- Friday 06 Dec 2019
ಮಹಿಳಾ ಹಾಕಿ ತಂಡದ ದಿಗ್ವಿಜಯ
ಮಹಿಳಾ ಹಾಕಿ ತಂಡದ ದಿಗ್ವಿಜಯ
Team Udayavani, Jul 4, 2019, 5:00 AM IST
ಭಾರತ ಮಹಿಳಾ ಹಾಕಿ ಕ್ಷೇತ್ರದಲ್ಲಿ ಹೊಸ ಶಕೆಯೊಂದು ಉದಯವಾಗಿದೆ. ಅಂತಾರಾಷ್ಟ್ರೀಯ ಹಾಕಿ ಕೂಟಗಳಲ್ಲಿ ಪುರುಷರ ತಂಡದಷ್ಟು ಸಾಧನೆಯನ್ನು ಭಾರತ ಮಹಿಳಾ ತಂಡ ಮಾಡಿಲ್ಲವಾದರೂ ಎಫ್ಐಎಚ್ ಮಹಿಳಾ ಹಾಕಿ ಸೀರೀಸ್ನಲ್ಲಿ ಪ್ರಶಸ್ತಿ ಗೆದ್ದ ಮೇಲೆ ರಾಣಿ ರಾಂಪಾಲ್ ಪಡೆ ನಾವು ಯಾರಿಗೂ ಕಮ್ಮಿ ಇಲ್ಲ’ ಎನ್ನುವುದನ್ನು ಸಾರಿದೆ.
ಟೋಕಿಯೋ ಒಲಿಂಪಿಕ್ನಲ್ಲಿ ಭಾರತ ಮಹಿಳಾ ತಂಡ ಪದಕ ಗೆಲ್ಲುವ ಸಾಮರ್ಥ್ಯ ಹೊಂದಿದೆ. ಗುರ್ಜಿತ್ ಕೌರ್ ಅವರಂತಹ ತಾರಾ ಆಟಗಾರರು, ರಾಣಿ ರಾಂಪಾಲ್ ಅವರಂತಹ ಶ್ರೇಷ್ಠ ನಾಯಕಿಯ ಬಲ ತಂಡಕ್ಕಿದೆ. ಇನ್ನಷ್ಟು ತರಬೇತಿ, ಕೋಚ್, ಕಠಿಣ ಶ್ರಮವಹಿಸಿದ್ದೇ ಆದರೆ ಟೋಕಿಯೋ ಒಲಿಂಪಿಕ್ನಲ್ಲಿ ಭಾರತ ಸ್ವರ್ಣ ನಗು ಚೆಲ್ಲುವುದರಲ್ಲಿ ಅನುಮಾನವೇ ಇಲ್ಲ.
ಭಾರತ ಸಂಭ್ರಮ: ಜಪಾನ್ ಪ್ರವಾಸಕ್ಕೂ ಮೊದಲು ಎಫ್ಐಎಚ್ ಮಹಿಳಾ ಹಾಕಿ ಸೀರೀಸ್ ಫೈನಲ್ನಲ್ಲಿ ಭಾರತ ಗೆಲ್ಲುತ್ತದೆ ಎಂದು ಯಾರು ಊಹಿಸಿರಲಿಕ್ಕಿಲ್ಲ. ಎಲ್ಲ ಸಂದೇಹಗಳಿಗೂ ಭಾರತ ಆಟಗಾರ್ತಿಯರು ಉತ್ತರ ನೀಡಿದರು. ಎಲ್ಲ ಸವಾಲನ್ನು ಮೆಟ್ಟಿನಿಂತು ಕೂಟದ ಅಂತಿಮ ಹಂತಕ್ಕೆ ಪ್ರವೇಶಿಸಿಯೇ ಬಿಟ್ಟರು. ಆದರೆ ಫೈನಲ್ ಗೆಲ್ಲುವುದು ರಾಣಿ ರಾಂಪಾಲ್ ಪಡೆಗೆ ಅಷ್ಟೊಂದು ಸುಲಭದ ವಿಷಯವಾಗಿರಲಿಲ್ಲ. ಏಕೆಂದರೆ ಎದುರಾಳಿ ಆತಿಥೇಯ ಜಪಾನ್ ತಂಡ. ತವರಲ್ಲಿ ಆ ತಂಡವನ್ನು ಸೋಲಿಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಆದರೆ ಗುರ್ಜಿತ್ ಕೌರ್ ಬುಲೆಟ್ ವೇಗದಲ್ಲಿ ಸಿಡಿಸಿದ ಎರಡು ಗೋಲಿನ ನೆರವಿನಿಂದ ಕೆಚ್ಚೆದೆಯ ಪ್ರದರ್ಶನ ನೀಡಿದರು. ಭಾರತ ಕಪ್ ಗೆಲ್ಲುವುದರಲ್ಲಿ ಮುಂಚೂಣಿಯ ಪಾತ್ರವಹಿಸಿದರು. ರಾಣಿ ರಾಂಪಾಲ್ ಕೂಡ ಒಂದು ಗೋಲು ಬಾರಿಸಿ ತಂಡದ ಗೆಲುವಿಗೆ ಕಾರಣರಾದರು. ಒಟ್ಟಿನಲ್ಲಿ ಭಾರತೀಯರ ಸಂಭ್ರಮ ಮುಗಿಲು ಮುಟ್ಟಿತ್ತು. ಎಲ್ಲ ಕಡೆಯಿಂದ ಭಾರತೀಯ ಆಟಗಾರ್ತಿಯರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂತು.
ಒಲಿಂಪಿಕ್ಸ್ ಗೆಲ್ಲುವ ಗುರಿ: ಭಾರತೀಯ ಆಟಗಾರ್ತಿಯರು ಎಫ್ಐಎಚ್ ಮಹಿಳಾ ಹಾಕಿ ಸೀರೀಸ್ ಫೈನಲ್ಸ್ ಜಯಿಸುವ ಮೂಲಕ ಮುಂಬರುವ ಒಲಿಂಪಿಕ್ಸ್ ಅರ್ಹತಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಟೋಕಿಯೊ ಒಲಿಂಪಿಕ್ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯಬಹುದು.
ಭಾರತ ಮಹಿಳಾ ತಂಡ ಇದುವರೆಗೆ ಒಟ್ಟು 2 ಸಲ ಒಲಿಂಪಿಕ್ನಲ್ಲಿ ಪಾಲ್ಗೊಂಡಿದೆ. 1980ರಲ್ಲಿ ಮೊದಲ ಬಾರಿಗೆ ಮಾಸ್ಕೋದಲ್ಲಿ ನಡೆದ ಒಲಿಂಪಿಕ್ನಲ್ಲಿ ಭಾಗವಹಿಸಿ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಆ ಬಳಿಕ 2016ರಲ್ಲಿ ಭಾರತ ರಿಯೋ ಒಲಿಂಪಿಕ್ನಲ್ಲಿ ಪಾಲ್ಗೊಂಡು 12ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.
ಈ ವಿಭಾಗದಿಂದ ಇನ್ನಷ್ಟು
-
"ದೇವರ ಸ್ವಂತ ನಾಡು' ಕೇರಳದಲ್ಲಿ ಪ್ರಕೃತಿ ರಮಣೀಯ ತಾಣಗಳಿಗೆ ಕೊರತೆ ಇಲ್ಲ. ಅದರಲ್ಲೂ ಹಸುರಿನಿಂದ ಕೂಡಿದ ಬೆಟ್ಟ ಗುಡ್ಡ ಎಂತಹವರನ್ನೂ ತನ್ನತ್ತ ಸೆಳೆಯುವ ಚುಂಬಕ...
-
ಕೋಸ್ಟಲ್ವುಡ್ನಲ್ಲಿ ಹಲವು ದಾಖಲೆ ಬರೆದಿರುವ "ಗಿರಿಗಿಟ್' ಸಿನೆಮಾ ಮೊನ್ನೆ ಶನಿವಾರ ಶತಕದ ಸಾಧನೆ ಬರೆದಿದೆ. ಮಂಗಳೂರಿನ ಜ್ಯೋತಿ, ಭಾರತ್ ಸಿನೆಮಾಸ್, ಸಿನೆಪೊಲೀಸ್,...
-
ಹೆಸರಿನಿಂದಲೇ ಗಮನ ಸೆಳೆದ ಸಿನೆಮಾ "ಲುಂಗಿ'. ಮಂಗಳೂರು ಮೂಲದ ಪ್ರತಿಭೆಗಳ ಹೊಸ ರೀತಿಯ ಸಿನೆಮಾವಿದು. ಅ. 11ರಂದು ತೆರೆ ಕಂಡ "ಲುಂಗಿ' ಸಿನೆಮಾ ನ. 29ರಂದು 50ನೇ ದಿನಕ್ಕೆ ಕಾಲಿರಿಸಿದೆ....
-
ಭವಿಷ್ ಆರ್.ಕೆ. ಕ್ರಿಯೇಶನ್ಸ್ ಲಾಂಛನದಲ್ಲಿ ತಯಾರಾದ "ಆಟಿಡೊಂಜಿ ದಿನ' ಸಿನೆಮಾ ಸದ್ಯ ಕೋಸ್ಟಲ್ವುಡ್ನಲ್ಲಿ ಹೊಸ ನಿರೀಕ್ಷೆಯೊಂದಿಗೆ ತೆರೆಕಾಣಲು ಅಣಿಯಾಗಿದೆ....
-
ಪೌರಾಣಿಕ ಹಿನ್ನೆಲೆ ಮತ್ತು ಪ್ರಾಕೃತಿಕ ಸಂಪತ್ತನ್ನು ತನ್ನ ಒಡಲಲ್ಲಿಟ್ಟುಕೊಂಡಿರುವ ಪ್ರವಾಸಿ ತಾಣ ಯಾಣವು ಪ್ರವಾಸಿ ಗರನ್ನು ಕೈ ಬೀಸಿ ಕರೆಯುತ್ತದೆ. ಹಸುರು...
ಹೊಸ ಸೇರ್ಪಡೆ
-
ಕುಂದಾಪುರ: ರಾಜ್ಯದ ನಿರ್ವಸಿತ ಮೀನುಗಾರರಿಗೆ ಆಶ್ರಯ ಕಲ್ಪಿಸುವ ಮತ್ಸ್ಯಾಶ್ರಯ ಯೋಜನೆಯನ್ನು ಮೀನುಗಾರರ ಬೇಡಿಕೆಯಂತೆ ರಾಜೀವ್ ಗಾಂಧಿ ವಸತಿ ನಿಗಮದ ಬದಲು ಮತ್ತೆ...
-
ಮುಖ್ಯವಾಹಿನಿ ರಾಜಕೀಯ ಪಕ್ಷಗಳಿಗೆ ಆಟದ ಮೈದಾನವಾಗುತ್ತಿರುವ ವಿದ್ಯಾರ್ಥಿಒಕ್ಕೂಟಗಳನ್ನು ಮುಂದಿನ 10 ವರ್ಷಗಳವರೆಗೆ ನಿಷೇಧಿಸಬೇಕು. ಈ ವಿದ್ಯಾರ್ಥಿ ಒಕ್ಕೂಟಗಳಿಂದಾಗಿ...
-
ನಗದು ರಹಿತ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳುವರ ಪ್ರಮಾಣ ಹೆಚ್ಚುತ್ತಿದ್ದು,ಹಣ ವರ್ಗಾವಣೆ, ಬಿಲ್ ಪಾವತಿ ಗಳನ್ನು ಕಾರ್ಡ್ ಅಥವಾ ಆ್ಯಪ್ಗ್ಳ ಮೂಲಕ ಮಾಡುತ್ತಿದ್ದಾರೆ....
-
ಯಾವುದೇ ಚಿತ್ರರಂಗವಿರಲಿ, ಸಾಮಾನ್ಯವಾಗಿ ಸ್ಟಾರ್ ನಟರು ಅಲ್ಲಿನ ಹಿರಿಯ ನಿರ್ದೇಶಕರು, ಅದರಲ್ಲೂ ಸಾಕಷ್ಟು ಹಿಟ್ ಚಿತ್ರಗಳನ್ನು ನಿರ್ದೇಶಿಸಿ ಜನಪ್ರಿಯವಾದ...
-
ದರ್ಶನ್ ನಾಯಕರಾಗಿ ನಟಿಸಿರುವ "ಒಡೆಯ' ಚಿತ್ರದ ಹಾಡು, ಟ್ರೇಲರ್ ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಡುಗಡೆಯ ಹಂತದಲ್ಲಿರುವ "ಒಡೆಯ' ಬಗ್ಗೆ...