ಗದ್ದೆಗಳಲ್ಲಿ ಕೃಷಿ ಕ್ರಾಂತಿ

ಸಾವಯವ ಗೊಬ್ಬರದ ಪ್ರೀತಿ

Team Udayavani, May 12, 2019, 6:00 AM IST

29

ಸಂಪೂರ್ಣ ಹಟ್ಟಿ ಗೊಬ್ಬರವನ್ನು ಬಳಸಿ ಸಾವಯವ ಕೃಷಿ ಕಾರ್ಯ ನಡೆಸಿ ಉತ್ತಮ ಫ‌ಸಲನ್ನು ಪಡೆಯುತ್ತಿದ್ದಾರೆ ಇಲ್ಲೊಬ್ಬರು ಯಶಸ್ವಿ ಕೃಷಿಕರು. ಉಡುಪಿ ಜಿಲ್ಲೆಯ ಬೆಳ್ಳೆ ಗ್ರಾಮದ ದಿಂಡಿಬೆಟ್ಟು ಗಂಗಾಧರ ಆಚಾರ್ಯ ಅವರೇ ಸಾವಯವ ಗೊಬ್ಬರ ಬಳಸಿ ಭತ್ತದ ಬೆಳೆ ಬೆಳೆಸಿ ಯಶಸ್ಸು ಕಂಡವರು.

ಸುಮಾರು 2 ಎಕ್ರೆಯಲ್ಲಿ ಭತ್ತದ ಕೃಷಿ ನಡೆಸುವ ಮೂಲಕ ಅವರು ಕೃಷಿ ಪ್ರೀತಿಯನ್ನು ಮೆರೆದಿದ್ದಾರೆ. ಒಟ್ಟು ಸುಮಾರು 10 ಎಕ್ರೆ ಭೂಮಿಯನ್ನು ಹೊಂದಿರುವ ಅವರು 6 ಎಕ್ರೆಯಲ್ಲಿ ಅಡಿಕೆ, ತೆಂಗು ತೋಟವನ್ನು ಮಾಡಿದ್ದು, 2 ಎಕ್ರೆ ಸ್ಥಳವನ್ನು ಹಟ್ಟಿ ಗೊಬ್ಬರದ ಸೊಪ್ಪಿಗಾಗಿ ಉಳಿಸಿಕೊಂಡು ಬಂದಿದ್ದಾರೆ. ಉಳಿದಂತೆ 2 ಎಕ್ರೆ ಪ್ರದೇಶದಲ್ಲಿ ಒಂದು ಬೆಳೆಯಾಗಿ ಭತ್ತದ ಕೃಷಿಯನ್ನು ಪತ್ನಿ ಸಂಧ್ಯಾ, ಮಕ್ಕಳಾದ ಶ್ರವಣ್‌, ಶ್ರೇಯಸ್‌ ಜತೆಗೂಡಿ ಮುನ್ನಡೆಸುತ್ತಾ ಬಂದಿದ್ದಾರೆ. ರಾಸಾಯನಿಕ ಗೊಬ್ಬರವನ್ನು ಇವರು ಬಳಸುವುದಿಲ್ಲ.

ಗದ್ದೆಯನ್ನು ನಾಟಿಗಿಂತ 15 ದಿನಗಳ ಮೊದಲು ಹಟ್ಟಿ ಗೊಬ್ಬರವನ್ನು ಹಾಕಿ ಉಳುಮೆ ನಡೆಸುವ ಅವರು ನಾಟಿಗಿಂತ 5 ದಿನದ ಮುನ್ನ ಸುಣ್ಣವನ್ನು ಬಳಸಿ ಉಳುಮೆ ನಡೆಸುತ್ತಾರೆ. ನಾಟಿಯ ದಿನ ಉಳುಮೆ ನಡೆಸಿ ಮತ್ತೆ ನಾಟಿ ಕಾರ್ಯ ಮುಂದುವರೆಸುತ್ತಾರೆ.

ಕಾಡು ಪ್ರಾಣಿ ಹಾವಳಿ
ಕೃಷಿ, ತೋಟಗಾರಿಕಾ ಬೆಳೆಯಲ್ಲಿ ನಿಸ್ಸೀಮರಾಗಿರುವ ಗಂಗಾಧರ ಆಚಾರ್ಯರು ತನ್ನೆಲ್ಲ ಕೃಷಿ ಚಟುವಟಿಕೆಗಳಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದೆ. ಮಂಗಗಳ ಮತ್ತು ನವಿಲಿನ ಉಪಟಳ ವಿಪರೀತವಾಗಿದೆ ಎಂದವರು ಹೇಳುತ್ತಾರೆ.

ಕರಾವಳಿಯಲ್ಲಿ ಬಹುತೇಕ ಕೃಷಿಕರು ಕೃಷಿಯಿಂದ ವಿಮುಖರಾಗುತ್ತಿರುವ ಕಾಲಘಟ್ಟದಲ್ಲಿ ಬಲು ಅಪರೂಪವೆನ್ನುವಂತೆ ಕೃಷಿಯನ್ನು ಪ್ರೀತಿಸುವ ಮೂಲಕ ಗಂಗಾಧರ ಆಚಾರ್ಯ ಅವರು ತನ್ನ ಆಹಾರಕ್ಕಾಗಿ ಸ್ವಾವಲಂಬಿ ಕಾರ್ಯದಲ್ಲಿ ಮುನ್ನಡೆಯುತ್ತಿದ್ದಾರೆ. ಕೃಷಿ ಭೂಮಿಯನ್ನು ಬರಡಾಗಿಸಿದ ಕೃಷಿಕರು ಮತ್ತೆ ಕೃಷಿ ಪ್ರೇಮವನ್ನು ತೋರ್ಪಡಿಸಿದರೆ ಕೃಷಿ ಗದ್ದೆಗಳು ಮತ್ತೆ ಹಸುರಾಗಿ ಕಂಗೊಳಿಸ‌ಬಹುದು.

ಹಿರಿಯರ ಶ್ರಮದ ಫ‌ಲ
ಕೃಷಿ ಚಟುವಟಿಕೆಗಳಿಗೆ 18 ಜನ ಸಾಂಪ್ರದಾಯಿಕ ಕೃಷಿ ಕೂಲಿ ಕಾರ್ಮಿಕರನ್ನು ಬಳಸಿ ಬೇಸಾಯ ನಡೆಸುವ ಅವರು ತನ್ನ ತಂದೆ ಶ್ಯಾಮರಾಯ ಆಚಾರ್ಯರ ಅಂದಿನ ಕಾಲದ ಕೃಷಿಯಲ್ಲಿನ ಶ್ರಮವನ್ನು ನೆನಪಿಸುತ್ತಿದ್ದು, ಹಿರಿಯರಿಂದ ನಡೆದು ಬಂದ ಕೃಷಿಯನ್ನು ಮುಂದುವರಿಸಿಕೊಂಡು ಹೋಗಬೇಕೆನ್ನುವ ಸದುದ್ದೇಶದಿಂದ 3 ಬೆಳೆಗಳ ಬದಲಿಗೆ ಕನಿಷ್ಠ 1 ಬೆಳೆಯಾದರೂ ಬೆಳೆಯುತ್ತಿದ್ದಾರೆ.

ಕುಲಕಸುಬನ್ನೂ ಮರೆತಿಲ್ಲ
ಧಾರ್ಮಿಕ ಕಾರ್ಯದಲ್ಲೂ ಮುಂಚೂಣಿ ಯಲ್ಲಿರುವ ಅವರು ಅದರೊಂದಿಗೆ ಕೃಷಿ ಕಾಯಕವನ್ನು ಮರೆತಿಲ್ಲ. ಕುಲಕಸುಬಾದ ಚಿನ್ನದ ಕೆಲಸದಲ್ಲೂ ತೊಡಗಿ ಕೊಂಡಿದ್ದಾರೆ.

-   ವಿಜಯ ಉಡುಪಿ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.