![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಯಾವುದೇ ಬೆಳೆಗಳ ಬೆಲೆ ಏರಿಕೆಯಾಗಿಲ್ಲ
Team Udayavani, May 12, 2019, 6:00 AM IST
![28](https://www.udayavani.com/wp-content/uploads/2019/05/28-7-620x424.jpg)
ಕಳೆದ ವಾರ ಅಡಿಕೆಗೆ ಸಂಬಂಧಿಸಿದಂತೆ ಅಚ್ಚರಿಯ ಬೆಳವಣಿಗೆಗಳು ಬೆಳೆಗಾರರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದರೂ ಹೊಸ ಬೆಳವಣಿಗೆಗಳು ಕಾಣಿಸಿಕೊಂಡಿಲ್ಲ. ಬೆಳೆಗಾರರಲ್ಲಿ ಬೆಲೆ ಏರಿಕೆಯ ನಿರೀಕ್ಷೆಯಷ್ಟೆ ಉಳಿದುಕೊಂಡಿದೆ. ಆರ್ಥಿಕ ವರ್ಷ ಕೊನೆಯ ಮಾರ್ಚ್ ತಿಂಗಳು ಮುಗಿದ ಬಳಿಕ ಬೆಲೆ ಏರಿಕೆಯಾಗಬಹುದೆನ್ನುವ ನಿರೀಕ್ಷೆಯೂ ಹುಸಿಯಾಗಿದೆ.
ಎರಡು ವಾರಗಳ ಹಿಂದೆ ಅಲ್ಪ ಏರಿಕೆ ಕಂಡಿದ್ದ ಅಡಿಕೆ ಬೆಲೆ ಈಗಲೂ ಅದೇ ದರದಲ್ಲಿ ಮುಂದುವರಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಡಿಕೆ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಆದರೆ ಬೆಲೆ ಏರಿಕೆಯ ನಿರೀಕ್ಷೆಯಲ್ಲಿ ಅಡಿಕೆಯನ್ನು ಮಾರಾಟಕ್ಕೆ ಬಿಡದೆ ತೆಗೆದಿರಿಸಿಕೊಂಡಿದ್ದ ಬೆಳೆಗಾರರಿಗೆ ನಿರೀಕ್ಷಿತ ಬೆಲೆ ಏರಿಕೆ ಆಗದೇ ಇರುವುದು ನಿರಾಶೆಯನ್ನುಂಟುಮಾಡಿದೆ.
2 ವಾರದ ಹಿಂದೆ 275 ರೂ.ನಲ್ಲಿದ್ದ ಅಡಿಕೆ ಧಾರಣೆ 278 ರೂ.ಗೆ ಏರಿಕೆಯಾಗಿ ಮೂರನೇ ವಾರವೂ ಅದೇ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಉಳಿದಂತೆ ಹೊಸ ಅಡಿಕೆ 228 ರೂ.ನಿಂದ 230 ರೂ., ಡಬಲ್ ಚೋಲು 300 ರೂ.ನಿಂದ 310 ರೂ.ವರೆಗೆ ಖರೀದಿ ನಡೆಸಿದ್ದು, ಹಿಂದಿನ ವಾರದ ಧಾರಣೆಯನ್ನೇ ಕಾಪಾಡಿಕೊಂಡಿದೆ. ಪಠೊರಾ ಹೊಸ 150 ರೂ.ನಿಂದ 190 ರೂ.ವರೆಗೆ ಹಾಗೂ ಹಳೆಯದು 210 ರೂ.ಗೆ ಖರೀದಿ ನಡೆಸುತ್ತಿದೆ. ಉಳ್ಳಿಗಡ್ಡೆ 130 ರೂ. ಹಾಗೂ ಹಳೆಯದು 150 ರೂ., ಕರಿಗೋಟು 100 ರೂ.ನಿಂದ 140 ರೂ.ವರೆಗೆ ಧಾರಣೆ ಪಡೆಯುತ್ತಿವೆ.
ಕಾಳುಮೆಣಸು ಏರಿಕೆ
ಕಾಳುಮೆಣಸು ಕೆಜಿಗೆ 310 ರೂ.ವರೆಗೆ ಧಾರಣೆ ಪಡೆದುಕೊಂಡಿದೆ. ಹಿಂದಿನ ವಾರ ಕೆ.ಜಿ.ಗೆ 310 ರೂ. ಇತ್ತು. ಕಳೆದ ಕೆಲ ಸಮಯಗಳ ಧಾರಣೆಯನ್ನೇ ಗಮನಿಸಿದರೆ ದೊಡ್ಡ ಮಟ್ಟಿನ ಧಾರಣೆ ಪಡೆದುಕೊಳ್ಳದೇ ಇರುವುದನ್ನು ಗಮನಿಸಬಹುದು. 2 ವರ್ಷಗಳಿಂದ ಇಳಿಕೆಯ ಧಾರಣೆ ಮುಂದುವರೆದಿದೆ.
ರಬ್ಬರ್ ಬೆಳವಣಿಗೆಯಿಲ್ಲ
ಎರಡು ವಾರದ ಹಿಂದೆ ಧಾರಣೆ ಏರಿಸಿಕೊಂಡು ಅಚ್ಚರಿ ಮೂಡಿಸಿದ್ದ ರಬ್ಬರ್, ಅನಂತರ ಏರಿಕೆ ಕಂಡಿಲ್ಲ. ಆರ್ಎಸ್ಎಸ್4 ದರ್ಜೆ 1.5 ರೂ. ಕುಸಿತ ಕಂಡು 124 ರೂ., ಆರ್ಎಸ್ಎಸ್5 ದರ್ಜೆ 1 ರೂ. ಕುಸಿತ ಕಂಡು 118 ರೂ., 50 ಪೈಸೆ ಕುಸಿದಿರುವ ಲಾಟ್ 113 ರೂ.ನಲ್ಲಿ ಖರೀದಿ ನಡೆಸಿದೆ. ತಲಾ 1 ರೂ. ಏರಿಸಿಕೊಂಡಿರುವ ಸ್ಕಾಪ್ 1 ದರ್ಜೆ 88 ರೂ. ಹಾಗೂ ಸ್ಕಾಪ್ 2 ದರ್ಜೆ 80 ರೂ.ನಲ್ಲಿ ಖರೀದಿ ನಡೆಸಿವೆ.
ಕೊಕ್ಕೋ ಸ್ಥಿರ
ಕೊಕ್ಕೋ ಧಾರಣೆ ಇಳಿಕೆ ಕಂಡಿದೆ. ಕಳೆದ ಕೆಲ ಸಮಯಗಳಿಂದ ಕೊಕ್ಕೋ ಧಾರಣೆ ಸ್ಥಿರವಾಗಿ ಕ್ರಮಿಸುತ್ತಿತ್ತು. ಹಸಿ ಕೊಕ್ಕೋ ಕೆ.ಜಿ.ಗೆ 65 ರೂ., ಒಣ ಕೊಕ್ಕೋ ಕೆ.ಜಿ.ಗೆ 195 ರೂ.ನಲ್ಲಿ ಖರೀದಿ ನಡೆದಿತ್ತು. ಈ ವಾರದ ಹಸಿ ಕೊಕ್ಕೋ 60 ರೂ.ಗೆ ಇಳಿಕೆ ಕಂಡಿದೆ. ಕೃಷಿ ಉತ್ಪನ್ನಗಳ ಪೈಕಿ ಸ್ಥಿರತೆ ಸಾಧಿಸಿದ ಏಕೈಕ ಉತ್ಪನ್ನವೆಂದರೆ ಅದು ಕೊಕ್ಕೋ ಮಾತ್ರ ಎಂದೇ ಹೇಳಬಹುದು. ಕೆಲವು ವರ್ಷಗಳಿಂದ ಕೊಕ್ಕೋ ಬೆಳೆಯುವ ಪ್ರಮಾಣವೂ ಧಾರಣೆಯ ಸ್ಥಿರತೆಯ ಕಾರಣದಿಂದ ಹೆಚ್ಚಾಗಿದೆ.
ತೆಂಗು ಧಾರಣೆ
ತೆಂಗಿಗೆ ಹಿಂದಿನ ವಾರದ ಧಾರಣೆಯೇ ಮುಂದುವರೆದಿದೆ. ಈ ವಾರ ತೆಂಗಿನಕಾಯಿ ಕೆ.ಜಿ.ಗೆ 32 ರೂ.ನಿಂದ 34 ರೂ.ವರೆಗೆ ವ್ಯವಹಾರ ಕುದುರಿಸಿದೆ. ಹಿಂದಿನ ವಾರ ಇದೇ ಧಾರಣೆ ಇತ್ತು. ಅದರ ಹಿಂದಿನ ವಾರ 1 ರೂ. ಏರಿಕೆ ಕಂಡಿತ್ತು. ಒಟ್ಟಿನಲ್ಲಿ ಉತ್ತಮವೆನಿಸುವ ಧಾರಣೆ ತೆಂಗಿಗೆ ಮುಂದುವರೆದಿದೆ. ಒಂದು ವರ್ಷದ ಅವಧಿಯಲ್ಲಿ ತೆಂಗಿಗೆ ಉತ್ತಮ ಧಾರಣೆ ಮುಂದುವರೆದಿದೆ.
- ರಾಜೇಶ್ ಪಟ್ಟೆ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.