ಅಧಿಕಾರಿಗಳ ಗೊಂದಲ: ನೀರು ಪೂರೈಕೆ ವಿಳಂಬ


Team Udayavani, Oct 4, 2018, 11:58 AM IST

4-october-7.gif

ಬಂಟ್ವಾಳ: ಕರೋಪಾಡಿಯಲ್ಲಿ 26 ಕೋ. ರೂ. ವೆಚ್ಚದಲ್ಲಿ ಅನುಷ್ಠಾನಗೊಂಡ ಇಲ್ಲಿನ ನೇತ್ರಾವತಿ ನದಿಯಿಂದ ನೀರು ಮೇಲೆತ್ತಿ ಶುದ್ಧೀಕರಿಸಿ ಹಲವು ಗ್ರಾಮ ಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಈಗಾಗಲೇ ಉದ್ಘಾಟನೆಗೊಂಡಿದೆ. ಆದರೆ ಮೆಸ್ಕಾಂ ಇಲಾಖೆ- ಜಿ.ಪಂ. ಎಂಜಿನಿಯರಿಗ್‌ ವಿಭಾಗದ ನಡುವೆ ಹೊಂದಾಣಿಕೆ ಇಲ್ಲದ ಪರಿಣಾಮ ಸ್ಥಳೀಯರಿಗೆ ಕುಡಿಯುವ ನೀರು ಪೂರೈಕೆ ಯಾಗುತ್ತಿಲ್ಲ ಎಂದು ತಾ.ಪಂ. ಸದಸ್ಯ ಉಸ್ಮಾನ್‌ ಕರೋಪಾಡಿ ಆರೋಪಿಸಿದರು.

ಅವರು ಅ. 3ರಂದು ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ನಡೆದ ತಾ.ಪಂ. ಮಾಸಿಕ ಸಭೆಯಲ್ಲಿ ವಿವಿಧ ವಿಷಯಗಳ ಮೇಲೆ ನಡೆದ ಚರ್ಚೆಯಲ್ಲಿ ವಿಚಾರ ಪ್ರಸ್ತಾವಿಸಿದರು. ಜಿ.ಪಂ. ಸ. ಕಾರ್ಯ ನಿರ್ವಾಹಕ ಎಂಜಿನಿಯರ್‌ ನರೇಂದ್ರ ಬಾಬು ಪ್ರತಿಕ್ರಿಯಿಸಿ, ಹೆಚ್ಚುವರಿ ವಿದ್ಯುತ್‌ ಲೈನ್‌ ಅಳವಡಿಸಲು ನಿಗದಿತ ಮೊತ್ತ ಪಾವತಿಸಲಾಗಿದ್ದು, ವಿದ್ಯುತ್‌ ಸಂಪರ್ಕ ವ್ಯವಸ್ಥೆ ಮೆಸ್ಕಾಂ ನಿರ್ವಹಿಸಬೇಕು ಎಂದರು.

ಮೆಸ್ಕಾಂನ ಸ. ಕಾರ್ಯನಿರ್ವಾಹಕ ಎಂಜಿನಿಯರ್‌ ನಾರಾಯಣ ಭಟ್‌ ಉತ್ತರಿಸಿ, ಸಜೀಪಮುನ್ನೂರು ಗ್ರಾಮದ ಆಲಾಡಿ ಎಂಬಲ್ಲಿ ಮಳೆಗಾಲದಲ್ಲಿ ವಿದ್ಯುತ್‌ ಟವರ್‌ ಕುಸಿದು ಬಿದ್ದಿದೆ. ಪ್ರತ್ಯೇಕ ಹೊಸ ಟವರ್‌ ನಿರ್ಮಿಸಲು ಸ್ಥಳೀಯರು ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದಾಗಿ ಸಮಸ್ಯೆ ಉಂಟಾಗಿದೆ ಎಂದರು.

ಜಿ.ಪಂ. ಸದಸ್ಯ ಎಂ.ಎಸ್‌. ಮಹಮ್ಮದ್‌ ಪ್ರತಿಕ್ರಿಯಿಸಿ, ಮೆಸ್ಕಾಂ-ಜಿ.ಪಂ. ಎಂಜಿನಿಯರ್‌ ವಿಭಾಗದ ನಡುವಿನ ಗೊಂದಲದಲ್ಲಿ ಜನರಿಗೆ ಕುಡಿಯುವ ನೀರು ಇಲ್ಲದಂತೆ ಮಾಡುವುದು ತಪ್ಪು ಎಂದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಭೆ ಮುಗಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ಅಲ್ಲಿನ ಜನಪ್ರತಿನಿಧಿಗಳೊಂದಿಗೆ ಸ್ಥಳಕ್ಕೆ ತೆರಳಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ವಿದ್ಯುತ್‌ ಲೈನ್‌ ಹಾದು ಹೋಗುವ ಪ್ರದೇಶಗಳ ನಾಗರಿಕರ ಸಭೆಯನ್ನು ನಾಳೆ ಕರೆದು ಚರ್ಚಿಸಿ ಸರಿಪಡಿಸಿಕೊಳ್ಳಲು ಸೂಚಿಸಿದರು.

ಬ್ಯಾನರ್‌ನಲ್ಲಿ ಪಕ್ಷಗಳ ಚಿಹ್ನೆ
ಕೆಲವೊಂದು ಗ್ರಾ.ಪಂ.ಗಳಲ್ಲಿ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಸಂದರ್ಭ ಬ್ಯಾನರ್‌ನಲ್ಲಿ ರಾಜಕೀಯ ಪಕ್ಷಗಳ ಚಿಹ್ನೆ ಬಳಕೆ ಖಂಡನೀಯ. ಈ ಬಗ್ಗೆ ತಾ.ಪಂ. ಕಾರ್ಯ ನಿರ್ವಹಣಾ ಧಿಕಾರಿ ಎಲ್ಲ ಪಂ.ಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕೆಂದು ತಾ.ಪಂ. ಸದಸ್ಯೆ ಮಲ್ಲಿಕಾ ವಿ. ಶೆಟ್ಟಿ ಆಗ್ರಹಿಸಿದರು.

ಕಾಂಕ್ರೀಟ್‌ ರಸ್ತೆ
ಮಂಚಿ ಸಮೀಪದ ಕುಕ್ಕಾಜೆಯಲ್ಲಿ ಮಸೀದಿಗೆ ಹೋಗುವ ಕಾಂಕ್ರೀಟ್‌ ರಸ್ತೆಯನ್ನು ಒಡೆದು ಹಾಕಿರುವ ಬಗ್ಗೆ ತನಿಖೆ ನಡೆಸಬೇಕೆಂದು ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್‌ ರಝಾಕ್‌ ಕುಕ್ಕಾಜೆ ಆಗ್ರಹಿಸಿದರು. ಜಿ.ಪಂ. ಸ. ಕಾರ್ಯ ನಿರ್ವಾಹಕ ಎಂಜಿನಿಯರ್‌ ನರೇಂದ್ರ ಬಾಬು ಪ್ರತಿಕ್ರಿಯಿಸಿ, ಮಸೀದಿ ವತಿಯಿಂದಲೇ ರಸ್ತೆ ಒಡೆದು ಹಾಕಲಾಗಿದೆ ಎಂದರು.

ಠೇವಣಿ ಇಟ್ಟ ರೈತರಿಗೂ 3 ಲಕ್ಷ ರೂ. ತನಕ ಸುಸ್ತಿ ಸಾಲ ಮನ್ನಾ ಮಾಡಲಾಗಿದ್ದರೂ ತೆರಿಗೆ ಪಾವತಿ ಸುವ ರೈತರಿಗೆ ಈ ಸೌಲಭ್ಯ ಯಾಕಿಲ್ಲ ಎಂದು ತಾ.ಪಂ. ಸದಸ್ಯ ಯಶವಂತ ಪೊಳಲಿ ಪ್ರಶ್ನಿಸಿದರು. ಅಂಗವಿಕಲ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯಲ್ಲಿ ಶುಲ್ಕ ವಿನಾಯಿತಿ ನೀಡಬೇಕು ಎಂದು ತಾ.ಪಂ. ಸದಸ್ಯ ಹೈದರ್‌ ಆಗ್ರಹಿಸಿದರು. ಹದಗೆಟ್ಟ ಹತ್ತು ಸರಕಾರಿ ಶಾಲೆ ಕೊಠಡಿ ಗಳನ್ನು ಕೆಡವಲು ಶಿಫಾರಸು ಮಾಡಲಾಗಿದೆ ಎಂದು ಕಾರ್ಯ ನಿರ್ವಾಹಕ ಎಂಜಿನಿಯರ್‌ ವೈ. ಉಮೇಶ್‌ ಭಟ್‌ ತಿಳಿಸಿದರು.

ಶೇಂದಿ ಮಾರಾಟ
ತಾ.ಪಂ. ಸದಸ್ಯರಾದ ಕೆ. ಸಂಜೀವ ಪೂಜಾರಿ, ರಮೇಶ್‌ ಕುಡ್ಮೇರು ಮಾತನಾಡಿ, ಶೇಂದಿ ಮಾರಾಟಕ್ಕೆ ಅಬಕಾರಿ ಇಲಾಖೆ ಅಡ್ಡಿ ಪಡಿಸಬಾರದೆಂದು ಆಗ್ರಹಿಸಿದರು. ಶಾಲಾಭಿವೃದ್ಧಿ ಸಮಿತಿ ರಚನೆ, ಬಿಎಸ್‌ ಎನ್‌ಎಲ್‌ ಅಂತರ್ಜಾಲ ಸಮಸ್ಯೆ, ಸರಕಾರಿ ಬಸ್‌ ಓಡಾಟ ಸ್ಥಗಿತ, ಪಡಿತರ ಸಾಮಗ್ರಿ ರವಿವಾರವೂ ತೆರೆಯ ಬೇಕೆಂದು ಚರ್ಚೆ ನಡೆಸಲಾಯಿತು. ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಆಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ತಹಶೀಲ್ದಾರ್‌ ಪುರಂದರ ಹೆಗ್ಡೆ ಉಪಸ್ಥಿತರಿದ್ದರು.

ಅನುದಾನ ಒದಗಿಸಿ
ಸತ್ತಿಕಲ್ಲು ಸರಕಾರಿ ಪ್ರಾಥಮಿಕ ಶಾಲೆಯ ಜಮೀನಿನ ನಕ್ಷೆ ಪಹಣಿ ಪತ್ರ ಆಗಿಲ್ಲ, ನೆಟ್ಲ ಮುಟ್ನೂರು ಮನೆ ನಿವೇಶನಕ್ಕೆ ಮೀಸಲಿಟ್ಟ ಜಮೀನು ಸರ್ವೆ ನಡೆಸಬೇಕು. ಪ್ರಾಕೃತಿಕ ವಿಕೋಪ ಯೋಜನೆಯಡಿ ಕೈಗೊಂಡ ತುರ್ತು ಕಾಮಗಾರಿಗಳಿಗೆ ಅನುದಾನ ಒದಗಿಸಬೇಕು ಎಂದು ಜಿ.ಪಂ. ಸದಸ್ಯೆ ಮಂಜುಳಾ ಮಾವೆ ಆಗ್ರಹಿಸಿದರು.

ಅಕ್ರಮ ಸಾರಾಯಿ
ತಾ.ಪಂ. ಸದಸ್ಯ ಉಸ್ಮಾನ್‌ ಕರೋಪಾಡಿ ಮಾತನಾಡಿ, ಕರೋಪಾಡಿಯಲ್ಲಿ ಕಳೆದ 1 ವರ್ಷದಿಂದ ಸಾರಾಯಿ ಅಕ್ರಮ ಅಂಗಡಿ ತೆರೆಯಲಾಗಿದೆ. ಇಲ್ಲಿನ ಬಹುತೇಕ ಅಂಗಡಿಗಳಲ್ಲಿ ಸಾರಾಯಿ ಅಕ್ರಮ ಮಾರಾಟ ಮಾಡಲಾಗುತ್ತದೆ ಎಂದು ಆರೋಪಿಸಿದರು. ಇದಕ್ಕೆ ಅಬಕಾರಿ ಇಲಾಖೆ ಸಹಕಾರ ನೀಡುತ್ತಿದೆ ಎಂದು ತಾ.ಪಂ. ಸದಸ್ಯ ಆದಂ ಕುಂಞಿ ಬೆಂಬಲಿಸಿ ಮಾತನಾಡಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.