ಬಿ.ಸಿ. ರೋಡ್‌: ಹದಗೆಟ್ಟ  ಸರ್ವಿಸ್‌ ರಸ್ತೆ; ಸುಗಮ ಸಂಚಾರಕ್ಕೆ ತೊಡಕು


Team Udayavani, Mar 19, 2017, 11:25 PM IST

Service-Road-19-3.jpg

ಬಂಟ್ವಾಳ: ಬಿ.ಸಿ.ರೋಡ್‌ ನಗರದ ಸರ್ವಿಸ್‌ ರಸ್ತೆ ದುಸ್ಥಿತಿಯಲ್ಲಿದ್ದು, ಸುಗಮ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ಫ್ಲೈಓವರ್‌ ತುದಿಯಲ್ಲಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ಆಗದೆ  ಈ ಹಿಂದೆ ಸಂಚಾರಕ್ಕೆ ತೊಡಕಾಗಿತ್ತು. ಅದು ನಿವಾರಣೆ ಆಗುತ್ತಿದ್ದಂತೆ ಇಲ್ಲಿನ ಸರ್ವಿಸ್‌ ರಸ್ತೆಯ ಸಮಸ್ಯೆ ಮುನ್ನೆಲೆಗೆ ಬಂದಿದೆ. ಈ ರಸ್ತೆಯು ಗ್ರಾಮೀಣ ರಸ್ತೆಗಿಂತಲೂ ಕಳಪೆಯಾಗಿದೆ. ಇದರಿಂದ ಮತ್ತೆ ಟ್ರಾಫಿಕ್‌ ಜಾಮ್‌ ಭೀತಿ ತಲೆದೋರಿದೆ.

ಕಾಯಕಲ್ಪವೇ ಆಗಿಲ್ಲ
ಸರ್ವಿಸ್‌ ರಸ್ತೆಗೆ ಫ್ಲೈಓವರ್‌ನಂತೆ ಎರಡು ದಶಕಗಳ ಇತಿಹಾಸವಿದೆ. ಮೇಲ್ಸೇತುವೆ ನಿರ್ಮಾಣ ಆಗುವ ಮೊದಲೇ ಸರ್ವಿಸ್‌ ರಸ್ತೆ ಹಾಳಾಗಿತ್ತು. ಆದರೂ ಇದುವರೆಗೆ ಅದು ಸುಸ್ಥಿತಿಗೆ ಬಂದಿಲ್ಲ. ಈ ರಸ್ತೆಯ ಚರಂಡಿ ನಿರ್ಮಾಣದ ಕೆಲಸ ಈಗ ಆರಂಭವಾಗಿದ್ದು, ಮಂದಗತಿಯಲ್ಲಿ ನಡೆಯುತ್ತಿದೆ. ಎರಡು ತಿಂಗಳ ಹಿಂದೆ ನೂತನ ದ.ಕ. ಜಿಲ್ಲಾಧಿಕಾರಿ ಬಂದು ಬಿ.ಸಿ.ರೋಡ್‌ ನಗರ ಪ್ರದಕ್ಷಿಣೆ ಹಾಕಿದ್ದರು. ಜಿಲ್ಲಾ ಪೊಲೀಸ್‌ ಅಧೀಕ್ಷಕರು ಬಂದು ನೋಡಿದರೂ ಪ್ರಯೋಜನವಾಗಿಲ್ಲ ಎಂಬುದು ನಾಗರಿಕರ ದೂರು. ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಬಹುತೇಕ ಅಭಿವೃದ್ಧಿ ಕಾರ್ಯ ಅಪೂರ್ಣವಾಗಿದ್ದು, ಯಾವುದೂ ಮುಗಿಯುತ್ತಿಲ್ಲ ಎಂಬುದು ಜನರು ಮತ್ತು ವ್ಯಾಪಾರಸ್ಥರ ಕೊರಗು.

ನಾಗರಿಕರ ಯಾತನೆ 
ಬಿ.ಸಿ. ರೋಡ್‌, ಬಂಟ್ವಾಳ, ಪಾಣೆಮಂಗಳೂರು ಮತ್ತು ಮೆಲ್ಕಾರ್‌ ಭಾಗಗಳಲ್ಲಿ ಯಾವುದೇ ರಸ್ತೆಗಳಲ್ಲಿ ಸಂಚಾರಿ ನಿಯಮಗಳ ಪಾಲನೆ ಸಾಧ್ಯವಿಲ್ಲದಂತಾಗಿದೆ. ಬಿ.ಸಿ.ರೋಡ್‌ ಸರ್ಕಲ್‌ನಲ್ಲಿ ಧರ್ಮಸ್ಥಳ ಕಡೆಗೆ ಹೋಗುವುದಿದ್ದರೆ ಬಿ.ಸಿ. ರೋಡ್‌ ಜಂಕ್ಷನ್‌ (ನಾರಾಯಣ ಗುರು ವೃತ್ತ)ನಿಂದ ಬೈಪಾಸ್‌ ರಸ್ತೆಯಲ್ಲಿ ಸಾಗಬೇಕು. ಬಲಕ್ಕೆ ತಿರುಗಿದರೆ ಬಂಟ್ವಾಳ ಪೇಟೆ ಸಿಗುತ್ತದೆ. ನೀವು ಪೇಟೆಗೆ ಹೋಗುವಿರಿ ಎಂದಾದರೆ ಮೈಯೆಲ್ಲ ಕಣ್ಣಿದ್ದರೂ ಸಾಲದು. ಬೈಪಾಸ್‌ ರಸ್ತೆಯಿಂದ ಬಿ.ಸಿ. ರೋಡ್‌ ಕಡೆಗೆ ಬರುವ ವಾಹನಗಳು ಕಾಣಿಸೋದು ಕಷ್ಟ. ಯಾವಾಗ ಅಪಘಾತ ಸಂಭವಿಸುತ್ತದೋ ಎಂದು ಹೇಳಲಿಕ್ಕಾಗದು. ರಾತ್ರಿಯಂತೂ ಇನ್ನೂ ಅಪಾಯಕಾರಿ.

ಬಿ.ಸಿ.ರೋಡ್‌ ವೃತ್ತದಿಂದ ಮಂಗಳೂರು ಕಡೆಗೆ ಮೇಲ್ಸೇತುವೆಯಲ್ಲಿ ಸಾಗಿ ಇಳಿಯುವ ಸಂದರ್ಭ ವಾಹನಗಳು ವೇಗಮಿತಿ ಕಾಪಾಡಿಕೊಳ್ಳದಿದ್ದರೆ ಅಪಾಯ ತಪ್ಪಿದ್ದಲ್ಲ. ಯಾಕೆಂದರೆ ಅದೇ ಸಮಯದಲ್ಲಿ ಅಲ್ಲಿಯೇ ಸರ್ವಿಸ್‌ ರೋಡ್‌ನಿಂದ ವಾಹನಗಳು ಹೆದ್ದಾರಿ ಕಡೆ ತಿರುಗುತ್ತಿರುತ್ತವೆ. ಆದರೆ ಅದೇ ಜಾಗದಲ್ಲಿ ಮೇಲ್ಸೇತುವೆ ಮೇಲೆ ಕೆಲ ವಾಹನಗಳನ್ನು ನಿಲ್ಲಿಸಲಾಗಿರುತ್ತದೆ. ಇದರಿಂದ ಎದುರಿಗೆ ಬರುವ ವಾಹನಗಳು ಕೂಡಲೆ ಗಮನಕ್ಕೆ ಬಾರದು. ಜೋಡುಮಾರ್ಗದ ಸರಕಾರಿ ಬಸ್‌ ನಿಲ್ದಾಣ ನಿರ್ಮಾಣದ ಕೆಲಸ ಅಂತಿಮ ಹಂತದಲ್ಲಿದ್ದು ಇಲ್ಲಿನ ಫ್ಲೈ ಓವರ್‌ ಬಂದು ಸೇರುವಲ್ಲಿ ಇನ್ನೊಂದು ಸರ್ಕಲ್‌ ಮಾಡಿ ಅಲ್ಲಿ ಸಿಗ್ನಲ್‌ ವ್ಯವಸ್ಥೆ ಅಳವಡಿಸಬೇಕಾಗಿದೆ ಎಂಬುದು ನಾಗರಿಕರ ಬೇಡಿಕೆ.

ಹೆದ್ದಾರಿ ಇಲಾಖೆ ಕೆಲಸ 
ಸರ್ವಿಸ್‌ ರಸ್ತೆಯಲ್ಲಿ ಚರಂಡಿ ನಿರ್ಮಾಣ ಕೆಲಸ ಕಾಮಗಾರಿ ಪ್ರಗತಿಯಲ್ಲಿದೆ. ಕೆಲಸವು ನಿಧಾನವಾಗಿ ನಡೆಯುವುದಾಗಿ ದೂರುಗಳಿವೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸಂಬಂಧಪಟ್ಟ ಕೆಲಸ ಇದಾಗಿದ್ದು ಮಳೆಗಾಲಕ್ಕೆ ಮೊದಲು ಮುಗಿಸುವರು. ಇಲ್ಲಿ ಪುರಸಭೆಯಿಂದ ಪೈಪ್‌ಲೈನ್‌ ಕೆಲಸ ನಡೆಯಲಿದ್ದು, ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ.
-ಪಿ. ರಾಮಕೃಷ್ಣ ಆಳ್ವ, ಅಧ್ಯಕ್ಷರು, ಬಂಟ್ವಾಳ ಪುರಸಭೆ

ಸರ್ವಿಸ್‌ ರಸ್ತೆ ಅಭಿವೃದ್ಧಿ 
ಕುಡಿಯುವ ನೀರಿನ ಪೈಪ್‌ಲೈನ್‌ ಕೆಲಸಗಳನ್ನು ಕೆಯುಡಬ್ಲ್ಯುಎಸ್‌ನೊದಿಗೆ ಮಾಡುವ ಮೂಲಕ ಸರ್ವಿಸ್‌ ರಸ್ತೆಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿ ಮಾಡಲಾಗುವುದು. 
– ಎಂ.ಎಚ್‌. ಸುಧಾಕರ್‌, ಮುಖ್ಯಾಧಿಕಾರಿ, ಬಂಟ್ವಾಳ ಪುರಸಭೆ

– ರಾಜಾ ಬಂಟ್ವಾಳ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.