‌ ನಾಯ್ಡು ಶ್ರೇಷ್ಠ ನಿರ್ವಹಣೆ ಪ್ರದರ್ಶಿಸಿದರು. ಸುಲಕ್ಷಣ ಕುಲಕರ್ಣಿ ಮಾಜಿ ರಣಜಿ ಆಟಗಾರ ಭಾರತ ತಂಡದ ಕೋಚ್‌ ಆಗಿ ಕರ್ತವ್ಯ ನಿರ್ವಹಿಸಿದರು. ಶಿವಾನಂದ ಗುಂಜಾಳ ಟೀಮ್‌ ಮ್ಯಾನೇಜರ್‌ ಆಗಿದ್ದರು.

– ವಿಶ್ವನಾಥ ಕೋಟಿ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.