ಕರುನಾಡಿನಲ್ಲಿ ಕರಾವಳಿಯ “ಮಾಲ್ಗುಡಿ ಡೇಸ್‌’!


Team Udayavani, Jan 23, 2020, 4:48 AM IST

led-12

ಕೋಸ್ಟಲ್‌ವುಡ್‌ನ‌ಲ್ಲಿ “ಅಪ್ಪೆ ಟೀಚರ್‌’ ಸಿನೆಮಾ ಮಾಡಿದ ಸಾಧನೆ ಉಲ್ಲೇಖ ನೀಯ. ತುಳು ಸಿನೆಮಾ ರಂಗದಲ್ಲಿ ಈ ಸಿನೆಮಾ ಹೊಸ ಮನ್ವಂತರವನ್ನೇ ಸೃಷ್ಟಿಸಿತ್ತು. ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್‌ ಹಾಗೂ ಪ್ರೊಡಕ್ಷನ್‌ ಅರ್ಪಿಸಿದ ಕೆ. ರತ್ನಾಕರ್‌ ಕಾಮತ್‌ ನಿರ್ಮಾಣ ಹಾಗೂ ಕಿಶೋರ್‌ ಮೂಡುಬಿದಿರೆ ಕಥೆ-ಚಿತ್ರಕಥೆ, ನಿರ್ದೇಶನದ ಸಿನೆಮಾವಿದು.

ಈ ಸಿನೆಮಾದ ಬಳಿಕ ಇದೀಗ ಇದೇ ತಂಡ ಕರುನಾಡಿನಲ್ಲಿ “ಮಾಲ್ಗುಡಿ ಡೇಸ್‌’ ಮೂಲಕ ತೆರೆಯ ಮುಂದೆ ಬರಲು ಸಿದ್ಧತೆ ನಡೆಸಿದೆ. ಫೆ. 7ರಂದು ಸಿನೆಮಾ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ವಿಶೇಷವೆಂದರೆ, ಅಪ್ಪೆ ಟೀಚರ್‌ ನಿರ್ದೇಶಕ ಕಿಶೋರ್‌ ಮೂಡುಬಿದಿರೆ ನಿರ್ದೇಶನದ ಮಾಲ್ಗುಡಿ ಡೇಸ್‌ ಸಿನೆಮಾದಲ್ಲಿ ದೇವದಾಸ್‌ ಕಾಪಿಕಾಡ್‌ ಪುತ್ರ ಅರ್ಜುನ್‌ ಕಾಪಿಕಾಡ್‌ ಕೂಡ ಮುಖ್ಯ ಪಾತ್ರದಲ್ಲಿದ್ದಾರೆ. ಕೋಸ್ಟಲ್‌ವುಡ್‌ನ‌ಲ್ಲಿ ಹಲವು ಸಿನೆಮಾಗಳ ಮೂಲಕ ಮನೆಮಾತಾದ ಎವರ್‌ಗ್ರೀನ್‌ ಹೀರೋ ಅರ್ಜುನ್‌ ಈ ಸಿನೆಮಾದಲ್ಲಿ ಕಥೆಯ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಕೋಸ್ಟಲ್‌ವುಡ್‌ನ‌ ನಂಟು ಈ ಸಿನೆಮಾದ ಜತೆಗೆ ಬೆಸೆದುಕೊಂಡಿದೆ.

ಕಳೆದ ವರ್ಷ ಫೆ. 24ಕ್ಕೆ “ಮಾಲ್ಗುಡಿ ಡೇಸ್‌’ ಸಿನೆಮಾದ ಮುಹೂರ್ತ ನಡೆದಿತ್ತು. ಆ. 3ರ ವರೆಗೆ 3 ಹಂತದಲ್ಲಿ ಚಿತ್ರೀಕರಿಸಿ ಎಡಿಟಿಂಗ್‌ ಡಬ್ಬಿಂಗ್‌ ಮುಗಿದಿತ್ತು. ವಿಜಯ ರಾಘವೇಂದ್ರ ವಿಶೇಷ ಪಾತ್ರದ ಮೊದಲ ಪೋಸ್ಟರ್‌ ಈಗಾಗಲೇ ಸಾಕಷ್ಟು ಸುದ್ದಿ ಮಾಡುತ್ತಿದೆ. ವಿಜಯ ರಾಘವೇಂದ್ರರ ವೃತ್ತಿ ಜೀವನದಲ್ಲಿ ಇದೊಂದು ವಿಶೇಷ ಸಿನೆಮಾ. ಏಕೆಂದರೆ ಇಲ್ಲಿ ಅವರು ಹಿಂದೆಂದೂ ನಿರ್ವಹಿಸದ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅಲ್ಲದೆ ಕಳೆದ ಒಂದು ವರ್ಷಗಳಿಂದ ವಿಜಯ ರಾಘವೇಂದ್ರ ಅವರು ತಮ್ಮನ್ನು ಬೇರೆ ಯಾವ ಸಿನೆಮಾದಲ್ಲೂ ತೊಡಗಿಸದೆ ತಮ್ಮನ್ನು ಪೂರ್ತಿಯಾಗಿ ಅರ್ಪಿಸಿದ್ದಾರೆ. ಕಥಾ ನಾಯಕಿಯಾಗಿ ಗ್ರೀಷ್ಮಾ ಶ್ರೀಧರ್‌ ಅವರು ಮೊದಲ ಬಾರಿಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. ಅವರ ಜತೆ ಬಿಗ್‌ಬಾಸ್‌ ಖ್ಯಾತಿಯ ಧನರಾಜ್‌, ಗೋಪಿನಾಥ್‌ ಭಟ್‌, ರೂಪೇಶ್‌, ತೇಜಸ್ವಿನಿ, ಸಂದೇಶ್‌ ಜೈನ್‌ ಇದ್ದಾರೆ.

ಒಟ್ಟು 60 ದಿನಗಳ ಚಿತ್ರೀಕರಣವನ್ನು ಬೆಂಗಳೂರು, ಮಂಗಳೂರು, ಮೈಸೂರು, ಶಿವಮೊಗ್ಗ, ತೀರ್ಥಹಳ್ಳಿ, ಪಾಂಡಿಚೇರಿ, ಬಾಳೆಹೊನ್ನೂರು, ಕಳಸ, ಶೃಂಗೇರಿ, ಆಗುಂಬೆ, ಸುತ್ತಮುತ್ತ ಮಾಡಲಾಗಿದೆ. ಗಗನ್‌ ಬಡೇರಿಯಾ ಸಂಗೀತ ನೀಡಿದ್ದು, ಒಟ್ಟು 6 ಹಾಡುಗಳಿವೆ. ಪ್ರದೀಪ್‌ ನಾಯಕ್‌ ಸಂಕಲನ, ಉದಯ್‌ ಲೀಲಾ ಕ್ಯಾಮೆರಾ ಕೈಚಳಕವಿದೆ.

ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ರವಿಶಂಕರ್‌ ಪೈ, ಪೋಸ್ಟರ್‌ ಡಿಸೈನರ್‌ ಆಗಿ ಅಶ್ವಿ‌ನ್‌ ರಮೇಶ್‌, ಕಾಸ್ಟೂಮ್‌ ಡಿಸೈನರ್‌ ಶಿಲ್ಪಾ ಹೆಗ್ಡೆ ಮತ್ತು ರೋಷನ್‌ ಅಯ್ಯಪ್ಪ ನಿರ್ವಹಿಸಿದ್ದಾರೆ. ವಿಜಯ ರಾಘವೇಂದ್ರ ಅವರ ವಿಶೇಷ ಪಾತ್ರದ ಪ್ರೊಸ್ತೆಟಿಕ್‌ ಮೇಕಪ್‌ ಅನ್ನು ಕೇರಳ ಮೂಲದ ರೋಷನ್‌ ಎನ್‌.ಜಿ. ಮಾಡಿದ್ದಾರೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.