ನಿರ್ಣಾಯಕ ಹಂತದಲ್ಲಿ ತಂಡಗಳು ಕುಸಿಯುವುದೇಕೆ?


Team Udayavani, Jul 18, 2019, 5:00 AM IST

u-22

ಅದೇನು ಹಣೆಬರಹವೋ ಗೊತ್ತಿಲ್ಲ. ವಿಶ್ವವಿಖ್ಯಾತ ಬ್ಯಾಟಿಂಗ್‌ ಪಡೆ ಹೊಂದಿರುವ ಭಾರತ ಕ್ರಿಕೆಟ್ ತಂಡ ಮಹತ್ವದ ಸಂದರ್ಭದಲ್ಲಿ ಕುಸಿದು ಹೋಗುತ್ತದೆ. ಒಂದು ರೀತಿ ಈ ತಂಡ ದಕ್ಷಿಣ ಆಫ್ರಿಕಾವನ್ನು ನೆನಪಿಸುತ್ತದೆ. ದ.ಆಫ್ರಿಕನ್ನರು ಒತ್ತಡದ ಪಂದ್ಯಗಳಲ್ಲಿ ಗೆಲ್ಲುವ ಸಾಮರ್ಥ್ಯವಿದ್ದರೂ ಒತ್ತಡಕ್ಕೆ ಸಿಲುಕಿ ಸೋಲುತ್ತಿದ್ದರು. ಆ ತಂಡವನ್ನು ಸೋಲಿಸಬೇಕೆಂದರೆ ಒತ್ತಡ ಹೇರಬೇಕು ಎಂಬ ವಿಷಯ ಎಲ್ಲರಿಗೂ ಗೊತ್ತಾಗಿತ್ತು.

ಈಗ ಮತ್ತೂಂದು ರೂಪದಲ್ಲಿ ಈ ಸ್ವಭಾವ ಭಾರತೀಯ ಕ್ರಿಕೆಟ್ ತಂಡದ ಬ್ಯಾಟಿಂಗ್‌ ಪಡೆಯಲ್ಲಿ ಕಾಣಿಸಿಕೊಂಡಿದೆ. ಈ ಆಟಗಾರರು ಒತ್ತಡಕ್ಕೆ ಮಣಿಯುವವರಲ್ಲ. ಆದರೆ ಮಹತ್ವದ ಪಂದ್ಯಗಳಲ್ಲಿ ದಿಢೀರ್‌ ಕುಸಿತಕ್ಕೆ ಒಳಗಾಗುತ್ತಾರೆ. ಜಗತ್ತಿನ ಎಂತಹ ಬೌಲಿಂಗ್‌ ಪಡೆಯನ್ನೂ ಮಣಿಸುವ ತಾಕತ್ತು ಹೊಂದಿರುವ ಈ ಬ್ಯಾಟ್ಸ್‌ಮನ್‌ಗಳು ಯಾಕೆ ಮುಖ್ಯ ಸಂದರ್ಭದಲ್ಲೇ ಕೈಕೊಡುತ್ತಾರೆನ್ನುವುದು ಬಹಳ ಕುತೂಹಲಕಾರಿ ಸಂಗತಿ.

ಇದಕ್ಕೆ ಮೊದಲ ನಿದರ್ಶನ ಸಿಕ್ಕಿದ್ದು 2003ರಲ್ಲಿ ದ.ಆಫ್ರಿಕಾದಲ್ಲಿ ನಡೆದ ಏಕದಿನ ವಿಶ್ವಕಪ್‌ ಫೈನಲ್ನಲ್ಲಿ. ಫೈನಲ್ವರೆಗೆ ಎಂತೆಂತಹ ಬೌಲಿಂಗ್‌ ಪಡೆಯನ್ನು ಧೂಳೀಪಟವೆಬ್ಬಿಸಿದ್ದ ಭಾರತೀಯ ಬ್ಯಾಟ್ಸ್‌ಮನ್‌ಗಳು ಅಂತಿಮ ಪಂದ್ಯದಲ್ಲಿ ಪೈಪೋಟಿಯನ್ನೂ ನೀಡದೆ ಕೈಚೆಲ್ಲಿದರು. ಆಸ್ಟ್ರೇಲಿಯ ನೀಡಿದ್ದು 360 ರನ್‌ ಗುರಿ. ಸರಿ ಇದನ್ನು ಬೆನ್ನಟ್ಟುವುದು, ಅದರಲ್ಲೂ ಆಸ್ಟ್ರೇಲಿಯದಂತಹ ಬೌಲಿಂಗ್‌ ಪಡೆಯೆದುರು ಕಷ್ಟವೆಂದು ಎಲ್ಲರಿಗೂ ಗೊತ್ತು. 300 ರನ್‌ ಗಳಿಸುವ ಶಕ್ತಿ ಭಾರತೀಯ ಬ್ಯಾಟ್ಸ್‌ಮನ್‌ಗಳಿಗಿತ್ತು. ಆದರೆ ಭಾರತ ಅಲೌಟ್ ಆಗಿದ್ದು 234 ರನ್‌ಗೆ. ಇದನ್ನು ಸ್ವತಃ ಆಸ್ಟ್ರೇಲಿಯ ತಂಡ ಕೂಡ ನಿರೀಕ್ಷಿಸಿರಲಿಲ್ಲ. ಭಾರತದ ಈ ಕಳಪೆಯಾಟವನ್ನು ಕಂಡು ಅದು ಅಚ್ಚರಿಗೊಳಗಾಗಿತ್ತು.

ಇದೇ ರೀತಿಯ ಇನ್ನೊಂದು ಪ್ರಕರಣ ನಡೆದಿದ್ದು ಕೊಹ್ಲಿ ನಾಯಕತ್ವದಲ್ಲಿ. 2017ರಲ್ಲಿ ಭಾರತ ಮಿನಿ ವಿಶ್ವಕಪ್‌ ಎಂದು ಕರೆಸಿಕೊಳ್ಳುವ ಚಾಂಪಿಯನ್ಸ್‌ ಟ್ರೋಫಿ ಫೈನಲ್ಗೇರಿತ್ತು. ಅಲ್ಲಿಯವರೆಗೆ ತನ್ನನ್ನು ಎದುರಿಸುವವರೇ ಇಲ್ಲವೆಂಬಂತೆ ಅದ್ಭುತವಾಗಿ ಆಡಿತ್ತು. ಫೈನಲ್ನಲ್ಲಿ ಎದುರಾಗಿದ್ದ ಪಾಕಿಸ್ಥಾನವನ್ನು ಲೀಗ್‌ ಹಂತದಲ್ಲಿ ಹೀನಾಯವಾಗಿ ಸೋಲಿಸಿತ್ತು. ಆದರೆ ಅಂತಿಮ ಪಂದ್ಯದಲ್ಲಿ ತಮಗೆ ಬ್ಯಾಟಿಂಗ್‌ ಬರುವುದೇ ಇಲ್ಲವೆಂಬಷ್ಟು ಕೆಟ್ಟದಾಗಿ ಆಡಿ ಭಾರತೀಯರು ಆಲೌಟಾದರು. ಆ ಪಂದ್ಯದಲ್ಲಿ ಪಾಕಿಸ್ಥಾನ ಭಾರತಕ್ಕೆ ನೀಡಿದ್ದ ಗುರಿ 339 ರನ್‌. ಭಾರತ ಅತ್ಯಂತ ಕಳಪೆ ಬ್ಯಾಟಿಂಗ್‌ ಮಾಡಿ 158 ರನ್‌ಗೆ ಆಲೌಟಾಯಿತು. ಹಾಗೆ ನೋಡಿದರೆ, ಭಾರತಕ್ಕೂ, ಪಾಕಿಸ್ಥಾನಕ್ಕೂ ಬ್ಯಾಟಿಂಗ್‌ ಶಕ್ತಿಯಲ್ಲಿ ತಾಳೆಯೇ ಇಲ್ಲ. ಅಂತಹ ಪ್ರಬಲ ಬ್ಯಾಟ್ಸ್‌ಮನ್‌ಗಳಿದ್ದರೂ ಭಾರತೀಯರು 158 ರನ್‌ಗಳಿಗೆ ಕುಸಿದರು. ಇಂತಹ ಕುಸಿತ ಆಗಾಗ ಭಾರತೀಯ ತಂಡದಲ್ಲಿ ಸಂಭವಿಸುತ್ತಲೇ ಇರುತ್ತದೆ. ಒಂದು ಹಂತದಲ್ಲಿ ಈ ಕುಸಿತ ಯಾವ ಮಟ್ಟಕ್ಕೆ ಮುಟ್ಟಿತ್ತೆಂದರೆ ಭಾರತೀಯರಿಗೆ ಬ್ಯಾಟಿಂಗ್‌ ಬರುವುದಿಲ್ಲವೋ ಎನ್ನುವಂತಾಗಿತ್ತು. ಇವೆಲ್ಲ ನಿರ್ಣಾಯಕ ಸಂದರ್ಭದಲ್ಲಿ ಎನ್ನುವುದು ಅಚ್ಚರಿ. ಈ ಕುಸಿತಕ್ಕೆ ಕಾರಣ ಏನು ಎಂಬ ಪ್ರಶ್ನೆಗೂ ಉತ್ತರವಿಲ್ಲವಾಗಿದೆ.

ಭಾರತೀಯರ ಇಂತಹ ಕುಸಿತ ಮಗದೊಮ್ಮೆ ಕಂಡು ಬಂದಿದ್ದು 2019ರ ಏಕದಿನ ವಿಶ್ವಕಪ್‌ನಲ್ಲಿ. ಸಾಮಾನ್ಯ ಬೌಲಿಂಗ್‌ ಹೊಂದಿರುವ ಅಫ್ಘಾನಿಸ್ಥಾನದಂತಹ ತಂಡದೆದುರು ಭಾರತೀಯರು ತೀರಾ ಅಲ್ಪ ಮೊತ್ತಕ್ಕೆ ಕುಸಿದಿದ್ದರು. ಕಡೆಗೆ ಮೊಹಮ್ಮದ್‌ ಶಮಿ ಬೌಲಿಂಗ್‌ನಿಂದಾಗಿ ಗೆದ್ದು ಮರ್ಯಾದೆ ಉಳಿಸಿಕೊಂಡಿದ್ದರು. ಇಂತಹ ಇನ್ನೊಂದು ಸನ್ನಿವೇಶ ನಿರ್ಮಾಣವಾಗಿದ್ದು ಭಾರತ-ನ್ಯೂಜಿಲ್ಯಾಂಡ್‌ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ. ಮೊದಲು ಬ್ಯಾಟಿಂಗ್‌ ಮಾಡಿದ್ದ ನ್ಯೂಜಿಲ್ಯಾಂಡ್‌ ತಿಣುಕಾಡಿ 239 ರನ್‌ ಮಾಡಿತ್ತು. ಇದನ್ನು ಬೆನ್ನತ್ತಿ ಹೊರಟ ಭಾರತ, ಕೇವಲ 92 ರನ್‌ಗೆ 6 ವಿಕೆಟ್ ಕಳೆದುಕೊಂಡಿತ್ತು. ಅಂತಹ ದೈತ್ಯ ಬ್ಯಾಟಿಂಗ್‌ ಪಡೆ ಹೀಗೆ ಕುಸಿದಿದ್ದು ಅಭಿಮಾನಿಗಳಿಗೆ ಪ್ರಶ್ನಾರ್ಹವೆನಿಸಿತು.

ಇಂಗ್ಲೆಂಡ್‌, ನ್ಯೂಜಿಲ್ಯಾಂಡ್‌ ತಂಡದಲ್ಲೂ ಸಮಸ್ಯೆ
ಒಂದೊಂದು ತಂಡ ಒಂದೊಂದು ರೀತಿಯಲ್ಲಿ ವಿಫ‌ಲವಾಗುತ್ತವೆ. ದ.ಆಫ್ರಿಕಾ ಪಂದ್ಯದಲ್ಲಿ ಒತ್ತಡದ ಸನ್ನಿವೇಶ ಸೃಷ್ಟಿಯಾದರೆ ಸೋಲುವುದು ಮಾಮೂಲು. ಇಂಗ್ಲೆಂಡ್‌, ನ್ಯೂಜಿಲ್ಯಾಂಡ್‌ ತಂಡಗಳದ್ದು ಇನ್ನೊಂದು ಸಮಸ್ಯೆ. ಇಂಗ್ಲೆಂಡ್‌ 2019ರ ಏಕದಿನ ವಿಶ್ವಕಪ್‌ಗ್ೂ ಮುನ್ನ ಹಲವು ಬಾರಿ ಕೂಟದ ಫೈನಲ್ ಪ್ರವೇಶಿಸಿದೆ. ಅಲ್ಲೆಲ್ಲ ಸೋಲನುಭವಿಸಿದೆ. ನ್ಯೂಜಿಲ್ಯಾಂಡ್‌ ಕೂಡ 2019ರ ವಿಶ್ವಕಪ್‌ಗ್ೂ ಮೊದಲು 6 ಬಾರಿ ಸೆಮಿಫೈನಲ್ ಪ್ರವೇಶಿಸಿತ್ತು. ಒಮ್ಮೆಯೂ ಗೆದ್ದಿಲ್ಲ!

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.