“ಪ್ರವೇಶ’ಕ್ಕೆ ಡಿಸೆಂಬರ್‌ವರೆಗೆ ಕಾಯಿರಿ!


Team Udayavani, May 2, 2019, 11:20 AM IST

0105mlr21-pravesha

ಒಂದು ಹಳ್ಳಿ. ಅಲ್ಲೊಂದು ಶಾಂತಿ ಸಾಮರಸ್ಯದ ಜೀವನ. ಜಾತಿ-ಮತ ಧರ್ಮದ ಪರಿವೆಯೇ ಇಲ್ಲದೆ ಬದುಕುವ ಜನರು. ಆಧುನಿಕ ಸ್ಪರ್ಶದ ಹೊರಜಗತ್ತಿನಿಂದ ದೂರ ನಿಂತ ಸಮಾಜವದು. ಆದರೆ, ಅಂತಹ ಊರೇ ಜಾತಿ-ಧರ್ಮದ ಆಧಾರದಲ್ಲಿ ಯಾರೂ ಊಹಿಸದ ಹಾಗೆ ಬದಲಾಗಿ ಬಿಡುತ್ತದೆ. ಯಾಕೆ ಹೀಗೆ.. ಎಂದು ಯೋಚಿಸುವ ಸಮಯದಲ್ಲಿ ಊರಿನ ಚಿತ್ರಣವೇ ಅದಲು-ಬದಲು. ಯಾಕೆಂದರೆ; ಅನ್ಯೋನ್ಯ ಬದುಕಿಗೆ ಅಲ್ಲಿ ಕೊಳ್ಳಿ ಏಟು ಬಿದ್ದಾಗಿರುತ್ತದೆ!

ಇದು “ಪ್ರವೇಶ’ ಸಿನೆಮಾದ ವನ್‌ಲೈನ್‌ ಸ್ಟೋರಿ. ಈಗಾಗಲೇ ಶೂಟಿಂಗ್‌ ಮುಗಿಸಿದ ಈ ಸಿನೆಮಾ ಈಗಾಗಲೇ ಕೊನೆಯ ಹಂತದ ಎಡಿಟಿಂಗ್‌ನಲ್ಲಿದೆ. ಹೆಚ್ಚಾ ಕಡಿಮೆ ಒಂದೆರಡುತಿಂಗಳಿನಲ್ಲಿ ಸಿನೆಮಾ ರಿಲೀಸ್‌ ಮಾಡಬೇಕು ಎಂದು ಚಿತ್ರ ತಂಡ ಒಮ್ಮೆ ಲೆಕ್ಕ ಹಾಕಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ ರಿಲೀಸ್‌ ಟೈಮ್‌ ಇನ್ನಷ್ಟು ಕಾಲ ಮುಂದೂಡಿಕೆಯಾಗಲಿದೆ. ಈಗಾಗಲೇ ತುಳುವಿನಲ್ಲಿ ಒಂದೊಂದು ಸಿನೆಮಾದವರು ಆಗಸ್ಟ್‌, ಸಪ್ಟೆಂಬರ್‌ ಎಂದು ಹೇಳುತ್ತಿರುವ ಕಾರಣದಿಂದ ಅದೇ ಕಾಲದಲ್ಲಿ ಸ್ಪರ್ಧೆ ಒಡ್ಡುವ ರೀತಿಯಲ್ಲಿ ಸಿನೆಮಾ ರಿಲೀಸ್‌ ಮಾಡಿದರೆ ಯಾರಿಗೂ ಲಾಭವಿಲ್ಲ. ಹೀಗಾಗಿ ಎಲ್ಲರನ್ನೂ ಮೊದಲು ಕಳುಹಿಸಿ ಆ ಬಳಿಕ ಅಂದರೆ ಡಿಸೆಂಬರ್‌ ವೇಳೆಗೆ ರಿಲೀಸ್‌ ಮಾಡುವ ಬಗ್ಗೆ ನಿರ್ದೇಶಕರು ಲೆಕ್ಕಹಾಕಿದ್ದಾರೆ.

ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿರುವ ಚೇತನ್‌ ಮುಂಡಾಡಿಯವರು ಮಾಡಿದ ಸಿನೆಮಾ ಇದಾಗಿರುವುದರಿಂದ “ಪ್ರವೇಶ’ದ ಬಗ್ಗೆ ಸಾಕಷ್ಟು ಕುತೂಹಲ ಹಾಗೂ ನಿರೀಕ್ಷೆ ಇದೆ. ಕರ್ನಾಟಕದ ಪ್ರಾದೇಶಿಕ ಭಾಷೆಯನ್ನು ಹದವಾಗಿ ಮಿಕ್ಸ್‌ ಮಾಡಿ ರೆಡಿ ಮಾಡಿದ ಸಿನೆಮಾ. ಸಿನೆಮಾಗೆ ಚೇತನ್‌ ಅವರೇ ಕಥೆ ಬರೆದಿದ್ದು, ಅದನ್ನು ಖ್ಯಾತ ಸಿನಿ ಪತ್ರಕರ್ತ ಜೋಗಿ ಅವರು ವಿಸ್ತರಿಸಿದ್ದಾರೆ. ಹಿಂದಿನ ಪ್ರಶಸ್ತಿ ಪುರಸ್ಕೃತ “ಮದಿಪು’ ಚಿತ್ರದ ತಂಡವನ್ನೇ ಈ ಸಿನೆಮಾಕ್ಕೂ ಬಳಸಲಾಗಿದೆ.

ವಿ.ಮನೋಹರ್‌ ಅವರ ಸಂಗೀತವಿದೆ. ನಾಯಕನಾಗಿ ಪೃಥ್ವೀ ಅಂಬರ್‌ ಮತ್ತು ನಾಯಕಿಯಾಗಿ ಬಿಂದು ರಕ್ಷಿದಿ ಅವರು ನಟಿಸುತ್ತಿದ್ದಾರೆ. ಖ್ಯಾತ ರಂಗಭೂಮಿ ನಟ ಮತ್ತು ಪಡ್ಡಾಯಿ ಚಿತ್ರದಲ್ಲಿ ನಟಿಸಿ ಗಮನ ಸೆಳೆದಿದ್ದ ಚಂದ್ರಹಾಸ್‌ ಉಳ್ಳಾಲ ಅವರು ಒಂದು ಭಿನ್ನ ಮತ್ತು ವಿಶೇಷ ಪಾತ್ರದಲ್ಲಿದ್ದಾರೆ. ಅಂದಹಾಗೆ, ಚೇತನ್‌ ಇದೀಗ “ಚಾವಡಿ’ ಎಂಬ ಕನ್ನಡ ಸಿನೆಮಾ ಮಾಡುವ ಬಗ್ಗೆ ಪ್ಲ್ಯಾನ್‌ ಹಾಕಿಕೊಂಡಿದ್ದಾರೆ.

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.