ಪ್ರಕೃತಿ ಸೌಂದರ್ಯದ ಖನಿ ಕೋಡಿಬೇಂಗ್ರೆ


Team Udayavani, Mar 19, 2020, 5:05 AM IST

kodibengre

ಒಂದು ಕಡೆ ಶಾಂತವಾಗಿ ಹರಿಯುವ ನದಿ, ಇನ್ನೊಂದೆಡೆ ಸಮುದ್ರ. ನಡುವೆ ತೆಂಗಿನ ತೋಟದೊಳಗೆ ಮನೆಗಳ ಸಾಲು. ಅದರ ಮಧ್ಯದಲ್ಲಿ ಕಾಂಕ್ರೀಟ್‌ ರೋಡ್‌. ಇದು ಉಡುಪಿಯ ಕೋಡಿಬೇಂಗ್ರೆ ಬೀಚ್‌ನ ಸೌಂದರ್ಯ ವೈಶಿಷ್ಟ್ಯ. ಉಡುಪಿ ಜಿಲ್ಲೆಯಲ್ಲಿ ಹಲವು ಬೀಚ್‌ಗಳಿವೆ. ಕಾಪು, ಮಲ್ಪೆ ಮಟ್ಟು ಮುಂತಾದ ಬೀಚ್‌ಗಳು ಸಾಮಾನ್ಯವಾಗಿ ತಿಳಿದಿರುವ ಬೀಚ್‌ಗಳೇ. ಆದರೆ ಅಷ್ಟೊಂದು ಜನಪ್ರಿಯತೆ ಹೊಂದಿರದ ಕೋಡಿಬೇಂಗ್ರೆ ಬೀಚ್‌ಗೆ ಒಮ್ಮೆ ಭೇಟಿ ನೀಡಲೇಬೇಕು. ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮನಸೋಲಲೇಬೇಕು.

ಈ ಕೋಡಿಬೇಂಗ್ರೆ ಬೀಚ್‌ ಸುವರ್ಣ ನದಿ ಮತ್ತು ಅರಬ್ಬೀ ಸಮುದ್ರದ ಸಂಗಮ ಸ್ಥಳವಾಗಿದೆ. ನದಿಯೂ ಕಡಲೂ ಶಾಂತವಾಗಿರುವ ಈ ರಮಣೀಯ, ಸುಂದರ ಪ್ರದೇಶದಲ್ಲಿ ಮಧ್ಯದಲ್ಲಿರುವ ಕಾಂಕ್ರೀಟ್‌ ರೋಡಿನಲ್ಲಿ ಕಾಲು ನಡಿಗೆಯಲ್ಲಿ ಸಾಗಿ ಕೋಡಿಬೇಂಗ್ರೆ ಸಂಗಮ ಸ್ಥಳಕ್ಕೆ ಹೋಗುವುದೇ ಒಂದು ರೋಮಾಂಚನ.

ಏಕಾಂತ ಬಯಸುವವರಿಗೆ ಈ ಬೀಚ್‌ ಉತ್ತಮ ಸ್ಥಳ. ಅಷ್ಟೊಂದು ಸದ್ದುಗದ್ದಲ ಇಲ್ಲದ ಈ ಪ್ರದೇಶದಲ್ಲಿ ಹಕ್ಕಿಗಳ ಚಿಲಿಪಿಲಿ, ದೂರದಲ್ಲಿ ಬಲೆ ಬೀಸುತ್ತಿರುವ ಮೀನುಗಾರರು, ಇನ್ನೊಂದು ಕಡೆಯಲ್ಲಿ ಏಕಾಗ್ರತೆಯಿಂದ ಮೀನಿಗೆ ಗಾಳ ಹಾಕುವ ಮಂದಿ, ಹಸುರು ಪರಿಸರ- ಇವೆಲ್ಲ ಬದುಕಿಗೆ ಜೀವನೋಲ್ಲಾಸವನ್ನು ತಂದು ಕೊಡುತ್ತದೆ. ಇನ್ನೂ ಮಧ್ಯಾಹ್ನದ ಹೊತ್ತಿಗೆ ಸಮಯವನ್ನು ಶಾಂತಿಯುತವಾಗಿ ಕಳೆಯಲು ಇಷ್ಟಪಡುವುದಾದರೆ ಈ ಸ್ಥಳ ಅದ್ಭುತವಾಗಿದೆ.

ಮಂಗಳೂರಿನಿಂದ ಉಡುಪಿಗೆ ಬಂದು ಅಲ್ಲಿನದ ಕೋಡಿಬೇಂಗ್ರೆ ಬೀಚ್‌ ಉಡುಪಿಯಿಂದ 18 ಕಿ.ಮೀ. ದೂರದಲ್ಲಿದೆ. ಖಾಸಗಿ ವಾಹನದಲ್ಲಾದರೆ ಉಡುಪಿಯಿಂದ ಅರ್ಧ ಗಂಟೆ ಪ್ರಯಾಣ. ಬಸ್‌ಗಳು ಕೂಡ ಇವೆ. ಮಲ್ಪೆ ಬೀಚ್‌ನಿಂದ ಹೋಗುವುದಾರೆ 10 ಕಿ.ಮೀ. ದೂರವಿದೆ.

ಬೋಟ್‌ ಹೌಸ್‌
ಇನ್ನು ನೀವು ಬೋಟ್‌ ಹೌಸ್‌ನಲ್ಲಿ ಸಂಚರಿಸಲು ಕೇರಳಕ್ಕೆ ಹೋಗಬೇಕಾಗಿಲ್ಲ. ಇಲ್ಲಿ ಅದಕ್ಕೆ ವ್ಯವಸ್ಥೆ ಇದೆ. ಬೋಟ್‌ ಹೌಸ್‌ನಲ್ಲಿ ಪ್ರಯಾಣಿಸಿ ನದಿ ಮಧ್ಯದಲ್ಲಿರುವ ಕುದ್ರು (ದ್ವೀಪ) ಗಳನ್ನು ನೋಡಬಹುದು. ನೀವು ಒಂದು ವೇಳೆ ಮೀನು ಪ್ರಿಯರಾಗಿದ್ದರೆ ಇಲ್ಲಿ ನಿಮಗೆ ವಿವಿಧ ಬಗೆಯ ರುಚಿಕರ ಮೀನಿನ ಖಾದ್ಯಗಳು ಸವಿಯಲು ಲಭ್ಯ. ಹತ್ತಿರದಲ್ಲಿ ಕೆಮ್ಮನ್ನು ಹ್ಯಾಂಗಿಂಗ್‌ ಬ್ರಿಜ್‌ ಇದೆ. ಇದು ಕೂಡ ಪ್ರಕೃತಿ ಮಧ್ಯದಲ್ಲಿ ಸುಂದರವಾಗಿ ಎಲ್ಲರನ್ನು ಕೈಬೀಸಿ ಕರೆಯುತ್ತದೆ. ಪ್ರಿ ವೆಡ್ಡಿಂಗ್‌, ಪೋಸ್ಟ್‌ ವೆಡ್ಡಿಂಗ್‌ ಪೋಟೋಗ್ರಫಿ ಮಾಡಬಯಸುವವರಿಗೆ ಈ ಹ್ಯಾಂಗಿಂಗ್‌ ಬ್ರಿಜ್‌ ಹೇಳಿ ಮಾಡಿಸಿದ ಸ್ಥಳ. ಒಟ್ಟಿನಲ್ಲಿ ನಿಮ್ಮ ಒಂದು ದಿನದ ರಜೆಯನ್ನು ಎಂಜಾಯ್‌ ಮಾಡಲು ಇದು ಸೂಕ್ತ ಸ್ಥಳ.

 ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.