ದಟ್ಟಕಾನನದ ನಡುವೆ ಭೋರ್ಗರೆವ ಎರ್ಮಾಯಿ ಜಲಪಾತ


Team Udayavani, Dec 13, 2018, 2:17 PM IST

13-december-15.gif

ದಟ್ಟ ಕಾನನದ ನಡುವೆ ಭೋರ್ಗರೆಯುತ್ತ ಹರಿಯುವ ಜಲಧಾರೆಯನ್ನು ನೋಡುವುದೇ ಕಣ್ಣಿಗೆ ಹಬ್ಬ. ಪಟ್ಟಣದಿಂದ ದೂರವಿರುವ ಎರ್ಮಾಯಿ ಜಲಪಾತವನ್ನು ನೋಡಲು ಸಾಗುವುದೇ ಮನಸ್ಸಿಗೆ ಖುಷಿ ಕೊಡುವಂತದ್ದು. ಕಚ್ಚಾ ರಸ್ತೆಯಲ್ಲಿ ಸಾಗಿ, ತಿಗಣೆಗಳು ಕಚ್ಚದಂತೆ ಎಚ್ಚರಿಕೆ ವಹಿಸಿ ಜಲಪಾತ ಸಮೀಪ ಬಂದಾಗ ಏನೋ ಸಾಹಸ ಮಾಡಿ ಬಂದ ಸಂತೃಪ್ತಿ ನಮ್ಮದಾಗುವುದು.

ಪ್ರವಾಸಿಗರ ಕಣ್ಮನಗಳಿಗೆ ಆಹ್ಲಾದ ನೀಡುವ ಜಲಪಾತಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹಳಷ್ಟಿವೆ. ಅಂಥವುಗಳ ಪೈಕಿ ಬೆಳ್ತಂಗಡಿ ತಾಲೂಕಿನ ದಿಡುಪೆಯ ಕಾಜೂರ ಬಳಿಯ, ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಎಂಬಲ್ಲಿ ದಟ್ಟ ಕಾನನದ ನಡುವೆ ಪ್ರಶಾಂತವಾದ ಸ್ಥಳದಲ್ಲಿದೆ ಈ ಜಲಪಾತ.

ಸುಮಾರು 80 ಅಡಿ ಎತ್ತರದ ಕಲ್ಲು ಬಂಡೆಗಳ ಮಧ್ಯದಿಂದ ವಯ್ನಾರವಾಗಿ ಧುಮುಕುವ ಜಲಪಾತವನ್ನು ನೋಡುವುದೇ ಹಬ್ಬ. ಎರ್ಮಾಯಿ ಜಲಪಾತ ನೋಡಲು ಎಷ್ಟು ಸುಂದರವಾಗಿ ಇದೆಯೋ ಅಲ್ಲಿಗೆ ತಲುಪುವ ಮಾರ್ಗವೇ ಅಷ್ಟೇ ದುರ್ಗಮವಾಗಿದೆ. ದಟ್ಟ ಕಾನನಗಳ ನಡುವಿನ ಕವಲು ದಾರಿ ಪ್ರವಾಸಿಗರನ್ನು ಇನ್ನಷ್ಟು ಪುಳಕಿತರನ್ನಾಗಿಸುತ್ತದೆ. ದಾರಿಯ ಮಧ್ಯದಲ್ಲಿ ಇರುವ ಹಳ್ಳ, ತೊರೆ, ಸೇತುವೆಗಳನ್ನು ದಾಟುತ್ತಾ ಸಾಗುವಾಗ ಆಗುವ ಅನುಭವವೇ ವಿಭಿನ್ನ. ಈ ಜಲಪಾತದಿಂದ ಹರಿದು ಬರುವ ನೀರಿನಿಂದ ಅಲ್ಲಲ್ಲಿ ಕಿರು ವಿದ್ಯುತ್‌ ಉತ್ಪಾದನಾ ಸ್ಥಾವರವನ್ನೂ ಸ್ಥಾಪಿಸಲಾಗಿದ್ದು, ವರ್ಷಪೂರ್ತಿ ಇಲ್ಲಿನ ಸುತ್ತಮುತ್ತಲಿನ ಮನೆಗಳಿಗೆ ನಿರಂತರವಾಗಿ ವಿದ್ಯುತ್‌ ದೊರಕುವಂತೆ ಮಾಡಲಾಗಿರುವುದು ಇಲ್ಲಿನ ವಿಶೇಷ.

ಬೆಳ್ತಂಗಡಿ ತಾಲೂಕಿನ ಉಜಿರೆ ಪಟ್ಟಣದಿಂದ ಚಾರ್ಮಾಡಿ- ಕೊಟ್ಟಿಗೆಹಾರ ರಸ್ತೆಯಲ್ಲಿ ಸಾಗುತ್ತಾ ಸೋಮಂತಡ್ಕ ಎಂಬಲ್ಲಿ ಎಡಗಡೆ ತಿರುವಿನ ರಸ್ತೆಯಲ್ಲಿ ಸುಮಾರು ಹದಿನೈದರಿಂದ ಹದಿನಾರು ಕಿಲೋ ಮೀಟರ್‌ ಸಾಗಿದಾಗ ಕಾಜೂರು ಎಂಬಲ್ಲಿ ಸ್ವಂತ ವಾಹನ ಅಥವಾ ಬಸ್‌ ನಿಂದ ಇಳಿದು, ಕಾಡು ದಾರಿಯಲ್ಲಿ ಸುಮಾರು 2 ಕಿ.ಮೀ. ಕ್ರಮಿಸಿದರೆ ಸುಪ್ರಸಿದ್ಧ ಎರ್ಮಾಯಿ ಜಲಪಾತದ ತಪ್ಪಲನ್ನು ತಲುಪಬಹುದು.

ಕಾಜೂರಿನಿಂದ ಈ ಜಲಪಾತದ ತಪ್ಪಲನ್ನು ತಲುಪುವ ದಾರಿಯು ಸಂಪೂರ್ಣ ಕಚ್ಚಾ (ಮಣ್ಣಿನ) ರಸ್ತೆಯಾಗಿದೆ. ಇಲ್ಲಿಗೆ ಸಾಗುವ ದಾರಿಯ ಮಧ್ಯೆ ಸುಮಾರು ಅರ್ಧ ಗಂಟೆ ಕಾಲ ತುಂಬಿ ಹರಿಯುವ ನೀರಿನಲ್ಲೇ ನಡೆದುಕೊಂಡು ಹೋಗುವುದು ಚಾರಣಿಗರಿಗೆ ವಿಭಿನ್ನ ಅನುಭವವನ್ನು ನೀಡುತ್ತದೆ.

ಈ ಹೆಸರು ಬಂದದ್ದು ಹೇಗೆ ?
ಏಳೂವರೆ ಹಳ್ಳ ಎಂಬ ಸ್ಥಳ ಎರ್ಮಾಯಿ ಜಲಪಾತದ ಉಗಮ ಸ್ಥಾನವಂತೆ. ಹಿಂದಿನ ಕಾಲದಲ್ಲಿ ಏಳು ಮಂದಿ ಯುವಕರು ಗದ್ದೆಯ ಉಳುಮೆಯನ್ನು ಮಾಡಿ ಉಳುಮೆಯ ಎತ್ತುಗಳನ್ನು ಈಗ ಜಲಪಾತವಿರುವ ಸ್ಥಳದಲ್ಲಿ ನಿತ್ಯ ತೊಳೆಯುತ್ತಿದ್ದರಂತೆ.

ಒಂದು ದಿನ ಇದ್ದಕ್ಕಿದ್ದಂತೆ ಈ ಎತ್ತುಗಳು ಇಲ್ಲಿಂದ ಮಾಯವಾದವೆಂದು ಇಲ್ಲಿನ ಹಿರಿಯರು ಕಥೆಯೊಂದನ್ನು ಹೇಳುತ್ತಾರೆ. ಇಲ್ಲಿನ ಪ್ರಾದೇಶಿಕ ಭಾಷೆ ತುಳುವಾಗಿದ್ದು, ಎತ್ತಿಗೆ ಎರು ಎಂದು ಕರೆಯಲಾಗುತ್ತದೆ. ಆದ್ದರಿಂದ ಈ ಸ್ಥಳದಲ್ಲಿ ಎತ್ತುಗಳು ಮಾಯವಾದ ಕಾರಣದಿಂದ ಎರು ಮಾಯ ಎಂದು ಜನರು ಕರೆಯುತ್ತಿದ್ದು, ಕ್ರಮೇಣ ಜನರ ಬಾಯಿ ಮಾತಿನಲ್ಲಿ ಎರು ಮಾಯ ಸ್ಥಳವು ಎರ್ಮಾಯಿ ಎಂದು ಬದಲಾಯಿತೆಂದು ಸ್ಥಳ ಪುರಾಣ ತಿಳಿಸುತ್ತದೆ. ಈ ಜಲಪಾತ ಹಾಗೂ ಸುತ್ತಮುತ್ತಲ ಪ್ರದೇಶವೇ ವಿಭಿನ್ನವಾಗಿವೆ.

ಭೋರ್ಗರೆವ ಜಲಪಾತ ಒಂದೆಡೆಯಾದರೆ, ಹಚ್ಚ ಹಸುರಿನಿಂದ ಕಂಗೊಳಿಸುವ ಕಾಡು ಹಾಗೂ ಹಚ್ಚ ಹಸುರಿನ ತೋಟಗಳು ಇನ್ನೊಂದೆಡೆ. ಈ ಜಲಪಾತವು ಪಟ್ಟಣದಿಂದ ಬಲು ದೂರದಲ್ಲಿ ಇರುವುದರಿಂದ, ಜಲಪಾತಕ್ಕೆ ಸಮೀಪದಲ್ಲಿ ಯಾವುದೇ ಹೊಟೇಲ್‌ಗ‌ಳಿಲ್ಲ. ಆದ್ದರಿಂದ, ಇಲ್ಲಿಗೆ ಬರುವ ಪ್ರವಾಸಿಗರು ಉಜಿರೆ ಅಥವಾ ಸೋಮಂತಡ್ಕ ಪಟ್ಟಣದಿಂದಲೇ ಊಟ- ತಿಂಡಿ ಕಟ್ಟಿಕೊಂಡು ಬರಬೇಕು. ಬೆಟ್ಟದ ತಪ್ಪಲಲ್ಲಿ ಈ ಜಲಪಾತವಿರುವುದರಿಂದ ವರ್ಷವಿಡೀ ತುಂಬಿ ಧುಮುಕುತ್ತದೆ. ಇಲ್ಲಿಗೆ ಸಾಗುವ ದಾರಿಯಲ್ಲಿ ಜಿಗಣೆಗಳು ಶತ್ರುವಿನಂತೆ ಪ್ರವಾಸಿಗರನ್ನು ಕಾಡುವುದರಿಂದ ಇವುಗಳಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ನಶ್ಯ ಅಥವಾ ಸುಣ್ಣವನ್ನು ಕಾಲುಗಳಿಗೆ ಸವರಿಕೊಂಡು ಹೋಗುವುದು ಒಳ್ಳೆಯದು.

ಇಲ್ಲಿನ ಜಲಪಾತದ ಅಕ್ಕಪಕ್ಕದ ಬಂಡೆಗಳು ಅತ್ಯಂತ ಆಳವಾಗಿ ಹಾಗೂ ಕಡಿದಾಗಿದ್ದು ನೋಡಲು ನಯನ ಮನೋಹರವಾಗಿದ್ದರೂ ಸಾವನ್ನೇ ತಮ್ಮ ಮಡಿಲಲ್ಲಿ ಬಚ್ಚಿಟ್ಟುಕೊಂಡಿವೆ ಎನ್ನಬಹುದು. ಕೌಶಲವನ್ನು ಈ ಬಂಡೆಕಲ್ಲುಗಳ ಮೇಲೆ ತೋರಲು ಹೋಗಿ, ಈ ಬಂಡೆ ಕಲ್ಲುಗಳ ಮೇಲೆ ಏರಿ ಅದೆಷ್ಟೋ ಮಂದಿ ಅಲ್ಲಿಂದ ಜಾರಿ ಕೆಳಗೆ ಬಿದ್ದು ಪ್ರಾಣಕ್ಕೆ ಸಂಚಕಾರ ಮಾಡಿಕೊಂಡ ಘಟನೆಗಳು ನಡೆದಿವೆ. ಹಾಗಾಗಿ, ಎರ್ಮಾಯಿ ಜಲಪಾತ ನೋಡಲು ಬರುವವರು ಯಾವುದೇ ಕಾರಣಕ್ಕೂ ರಭಸವಾಗಿ ಓಡಾಡಲು ಹೋಗಬಾರದು. ಜಲಪಾತದ ದಾರಿಯಲ್ಲಿ ಹೋಗುವಾಗ ಸಾಹಸ ಪ್ರದರ್ಶನಕ್ಕೆ ಮುಂದಾಗಬಾರದು. 

ರೂಟ್‌ ಮ್ಯಾಪ್‌
·ಮಂಗಳೂರಿನಿಂದ 81 ಕಿ.ಮೀ. ದೂರದಲ್ಲಿದೆ.
· ಉಜಿರೆಯಿಂದ ಸಾಕಷ್ಟು ಬಸ್‌, ಖಾಸಗಿ ವಾಹನ ಸೌಲಭ್ಯವಿ ದೆ.
· ಜಲಪಾತಕ್ಕೆ ಹತ್ತಿರದಲ್ಲಿ ಹೊಟೇಲ್‌ ಗಳಿಲ್ಲ.
· ಜಲಪಾತ ಸಮೀಪ ಜಾರು ಬಂಡೆ, ದಾರಿಯಲ್ಲಿ ಜಿಗಣೆ ಕಾಟವಿದ್ದು ಎಚ್ಚರಿಕೆ ಅಗತ್ಯ.

 ಸಂತೋಷ್‌ ರಾವ್‌ ಪೆರ್ಮುಡ 

ಟಾಪ್ ನ್ಯೂಸ್

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

13

UV Fusion: ಅರಿತು ಬಾಳಲು… ಬದುಕು ಬಂಗಾರ…

12-uv-fusion

Water: ನೀರನ್ನು ಮಿತವಾಗಿ ಬಳಸೋಣ

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

5-

Krishna: ಯಾರು ಈ  ಕೃಷ್ಣ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.