ಸಿಹಿ ಪ್ರಿಯರ ಬಂಗಾಳಿ ಸಂಡೇಶ್‌


Team Udayavani, Nov 9, 2019, 4:42 AM IST

ss-15

ಬಂಗಾಳಿಯವರು ಸಿಹಿ ಪ್ರಿಯರು. ಅವರ ದೈನಂದಿನ ಆಹಾರ ಕ್ರಮದಲ್ಲಿ ಒಂದಾದರೂ ಸಿಹಿ ತಿನಿಸು ಇರಲೇಬೇಕು. ಅವರ ತಿಂಡಿ-ಊಟಗಳಲ್ಲಿ ಸಿಹಿ ತಿಂಡಿ ಇಲ್ಲದಿದ್ದರೆ ಆ ದಿನ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಹಾಗೇ ಬಂಗಾಳಿ ಸಿಹಿ ಎಂದಾಕ್ಷಣ ಮನದಲ್ಲಿ ಮೂಡುವ ಚಿತ್ರ ಅವರ ಸಾಂಪ್ರಾಯಿಕ ಖಾದ್ಯ ಸಂದೇಶ್‌/ ಸಂಡೇಶ್‌.

ಇದು ಬೆಂಗಾಲಿಯ ಸಾಂಪ್ರದಾಯಿಕ ಸಿಹಿ ತಿನಿಸಾಗಿದ್ದರೂ ಭಾರತಾದ್ಯಂತ ಜನಪ್ರಿಯಗೊಂಡಿದೆ. ಮೃದುವಾದ ಹಾಗೂ ಸಿಹಿಭರಿತವಾದ ಈ ತಿನಿಸನ್ನು ಒಮ್ಮೆ ಸವಿದರೆ ಮತ್ತೆ ಮತ್ತೆ ಸವಿಯಬೇಕೆಂದು ಮನ ಹಂಬಲಿಸುತ್ತದೆ. ಈ ವಿಶೇಷ ಸಿಹಿ ತಿಂಡಿಯನ್ನು ಮನೆಯಲ್ಲಿ ನೀವು ತಯಾರಿಸಬಹುದಾಗಿದ್ದು, ಅದಕ್ಕೆ ಬೇಕಾಗುವ ಸಾಮಗ್ರಿ ಹಾಗೂ ಮಾಡುವ ವಿಧಾನದ ಮಾಹಿತಿ ಇಲ್ಲಿದೆ.

ಬೇಕಾಗುವ ಸಾಮಗ್ರಿ
ಹಾಲು – 1 ಲೀ.
ಐಸ್‌ ಕ್ಯೂಬ್‌ಗಳು -1 ಕಪ್‌.
ಸಿಟ್ರಿಕ್‌ ಆ್ಯಸಿಡ್‌ ಹರಳು (ನಿಂಬುವಿನ ಜತೆ) -1/4 ಟೀ ಚಮಚ.
ಸಕ್ಕರೆ ಪುಡಿ – 3/4 ಕಪ್‌.
ಗುಲಾಬಿ ನೀರು (ಎಸೆನ್ಸ್‌) – 2 ಟೀ ಸ್ಪೂನ್‌
ಏಲಕ್ಕಿ ಪುಡಿ – ಅರ್ಧ ಟೀ ಸ್ಪೂನ್‌
ಅಲಂಕಾರಕ್ಕೆ : ಕೇಸರಿ ದಳಗಳು, ತುಂಡರಿಸಿದ ಬಾದಾಮಿ. ಹೆಚ್ಚಿಕೊಂಡ ಪಿಸ್ತಾ

ಮಾಡುವ ವಿಧಾನ
ಒಂದು ಪಾತ್ರೆಯಲ್ಲಿ ಹಾಲನ್ನು ಹಾಕಿ ಅದಕ್ಕೆ ಮುಚ್ಚಳವನ್ನು ಮುಚ್ಚಿ ದೊಡ್ಡ ಉರಿಯಲ್ಲಿ ಬಿಸಿಮಾಡಿ. ಹಾಲು ಕುದಿಯಲಾರಂಭಿಸಿದ ಅನಂತರ ಸಿಟ್ರಿಕ್‌ ಆ್ಯಸಿಡ್‌ ಹರಳನ್ನು ಸೇರಿಸಿ. ಹಾಲು ಒಡೆಯುವವರೆಗೂ ಸುಮಾರು 2-3 ನಿಮಿಷಗಳ ಕಾಲ ನಿರಂತರವಾಗಿ ಕೈಯಾಡಿಸುತ್ತಿರಿ. ಅನಂತರ ಅದು ಮೊಸರಾಗಿ ಒಡೆದ ತಕ್ಷಣ ಐಸ್‌ ಕ್ಯೂಬ್‌ಗಳನ್ನು ಸೇರಿಸಿ ಅದು ಸಂಪೂರ್ಣವಾಗಿ ಕರಗುವವರೆಗೂ ಒಂದೆಡೆ ಇಡಿ.

ಅನಂತರ ಒಂದು ಬೌಲ್ ಅನ್ನು ತೆಗೆದುಕೊಂಡು, ಅದರ ಮೇಲ್ಭಾಗದಲ್ಲಿ ಬಿಳಿಯ ವಸ್ತ್ರವನ್ನು ಹಾಕಿ ಅದರ ಮೇಲೆ ಒಡೆದ ಹಾಲನ್ನು ಸುರಿಯಿರಿ. ವಸ್ತ್ರದಲ್ಲಿ ಶೇಖರವಾದ ಒಡೆದ ಹಾಲಿನ ಕೆನೆಯ ಮಿಶ್ರಣವನ್ನು 10 ನಿಮಿಷಗಳ ಕಾಲ ಬಿಳಿ ಬಟ್ಟೆಯಲ್ಲಿಯೇ ಬಿಡಿ. ಮಿಶ್ರಣದಲ್ಲಿರುವ ನೀರಿನ ಪಸೆ ಸಂಪೂರ್ಣವಾಗಿ ಇಳಿಯುವವರೆಗೂ ಕಾಯಿರಿ.
ಅನಂತರ ಹೂರಣವನ್ನು ತೆಗೆದು ಮಿಕ್ಸಿ ಜಾರ್‌ಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಂಡು ಮತ್ತೂಂದು ಪಾತ್ರೆಗೆ ಹಾಕಿಕೊಂಡು ಗಂಟುಗಳಿರದಂತೆ ಅಂಗೈನಲ್ಲಿ ಮಿಶ್ರಣವನ್ನು ನಾದಿ ಫ್ರಿಜ್‌ನಲ್ಲಿ ಇಡಿ.

ಕೊನೆಯದಾಗಿ 10 ನಿಮಿಷದ ಅನಂತರ ಸಮ ಪ್ರಮಾಣದಲ್ಲಿ ಮಿಶ್ರಣವನ್ನು ಹಾಗೂ ಸಕ್ಕರೆ ಪುಡಿ ಮತ್ತು ಗುಲಾಬಿ ಎಸೆನ್ಸ್‌ ನೀರನ್ನು ಸೇರಿಸಿ ಪೇಡದ ಆಕಾರದಲ್ಲಿ ಸಣ್ಣ ತುಂಡುಗಳಾಗಿ ಮಾಡಿಕೊಳ್ಳಿ. ಅಲಂಕಾರಕ್ಕೆಂದು ತೆಗೆದು ಕೇಸರಿ ದಳಗಳು, ತುಂಡರಿಸಿದ ಬಾದಾಮಿ ಹಾಗೂ ಪಿಸ್ತಾವನ್ನು ಅದರ ಮೇಲೆ ಉದುರಿಸಿ ಪುನಃ ತಣ್ಣಗಾಗಲು ಫ್ರಿಜ್‌ನಲ್ಲಿ ಇಟ್ಟು ಕೋಲ್ಡ್‌ ಆದನಂತರ ಸವಿಯಿರಿ.

- ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.