ಯಾವುದೇ ಬೆಳೆಗಳ ಬೆಲೆ ಏರಿಕೆಯಾಗಿಲ್ಲ


Team Udayavani, May 12, 2019, 6:00 AM IST

28

ಕಳೆದ ವಾರ ಅಡಿಕೆಗೆ ಸಂಬಂಧಿಸಿದಂತೆ ಅಚ್ಚರಿಯ ಬೆಳವಣಿಗೆಗಳು ಬೆಳೆಗಾರರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದರೂ ಹೊಸ ಬೆಳವಣಿಗೆಗಳು ಕಾಣಿಸಿಕೊಂಡಿಲ್ಲ. ಬೆಳೆಗಾರರಲ್ಲಿ ಬೆಲೆ ಏರಿಕೆಯ ನಿರೀಕ್ಷೆಯಷ್ಟೆ ಉಳಿದುಕೊಂಡಿದೆ. ಆರ್ಥಿಕ ವರ್ಷ ಕೊನೆಯ ಮಾರ್ಚ್‌ ತಿಂಗಳು ಮುಗಿದ ಬಳಿಕ ಬೆಲೆ ಏರಿಕೆಯಾಗಬಹುದೆನ್ನುವ ನಿರೀಕ್ಷೆಯೂ ಹುಸಿಯಾಗಿದೆ.

ಎರಡು ವಾರಗಳ ಹಿಂದೆ ಅಲ್ಪ ಏರಿಕೆ ಕಂಡಿದ್ದ ಅಡಿಕೆ ಬೆಲೆ ಈಗಲೂ ಅದೇ ದರದಲ್ಲಿ ಮುಂದುವರಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಡಿಕೆ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಆದರೆ ಬೆಲೆ ಏರಿಕೆಯ ನಿರೀಕ್ಷೆಯಲ್ಲಿ ಅಡಿಕೆಯನ್ನು ಮಾರಾಟಕ್ಕೆ ಬಿಡದೆ ತೆಗೆದಿರಿಸಿಕೊಂಡಿದ್ದ ಬೆಳೆಗಾರರಿಗೆ ನಿರೀಕ್ಷಿತ ಬೆಲೆ ಏರಿಕೆ ಆಗದೇ ಇರುವುದು ನಿರಾಶೆಯನ್ನುಂಟುಮಾಡಿದೆ.

2 ವಾರದ ಹಿಂದೆ 275 ರೂ.ನಲ್ಲಿದ್ದ ಅಡಿಕೆ ಧಾರಣೆ 278 ರೂ.ಗೆ ಏರಿಕೆಯಾಗಿ ಮೂರನೇ ವಾರವೂ ಅದೇ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಉಳಿದಂತೆ ಹೊಸ ಅಡಿಕೆ 228 ರೂ.ನಿಂದ 230 ರೂ., ಡಬಲ್‌ ಚೋಲು 300 ರೂ.ನಿಂದ 310 ರೂ.ವರೆಗೆ ಖರೀದಿ ನಡೆಸಿದ್ದು, ಹಿಂದಿನ ವಾರದ ಧಾರಣೆಯನ್ನೇ ಕಾಪಾಡಿಕೊಂಡಿದೆ. ಪಠೊರಾ ಹೊಸ 150 ರೂ.ನಿಂದ 190 ರೂ.ವರೆಗೆ ಹಾಗೂ ಹಳೆಯದು 210 ರೂ.ಗೆ ಖರೀದಿ ನಡೆಸುತ್ತಿದೆ. ಉಳ್ಳಿಗಡ್ಡೆ 130 ರೂ. ಹಾಗೂ ಹಳೆಯದು 150 ರೂ., ಕರಿಗೋಟು 100 ರೂ.ನಿಂದ 140 ರೂ.ವರೆಗೆ ಧಾರಣೆ ಪಡೆಯುತ್ತಿವೆ.

ಕಾಳುಮೆಣಸು ಏರಿಕೆ
ಕಾಳುಮೆಣಸು ಕೆಜಿಗೆ 310 ರೂ.ವರೆಗೆ ಧಾರಣೆ ಪಡೆದುಕೊಂಡಿದೆ. ಹಿಂದಿನ ವಾರ ಕೆ.ಜಿ.ಗೆ 310 ರೂ. ಇತ್ತು. ಕಳೆದ ಕೆಲ ಸಮಯಗಳ ಧಾರಣೆಯನ್ನೇ ಗಮನಿಸಿದರೆ ದೊಡ್ಡ ಮಟ್ಟಿನ ಧಾರಣೆ ಪಡೆದುಕೊಳ್ಳದೇ ಇರುವುದನ್ನು ಗಮನಿಸಬಹುದು. 2 ವರ್ಷಗಳಿಂದ ಇಳಿಕೆಯ ಧಾರಣೆ ಮುಂದುವರೆದಿದೆ.

ರಬ್ಬರ್‌ ಬೆಳವಣಿಗೆಯಿಲ್ಲ
ಎರಡು ವಾರದ ಹಿಂದೆ ಧಾರಣೆ ಏರಿಸಿಕೊಂಡು ಅಚ್ಚರಿ ಮೂಡಿಸಿದ್ದ ರಬ್ಬರ್‌, ಅನಂತರ ಏರಿಕೆ ಕಂಡಿಲ್ಲ. ಆರ್‌ಎಸ್‌ಎಸ್‌4 ದರ್ಜೆ 1.5 ರೂ. ಕುಸಿತ ಕಂಡು 124 ರೂ., ಆರ್‌ಎಸ್‌ಎಸ್‌5 ದರ್ಜೆ 1 ರೂ. ಕುಸಿತ ಕಂಡು 118 ರೂ., 50 ಪೈಸೆ ಕುಸಿದಿರುವ ಲಾಟ್‌ 113 ರೂ.ನಲ್ಲಿ ಖರೀದಿ ನಡೆಸಿದೆ. ತಲಾ 1 ರೂ. ಏರಿಸಿಕೊಂಡಿರುವ ಸ್ಕಾಪ್‌ 1 ದರ್ಜೆ 88 ರೂ. ಹಾಗೂ ಸ್ಕಾಪ್‌ 2 ದರ್ಜೆ 80 ರೂ.ನಲ್ಲಿ ಖರೀದಿ ನಡೆಸಿವೆ.

ಕೊಕ್ಕೋ ಸ್ಥಿರ
ಕೊಕ್ಕೋ ಧಾರಣೆ ಇಳಿಕೆ ಕಂಡಿದೆ. ಕಳೆದ ಕೆಲ ಸಮಯಗಳಿಂದ ಕೊಕ್ಕೋ ಧಾರಣೆ ಸ್ಥಿರವಾಗಿ ಕ್ರಮಿಸುತ್ತಿತ್ತು. ಹಸಿ ಕೊಕ್ಕೋ ಕೆ.ಜಿ.ಗೆ 65 ರೂ., ಒಣ ಕೊಕ್ಕೋ ಕೆ.ಜಿ.ಗೆ 195 ರೂ.ನಲ್ಲಿ ಖರೀದಿ ನಡೆದಿತ್ತು. ಈ ವಾರದ ಹಸಿ ಕೊಕ್ಕೋ 60 ರೂ.ಗೆ ಇಳಿಕೆ ಕಂಡಿದೆ. ಕೃಷಿ ಉತ್ಪನ್ನಗಳ ಪೈಕಿ ಸ್ಥಿರತೆ ಸಾಧಿಸಿದ ಏಕೈಕ ಉತ್ಪನ್ನವೆಂದರೆ ಅದು ಕೊಕ್ಕೋ ಮಾತ್ರ ಎಂದೇ ಹೇಳಬಹುದು. ಕೆಲವು ವರ್ಷಗಳಿಂದ ಕೊಕ್ಕೋ ಬೆಳೆಯುವ ಪ್ರಮಾಣವೂ ಧಾರಣೆಯ ಸ್ಥಿರತೆಯ ಕಾರಣದಿಂದ ಹೆಚ್ಚಾಗಿದೆ.

ತೆಂಗು ಧಾರಣೆ
ತೆಂಗಿಗೆ ಹಿಂದಿನ ವಾರದ ಧಾರಣೆಯೇ ಮುಂದುವರೆದಿದೆ. ಈ ವಾರ ತೆಂಗಿನಕಾಯಿ ಕೆ.ಜಿ.ಗೆ 32 ರೂ.ನಿಂದ 34 ರೂ.ವರೆಗೆ ವ್ಯವಹಾರ ಕುದುರಿಸಿದೆ. ಹಿಂದಿನ ವಾರ ಇದೇ ಧಾರಣೆ ಇತ್ತು. ಅದರ ಹಿಂದಿನ ವಾರ 1 ರೂ. ಏರಿಕೆ ಕಂಡಿತ್ತು. ಒಟ್ಟಿನಲ್ಲಿ ಉತ್ತಮವೆನಿಸುವ ಧಾರಣೆ ತೆಂಗಿಗೆ ಮುಂದುವರೆದಿದೆ. ಒಂದು ವರ್ಷದ ಅವಧಿಯಲ್ಲಿ ತೆಂಗಿಗೆ ಉತ್ತಮ ಧಾರಣೆ ಮುಂದುವರೆದಿದೆ.

-  ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.