ದೇಶ-ವಿದೇಶದಲ್ಲೂ “ಜಬರ್ದಸ್ತ್ ಶಂಕರ’ನ ಮಹಿಮೆ


Team Udayavani, Nov 7, 2019, 3:39 AM IST

qq-21

ಕೋಸ್ಟಲ್‌ವುಡ್‌ನ‌ ಬಹುನಿರೀಕ್ಷಿತ ಸಿನೆಮಾ “ಜಬರ್ದಸ್ತ್ ಶಂಕರ’ ಈ ವಾರ ಬಿಡುಗಡೆಯ ಸಂಭ್ರಮದಲ್ಲಿದೆ. ಕರಾವಳಿಯಲ್ಲಿ ಗಿರಿಗಿಟ್‌ ಮೂಡಿಸಿದ ಅಬ್ಬರದಿಂದಾಗಿ ಸದ್ಯ ಜಬರ್ದಸ್ತ್ ಶಂಕರ ಸಿನೆಮಾವೂ ದೇಶ-ವಿದೇಶದಲ್ಲಿ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದೆ.

ಕೋಸ್ಟಲ್‌ವುಡ್‌ನ‌ಲ್ಲಿ ಡೈನಾಮಿಕ್‌ ಹೀರೋ ಆಗಿ ಗುರುತಿಸಿಕೊಂಡಿರುವ ಅರ್ಜುನ್‌ ಕಾಪಿಕಾಡ್‌ ಜಬರ್ದಸ್ತ್ ಶಂಕರನಾಗಿ ವಿಭಿನ್ನ ಲುಕ್‌ನಲ್ಲಿ ಸಿನಿ ಪ್ರಿಯರ ಮುಂದೆ ಎಂಟ್ರಿಯಾಗಲಿದ್ದಾರೆ. ತುಳು ಮತ್ತು ಕನ್ನಡದ ಸುಮಾರು 15ರಷ್ಟು ಸಿನೆಮಾಗಳಲ್ಲಿ ನಟಿಸಿರುವ ಅರ್ಜುನ್‌ಗೆ ಈ ಸಿನೆಮಾ ವಿಭಿನ್ನ ಹಾಗೂ ಬಹುನಿರೀಕ್ಷಿತ.

ಇದೊಂದು ವಿಭಿನ್ನ ಕಥೆಯ ಸಿನೆಮಾ. ಹೊಸ ಪರಿಕಲ್ಪನೆಯಲ್ಲಿ ಮೇಕಿಂಗ್‌ ಮಾಡಲಾಗಿದೆ. ಕಥೆ, ಚಿತ್ರಕಥೆ, ಸಾಹಿತ್ಯ, ನಿರ್ದೇಶನ ಎಲ್ಲವೂ ದೇವದಾಸ್‌ ಕಾಪಿಕಾಡ್‌ ಅವರದ್ದು. ನಾನು ನಟ ಹಾಗೂ ಸಹನಿರ್ದೇಶಕನಾಗಿಯೂ ಕೆಲಸ ಮಾಡಿದ್ದೇನೆ. ಸುಜೀತ್‌ ನಾಯಕ್‌ರ ಸಂಕಲನ, ಮಣಿಕಾಂತ್‌ ಕದ್ರಿ ಸಂಗೀತ ಈ ಚಿತ್ರಕ್ಕಿದೆ. ಜಲನಿಧಿ ಫಿಲ್ಮ್ನಡಿ ಅನಿಲ್‌ ಕುಮಾರ್‌, ಲೋಕೇಶ್‌ ಕೋಟ್ಯಾನ್‌ ಹಾಗೂ ರಾಜೇಶ್‌ ಕುಡ್ಲ ಈ ಸಿನೆಮಾ ನಿರ್ಮಿ ಸಿದ್ದಾರೆ. ಸಿದ್ದು ಹಾಗೂ ಉದಯ ಬಲ್ಲಾಳ್‌ ಛಾಯಾಚಿತ್ರಗ್ರಹಣ ಮಾಡಿದ್ದಾರೆ. ಮಾಸ್‌ ಮಾದ ಅವರ ಸಾಹಸ ಹಾಗೂ ಸ್ಟಾರ್‌ ಗಿರಿ, ವಿನಾಯಕ್‌ ಪಿಳ್ಳೆ ನೃತ್ಯ ನಿರ್ದೇಶನವಿದೆ ಎನ್ನುತ್ತಾರೆ ಅರ್ಜುನ್‌ ಕಾಪಿಕಾಡ್‌.

ಅಂದಹಾಗೆ, ಸಿನೆಮಾದ ತಾರಾಗಣದಲ್ಲಿ ಅರ್ಜುನ್‌ ಕಾಪಿಕಾಡ್‌, ನೀತಾ ಅಶೋಕ್‌, ರಾಶಿ, ತೆಲಿಕೆದ ಬೊಳ್ಳಿ ದೇವದಾಸ್‌ ಕಾಪಿಕಾಡ್‌, ಸಾಯಿಕೃಷ್ಣ ಕುಡ್ಲ, ಗೋಪಿನಾಥ್‌ ಭಟ್‌, ಚೇತನ್‌ ರೈ, ಸುನಿಲ್‌ ನೆಲ್ಲಿಗುಡ್ಡೆ, ಲಕ್ಷ್ಮಣ್‌ ಕುಮಾರ್‌ ಮಲ್ಲೂರು, ಅರುಣ್‌ ಬಿ.ಸಿ. ರೋಡ್‌, ಮಿಮಿಕ್ರಿ ಶರಣ್‌, ತಿಮ್ಮಪ್ಪ ಕುಲಾಲ್‌, ಸುರೇಶ್‌ ಕುಲಾಲ್‌, ಚಂದ್ರಹಾಸ್‌ ಮಾಣಿ, ಹರೀಶ್‌ ಆಲದಪದವು, ಗಾಳಿಪಟ ಹರೀಶ್‌ ಮೊದಲಾದವರು ಸಿನೆಮಾದಲ್ಲಿದ್ದಾರೆ. ಕಥೆ ಹಾಗೂ ಕಾಮಿಡಿ ಎರಡನ್ನೂ ಜತೆಯಾಗಿ ಇದರಲ್ಲಿ ಹೆಣೆಯಲಾಗಿದ್ದು, ಕೋಸ್ಟಲ್‌ವುಡ್‌ನ‌ಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನುವುದು ಚಿತ್ರತಂಡದ ಅಭಿಪ್ರಾಯ.

ಇನ್ನು ಅರ್ಜುನ್‌ ಕಾಪಿಕಾಡ್‌ ಅವರು ತೆಲಿಕೆದ ಬೊಳ್ಳಿ, ರಂಗ್‌, ಚಾಲಿಪೋಲಿಲು, ಒರಿಯನ್‌ ತೂಂಡ ಒರಿಯಗಾಪುಜಿ, ಮಧುರ ಸ್ವಪ್ನ (ಕನ್ನಡ), ದಂಡ್‌, ಚಂಡಿಕೋರಿ, ಬರ್ಸ, ಯೋಗರಾಜ್‌ ಭಟ್‌ ಅವರ ಮುಗುಳು ನಗೆ (ಕನ್ನಡ), ಅರೆ ಮರ್ಲೆರ್‌, ಏರಾ ಉಲ್ಲೆರ್‌ಗೆ, ಕರ್ಣೆ ಮೊದಲಾದ ಸಿನೆಮಾಗಳ ಮೂಲಕ ಮನೆಮಾತಾಗಿದ್ದಾರೆ. ಕನ್ನಡದಲ್ಲಿ ತೆರೆಕಾಣಲಿರುವ “ಮಾಲ್ಗುಡಿ ಡೇಸ್‌’, ತುಳುವಿನ “ರಾಹುಕಾಲ ಗುಳಿಗಕಾಲ’ ಚಿತ್ರದಲ್ಲಿಯೂ ನಟಿಸಿದ್ದಾರೆ.

-  ದಿನೇಶ್‌ ಇರಾ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.