ಮಳೆಯ ನಡುವೆ ಮಲೆ ಸ್ವಾಮಿಯ ದರ್ಶನ 


Team Udayavani, Aug 2, 2018, 4:07 PM IST

2-agust-19.jpg

ಪ್ರತಿ ವರ್ಷದಂತೆ ಈ ಬಾರಿಯೂ 20 ಸದಸ್ಯರನ್ನೊಳಗೊಂಡ ನಮ್ಮ ಶಬರಿಮಲೆ ಯಾತ್ರಾ ತಂಡ ಜು. 19ರಂದು ಶ್ರೀ ಕ್ಷೇತ್ರ ಕದ್ರಿಯಲ್ಲಿ ಮಾಲಾಧಾರಣೆ ನಡೆಸಿ, ಅತ್ತಾವರದ ಶ್ರೀ ಅಯ್ಯಪ್ಪ ಮಂದಿರದಲ್ಲಿ ಇರುಮುಡಿ ಕಟ್ಟಿ ರಾತ್ರಿ ಫ‌ಲಾಹಾರ ಸೇವಿಸಿ ಮಂಗಳೂರು ರೈಲು ನಿಲ್ದಾಣದ ಮೂಲ ಚೆಂಗನ್ನೂರು ಕಡೆಗೆ ಯಾತ್ರೆ ಪ್ರಾರಂಭಿಸಿದೆವು. ದಾರಿಯುದ್ದಕ್ಕೂ ಸುರಿದ ಭಾರೀ ಮಳೆಯಿಂದಾಗಿ ರೈಲು 2 ಗಂಟೆ ವಿಳಂಬವಾಗಿ ಮುಂಜಾನೆ 4 ಗಂಟೆಗೆ ಚೆಂಗನ್ನೂರು ರೈಲು ನಿಲ್ದಾಣ ತಲುಪಿದಾಗ ಮುಂಜಾನೆಯ ತಣ್ಣನೆಯ ಚಳಿಯ ಸ್ವಾಗತ ನಮಗಾಯಿತು.

ಇಲ್ಲಿ ಮೊದಲೇ ಗೊತ್ತು ಪಡಿಸಿದ ವಾಹನದಲ್ಲಿ ಸುಮಾರು 90 ಕಿ.ಮೀ. ದೂರವಿರುವ ಪಾಂಬಾ ನದಿ ತೀರಕ್ಕೆ ಪ್ರಯಾಣ ನಡೆಸಿದೆವು. ದಾರಿಯುದ್ದಕ್ಕೂ ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತ, ಅಯ್ಯಪ್ಪ ಸ್ವಾಮಿಯನ್ನು ಮನದಲ್ಲೇ ನೆನೆಯುತ್ತಾ ಸಾಗಿತು ನಮ್ಮ ತಂಡ.

ಶಬರಿಮಲೆಯಲ್ಲಿ ಸತತ ಜಡಿಮಳೆಯಾಗುತ್ತಿದೆ ಎಂದು ಸುದ್ದಿ ತಿಳಿದಿದ್ದ ನಾವು ಮಳೆ ಎದುರಿಸಲು ರೈನ್‌ಕೋಟ್‌ ತಂದಿದ್ದೆವು. ಆದರೆ, ಅದೃಷ್ಟವಶಾತ್‌ ನಮ್ಮ ಪ್ರಯಾಣದುದ್ದಕ್ಕೂ ಮಳೆ ಯಾವುದೇ ತೊಂದರೆ ನೀಡದೆ ಅಚ್ಚರಿ ಮೂಡಿಸಿತ್ತು. ಎರಡು ದಿನಗಳ ಹಿಂದೆ ಚೆಂಗನ್ನೂರು ಪರಿಸರದಲ್ಲಿ ಸುರಿದ ಮಳೆಯ ಬಗ್ಗೆ ಹಾಗೂ ಮುಖ್ಯ ರಸ್ತೆಗೆ ನೆರೆ ನೀರು ನುಗ್ಗಿದ್ದನ್ನು ನಮ್ಮ ವಾಹನದ ಚಾಲಕ ರಸವತ್ತಾಗಿ ವರ್ಣಿಸುವಾಗ ಮನದಲ್ಲಿ ಆತಂಕದ ಮಧ್ಯೆಯೇ ನಮ್ಮಲ್ಲಿ ಸಮಾಧಾನದ ನಿಟ್ಟುಸಿರು!.

ತುಂಬಿ ತುಳುಕಿದ ಪಾಂಬಾ ನದಿ
ಕೇರಳದಾದ್ಯಂತ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಂಪಾ ನದಿ ತುಂಬಿ ತುಳುಕುತ್ತಿತ್ತು. ಹಿಂದಿನ ದಿನವಷ್ಟೇ ನದಿಯಲ್ಲಿ ಸ್ನಾನಕ್ಕಿಳಿದ ಓರ್ವ ನೀರಿನಲ್ಲಿ ಕೊಚ್ಚಿ ಹೋದ ವಿಷಯ ಕೇಳಿದ ನಾವು ಕೊರೆಯುವ ಚಳಿಯ ನಡು ವೆಯೂ ತಣ್ಣನೆಯ ನೀರಿನಲ್ಲಿ ಬಹಳ ಜಾಗರೂಕತೆಯಿಂದಲೇ ಸ್ನಾನ ಮುಗಿಸಿದೆವು. ನದೀ ತೀರದಿಂದ ಹೊರಟ ನಮ್ಮ ತಂಡ ಕಾಲ್ನಡಿಗೆಯ ಮೂಲಕ ಶ್ರೀ ಕನ್ನಿಮೂಲ ಗಣಪತಿ, ಗಣೇಶ ಬೆಟ್ಟ, ನೀಲಿಮಲೆ, ಅಪ್ಪಚಿಮೇಡು ಇಪ್ಪಾಚಿ ಮೇಡು, ಶಬರಿ ಪೀಠದ ದರ್ಶನ ಪಡೆದು ಸುಮಾರು ಒಂದೂವರೆ ಗಂಟೆ ದಟ್ಟ ಕಾನನದ ನಡುವೆ ಪ್ರಕೃತಿಯೊಂದಿಗೆ ಅನುಸಂಧಾನ ನಡೆಸಿದ ಅನುಭೂತಿಯೊಂದಿಗೆ ಶ್ರೀ ಅಯ್ಯಪ್ಪ ಸನ್ನಿಧಾನ ತಲುಪಿದೆವು.

ಮಳೆಗಾಲವಾದ್ದರಿಂದ ಭಕ್ತರ ಸಂಖ್ಯೆ ಬಹಳ ಕಡಿಮೆ ಇತ್ತು. ಶ್ರೀ ಅಯ್ಯಪ್ಪ ಸನ್ನಿಧಾನದ ಮುಂಭಾಗದಲ್ಲಿನ ಪವಿತ್ರವಾದ ಹದಿನೆಂಟು ಮೆಟ್ಟಿಲುಗಳನ್ನು (ಪದಿನೆಟ್ಟಾಂಪಡಿ) ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂಬ ಉದ್ಘೋಷದೊಂದಿಗೆ ಏರಿದೆವು. ಯಾವುದೇ ನೂಕುನುಗ್ಗಲು ಇಲ್ಲದೇ ಇದ್ದುದರಿಂದ ಸಾವಕಾಶವಾಗಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಬಂದೆವು. ದೇವರಿಗೆ ತುಪ್ಪದ ಅಭಿಷೇಕವೂ ಸಾಂಗವಾಗಿಯೇ ನೆರವೇರಿತು. ದೇವರ ದರ್ಶನ ಪಡೆದು ಸ್ವಲ್ಪ ಸಮಯ ಸಿಕ್ಕಿ ದ್ದರಿಂದ ಅಲ್ಲಲ್ಲಿ ನಿಂತು ಫೋಟೋಗಳನ್ನು ಕ್ಲಿಕ್ಕಿಸಿಕೊಂಡೆವು. ಬಳಿಕ ಮರಳಿ ಬೆಟ್ಟವಿಳಿದು ಬರುವಾಗ ಮನದಲ್ಲೊಂದು ಸಂತೃಪ್ತಿ ನೆಲೆಯಾಗಿತ್ತು. ಊಟ ಉಪಾಹಾರವನ್ನು ಮುಗಿಸಿ ಜುಲೈ 20ರಂದು ರಾತ್ರಿ ಕಾಯಂಕುಳಂ ರೈಲು ನಿಲ್ದಾಣದ ಮೂಲಕ ಹೊರಟು ಜುಲೈ 21ರ ಬೆಳಗ್ಗೆ ಮಂಗಳೂರಿಗೆ ತಲುಪಿತು. 

ರೂಟ್‌ ಮ್ಯಾಪ್‌
· ಮಂಗಳೂರಿನಿಂದ 442 ಕಿ.ಮೀ. ದೂರದಲ್ಲಿದೆ.
· ಮಂಗಳೂರಿನಿಂದ ಚೆಂಗನ್ನೂರುವರಗೆ ರೈಲು, ಬಸ್‌ ಸೌಲಭ್ಯವಿದೆ.
· ಚೆಂಗನ್ನೂರಿನಿಂದ 90 ಕಿ.ಮೀ. ದೂರದ ಪ್ರಯಾಣ.
· ಖಾಸಗಿ ವಾಹನ ಮೊದಲೇ ಬುಕ್‌ ಮಾಡಿದರೆ ಉತ್ತಮ.
· ಪಾಂಬಾದಲ್ಲಿ ಊಟ, ವಸತಿ ಸೌಲಭ್ಯವಿದೆ. 

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.