ಅಡುಗೆಯಲ್ಲಿರಲಿ ರಾಗಿ


Team Udayavani, Sep 8, 2018, 3:39 PM IST

8-sepctember-18.jpg

ರಾಗಿ ತಿಂದವನಿಗೆ ರೋಗವಿಲ್ಲ ಎಂಬುದು ಈ ದಿನಗಳಲ್ಲಿ ಎಲ್ಲರೂ ಹೇಳುವ ಮಾತು. ರಾಗಿ ಗಂಜಿ, ರಾಗಿ ರೊಟ್ಟಿ, ರಾಗಿ ದೋಸೆ, ರಾಗಿ ಮುದ್ದೆ ತಿಂದರೆ ಮಧುಮೇಹವನ್ನು ದೂರವಿಡಬಹುದು. ಅತ್ಯಧಿಕ ಕ್ಯಾಲ್ಸಿಯಂ, ಕಬ್ಬಿಣಾಂಶ, ಪ್ರೋಟಿನ್‌, ನಾರು ಹಾಗೂ ಖನಿಜಾಂಶಗಳನ್ನೊಳಗೊಂಡ ರಾಗಿ, ಆರೋಗ್ಯದ ದೃಷ್ಟಿಯಿಂದ ಉತ್ತಮ ಧಾನ್ಯ. ರಾಗಿಯಿಂದ ಸುಲಭವಾಗಿ ಮಾಡಬಹುದಾದ ಕೆಲವೊಂದು ಪಾಕ ವಿಧಾನಗಳು ಇಲ್ಲಿವೆ.

ರಾಗಿ ಪಾಯಸ
ಬೇಕಾಗುವ ಸಾಮಗ್ರಿಗಳು
ರಾಗಿ- 2 ಕಪ್‌, ತೆಂಗಿನತುರಿ- 1 ಕಪ್‌, ಗಸಗಸೆ- 3 ಚಮಚ, ತುರಿದ ಬೆಲ್ಲ- 2 ಕಪ್‌, ಹಾಲು- 3 ಕಪ್‌, ಏಲಕ್ಕಿ ಪುಡಿ- ಅರ್ಧ ಚಮಚ, ತುಪ್ಪದಲ್ಲಿ ಹುರಿದ ದ್ರಾಕ್ಷಿ, ಗೋಡಂಬಿ, ಬಾದಾಮಿ- 10.

ಮಾಡುವ ವಿಧಾನ
ರಾಗಿಯನ್ನು 5- 6 ಗಂಟೆ ನೀರಿನಲ್ಲಿ ನೆನೆಸಿ ಬಸಿದು, ಗಸಗಸೆ, ತೆಂಗಿನತುರಿ ಸೇರಿಸಿ ಅರೆದು, ಶೋಧಿಸಿ ಇರಿಸಿ. ಬಾಣಲೆಯಲ್ಲಿ ಅರ್ಧ ಕಪ್‌ ನೀರು ಕಾಯಿಸಿ, ಬೆಲ್ಲದ ತುರಿ ಸೇರಿಸಿ ಕರಗಿಸಿ. ಬೆಲ್ಲ ಕರಗಿದ ಮೇಲೆ ಹಾಲು, ಅರೆದ ರಾಗಿ ಮಿಶ್ರಣ ಹಾಕಿ ಕುದಿಸಿ, ಒಲೆಯಿಂದ ಕೆಳಗಿರಿಸಿ. ತಣಿದ ಮೇಲೆ ಏಲಕ್ಕಿ ಪುಡಿ, ದ್ರಾಕ್ಷಿ, ಗೋಡಂಬಿ, ಬಾದಾಮಿ ತುಣುಕುಗಳನ್ನು ಸೇರಿಸಿದರೆ, ಪೌಷ್ಟಿಕವಾದ ರಾಗಿ ಪಾಯಸ ರೆಡಿ. 

ರಾಗಿ ಪಡ್ಡು
ಬೇಕಾಗುವ ಸಾಮಗ್ರಿಗಳು
ರಾಗಿ -1 ಕಪ್‌, ಅಕ್ಕಿ- 2 ಕಪ್‌, ಉದ್ದಿನಬೇಳೆ-1 ಕಪ್‌, ಕಡಲೆಬೇಳೆ- 2 ಚಮಚ, ತೊಗರಿ ಬೇಳೆ- 2 ಚಮಚ, ಹೆಸರುಬೇಳೆ- 2 ಚಮಚ, ಮೆಂತ್ಯೆ- 1 ಚಮಚ, ಅಕ್ಕಿ ಹಿಟ್ಟು- 3 ಚಮಚ, ಜೀರಿಗೆ ಪುಡಿ- 4 ಚಮಚ, ಕತ್ತರಿಸಿದ ಹಸಿಮೆಣಸು- 6, ಕತ್ತರಿಸಿದ ಕೊತ್ತಂಬರಿ ಸೊಪ್ಪು- 4 ಚಮಚ, ಕತ್ತರಿಸಿದ ಈರುಳ್ಳಿ- 1/2 ಕಪ್‌, ಉಪ್ಪು- ರುಚಿಗೆ, ಎಣ್ಣೆ- 1 ಕಪ್‌.

ಮಾಡುವ ವಿಧಾನ
ಎರಡು ಚಮಚ ಎಣ್ಣೆಗೆ, ಈರುಳ್ಳಿ, ಹಸಿಮೆಣಸು, ಕೊತ್ತಂಬರಿ ಸೊಪ್ಪು ಹಾಕಿ ಹುರಿದಿಡಿ. ರಾಗಿ, ಅಕ್ಕಿ, ಮೆಂತ್ಯೆ ಹಾಗೂ ಬೇಳೆಯನ್ನು ಆರು ಗಂಟೆ ನೆನೆಸಿ, ಬಸಿದು, ಅರೆದಿಡಿ. ಅದು ಹುದುಗಿದ ಮೇಲೆ, ಅಕ್ಕಿ ಹಿಟ್ಟು ಸೇರಿಸಿ ಕಲಸಿ. ಈ ಮಿಶ್ರಣಕ್ಕೆ ಹುರಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸು, ಜೀರಿಗೆ ಪುಡಿ, ಉಪ್ಪು ಸೇರಿಸಿ ಕಲಕಿ, ದೋಸೆ ಹಿಟ್ಟಿನ ಹದಕ್ಕೆ ತನ್ನಿ. ಅನಂತರ ಕಾಯಿಸಿದ ಪಡ್ಡಿನ ತವಾದ ಮೇಲೆ ಎಣ್ಣೆ ಸವರಿ, ಬಟ್ಟಲುಗಳಿಗೆ ಹಿಟ್ಟು ಹಾಕಿ ಎರಡೂ ಬದಿ ಬೇಯಿಸಿದರೆ, ಗರಿಗರಿಯಾದ ರಾಗಿ ಪಡ್ಡು, ಕಾಯಿ ಚಟ್ನಿಯೊಂದಿಗೆ ತಿನ್ನಲು ರೆಡಿ.

ರಾಗಿ ಮುತಿಯಾ
ಬೇಕಾಗುವ ಸಾಮಗ್ರಿಗಳು
ರಾಗಿ ಹಿಟ್ಟು- 2 ಕಪ್‌, ಗೋಧಿ ಹಿಟ್ಟು- 2 ಕಪ್‌, ಕಡಲೆ ಹಿಟ್ಟು- 1 ಕಪ್‌, ಕತ್ತರಿಸಿದ ಮೆಂತ್ಯೆ ಸೊಪ್ಪು- 1 ಕಪ್‌, ಕತ್ತರಿಸಿದ ಕೊತ್ತಂಬರಿ ಸೊಪ್ಪು- 4 ಚಮಚ, ಹಸಿಮೆಣಸಿನಕಾಯಿ 3- 4, ಶುಂಠಿ ತುರಿ- 1 ಚಮಚ, ಅಚ್ಚ ಖಾರದ ಪುಡಿ- 2 ಚಮಚ, ಉಪ್ಪು- ರುಚಿಗೆ ತಕ್ಕಷ್ಟು, ಜೀರಿಗೆ ಪುಡಿ- 3 ಚಮಚ, ಎಣ್ಣೆ- 1/4 ಕಪ್‌. ಒಗ್ಗರಣೆಗೆ- ಎಣ್ಣೆ 4 ಚಮಚ, ಸಾಸಿವೆ, ಇಂಗು- 1/4 ಚಮಚ, ಎಳ್ಳು- 3 ಚಮಚ, ಕರಿಬೇವಿನ ಎಸಳು- 8.

ಮಾಡುವ ವಿಧಾನ
ಒಗ್ಗರಣೆಯ ಸಾಮಗ್ರಿಗಳನ್ನು ಬಿಟ್ಟು, ಮಿಕ್ಕೆಲ್ಲ ಸಾಮಗ್ರಿಗಳನ್ನು ಸೇರಿಸಿ, ನೀರು ಹಾಕಿ ಪೂರಿ ಹಿಟ್ಟಿನ ಹದಕ್ಕೆ ಗಟ್ಟಿಯಾಗಿ ಕಲಸಿ. ಈ ಮಿಶ್ರಣದಿಂದ ಉಂಡೆಗಳನ್ನು ಮಾಡಿ, ಹಬೆಯಲ್ಲಿ ಹತ್ತು ನಿಮಿಷ ಬೇಯಿಸಿ. ತಣಿದ ಮೇಲೆ, ಬಿಲ್ಲೆಯಾಕಾರದಲ್ಲಿ ಒಂದು ಇಂಚಿನ ಅಳತೆಯ ತುಂಡುಗಳನ್ನು ಮಾಡಿ ಇಡಿ. ಅನಂತರ ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ- ಇಂಗು- ಎಳ್ಳು- ಕರಿಬೇವು ಹಾಕಿ ಒಗ್ಗರಣೆ ಮಾಡಿ, ಬೇಯಿಸಿದ ಬಿಲ್ಲೆಗಳ ಮೇಲೆ ಹಾಕಿ ಕೈಯಾಡಿಸಿದರೆ ರುಚಿಯಾದ ರಾಗಿ ಮುತಿಯಾ ತಯಾರು.

ರಾಗಿ ನಿಪ್ಪಟು
ಬೇಕಾಗುವ ಸಾಮಗ್ರಿಗಳು
ರಾಗಿ ಹಿಟ್ಟು- 2 ಕಪ್‌, ಅಕ್ಕಿ ಹಿಟ್ಟು- 2 ಕಪ್‌, ಮೈದಾ ಹಿಟ್ಟು- 1 ಕಪ್‌, ಚಿರೋಟಿ ರವೆ- 1/2 ಕಪ್‌, ತರಿಯಾಗಿ ಪುಡಿ ಮಾಡಿದ ಹುರಿಗಡಲೆ- 2 ಚಮಚ, ತರಿಯಾಗಿ ಪುಡಿ ಮಾಡಿದ ಕಡಲೆಕಾಯಿ ಬೀಜ- 3 ಚಮಚ, ಕತ್ತರಿಸಿದ ಈರುಳ್ಳಿ- 2 ಚಮಚ, ಅಚ್ಚ ಖಾರದ ಪುಡಿ- 2 ಚಮಚ, ಇಂಗು- ಅರ್ಧ ಚಮಚ, ತರಿಯಾಗಿ ಪುಡಿ ಮಾಡಿದ ಎಳ್ಳು- ಅರ್ಧ ಚಮಚ, ಉಪ್ಪು, ವನಸ್ಪತಿ ಅಥವಾ ತುಪ್ಪ- 3 ಚಮಚ, ಕರಿಬೇವಿನ ಎಲೆ- 10.

ಮಾಡುವ ವಿಧಾನ
ರಾಗಿ ಹಿಟ್ಟು, ಅಕ್ಕಿ ಹಿಟ್ಟು, ಮೈದಾ ಹಿಟ್ಟು, ಚಿರೋಟಿ ರವೆ, ಹುರಿಗಡಲೆ, ಕಡಲೆಕಾಯಿ ಬೀಜದ ಪುಡಿಗಳನ್ನು ಸೇರಿಸಿ. ಈ ಮಿಶ್ರಣಕ್ಕೆ ಇಂಗು, ಖಾರದ ಪುಡಿ, ಎಳ್ಳು, ವನಸ್ಪತಿ, ಈರುಳ್ಳಿ, ಕರಿಬೇವು, ಉಪ್ಪು ಬೆರೆಸಿ, ನೀರಿನೊಂದಿಗೆ ವಡೆಯ ಹಿಟ್ಟಿನ ಹದಕ್ಕೆ ಗಟ್ಟಿಯಗಿ ಕಲಸಿ, ವಡೆಯಾಕಾರದಲ್ಲಿ ತಟ್ಟಿ ಎಣ್ಣೆಯಲ್ಲಿ ಕರಿದರೆ ರಾಗಿ ನಿಪ್ಪಟ್ಟು ರೆಡಿ.

ರಾಗಿ ಹಿಟ್ಟಿನ ತಾಲಿಪಟ್ಟು
ಬೇಕಾಗುವ ಸಾಮಗ್ರಿಗಳು
ರಾಗಿ ಹಿಟ್ಟು- 3 ಕಪ್‌, ಅಕ್ಕಿ ಹಿಟ್ಟು- 2 ಕಪ್‌, ಕತ್ತರಿಸಿದ ಈರುಳ್ಳಿ- 1/2 ಕಪ್‌, ಕತ್ತರಿಸಿದ ಹಸಿಮೆಣಸು- 5, ತೆಂಗಿನತುರಿ- 1/2 ಕಪ್‌, ಕತ್ತರಿಸಿದ ಕರಿಬೇವು- 3- 4, ಕತ್ತರಿಸಿದ ಪುದಿನಾ ಸೊಪ್ಪು- 1 ಚಮಚ, ಕತ್ತರಿಸಿದ ಕೊತ್ತಂಬರಿ ಸೊಪ್ಪು- 3 ಚಮಚ, ಜೀರಿಗೆ ಪುಡಿ- 4 ಚಮಚ, ತುಪ್ಪ- 2 ಚಮಚ, ಉಪ್ಪು-ರುಚಿಗೆ ತಕ್ಕಷ್ಟು, ಎಣ್ಣೆ- 4 ಚಮಚ.

ಮಾಡುವ ವಿಧಾನ
ರಾಗಿ, ಅಕ್ಕಿ ಹಿಟ್ಟು, ಈರುಳ್ಳಿ, ಹಸಿಮೆಣಸು, ತೆಂಗಿನತುರಿ, ಕರಿಬೇವು, ಪುದೀನಾ, ಕೊತ್ತಂಬರಿ ಸೊಪ್ಪು, ಜೀರಿಗೆ ಪುಡಿ, ತುಪ್ಪ, ಉಪ್ಪು ಬೆರೆಸಿ, ನೀರು ಹಾಕಿ ರೊಟ್ಟಿಯ ಹದಕ್ಕೆ ಕಲಸಿ. ಸಣ್ಣ ಗಾತ್ರದ ಹಿಟ್ಟನ್ನು ತೆಗೆದುಕೊಂಡು ಎಣ್ಣೆ ಸವರಿದ ತವಾದ ಮೇಲೆ, ರೊಟ್ಟಿಯ ಆಕಾರದಲ್ಲಿ ತಟ್ಟಿ. ಎಣ್ಣೆ ಹಾಕಿ, ಎರಡೂ ಬದಿ ಕಾಯಿಸಿ. ಗರಿಗರಿಯಾದ ರಾಗಿ ತಾಲಿಪಟ್ಟನ್ನು ಕಾಯಿ ಚಟ್ನಿಯೊಂದಿಗೆ ಸವಿಯಬಹುದು. 

 ಜಯಶ್ರೀ ಕಾಲ್ಕುಂದಿ

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.