ಕನ್ನಡ ಸರಕಾರಿ ಶಾಲೆಗೆ ತುಳುವಿನ ಬಣ್ಣ 


Team Udayavani, Aug 23, 2018, 12:03 PM IST

23-agust-11.jpg

ಕಿರಿಕ್‌ ಪಾರ್ಟಿ ಖ್ಯಾತಿಯ ಯುವ ಸಿನೆಮಾ ನಿರ್ದೇಶಕ ರಿಷಬ್‌ ಶೆಟ್ಟಿ ಕುಡ್ಲದವರು. ಅವರ ನಿರ್ದೇಶನದ ಕನ್ನಡ ಚಲನಚಿತ್ರ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು- ಕೊಡುಗೆ ರಾಮಣ್ಣ ರೈ’ ಸಿನಿಮಾಕ್ಕೂ ಕುಡ್ಲಕ್ಕೂ ಸಂಬಂಧವಿದೆ. ಮೂಲತಃ ಇಲ್ಲಿ ಬಳಸಿರುವ ಕನ್ನಡ ಸ್ವಲ್ಪ ಕರಾವಳಿ ಭಾಗದಲ್ಲಿ ಬಳಸುವ ಮಾದರಿ. ಅದರಲ್ಲೂ ಕುಡ್ಲ ಭಾಗದಲ್ಲೇ ಬಳಸುವ ಕೆಲವು ಅಪರೂಪದ ಶಬ್ದಗಳಿಗೆ ಇಲ್ಲಿ ಸ್ಥಾನ ನೀಡಲಾಗಿದೆ.

‘ಪೆಟ್ಟಿಸ್ಟ್‌’ ಎಂಬ ಪದ ತುಳುನಾಡಿನಲ್ಲಿ ಭಾರೀ ಫೇಮಸ್‌. ಆದರೆ, ಈ ಶಬ್ದ ಜಿಲ್ಲೆಯಿಂದ ಹೊರಭಾಗದವರಿಗೆ ಅಷ್ಟೊಂದು ಪರಿಚಿತವಲ್ಲ. ಆದರೆ, ಈ ಸಿನಿಮಾದಲ್ಲಿ ಇಂಥವು ಇವೆ. ಅದೂ ಕೂಡ ಮಕ್ಕಳ ಬಾಯಿಯಲ್ಲಿ ಕೇಳುವುದೇ ಆನಂದ. ಅದರಲ್ಲೂ ‘ಒಂದು ಮೊಟ್ಟೆಯ ಕಥೆ’ ಸಿನೆಮಾದ ರಾಜ್‌ ಬಿ. ಶೆಟ್ಟಿ ಅವರೇ ಇದಕ್ಕೆ ಸಂಭಾಷಣೆ ಬರೆದಿದ್ದಾರೆ. ಅಭಿಜಿತ್‌ ಮಹೇಶ್‌ರ ಸಹಕಾರವಿದೆ.

ಇದರೊಂದಿಗೆ ಇನ್ನೂ ಇರುವ ವಿಶೇಷವೆಂದರೆ ಬಹುತೇಕ ಚಿತ್ರಣ ನಡೆದಿದ್ದು ಕುಡ್ಲ ಅಂದರೆ ಮಂಗಳೂರು ಸುತ್ತಮುತ್ತಲೇ. ಕಾಸರಗೋಡು, ಮಂಜೇಶ್ವರ, ಕುಂಬಳೆ, ಉಪ್ಪಳ, ಮುಡಿಪು ಸಮೀಪದ ಕೈರಂಗಳ ಮತ್ತು ಮಂಗಳೂರು ಮುಂತಾದೆಡೆ 68 ದಿನ ಚಿತ್ರೀಕರಣ ನಡೆದಿತ್ತು. ಜತೆಗೆ ಮೈಸೂರು, ಬೆಂಗಳೂರಿನಲ್ಲೂ ಚಿತ್ರೀಕರಣವಾಗಿತ್ತು. ವಿಶೇಷವೆಂದರೆ ಸುಮಾರು 134 ವರ್ಷಗಳ ಪುರಾತನವಾದ ತುಳುನಾಡಿನ ಕೈರಂಗಳ ಶಾಲೆಗೆ ಪ್ರಾಮುಖ್ಯ ಕೊಟ್ಟಿರುವುದು. ಇಷ್ಟೇ ಅಲ್ಲ, ಇದರಲ್ಲಿ ಅಭಿನಯಿಸಿದ ಹಲವು ಕಲಾವಿದರೂ ತುಳು ಚಲನಚಿತ್ರ ಲೋಕದವರು!ತುಳುನಾಡಿನಲ್ಲೂ ಕೆಲವು ಸರಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿದು. ಅಂಥ ಸಂದರ್ಭದಲ್ಲಿ ಶಾಲೆಗಳನ್ನು ಮುಚ್ಚದಂತೆ ಕಾಳಜಿ ವಹಿಸುವುದೂ ಈ ಕನ್ನಡ ಚಲನಚಿತ್ರದಲ್ಲಿ ಸಿಗಬಹುದೇನೋ ?

ವಿಶೇಷವೆಂದರೆ ಈ ಸಿನೆಮಾದಲ್ಲಿ ನಾಯಕ-ನಾಯಕಿಯರೇ ಇಲ್ಲ. ಬದಲಾಗಿ ಮಕ್ಕಳದ್ದೇ ಜೀವಾಳ. ಜತೆಗೆ ಕನ್ನಡದ ಹಿರಿಯ ನಟ ಅನಂತನಾಗ್‌ ಅವರೂ ವಿಶೇಷ ಪಾತ್ರ ವಹಿಸಿದ್ದಾರೆ. ಕೋಸ್ಟಲ್‌ವುಡ್‌ನ‌ಲ್ಲಿ ಮಿಂಚಿಸಿರುವ ಖ್ಯಾತ ನಟ ಪ್ರಕಾಶ್‌ ತೂಮಿನಾಡು, ಲಕ್ಷ್ಮಣ್‌ ಕುಮಾರ್‌ ಮಲ್ಲೂರು, ಪ್ರದೀಪ್‌ ಆಳ್ವಾ ಕದ್ರಿ, ಚೇತನ್‌ ಜಿ. ಪಿಲಾರ್‌, ಚಂದ್ರಹಾಸ್‌ ಶೆಟ್ಟಿ, ಶಶಿರಾಜ್‌ ಕಾವೂರ್‌ ಸಹಿತ ರಂಗಭೂಮಿಯ ಬಹುತೇಕ ಕಲಾವಿದರು ಅಭಿನಯಿಸಿದ್ದಾರೆ.

15 ನಿಮಿಷ ನೋ ಟೇಕ್‌!
ಹಂಪನಕಟ್ಟೆಯ ಮಂಗಳೂರು ವಿ.ವಿಯಲ್ಲಿ ಕ್ಲೈಮ್ಯಾಕ್ಸ್‌ ಶೂಟಿಂಗ್‌ ಮಾಡಲಾಗಿತ್ತು. ಮೂರು ದಿನದ ಸಿದ್ಧತೆ ನಡೆಸಿ 15 ನಿಮಿಷಗಳ ಒಂದು ದೃಶ್ಯ ಯಾವುದೇ ಟೇಕ್‌ ಇಲ್ಲದೆ ಮೂಡಿಬಂದಿತು 10 ಪುಟಗಳ ಡೈಲಾಗ್‌ ಅನ್ನು ಅನಂತ್‌ ನಾಗ್‌ ಅವರು ಒಂದೇ ಟೇಕ್‌ನಲ್ಲಿ ಮುಗಿಸಿದ್ದರು. ಇದಕ್ಕಾಗಿ 28 ಸಲ ರಿಹರ್ಸಲ್‌ ಮಾಡಲಾಗಿತ್ತು.

 ದಿನೇಶ್‌ ಇರಾ

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.