ಪುರಾಣ ಕಥೆಗಳನ್ನು ಸಾರುವ ಕ್ಷೇತ್ರ ನಾಗರನವಿಲೆ


Team Udayavani, May 2, 2019, 11:30 AM IST

tour1

ನವಿಲು ಹಾಗೂ ಹಾವುಗಳು ಒಂದೇ ಕಡೆ ಇರುವುದಿಲ್ಲ. ಆದರೆ, ಈ ಕ್ಷೇತ್ರದಲ್ಲಿ ಹಿಂದೊಮ್ಮೆ ಹಾವು ಮತ್ತು ನವಿಲು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದವಂತೆ. ಅದೇ ಕಾರಣಕ್ಕೆ ಈ ಸ್ಥಳಕ್ಕೆ ನಾಗರ ನವಿಲೆ ಎಂಬ ಹೆಸರು ಬಂದಿದೆ ಎನ್ನುತ್ತಾರೆ ಸ್ಥಳೀಯರು.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಬಳಿ ಶ್ರೀ ಕ್ಷೇತ್ರ ನಾಗರನವಿಲೆ ಇದೆ. ಸರ್ಪ ಸಂಬಂಧಕ್ಕೆ ಕುರಿತಂತೆ ಏನೇ ಸಮಸ್ಯೆಗಳಿದ್ದರೂ ನಾಗರನವಿಲೆಗೆ ಕಾಲಿಟ್ಟರೆ ಎಲ್ಲವೂ ನಿವಾರಣೆಯಾಗುತ್ತದೆ ಎನ್ನುವುದು ಇಲ್ಲಿನವರ ನಂಬಿಕೆ. ಹೀಗಾಗಿ ಈ ಕ್ಷೇತ್ರಕ್ಕೊಮ್ಮೆ ಭೇಟಿ ನೀಡಬೇಕು, ದೇವರ ದರ್ಶನ ಪಡೆಯಬೇಕು ಎಂಬ ಇಚ್ಚೆಯಿಂದ ಮನೆಮಂದಿಯೊಂದಿಗೆ ಹೊರಟೆವು.

ಸೋಮವಾರವಾದ್ದರಿಂದ ದೇವಸ್ಥಾನದಲ್ಲಿ ಕಾಲಿಡಲೂ ಸ್ಥಳವಿರಲಿಲ್ಲ. ಅಷ್ಟು ಮಂದಿ ಭಕ್ತರು. ತುಮಕೂರು, ಚಿತ್ರದುರ್ಗ, ಮಂಡ್ಯ, ಬೆಂಗಳೂರು ಹಾಗೂ ಹಾಸನ ಜಿಲ್ಲೆಯಿಂದ ಬಂದ ಸಹಸ್ರಾರು ಭಕ್ತರು ಇಲ್ಲಿ ಸರ್ಪದೋಷ, ಕಂಕಣ ಭಾಗ್ಯ, ಪುತ್ರ ಸಂತಾನ ಭಾಗ್ಯಕ್ಕಾಗಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು.

ಪುರಾಣಗಳ ಪ್ರಕಾರ ಈ ಸ್ಥಳವನ್ನು ಮೊದಲು ಉರಗ ಮಯೂರಪುರ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತಂತೆ. ಕಾಲಾಂತರದಲ್ಲಿ ಈ ಪ್ರದೇಶದಲ್ಲಿ ನಾಗರ ಹಾವು ಮತ್ತು ನವಿಲು ಹೆಚ್ಚು ವಾಸ ಮಾಡುತ್ತಿದ್ದರಿಂದ ನಾಗರನವಿಲೆ ಎಂಬ ಹೆಸರು ಬಂತು. ನವಿಲು ಹೆಚ್ಚು ವಾಸವಾಗಿರುವ ಕಡೆ ಹಾವುಗಳು ಇರುವುದಿಲ್ಲ. ಆದರೆ ನವಿಲು ಮತ್ತು ಹಾವು ಒಟ್ಟಿಗೆ ವಾಸ ಮಾಡುತ್ತಿದ್ದುದರಿಂದ ಇದೊಂದು ಪುಣ್ಯ ಕ್ಷೇತ್ರವಾಗಿ ಬದಲಾಗಿದೆ ಎನ್ನುತ್ತದೆ ಇತಿಹಾಸ.

ಜಮದಗ್ನಿ ಋಷಿ ಈ ಕ್ಷೇತ್ರಕ್ಕೆ ಎರಡು ಕಿ.ಮೀ. ದೂರದ ರೇಚಿನಹಳ್ಳಿಯಲ್ಲಿ ತನ್ನ ಮಡದಿ ರೇಣುಕೆ ಮತ್ತು ಪುತ್ರ ಪರಶುರಾಮನೊಂದಿಗೆ ಆಶ್ರಮವಾಸಿಯಾಗಿ ನೆಲೆಸಿದ್ದರಂತೆ. ಅವರು ಉರಗ ಮಯೂರಪುರದಲ್ಲಿನ ದೇವಾಲಯಕ್ಕೆ ಆಗಮಿಸಲು ಸುರಂಗ ಮಾರ್ಗವನ್ನು ಮಾಡಿಕೊಂಡಿದ್ದರಂತೆ. ಈಗಲೂ ದೇವಾಲಯದ ಗರ್ಭಗುಡಿಯೊಳಗೆ ಸುರಂಗ ಮಾರ್ಗವಿದೆ.

ಈ ಊರಿನ ಇನ್ನೊಂದು ವಿಶೇಷವೆಂದರೆ, ಇಲ್ಲಿ ಈಶ್ವರ ಹಾಗೂ ವಿಷ್ಣು ದೇವರು ಒಂದೇ ದೇವಾಲಯದಲ್ಲಿವೆ. ಈ ದೇವತೆಗಳು ಪ್ರತ್ಯೇಕ ಗರ್ಭಗುಡಿಯಲ್ಲಿ ನೆಲೆಸಿರುವುದು ಇಲ್ಲಿನ ವಿಶೇಷ. ಇಲ್ಲಿ ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆಯ ದಿವಸ ವಿಶೇಷ ಪೂಜೆ ನಡೆಯುತ್ತದೆ.

ಶ್ರೀ ಕ್ಷೇತ್ರದಲ್ಲಿ ನಾಗೇಶ್ವರ ಮೂರ್ತಿಯನ್ನು ಪ್ರತಿಷ್ಠಾಪಿಸಿಲ್ಲ. ಬದಲಾಗಿ ಅದು ಉದ್ಬವ ಮೂರ್ತಿಯಾಗಿದೆ. ಆನಂತರ ಈ  ಕ್ಷೇತ್ರವನ್ನು ಪಂಚಲಿಂಗೇಶ್ವರ ಕ್ಷೇತ್ರವನ್ನಾಗಿ ಮಾಡಲಾಗಿದೆ. ಹೀಗಾಗಿ, ಸೋಮೇಶ್ವರ, ಚಂಡಿಕೇಶ್ವರ, ಬ್ರಹ್ಮಲಿಂಗೇಶ್ವರ, ಸಿದ್ದಲಿಂಗೇಶ್ವರ ಹಾಗೂ ನಾಗೇಶ್ವರ ಸ್ವಾಮಿ ದೇವಾಲಯಗಳಿವೆ. ಸ್ವಲ್ಪ ದೂರದಲ್ಲಿ ಪಾರ್ವತಮ್ಮನವರ ದೇವಾಲಯವೂ ಇದೆ.

ನಾಗದೋಷ ನಿವಾರಣೆಯ ಪ್ರಸಿದ್ದ ಕ್ಷೇತ್ರವಾಗಿರುವ ಇಲ್ಲಿ ಮಜ್ಜನಬಾವಿ ಇದೆ. ಚರ್ಮರೋಗ ಇರುವವರು ಹರಕೆ ಹೊತ್ತು ಜನ್ಮನಕ್ಷತ್ರದ ಪ್ರಕಾರ ಪ್ರತಿವಾರ ಶ್ರೀಕ್ಷೇತ್ರಕ್ಕೆ ಆಗಮಿಸಿ ಮಜ್ಜನಬಾವಿಯಿಂದ ಮೂರು ಕೊಡ ನೀರನ್ನು ಮೈಮೇಲೆ ಹಾಕಿಸಿಕೊಂಡು ಉರುಳು ಸೇವೆ ಮಾಡುವುದು ಇಲ್ಲಿನ ವಿಶೇಷ.

ಇಲ್ಲವೇ ಹೆಜ್ಜೆ ಸೇವೆ ಮಾಡಿ ಹಣ್ಣು ಕಾಯಿ ಅರ್ಪಿಸಿ, ದೇವಾಲಯದಲ್ಲಿ ನೀಡುವ ಹುತ್ತದ ಮಣ್ಣು ಮತ್ತು ಗಂಧವನ್ನು ಲೇಪಿಸಿಕೊಂಡರೆ ಚರ್ಮರೋಗ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಭಕ್ತರಲ್ಲಿ ಇದೆ.

ಕ್ಷೇತ್ರದ ಇತಿಹಾಸ
ಈ ಊರಿಗೂ ರಾಮಾಯಣಕ್ಕೂ ನಂಟಿದೆ ಎಂಬ ನಂಬಿಕೆ ಇದೆ. ತ್ರೇತಾಯುಗದಲ್ಲಿ ಶ್ರೀ ರಾಮ ಇಲ್ಲಿಗೆ ಬಂದು ಹೋಗಿರುವುದಕ್ಕೆ ಕುರುಹುಗಳು ಇವೆ. ದ್ವಾಪರಯುಗದಲ್ಲಿ ಪಾಂಡವರು ಅಜ್ಞಾತವಾಸ ಮಾಡಿದ ಪುಣ್ಯ ಕ್ಷೇತ್ರವೂ ಇದೆಂದು ಹೇಳಲಾಗುತ್ತಿದೆ. ವಿಷ್ಣು ಭಕ್ತನಾದ ಚಂದ್ರಹಾಸನು ಈ ಕ್ಷೇತ್ರದಲ್ಲಿ ನೆಲೆಸಿದ್ದರಂತೆ ಎಂಬ ವಿಚಾರ ಸ್ಥಳ ಪುರಾಣದಲ್ಲಿದೆ.

ರೂಟ್‌ ಮ್ಯಾಪ್‌
·  ಮಂಗಳೂರಿನಿಂದ ಚನ್ನರಾಯಪಟ್ಟಣಕ್ಕೆ 207 ಕಿ.ಮೀ. ದೂರ.
·  ಚನ್ನರಾಯಪಟ್ಟಣ ದಿಂದ ನುಗ್ಗೇಹಳ್ಳಿ ಮಾರ್ಗವಾಗಿ ಸಾಗಿದರೆ 27 ಕಿ.ಮೀ., ಬಾಗೂರು ಮಾರ್ಗವಾಗಿ 18 ಕಿ.ಮೀ.
·  ಚನ್ನರಾಯಪಟ್ಟಣ ಹತ್ತಿರವೇ ಇರುವುದರಿಂದ ಊಟ, ವಸತಿಗೆ ಸಮಸ್ಯೆಯಿಲ್ಲ.
·  ಸಾಕಷ್ಟು ಬಸ್‌ ಸೌಲಭ್ಯವಿದೆ.
·  ಖಾಸಗಿ ವಾಹನ ಮಾಡಿಕೊಂಡು ಹೋದರೆ ದಾರಿಯಲ್ಲಿ ಹಲವು ದೇವಾಲಯ, ಪ್ರವಾಸಿ ಸ್ಥಳಗಳನ್ನು ವೀಕ್ಷಿಸಬಹುದು.

   ಶಾಮಸುಂದರ್‌ ಕೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.