ಮಲ್ಲಳ್ಳಿ ಜಲಧಾರೆ ವೈಭವ


Team Udayavani, Aug 15, 2019, 5:37 AM IST

e-12

ಸಂಗಾತಿಯ ಸಾಂಗತ್ಯವಿಲ್ಲದೆ ನೊಂದು ಬೆಂದಿದ್ದ ಇಳೆಯ ಸಕಲ ಬಯಕೆಗಳನ್ನು ಪೂರೈಸುವಂತೆ ಮಳೆ ಧಾರೆಯಾಗಿ ಸುರಿಯುತ್ತಿತ್ತು. ಮುಂಗಾರಿನ ಅಭಿಷೇಕದಿಂದ ಪ್ರೀತಿಯಂಥ ಹಸಿರು ಕಣ್ಣಿಗೆ ಮುತ್ತಿಡುತ್ತಿತ್ತು. ವರ್ಷಧಾರೆಗೆ ಮೈದುಂಬಿದ ಜಲಧಾರೆಗಳು ಪ್ರವಾಸಿಗರನ್ನು ಹರ್ಷದ ಹೊನಲಿನಲ್ಲಿ ಮೀಯಿಸುತ್ತಿದ್ದವು.

ದಕ್ಷಿಣದ ಕಾಶ್ಮೀರ ಎಂದೇ ಹೆಸರಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಬಳಿಯಿರುವ ಮಲ್ಲಳ್ಳಿ ಜಲಪಾತ ನಯನ ಮನೋಹರವಾಗಿದೆ. ದೂರದಲ್ಲಿ ಮುಗಿಲನ್ನು ಚುಂಬಿಸಲೋ ಎನ್ನುವಂತೆ ನಿಂತ ಪುಷ್ಪಗಿರಿ ಬೆಟ್ಟದ ಶ್ರೇಣಿಗಳು, ಅವುಗಳ ನಡುವಿನ ಕಂದಕದಲ್ಲಿ ಒತ್ತೂತ್ತಾಗಿ ಬೆಳೆದು ನಿಂತ ವೃಕ್ಷರಾಶಿಗಳು, ಏಲಕ್ಕಿ ಹಾಗೂ ಕಾಫಿ ತೋಟಗಳು ಕಣ್ಣು ಹಾಯಿಸಿದ್ದುದ್ದಕ್ಕೂ ಹಸುರು ಹಚ್ಚವನ್ನು ಹೊದ್ದ ನಿಸರ್ಗ. ಇಂತಹ ದಟ್ಟ ಕಾನನದ ನಡುವಿನ ಸುಂದರ ಪರಿಸರದ ಮಧ್ಯದಲ್ಲಿ ಹೆಬ್ಬಂಡೆಯೊಂದರ ಮೇಲೆ ಬಳ್ಳಿ ಬಳುಕಿದಂತೆ ಗೋಚರಿಸುತ್ತದೆ ಮಲ್ಲಳ್ಳಿ ಜಲಕನ್ಯೆ.

ವಿಹಂಗಮ ದೃಶ್ಯ
ಕೊಡಗಿನ ಬೇರೆ ಜಲಧಾರೆಗಳಿಗೆ ಹೋಲಿಸಿದರೆ ಮಲ್ಲಳ್ಳಿ ಜಲಧಾರೆ ವಿಭಿನ್ನವಾಗಿಯೂ ವಿಶಿಷ್ಟವಾಗಿಯೂ ಗಮನ ಸೆಳೆಯುತ್ತದೆ. ಬೆಟ್ಟಗಳ ನಡುವಿನ ಹೆಬ್ಬಂಡೆಗಳ ಮೇಲಿನಿಂದ ಬೃಹತ್‌ ಕಂದಕಕ್ಕೆ ಸುಮಾರು ಎಂಬತ್ತು ಅಡಿ ಅಗಲವಾಗಿ ನೂರೈವತ್ತು ಅಡಿಯಷ್ಟು ಎತ್ತರದಿಂದ ಧುಮ್ಮಿ ಕ್ಕುವ ಜಲರಾಶಿ. ಬಳಿಕ ಚಿಕ್ಕಚಿಕ್ಕ ಜಲಧಾರೆಗಳಾಗಿ ತಳ ಸೇರುವುದನ್ನು ನೋಡುವುದೇ ಕಣ್ಣಿಗೆ ಹಬ್ಬವಾಗುತ್ತದೆ. ಒಂದು ಹೆಬ್ಬಂಡೆಯಿಂದ ಇನ್ನೊಂದಕ್ಕೆ ಚಿಮ್ಮುವಾಗ ಕಾಣಸಿಗುವ ಸುಂದರದೃಶ್ಯ ಹುಚ್ಚೆದ್ದು ಕುಣಿಯುವಂತೆ ಮಾಡುತ್ತದೆ. ಒಂದು ಕ್ಷಣ ಭೂತಾಯಿಯ ಒಡಲ ಬೆಳ್ಳಿಯೆಲ್ಲವೂ ಕರಗಿ ಬಂಡೆಯ ಮೇಲೆ ಹರಿಯುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ.

ಜಲಪಾತದ ವೈಶಿಷ್ಟ್ಯ
ಕೊಡಗಿನಲ್ಲಿರುವ ಬೇರೆಲ್ಲ ನದಿಗಳು ಪೂರ್ವ ದಿಕ್ಕಿಗೆ ಹರಿದು ಕಾವೇರಿಯೊಂದಿಗೆ ಸೇರಿ ಬಂಗಾಲಕೊಲ್ಲಿಯಲ್ಲಿ ವಿಲೀನವಾದರೆ ಈ ನದಿ ಮಾತ್ರ ಪಶ್ಚಿಮಕ್ಕೆ ಹರಿದು ಅರಬ್ಬಿ ಸಮುದ್ರ ಸೇರುತ್ತದೆ. ಈ ಜಲಧಾರೆಯು ಕುಮಾರಧಾರಾ ನದಿಯಿಂದ ನಿರ್ಮಿತವಾಗಿದ್ದು, ಜಲಪಾತವನ್ನು ಇಲ್ಲಿನ ಜನರು ಕುಮಾರಧಾರಾ ಜಲಧಾರೆ, ಪುಷ್ಪಹಾರಿ ಜಲಧಾರೆ, ಮಲ್ಲಳಿ ಹೊಳೆ, ಹೆಗ್ಗಡೆಮನೆ ಹೊಳೆ – ಹೀಗೆ ಹಲವು ಹೆಸರುಗಳಿಂದ ಕರೆಯುತ್ತಾರೆ.

ಹಾದಿ ಸುಲಭವೇನಿಲ್ಲ
ಮಲ್ಲಳ್ಳಿ ಜಲಧಾರೆ ಸನಿಹಕ್ಕೆ ಹೋಗಿ ಬರುವುದು ಅಷ್ಟು ಸುಲಭದ ಮಾತಲ್ಲ. ಪೇಟೆ ಪಟ್ಟಣದಿಂದ ದೂರವಾಗಿ, ಬಸ್‌ ಹಾಗೂ ಖಾಸಗಿ ವಾಹನಗಳ ಸಂಚಾರದಿಂದ ವಂಚಿತವಾಗಿರುವ ಈ ತಾಣಕ್ಕೆ ಭೇಟಿ ನೀಡಬೇಕೆಂದರೆ ಒಂದಿಡೀ ದಿನವನ್ನು ಮೀಸಲಿಡಬೇಕು. ರಕ್ತ ಹೀರಲು ಬರುವ ಜಿಗಣೆಗಳಿಂದ ತಪ್ಪಿಸಿಕೊಂಡು ಕಲ್ಲು-ಮುಳ್ಳು, ಏರು ತಗ್ಗುಗಳ ಹಾದಿಯನ್ನು ಕ್ರಮಿಸಿ ಶ್ರಮ ಪಡಬೇಕು. ಇದಕ್ಕೆಲ್ಲ ತಯಾರಿದ್ದರೆ ಮಾತ್ರ ನಾವು ಸನಿಹಕ್ಕೆ ತೆರಳಿ ಜಲಧಾರೆಯ ಸೊಬಗನ್ನು ಸವಿಯಲು ಸಾಧ್ಯ.

ಇಲ್ಲಿಗೆ ತಲುಪುವುದು ಹೇಗೆ?
ಮಲ್ಲಳ್ಳಿ ಜಲಧಾರೆಯನ್ನು ವೀಕ್ಷಿಸಲು ತೆರಳುವವರು ಕೊಡಗಿನ ತಾಲೂಕು ಕೇಂದ್ರಗಳಲ್ಲಿ ಒಂದಾದ ಸೋಮವಾರ ಪೇಟೆಗೆ ತೆರಳಿದರೆ ಅಲ್ಲಿಂದ ಶಾಂತಳ್ಳಿ ಮೂಲಕ ಸುಮಾರು ಇಪ್ಪತ್ತು ಕಿ.ಮೀ. ಸಂಚರಿಸಬೇಕು. ಅಲ್ಲಿ ಹಂಚಿನಹಳ್ಳಿ ಗ್ರಾಮ ಸಿಗುತ್ತದೆ. ಇಲ್ಲಿಂದ ಬಲಕ್ಕೆ ಮಣ್ಣುರಸ್ತೆಯಲ್ಲಿ ನಾಲ್ಕು ಕಿ.ಮೀ. ಏರು-ತಗ್ಗುಗಳನ್ನು ದಾಟಿ ಮುನ್ನಡೆಯಬೇಕು. ಹೀಗೆ ನಡೆಯುವಾಗ ಆಯಾಸವಾಗುವುದು ಸಹಜ. ಆದರೆ ಸುತ್ತಲಿನ ನಿಸರ್ಗ ಸೌಂದರ್ಯ ನಮ್ಮ ಆಯಾಸವನ್ನು ಮರೆಸಿ, ಹೊಸ ಉಲ್ಲಾಸವನ್ನು ತುಂಬುತಿರುತ್ತದೆ. ಕಾಲ್ನಡಿಗೆಯ ಹಾದಿ ಮುಗಿಯುತ್ತಿದ್ದಂತೆಯೇ ವಿಶಾಲವಾದ ಮೈದಾನ ಎದುರಾಗುತ್ತದೆ. ಇಲ್ಲಿಂದ ನಿಂತು ನೋಡಿದರೆ ದೂರದಲ್ಲಿ ಹೆಬ್ಬಂಡೆಗಳ ನಡುವೆ ಶ್ವೇತಧಾರೆಯಾಗಿ ನಾಟ್ಯಾಂಗಿಯಂತೆ ಜಲಧಾರೆ ಕಂಗೊಳಿಸುತ್ತದೆ. ಸೋಮವಾರಪೇಟೆ ತನಕ ಹಾಗೂ ಅಲ್ಲಿಂದ ಶಾಂತಳ್ಳಿ ಮೂಲಕ ಹಂಚಿನಹಳ್ಳಿ ಗ್ರಾಮದ ವರೆಗೆ ಬಸ್ಸು ಸಿಗುತ್ತದೆ. ಮುಂದೆ ನಾಲ್ಕು ಕಿ.ಮೀ.ಗಳಷ್ಟು ಟ್ರೆಕ್ಕಿಂಗ್‌ಗೆ ಹೇಳಿ ಮಾಡಿಸಿದ ದಾರಿ ಇದೆ. ಅಬ್ಬಿ ಜಲಪಾತವೂ ಸಮೀಪದಲ್ಲೇ ಇದೆ.

•ಕವಿತಾ ಎಂ.ಎಲ್., ಪುತ್ತೂರು

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.