ಮನೆಯ ಅಂದಕ್ಕೆ ಪ್ರಾಣಿಗಳ ಪ್ರತಿಕೃತಿ


Team Udayavani, Dec 14, 2019, 4:34 AM IST

xd-8

ಮನೆಯ ಅಂದ ಹೆಚ್ಚಿಸುವುದಕ್ಕಾಗಿ ಅತ್ಯಂತ ಸರಳ ಮತ್ತು ಸುಂದರವಾದ ಮಾರ್ಗವೊಂದಿದೆ. ಅದೇನೆಂದರೆ ಪ್ರಾಣಿ, ಪಕ್ಷಿಗಳ ಪ್ರತಿಕೃತಿಗಳನ್ನು ಮನೆಯ ವಿವಿಧ ಸ್ಥಳಗಳಲ್ಲಿ ಇರಿಸುವುದು. ಇದರ ಮೂಲಕ ಮನೆಯ ಅಂದವನ್ನು ಇನ್ನಷ್ಟು ಹೆಚ್ಚಿಸಬಹುದು.

ಪ್ರಾಣಿಗಳ ಪ್ರತಿಕೃತಿಯನ್ನು ಮನೆಯಲ್ಲಿರಿಸುವ ಪ್ರವೃತ್ತಿ ಬಹಳ ಹಿಂದಿನಿಂದಲೂ ಇತ್ತು. ಆಗಿನ ರಾಜ, ಮಹಾರಾಜರು, ಬೇಟೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದವರು ಹುಲಿ ಚಿರತೆ ಮುಂತಾದ ಪ್ರಾಣಿಗಳನ್ನು ಬೇಟೆಯಾಡಿ ಅವುಗಳ ಚರ್ಮ ತಂದು ಮನೆಯಲ್ಲಿ ನೇತು ಹಾಕುತ್ತಿದ್ದರು. ಇನ್ನು ಕೆಲವರು ಉತ್ತಮವಾದ ಮರದಿಂದ ಪ್ರಾಣಿಗಳ ಪ್ರತಿಕೃತಿ ಮಾಡಿಸಿ ಮನೆಯಲ್ಲಿ ಇಡುತ್ತಿ ದ್ದರು. ಇವುಗಳು ಆಗ ಅಂದದ ಜತೆ ಶ್ರೀಮಂತಿ ಕೆಯ ಸಂಕೇತಗಳೂ ಆಗಿದ್ದವು.

ಕಲಾಸಕ್ತಿಯನ್ನು ವ್ಯಕ್ತಪಡಿಸುತ್ತದೆ
ಮನೆಯಲ್ಲಿ ನಿಮಗಿಷ್ಟವಾದ ಪ್ರಾಣಿಗಳ ಪ್ರತಿಕೃತಿಗಳನ್ನು ಇರಿಸುವುದು ಕಲೆಯ ಬಗ್ಗೆ ನಮ್ಮಲ್ಲಿರುವ ಪ್ರೀತಿ, ಕಾಳಜಿಯನ್ನು ತೋರಿಸುತ್ತದೆ.

ವಿವಿಧ ರೀತಿಯ ಪ್ರಾಣಿ, ಪಕ್ಷಿಗಳ ಪ್ರತಿಕೃತಿ ನಿಮ್ಮ ಮನೆಯಲ್ಲಿದ್ದರೆ ಅದು ನಿಮ್ಮ ಯೋಚನೆ ಮತ್ತು ಮನಸ್ಸಿನ ಮೇಲೆ ಧನಾತ್ಮಕ ಪರಿಣಾಮ ಉಂಟುಮಾಡುತ್ತದೆ. ನೀವು ದಿನನಿತ್ಯ ಕಚೇರಿಯ ಕೆಲಸದ ಒತ್ತಡದಿಂದ ಮನೆಗೆ ಹೊದಾಗ ಎದುರಿಗೆ ಕಾಣುವ ಒಂದಷ್ಟು ಸುಂದರವಾದ ಪ್ರತಿಕೃತಿಗಳು ನಿಮ್ಮ ಮನಸ್ಸನ್ನು ಹಗುರ ಮಾಡುತ್ತವೆ. ಮನೆಯಲ್ಲಿ ಇರುವ ಪುಟ್ಟ ಮಕ್ಕಳಿಗೆ ಆಟವಾಡಲು ಮತ್ತು ಚಿಕ್ಕಂದಿನಿಂದಲೇ ಅವರಲ್ಲಿ ಪ್ರಾಣಿ ಪ್ರೀತಿ ಬೆಳೆಸುವಲ್ಲಿ ಇದು ಉಪಯುಕ್ತವಾಗಿದೆ.

ಸೂಕ್ತ ಪ್ರತಿಕೃತಿಗಳ ಆಯ್ಕೆ
ಪ್ರತಿಕೃತಿಗಳನ್ನು ಮನೆಗೆ ತರುವಾಗ ನಿಮ್ಮ ಮನೆಯ ಸ್ಥಳಾವಕಾಶ ನೊಡಿಕೊಂಡು ಅದಕ್ಕೆ ಹೊಂದಿಕೆಯಾಗುವಂತ ಗಾತ್ರಗಳನ್ನು ಆಯ್ಕೆ ಮಾಡಬೇಕು. ಹೆಚ್ಚು ಕಾಲ ಬಾಳಿಕೆ ಬರುವಂಥ ಉತ್ತಮ ಗುಣಮಟ್ಟ ಹೊದಿರುವುದನ್ನು ಕೊಂಡುಕೊಳ್ಳಿ. ಹೆಚ್ಚು ಭಾರವಾದಂತಹ ಪ್ರತಿಕೃತಿಗಳನ್ನು ಆದಷ್ಟು ಮಟ್ಟಿಗೆ ಕಡಿಮೆ ಮಾಡಿ. ಇವುಗಳನ್ನು ಕೊಳ್ಳುವುದರಿಂದ ನಿಮಗೆ ಆರ್ಥಿಕವಾಗಿ ಹೊರೆಯಾಗದಿರಲಿ.

ತರುವಂತ ಪ್ರತಿಕೃತಿಗಳು ತುಂಬಾ ಸರಳವಾಗಿರಬೇಕು. ಯಾರಾದರು ಮನೆಗೆ ಬಂದರೆ ನೋಡಿ ಭಯಪಡುವಂತಿರಬಾರದು. ಅಂದರೆ ಭಯಾನಕವಾಗಿ ನಿಂತಿರುವ ಸಿಂಹ, ಹುಲಿ, ಹಾವುಗಳ ಬದಲಾಗಿ ಸೌಮ್ಯವಾಗಿ ನಿಂತಿರುವ ಹುಲಿ, ಚಿರತೆ, ಸಿಂಹ ನಾಯಿ, ಆನೆ, ಕುದುರೆ, ಜಿಂಕೆ, ಮೊಲ ಇತ್ಯಾದಿ ಪ್ರಾಣಿಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೆಚ್ಚು ಸೂಕ್ತ.

ಉತ್ತಮ ನಿರ್ವಹಣೆ ಅಗತ್ಯ
ಮನೆಗೆ ಪ್ರತಿಕೃತಿಗಳನ್ನು ತಂದ ಅನಂತರ ಅವುಗಳ ನಿರ್ವಹಣೆಯೂ ಅಷ್ಟೇ ಮುಖ್ಯ ವಾಗಿದೆ. ಮರದ ಪೃತಿಕೃತಿಗಳಾದರೆ ಅವುಗಳಿಗೆ ನೀರು ತಾಗದಂತೆ ಮತ್ತು ಹುಳು ಹಿಡಿಯದಂತೆ ಎಚ್ಚರಿಕೆ ವಹಿಸಬೇಕು. ಕಲ್ಲಿನ ಮತ್ತು ಇತರ ಯಾವುದೇ ವಸ್ತುವಿನಿಂದ ಮಾಡಿದ ಪ್ರತಿಕೃತಿಗಳನ್ನು ತುಂಬಾ ಎತ್ತರದ ಸ್ಥಳದಲ್ಲಿ ಇರಿಸುವುದ ಸೂಕ್ತವಲ್ಲ. ಏಕೆಂದರೆ ಮೇಲಿನಿಂದ ಬಿದ್ದು ಒಡೆದು ಹೋಗಬಹುದು. ಪ್ರತಿಕೃತಿಗಳು ಮನೆಯ ಅಂದವನ್ನು ಹೆಚ್ಚುವಲ್ಲಿ ಸಹಕಾರಿ. ಇವುಗಳನ್ನು ಜೋಪಾನದಿಂದ ಜತನ ಮಾಡಿದರೆ ಹಲವು ವರ್ಷಗಳ ಕಾಲ ನಮ್ಮ ಜತೆ ಇರಿಸಿಕೊಳ್ಳಬಹುದು.

-  ಶಿವಾನಂದ ಎಚ್‌.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.