ಹಳೆ ವಸ್ತುಗಳಿಂದ ಸುಂದರ ಮನೆ ಆಲಂಕಾರ


Team Udayavani, Jun 8, 2019, 6:00 AM IST

g-11

ಮನೆ ಅಂದವಾಗಿ ಕಾಣಬೇಕು, ವಿನೂತವಾಗಿರಬೇಕು ಎನ್ನುವುದು ಎಲ್ಲರ ಆಸೆ. ಮನೆಯವರ ಅಭಿರುಚಿಗೆ ತಕ್ಕಂತೆ ಮನೆಯನ್ನು ಅಂದಗೊಳಿಸುತ್ತಾರೆ ಮತ್ತು ಅದಕ್ಕಾಗಿ ಸಾಕಷ್ಟು ಹಣವನ್ನು ವ್ಯಯಿಸುತ್ತಾರೆ.

ಮನೆಯಲ್ಲಿ ಬಳಸುವ ಆಲಂಕಾರಿಕ ವಸ್ತುಗಳು ಕಲಾತ್ಮಕವಾಗಿ, ಸೃಜನಾತ್ಮಕವಾಗಿರಬೇಕೆಂದು ಬಯಸುವುದು ಸಾಮಾನ್ಯ. ಹಬ್ಬ, ಸಮಾರಂಭಗಳ ಸಮಯಕ್ಕಂತೂ ಆಲಂಕಾರಿಕ ವಸ್ತಗಳು ಹೆಚ್ಚು ಬೇಕಾಗುತ್ತದೆ. ಅದಕ್ಕಾಗಿ ಸಾವಿರಾರು ರೂಪಾಯಿ ವ್ಯಯಿಸುವ ಬದಲು ಮನೆಯಲ್ಲೇ ಆಲಂಕಾರಿಕ ವಸ್ತುಗಳನ್ನು ತಯಾರಿಸಬಹುದು.

ಅಭಿರುಚಿಗೆ ತಕ್ಕ ಆಲಂಕಾರ
ಮನೆಯಲ್ಲಿರುವ ಹಳೆ ವಸ್ತುಗಳು, ಉಪಯೋಗಕ್ಕೆ ಬಾರದ ವಸ್ತಗಳನ್ನು ಬಳಸಿ ಮನೆಯಲ್ಲಿ ಸುಂದರವಾದ ಆಲಂಕಾರಿಕ ವಸ್ತಗಳನ್ನು ತಯಾರಿಸಬಹುದು. ಇದರಿಂದ ಮನೆಗೆ ಬಂದವರಿಗೆ ಮನೆಯವರ ಅಭಿರುಚಿ, ಸೃಜನಾತ್ಮಕತೆಯ ಪರಿಚಯವಾಗುತ್ತದೆ. ಮನೆಯಲ್ಲಿ ತುಂಬಿರುವ ಕಸ, ಬೇಡದ ವಸ್ತಗಳೂ ಕಡಿಮೆಯಾಗುತ್ತದೆ ಮತ್ತು ಸಾವಿರಾರು ರೂಪಾಯಿ ಹಣ ವ್ಯಯಿಸುವುದು ತಪ್ಪುತ್ತದೆ.

ಹಳೆಯ ಬಾಗಿಲುಗಳು
ಮನೆಯಲ್ಲಿರುವ ಹಳೆಯ ಬಾಗಿಲುಗಳು ಮನೆಯಲ್ಲಿ ವೇಸ್ಟ್‌ ರೀತಿಯಲ್ಲಿ ಬಿದ್ದಿದ್ದರೆ ಅದನ್ನು ಮೊದಲು ತೆಗೆದುಕೊಂಡು ಚೆನ್ನಾಗಿ ಕ್ಲೀನ್‌ ಮಾಡಿ ಅದರಲ್ಲಿ ಚಿತ್ರಗಳನ್ನು ಅಥವಾ ಕ್ರಾಫ್ಟ್ ಮಾಡಿ ಮನೆಯ ಗೋಡೆಯನ್ನು ಆಲಂಕರಿಸಬಹುದು ಅಥವಾ ಇತರೆ ಉಪಯೋಗಗಳಿಗೂ ಬಳಸಬಹುದು. ಬದಿಯಲ್ಲಿ ಕಸದ ರೀತಿಯಲ್ಲಿ ಬಿದ್ದಿರುವುದರಿಂದ ಜಾಗ ವೇಸ್ಟ್‌ ಆಗುವುದು ತಪ್ಪುತ್ತದೆ.

ಒಣಗಿದ ಎಲೆಗಳು
ಒಣಗಿದ ಎಲೆಗಳಿಂದಲೂ ಮನೆಯನ್ನು ಸುಂದರವಾಗಿಸಬಹುದು. ದೊಡ್ಡದಾದ ಎಲೆಗಳನ್ನು ಪುಸ್ತಕದ ಮಧ್ಯದಲ್ಲಿಟ್ಟು ಒಣಗಿಸಬೇಕು. ನಂತರ ಅವುಗಳನ್ನು ಮನೆಯ ಅಲಂಕಾರಕ್ಕೆ ಬಳಸಬಹುದು. ಒಣಗಿದ ಎಲೆಗಳಿಗೆ ಗೋಲ್ಡನ್‌, ಸಿಲ್ವರ್‌ ಬಣ್ಣ ನೀಡಿ ಮನೆಯ ಅಂದಕ್ಕಾಗಿ ಬಳಸಬಹುದು.

ಹಳೆಯ ಏಣಿಗಳು
ಹಳೆಯ ಮನೆಗಳಲ್ಲಿ ಸಾಮಾನ್ಯವಾಗಿ ಏಣಿಗಳಿರುತ್ತವೆ. ಅವುಗಳನ್ನು ಬದಿಯಲ್ಲಿರಿಸಿ ಅಥವಾ ಉಪಯೋಗಕ್ಕೆ ಬಾರದ ವಸ್ತು ಎಂದು ಮೂಲೆಗೆ ಸರಿಸುತ್ತೇವೆ. ಆದರೆ ಏಣಿಯನ್ನು ಬಳಸಿ ಮನೆಯನ್ನು ಅಂದವಾಗಿ ಕಾಣುವಂತೆ ಮಾಡಬಹುದು. ಏಣಿಗೆ ಚೆನ್ನಾಗಿ ಗೋಲ್ಡನ್‌ ಕವರ್‌ ಅಥವಾ ಬಟ್ಟೆ ಸುತ್ತಿ ಕವರ್‌ ಮಾಡಬೇಕು. ಅದರಲ್ಲಿ ಫೋಟೋ, ನೇತಾಡುವ ಆಲಂಕಾರಿಕ ವಸ್ತಗಳನ್ನು ಕಟ್ಟುವ ಮೂಲಕ ಸುಂದರಗೊಳಿಸಬಹುದು.

ಹಳೆಯ ಪುಸ್ತಕಗಳು
ಹಳೆಯ ಪುಸ್ತಕಗಳನ್ನು , ಪೇಪರ್‌ಗಳನ್ನು ಬಳಸಿ ಸುಂದರವಾಗಿ ಅಲಂಕರಿಸಬಹುದು. ಹಳೆಯ ಪೇಪರ್‌ಗಳು ಹಳದಿ ಬಣ್ಣಕ್ಕೆ ತಿರುಗಿದಾಗ ಅದನ್ನು ಆಲಂಕಾರಕಾಗಿ ಬಳಸಬಹುದು.

ಹಳೆಯ ಬಟ್ಟೆಗಳು
ಹಳೆಯ ಬಟ್ಟೆಗಳನ್ನು ಎಸೆಯುವ ಬದಲು ಅದನ್ನು ಮನೆಯ ಉಪಯೋಗಕ್ಕಾಗಿ ಬಳಸಬಹುದು. ಹಳೆಯ ಚೆನ್ನಾಗಿರುವ ಬಟ್ಟೆಗಳನ್ನು ಟೇಬಲ್‌ಗೆ ಕವರ್‌ ಆಗಿ ಬಳಸಬಹುದು, ಮ್ಯಾಟ್‌ ಮಾಡಿ ಬಳಸಬಹುದು.

ಮನೆಯಲ್ಲಿಯೇ ವೇಸ್ಟ್‌ ವಸ್ತುಗಳನ್ನು ಬಳಸಿಕೊಂಡು ಮನೆಯನ್ನು ಸುಂದರಗೊಳಿಸಬಹುದು. ಇರುವ ವಸ್ತುಗಳನ್ನು ವ್ಯವಸ್ಥಿತವಾಗಿ ಜೋಡಿಸುವ ಮೂಲಕ ಮನೆಯನ್ನು ಸರಳವಾಗಿ ಅಂದಗೊಳಿಸಬಹುದು.

– ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.