ಈ ಪ್ರಣಾಳಿಕೆ ಒಪ್ಪಿದರೆ ಮಾತ್ರ ಮತ ಕೇಳಲು ಬನ್ನಿ

ಸುಳ್ಯ ವೈದ್ಯರ ಮನೆ ಗೇಟಿನಲ್ಲಿ ಅಳವಡಿಸಿರುವ ಬ್ಯಾನರ್‌

Team Udayavani, Mar 31, 2019, 1:44 PM IST

1-April-12

ಗೇಟಿನಲ್ಲಿ ಅಳವಡಿಸಿರುವ ಬ್ಯಾನರ್‌.

ಸುಳ್ಯ : ಇಲ್ಲಿ ಮುಂದಿರಿಸಲಾದ ವಿಷಯಗಳಿಗೆ ಸ್ಪಂದಿಸಲು ಬದ್ಧನಾದರೆ ಮಾತ್ರ ಮತ ಯಾಚಿಸಲು ಒಳಗೆ ಬನ್ನಿ ಎಂದು ದ್ಯರೊಬ್ಬರು ತನ್ನ ಮನೆಯ ಗೇಟ್‌ ನಲ್ಲಿ ಹಾಕಿದ ಬ್ಯಾನರ್‌ ಲೋಕಸಭಾ ಚುನಾವಣೆಯ ಮುನ್ನ ವಿಶೇಷ ಗಮನ ಸೆಳೆದಿದೆ.

ಸುಳ್ಯದ ಮಕ್ಕಳ ತಜ್ಞ ಡಾ| ಬಿ.ಎನ್‌. ಶ್ರೀಕೃಷ್ಣ ಅವರು ತನ್ನ ಮನೆಯ ಗೇಟಿನಲ್ಲಿ ಈ ರೀತಿಯ ಬ್ಯಾನರ್‌ ಅನ್ನು ಅಳವಡಿಸಿದ್ದಾರೆ. ಮತ ಯಾಚಿಸುವವರು ದಯವಿಟ್ಟು ಓದಿ ಎನ್ನುವ ತಲೆ ಬರಹದೊಂದಿಗೆ ಆರಂಭವಾಗುವ ಬ್ಯಾನರ್‌ನಲ್ಲಿ ರಾಷ್ಟ್ರದ ರಕ್ಷಣೆ ಮತ್ತು ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಲಾರೆ, ಭಾರತದ ಸಂಸ್ಕೃತಿ ಮತ್ತು ಪರಂಪರೆಗೆ ಪೂರ್ತಿ ಬದ್ಧನಾಗಿದ್ದು, ದ್ವಂದ್ವ ನೀತಿ ಅನುಸರಿಸಲಾರೆ, ಕ್ರಿಮಿನಲ್ಸ್‌, ಭಯೋತ್ಪಾದಕರು, ದೇಶದ್ರೋಹಿಗಳು, ಭ್ರಷ್ಟಾಚಾರಿಗಳನ್ನು ಬೆಂಬಲಿಸಲಾರೆ, ಭ್ರಷ್ಟಾಚಾರ ಮಾಡಲಾರೆ, ದುಷ್ಟ ದ್ರವ್ಯ ಮುಟ್ಟಲಾರೆ, ಸಮಸ್ತ ಪ್ರಜೆಗಳನ್ನೂ ಒಂದೇ ದೃಷ್ಟಿಯಿಂದ ನೋಡುವೆ, ಪಕ್ಷಪಾತಿ ಧೋರಣೆ ಮಾಡಲಾರೆ, ಸ್ವಚ್ಛತಾ ಅಭಿಯಾನದಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸುವೆ, ಗೋ ರಕ್ಷಣೆ ಮಾಡುತ್ತೇನೆ, ಗೋಹತ್ಯೆ ನಿಷೇಧ ಮಾಡುತ್ತೇನೆ, ಜನ ಸೇವೆಯ ಸೋಗಿನಲ್ಲಿ ದ್ವಂದ್ವ ನೀತಿ ಮಾಡಲಾರೆ, ಜನರ ಬೇಡಿಕೆ ಮತ್ತು ಭಾವನೆಗಳಿಗೆ ಸ್ಪಂದಿಸುತ್ತೇನೆ. ಇದಕ್ಕೆ ನಾನು ಮತ್ತು ನನ್ನ ಪಕ್ಷ ಬದ್ಧವಾಗಿದ್ದು ತಮ್ಮ ಅಮೂಲ್ಯ ಮತಗಳನ್ನು ಪಡೆಯಲು ಒಳಗೆ ಬರುತ್ತೇನೆ ಎಂದು ಮತ ಯಾಚಿಸುವವರು ಭರವಸೆ ನೀಡಬೇಕು ಎನ್ನುವ ಒಕ್ಕಣೆಯ ಬ್ಯಾನರ್‌ ಅನ್ನು ಸುಳ್ಯ ನಗರದ ತನ್ನ ಮನೆಯ ಗೇಟ್‌ ನಲ್ಲಿ ಅಳವಡಿಸಲಾಗಿದೆ.

ಚುನಾವಣೆಗೆ ತಕ್ಕಂತೆ ಬೇಡಿಕೆ
ಚುನಾವಣೆ ಘೋಷಣೆಯಾದ ಸಂದರ್ಭ ಗೇಟಿನಲ್ಲಿ ಈ ರೀತಿಯ ಬ್ಯಾನರ್‌ ಅಳವಡಿಸುವುದು ಇದು ಎರಡನೇ ಬಾರಿ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಅವರು ಇದೇ ರೀತಿಯ ಬ್ಯಾನರ್‌ ಅಳವಡಿಸಿದ್ದರು. ಆದರೆ ವಿಷಯಗಳು ಮತ್ತು ಷರತ್ತುಗಳು ಬದಲಾಗುತ್ತದೆ. ವಿಧಾನಸಭೆಯ ಚುನಾವಣೆಯಲ್ಲಿ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳಿಗೆ ಆದ್ಯತೆ ನೀಡಲಾಗುತ್ತದೆ. ಕನ್ನಡ ಭಾಷೆ, ಸಂಸ್ಕೃತಿಗೆ ಬದ್ಧನಾಗಿದ್ದು ದ್ವಂದ್ವ ನೀತಿ ಅನುಸರಿಸಲಾರೆ, ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಪ್ರಾಥಮಿಕ ಶಾಲಾ ವಿದ್ಯಾಭ್ಯಾಸ ಮಾಡಿಸುತ್ತೇನೆ ಮತ್ತಿತರ ಷರತ್ತಗಳನ್ನು ಒಪ್ಪಬೇಕು ಎನ್ನುವುದಾಗಿ ಅಂದು ಅಳವಡಿಸಿದ ಬ್ಯಾನರ್‌ನಲ್ಲಿ ಹೇಳಲಾಗಿತ್ತು. ಲೋಕಸಭಾ ಚುನಾವಣೆಗೆ ರಾಷ್ಟ್ರೀಯ ವಿಚಾರಗಳಿಗೆ ಒತ್ತು ನೀಡಲಾಗಿದೆ. ಮುಂದೆ ನಗರ ಪಂಚಾಯಿತ್‌ ಚುನಾವಣೆಯ ಸಂದರ್ಭ ಸ್ಥಳೀಯ ವಿಚಾರಗಳಿಗೆ ಆದ್ಯತೆ ನೀಡಲಾಗುವುದು ಎನ್ನುವುದು ಡಾ| ಶ್ರೀಕೃಷ್ಣ ಅವರ ಅಭಿಪ್ರಾಯ.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.