ಒಂದೇ ದಿನ ರಿಲೀಸ್‌ ಆಗಲಿದೆಯೇ”ರಾಹುಕಾಲ ಗುಳಿಗ ಕಾಲ’; “ಇಂಗ್ಲೀಷ್‌’?


Team Udayavani, Jan 16, 2020, 5:43 AM IST

1401mlr40-rahukala-guligakala

ಕೋಸ್ಟಲ್‌ವುಡ್‌ನ‌ಲ್ಲಿ ಒಳ್ಳೊಳ್ಳೆ ಸಿನೆಮಾ ರಿಲೀಸ್‌ ಆಗುತ್ತಿದೆ ಎಂಬ ಸಂತೋಷದ ವಿಚಾರದ ಮಧ್ಯೆಯೇ, ಸೀಮಿತ ಮಾರುಕಟ್ಟೆಯಲ್ಲಿ ಸ್ಪರ್ಧೆ ಮಾತ್ರ ಇನ್ನೂ ನಿಂತಿಲ್ಲ ಎಂಬ ಅಪವಾದ ಇನ್ನೂ ದೂರವಾಗಿಲ್ಲ. ಒಂದೇ ದಿನದಂದು ಎರಡೆರಡು ಸಿನೆಮಾ ರಿಲೀಸ್‌ ಮಾಡುವ ಕಾಲ ಇನ್ನೂ ದೂರವಾಗಿಲ್ಲ. ಸದ್ಯ ಇಂತಹುದೇ ಬೆಳವಣಿಗೆಗೆ ಮತ್ತೆ ವೇದಿಕೆ ನಿರ್ಮಾಣವಾಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ “ರಾಹುಕಾಲ ಗುಳಿಗ ಕಾಲ’ ಹಾಗೂ “ಇಂಗ್ಲೀಷ್‌’ ಸಿನೆಮಾ ಎ. 3ರಂದು ತೆರೆಗೆ ಬರುವ ಸಿದ್ದತೆಯಲ್ಲಿದೆ. ಎರಡೂ ಚಿತ್ರತಂಡದವರು ಅದೇ ದಿನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಉಲ್ಲೇಖೀಸಿದ್ದಾರೆ. ಇನ್ನೂ ಅಂತಿಮ ತೀರ್ಮಾನದ ಪ್ರಕಟನೆ ಬರಬೇಕಿದೆ.

ಮೂಲಗಳ ಪ್ರಕಾರ, ಸದ್ಯ ಎರಡೂ ಚಿತ್ರತಂಡದ ನಿರ್ಮಾಪಕರು- ನಿರ್ದೇಶಕರು ಮುಂದಿನ ಕೆಲವೇ ದಿನದಲ್ಲಿ ಜತೆಯಾಗಿ ಕುಳಿತುಕೊಂಡು ಮಾತುಕತೆ ನಡೆಸಿ ಈ ಕುರಿತಂತೆ ಸೌಹಾರ್ದ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದ್ದಾರೆ. ಹೀಗಾಗಿ ಮಾತುಕತೆ ಆದ ಬಳಿಕವಷ್ಟೇ ಎರಡೂ ಸಿನೆಮಾ ರಿಲೀಸ್‌ನ ಸ್ಪಷ್ಟ ಚಿತ್ರಣ ಲಭಿಸಲಿದೆ.

ಈ ಹಿಂದೆ “ಅಪ್ಪೆ ಟೀಚರ್‌’ ಹಾಗೂ “ತೊಟ್ಟಿಲು’ ಸಿನೆಮಾ ಒಂದೇ ದಿನ ರಿಲೀಸ್‌ ಆಗಿತ್ತು. ಬಳಿಕ “ಏರಾ ಉಲ್ಲೆರ್‌ಗೆ’ ಹಾಗೂ “ಮೈ ನೇಮ್‌ ಈಸ್‌ ಅಣ್ಣಪ್ಪೆ’

ಸಿನೆಮಾ ಕೂಡ ಒಂದೇ ದಿನ ರಿಲೀಸ್‌ ಆಗಿತ್ತು. ಪರಿಣಾಮವಾಗಿ ಕೋಸ್ಟಲ್‌ವುಡ್‌ನ‌ಲ್ಲಿ ಸಮಸ್ಯೆ ಸೃಷ್ಟಿಯಾಗಿತ್ತು. ಇಂತಹುದೇ ಸಮಸ್ಯೆ ಮತ್ತೆ ಸೃಷ್ಟಿಯಾಗಬಾರದು ಎಂಬ ನಿಟ್ಟಿನಲ್ಲಿ ಇದೀಗ ಎರಡೂ ಚಿತ್ರತಂಡದವರು ಒಮ್ಮತದ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ರಾಹುಕಾಲ
ಗುಳಿಗ ಕಾಲ’
ಜಲನಿಧಿ ಫಿಲಂಸ್‌ನವರ “ರಾಹುಕಾಲ ಗುಳಿಗಕಾಲ’ ಸಿನೆಮಾ ಬಿಡುಗಡೆಯ ಸಿದ್ದತೆಯಲ್ಲಿದೆ. ಮಣಿಕಾಂತ್‌ ಕದ್ರಿ ಸಂಗೀತ ನೀಡಿದ್ದಾರೆ. ಅರ್ಜುನ್‌ ಕಾಪಿಕಾಡ್‌, ನವ್ಯತಾ ರೈ, ಅರವಿಂದ ಬೋಳಾರ್‌, ವಿಸ್ಮಯ ವಿನಾಯಕ್‌, ಚಂದ್ರಹಾಸ್‌ ಉಳ್ಳಾಲ್‌, ಸಂತೋಷ್‌ ಶೆಟ್ಟಿ, ಉಮೇಶ್‌ ಮಿಜಾರ್‌, ವಿಸ್ಮಯ ವಿನಾಯಕ್‌, ಮೈಮ್‌ ರಾಮ್‌ದಾಸ್‌ ಚಿತ್ರದಲ್ಲಿದ್ದಾರೆ.

ಮಾಸ್‌ ಮಾದ ಸಾಹಸದಲ್ಲಿ ಕೈ ಜೋಡಿಸಿದ್ದಾರೆ. ಸಿದ್ದು ಜಿ.ಎಸ್‌.ಛಾಯಾಗ್ರಹಣ, ಸುರೇಶ್‌ ಸಂಕಲನದಲ್ಲಿ ತೊಡಗಿಸಿದ್ದಾರೆ. “ಪತ್ತೀಸ್‌ ಗ್ಯಾಂಗ್‌’ ಸಿನೆಮಾ ಮಾಡಿದ ತಂಡ ರಾಹುಕಾಲದಲ್ಲಿ ತೊಡಗಿಸಿಕೊಂಡಿದೆ. ಪತ್ತೀಸ್‌ ಗ್ಯಾಂಗ್‌ ಶೂಟಿಂಗ್‌ ಆದ ಕಾಲದಲ್ಲಿಯೇ ರಾಹುಕಾಲದ ಶೂಟಿಂಗ್‌ ಕೂಡ ಮಾಡಲಾಗಿದೆ. ಈ ಸಿನೆಮಾದಲ್ಲಿ, ಶೂಟಿಂಗ್‌ ವೇಳೆಯಲ್ಲಿ ಒರಿಜಿನಲ್‌ ಗನ್‌ ಹಿಡಿದುಕೊಳ್ಳಲಾಗಿದೆ. ಕೋಸ್ಟಲ್‌ವುಡ್‌ನ‌ಲ್ಲಿ ಇದೊಂದು ಮೊದಲ ಪ್ರಯತ್ನ.

“ಇಂಗ್ಲೀಷ್‌’
ಅಕೆ¾ ಮೂವೀಸ್‌ ಇಂಟರ್‌ನ್ಯಾಷನಲ್‌ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, ಮಾರ್ಚ್‌- 22 ಕನ್ನಡ ಚಿತ್ರದ ನಿರ್ಮಾಪಕ ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ನಿರ್ಮಿಸುತ್ತಿರುವ “ಇಂಗ್ಲೀಷ್‌’ ತುಳು ಸಿನೆಮಾ ಬಿಡುಗಡೆಯ ಸಿದ್ದತೆಯಲ್ಲಿದೆ.

ಎಕ್ಕಸಕ, ಪಿಲಿಬೈಲ್‌ ಯಮುನಕ್ಕ, ಅಮ್ಮೆರ್‌ ಪೊಲೀಸಾ ಮುಂತಾದ ಯಶಸ್ವಿ ಚಿತ್ರವನ್ನು ನಿರ್ದೇಶಿಸಿರುವ ಕೆ. ಸೂರಜ್‌ ಶೆಟ್ಟಿ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರ ಕೋಸ್ಟಲ್‌ವುಡ್‌ನ‌ಲ್ಲಿ ಬಹಳಷ್ಟು ನಿರೀಕ್ಷೆ ಮೂಡಿಸಿದೆ. ಖ್ಯಾತ ನಟ ಅನಂತನಾಗ್‌ ಪ್ರಥಮ ಬಾರಿಗೆ ತುಳು ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಸಿನೆಮಾಕ್ಕೆ ಕೃಷ್ಣ ಸಾರಥಿ ಛಾಯಾಗ್ರಹಣ, ಮನು ಶೇರಿಗಾರ್‌ ಸಂಕಲನ, ಮಣಿಕಾಂತ್‌ ಕದ್ರಿ ಸಂಗೀತ, ಸಾಹಿತ್ಯ ಶಶಿರಾಜ್‌ ಕಾವೂರು, ಅರ್ಜುನ್‌ ಲೂಯಿಸ್‌, ಡಿಸೈನ್‌ ದೇವಿ ರೈ, ಸಿನೆಮಾಕ್ಕೆ ಕತೆ, ಚಿತ್ರಕತೆ, ಸಂಭಾಷಣೆ, ನಿರ್ದೇಶನ ಕೆ. ಸೂರಜ್‌ ಶೆಟ್ಟಿ. ತಾರಾಗಣದಲ್ಲಿ ಪೃಥ್ವಿ ಅಂಬರ್‌, ನವ್ಯ ಪೂಜಾರಿ, ನವೀನ್‌ ಡಿ. ಪಡೀಲ್‌, ಅರವಿಂದ್‌ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ ನಾಯಕ್‌, ದೀಪಕ್‌ ರೈ ಪಾಣಾಜೆ, ರವಿರಾಮ ಕುಂಜ ಮುಂತಾದವರಿದ್ದಾರೆ.

ಮಾರ್ಚ್‌- 22 ಕನ್ನಡ ಚಿತ್ರದ ನಿರ್ಮಾಪಕ ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ನಿರ್ಮಿಸುತ್ತಿರುವ “ಇಂಗ್ಲೀಷ್‌’ ತುಳು ಸಿನೆಮಾ ಬಿಡುಗಡೆಯ ಸಿದ್ದತೆಯಲ್ಲಿದೆ.

ಎಕ್ಕಸಕ, ಪಿಲಿಬೈಲ್‌ ಯಮುನಕ್ಕ, ಅಮ್ಮೆರ್‌ ಪೊಲೀಸಾ ಮುಂತಾದ ಯಶಸ್ವಿ ಚಿತ್ರವನ್ನು ನಿರ್ದೇಶಿಸಿರುವ ಕೆ. ಸೂರಜ್‌ ಶೆಟ್ಟಿ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರ ಕೋಸ್ಟಲ್‌ವುಡ್‌ನ‌ಲ್ಲಿ ಬಹಳಷ್ಟು ನಿರೀಕ್ಷೆ ಮೂಡಿಸಿದೆ. ಖ್ಯಾತ ನಟ ಅನಂತನಾಗ್‌ ಪ್ರಥಮ ಬಾರಿಗೆ ತುಳು ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಸಿನೆಮಾಕ್ಕೆ ಕೃಷ್ಣ ಸಾರಥಿ ಛಾಯಾಗ್ರಹಣ, ಮನು ಶೇರಿಗಾರ್‌ ಸಂಕಲನ, ಮಣಿಕಾಂತ್‌ ಕದ್ರಿ ಸಂಗೀತ, ಸಾಹಿತ್ಯ ಶಶಿರಾಜ್‌ ಕಾವೂರು, ಅರ್ಜುನ್‌ ಲೂಯಿಸ್‌, ಡಿಸೈನ್‌ ದೇವಿ ರೈ, ಸಿನೆಮಾಕ್ಕೆ ಕತೆ, ಚಿತ್ರಕತೆ, ಸಂಭಾಷಣೆ, ನಿರ್ದೇಶನ ಕೆ. ಸೂರಜ್‌ ಶೆಟ್ಟಿ. ತಾರಾಗಣದಲ್ಲಿ ಪೃಥ್ವಿ ಅಂಬರ್‌, ನವ್ಯ ಪೂಜಾರಿ, ನವೀನ್‌ ಡಿ. ಪಡೀಲ್‌, ಅರವಿಂದ್‌ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ ನಾಯಕ್‌, ದೀಪಕ್‌ ರೈ ಪಾಣಾಜೆ, ರವಿರಾಮ ಕುಂಜ ಮುಂತಾದವರಿದ್ದಾರೆ.

-ದಿನೇಶ್‌ ಇರಾ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.