ದೇಹಕ್ಕೆ, ಮನಸ್ಸಿಗೆ ಜೋಶ್‌ ತುಂಬುವ ಚಾರಣ


Team Udayavani, Sep 19, 2019, 5:00 AM IST

q-25

ಚಾರಣ ಅನ್ನುವ ಹವ್ಯಾಸ ದೇಹಕ್ಕೆ, ಮನಸ್ಸಿನ ಆರೋಗ್ಯಕ್ಕೆ ಸಹಕಾರಿ. ಬೆಟ್ಟ-ಗುಡ್ಡ ಹತ್ತುವುದು, ನದಿ, ತೋಡು, ಕಾಡುಗಳಲ್ಲಿ ಸಂಚಾರ ಇತ್ಯಾದಿ ಚಾರಣದ ನೆಲೆಗಳು. ಅಲ್ಲಿನ ಸೌಂದರ್ಯ ಆನಂದಿಸಿ ದೇಹಕ್ಕೂ, ಮನಸ್ಸಿಗೂ ವಿಶ್ರಾಂತಿ ಬಯಸುವ ಚಾರಣ ಸುರಕ್ಷಿತ ರೀತಿಯಲ್ಲಿ ಇದ್ದರೆ ಅದರಿಂದ ಲಾಭ ಅಧಿಕ.

ಬಹುತೇಕ ಚಾರಣ ಪ್ರಿಯರು ಪ್ರಕೃತಿ ಸೌಂದರ್ಯ ಸವಿಯಲೆಂದು ಕಾಡು ಮೇಡು ಸುತ್ತಾಡುತ್ತಾರೆ. ಫ್ಯಾಮಿಲಿ, ಫ್ರೆಂಡ್ಸ್‌ ಹೀಗೆ ತಂಡವಾಗಿ ಚಾರಣಕ್ಕೆ ಹೊರಡುತ್ತಾರೆ. ಧೈರ್ಯ, ಸಾಹಸ, ಆತ್ಮವಿಶ್ವಾಸ, ನಾಯಕತ್ವ ಬೆಳೆಸುವಲ್ಲಿ, ಭವಿಷ್ಯದಲ್ಲಿ ಅದನ್ನು ಅನುಷ್ಠಾನಿಸುವಲ್ಲಿ ಚಾರಣ ಸಹಕಾರಿ ಆಗಿದೆ ಅನ್ನುವುದು ಚಾರಣಿಗರ ಮಾತು.

ಮಾಹಿತಿ ಪಡೆದೇ ತೆರಳಿ
ಚಾರಣಕ್ಕೆ ಹೊರಡವುದು ಎಂದರೆ ಏಕಾಏಕಿ ಬೆಟ್ಟ ಗುಡ್ಡ ಹತ್ತುವು ದಲ್ಲ. ನದಿಗೆ ಇಳಿಯುವುದಲ್ಲ. ಅದಕ್ಕೊಂದಿಷ್ಟು ಪೂರ್ವ ಸಿದ್ಧತೆ ಬೇಕು. ತೆರಳುವ ರೂಟ್‌, ಉಳಿದುಕೊಳ್ಳುವ ಪ್ರದೇಶದ ಬಗ್ಗೆ ಮೊದಲೇ ಮಾಹಿತಿ ಸಂಗ್ರಹಿಸಿರಬೇಕು. ಕ್ರಮಿಸಬೇಕಾದ ದೂರವನ್ನು ಅವಲಂಬಿಸಿ ಉಳಿದ ಸಿದ್ಧತೆಯನ್ನು ಮಾಡಿಡಬೇಕು. ಅಪಾಯ ಇರುವ ಪ್ರದೇಶದ ಮಾಹಿತಿ ತಿಳಿದು ಎಚ್ಚರಿಕೆ ವಹಿಸಬೇಕು. ಹಾಗಾಗಿ ಹೆಚ್ಚಾಗಿ ಚಾರಣಕ್ಕೆ ತೆರಳುವ ಪ್ರದೇಶದ ಸಮಗ್ರ ಮಾಹಿತಿ ಪಡೆದೇ ತೆರಳುವುದು ಅತ್ಯಂತ ಅಗತ್ಯವಾದ ಸಂಗತಿ.

ಚಾರಣದ ವೇಳೆಯಲ್ಲಿ ಚಾರಣಿಗರು ಅಗತ್ಯವಾಗಿ ಬೇಕಾದ ಆಹಾರ ಪದಾರ್ಥ ಗಳನ್ನು ಕೊಂಡೊಯ್ಯಬೇಕು. ವಿಶ್ರಾಂತಿ ಪಡೆಯಲು ಬೇಕಾದ ಸರಂಜಾಮುಗಳು ಜತೆಗಿರಬೇಕು. ಚಾರಣದ ದಿನಗಳ ಸಂಖ್ಯೆ ಹೆಚ್ಚಾದಂತೆ ಹೊರಬೇಕಾದ ಸಾಮಗ್ರಿ ಸಂಖ್ಯೆ ಅಧಿಕ ಎಂದೇ ಅರ್ಥ. ಹಾಗಾಗಿ ಎಲ್ಲ ಯೋಜನೆ ಸಿದ್ಧಪಡಿಸಿದ ಮೇಲೆಯೇ ಹೊರಡಬೇಕು.

ಚಾರಣದ ಕೆಲವು ಸ್ಥಳಗಳಿಗೆ ದಾರಿ ಇರುತ್ತದೆ. ದಾರಿ ಇಲ್ಲದ ಪ್ರದೇಶಕ್ಕೆ ಪರ್ಯಾಯ ಹಾದಿ ಕುರಿತಂತೆ ನಕ್ಷೆ ಮತ್ತು ದಿಕ್ಸೂಚಿಗಳ ಸಹಾಯದಿಂದ ಗುರಿ ಮುಟ್ಟಬೇಕು. ಅತ್ಯಂತ ನಿರ್ಜನ ಪ್ರದೇಶ, ಸಂಚಾರವೇ ಕಷ್ಟಕರ ಎಂಬ ಕಡೆಗಳಲ್ಲಿ ಮಾರ್ಗದರ್ಶಿಗಳ ಸಹಾಯ ಪಡೆದೇ ತೆರಳಬೇಕು. ಇದರಿಂದ ಚಾರಣಿಗರ ಸುರಕ್ಷತೆ ಕಾಪಾಡಿಕೊಳ್ಳಲು ಸಾಧ್ಯವಿದೆ.

ಚಾರಣ ಮಾಡುವುದರಿಂದ ಆರೋಗ್ಯ ಭಾಗ್ಯವು ದೊರೆಯುತ್ತದೆ. ಶುದ್ಧಗಾಳಿ ಸೇವೆ, ನಡಿಗೆ, ಬೆಟ್ಟ ಹತ್ತಿ-ಇಳಿಯುವಿಕೆ ಹೀಗೆ ಹತ್ತಾರು ಬಗೆಯ ಲಾಭಗಳು ದೇಹಕ್ಕೆ ಉಂಟಾಗಿ ಅದರಿಂದ ಸ್ವಸ್ಥ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಚಾರಣದಿಂದ ಸುತ್ತಲಿನ ಜಗತ್ತಿನ ಬಗ್ಗೆ ತಿಳಿವಳಿಕೆ ದೊರೆಯುತ್ತದೆ. ಹೊಸ ಹೊಸ ಸ್ಥಳದ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಈ ಆರೋಗ್ಯಕರ ಚಟುವಟಿಕೆ, ಹೆಚ್ಚಿನ ಶ್ರಮದ ಕ್ರೀಡೆಯಾದ ಪರ್ವತಾರೋಹಣಕ್ಕೂ ಸಹಕಾರಿ. ಖ್ಯಾತ ಪರ್ವತಾರೋಹಿಗಳು ಚಾರಣದಿಂದಲೇ ಈ ಹವ್ಯಾಸವನ್ನು ಆರಂಭಿಸಿರುವುದು ಅದಕ್ಕೂಂದು ಉದಾಹರಣೆ.

ಕೊಡಗು, ಕುದುರೆಮುಖ, ಕೊಡಚಾದ್ರಿ, ಕುಮಾರಪರ್ವತ ಸಹಿತ ಕರ್ನಾಟಕದ ಹಲವು ಪ್ರದೇಶಗಳು ಚಾರಣಿಗರ ನೆಚ್ಚಿನ ತಾಣಗಳು. ಬೆಟ್ಟ- ಗುಡ್ಡದ ಜತೆಗೆ ಜಲಪಾತಗಳತ್ತ ಚಾರಣ ಮಾಡಲು ಅವಕಾಶ ಇದೆ. ಕೊಡಗಿನ ಹಲವು ಜಲಪಾತಗಳು, ಮುಳ್ಳಯ್ಯನ ಗಿರಿ, ಕಲ್ಲತ್ತಗಿರಿ, ಗಾಳಿಕೆರೆ, ಬ್ರಹ್ಮಗಿರಿ, ಅಬ್ಬೆ ಜಲಪಾತ, ಗೋವರ್ಧನಗಿರಿ ಹೀಗೆ ನೂರಾರು ಸ್ಥಳಗಳಿವೆ.

ಅನುಮತಿ ಪಡೆಯಿರಿ
ಚಾರಣವು ರಾಷ್ಟ್ರೀಯ ಉದ್ಯಾನವನ, ಅಭಯಾರಣ್ಯ ಅಥವಾ ರಕ್ಷಿತ ಅರಣ್ಯಗಳ ಮೂಲಕ ಹಾದು ಹೋಗುವಂತಿದ್ದರೆ ಅದಕ್ಕೆ ಸಂಬಂಧಿಸಿ ಅರಣ್ಯ ಇಲಾಖೆಯಿಂದ ಸೂಕ್ತ ಅನುಮತಿ ಪಡೆಯಬೇಕು. ಖಾಸಗಿ ಪ್ರದೇಶವಾಗಿದ್ದರೂ ಗಮನಕ್ಕೆ ತಂದು ಪ್ರಯಾಣ ಮುಂದುವರಿಸಬೇಕು. ಅಪಾಯಗಳ ಮಾಹಿತಿ ಅರಿತು, ಸ್ಥಳೀಯರ ಸಂಪರ್ಕ ಪಡೆದೇ ಚಾರಣಕ್ಕೆ ಹೊರಡುವುದು ಸೂಕ್ತ.

- ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.