ಮೌನ ಮಾತಿಗಿಂತ ಉತ್ತಮ


Team Udayavani, Oct 14, 2019, 5:35 AM IST

mouna-kanive

ಎಷ್ಟೋ ಬಾರಿ ಬದುಕಿನಲ್ಲಿ ನಡೆಯುವ ಘಟನೆಗಳಿಗೆ ಮಾತನಾಡಿ ಪ್ರಯೋಜನವಿರುವುದಿಲ್ಲ. ಅದು ಗೊತ್ತಿದ್ದರೂ ನಾವು ಸೋಲ ಬಾರದು ಎಂಬ ಕಾರಣಕ್ಕೆ ಮಾತನ್ನು ಮುಂದುವರಿಸುತ್ತಾ ಹೋಗು ತ್ತೇವೆ. ಅದು ಘಟನೆಗಳಿಗೆ ಅಂತ್ಯ ಹಾಡುವುದರ ಬದಲು ಸಂಬಂಧಕ್ಕೆ ಪೂರ್ಣವಿರಾಮವನ್ನಿಟ್ಟು ಬಿಡುತ್ತದೆ.

ಎಲ್ಲ ಘಟನೆಗಳು ಹಾಗೆ ನಾವು ಅಂದುಕೊಳ್ಳುತ್ತೇವೆ: ಮಾತನಾಡಿ ಜಯಿಸಬಹುದು ಎಂದು. ಆದರೆ ಆ ಒಂದು ಘಟನೆಯಲ್ಲಿ ನಾವು ಜಯಿಸಬಹುದು. ಆದರೆ ಆ ವ್ಯಕ್ತಿಯ ಜತೆಗಿನ ಸಂಬಂಧ ಉಳಿಸಿಕೊಳ್ಳುವುದರಲ್ಲಿ ನಾವು ಎಡವಿರುತ್ತೇವೆ. ಆಗ ಅದು ನಮ್ಮ ಅರಿವಿಗೆ ಬಾರದಿದ್ದರೂ ಕೂಡ ಮುಂದೆ ಒಮ್ಮೆಯಾದರೂ ಅನಿಸುತ್ತದೆ-ಅಂದು ನಾನು ಗೆದ್ದು ಬೀಗುವುದಕ್ಕಿಂತ ಸೋತು ಸಂಬಂಧ ಉಳಿಸಿಕೊಳ್ಳಬಹುದಿತ್ತು ಎಂದು. ಆದರೆ ಆಗ ಕಾಲ ಮಿಂಚಿ ಹೋಗಿರುತ್ತದೆ. ಅದೇ ಎಲ್ಲರೂ ಹೇಳುವಂತೆ ಮಾತನಾಡಿದ ಮೇಲೆ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿ ಮಾತನಾಡುವಾಗ ಯಾವತ್ತೂ ಯೋಚಿಸಿ ಮಾತನಾಡಬೇಕು. ಯಾಕೆಂದರೆ ನಾಲಿಗೆ ನೀವು ಹೇಳಿದಂತೆ ಹೊರಳುತ್ತದೆ. ಅದಕ್ಕೆ ಸರಿ-ತಪ್ಪು ಎಂಬ ಅರಿವಿರುವುದಿಲ್ಲ. ಅದರ ತಿಳಿವಳಿಕೆ ಇರಬೇಕಾದದ್ದು ನಿಮಗೆ. ಹಾಗಾಗಿ ಮಾತಿಗಿಂತ ಕಷ್ಟವಾದರೂ ಸರಿ ಮೌನವಾಗಿರುವುದು ಲೇಸು.
ಕೆಲವು ಬಾರಿ ಜಗಳಗಳು ಬಂದಾಗ ಸಿಟ್ಟಿನಲ್ಲಿ ನಾವು ಮುಂದೆ ಇರುವವರ ಮೇಲೆ ರೇಗಾಡಿ ಬಿಡುತ್ತೇವೆ.

ಆದರೆ ಮನಸ್ಸು ಶಾಂತವಾದ ಮೇಲೆ ಮನಸ್ಸಿಗೆ ಅರಿವಾಗುತ್ತದೆ-ನಾವು ಹಾಗೆ ಮಾಡಬಾರದಾಗಿತ್ತು ಎಂದು ಆದರೆ ಕಾಲ ಮಿಂಚಿ ಹೋಗಿರುತ್ತದೆ. ಹಾಗಾಗಿ ಮಾತನಾಡುವುದಕ್ಕಿಂತ ಮೊದಲು ಮೌನವಾಗಿದ್ದು ಬಿಟ್ಟರೆ ಕೆಲವು ಸಂದರ್ಭಗಳನ್ನು ಇನ್ನು ಕೆಲವು ಬಾರಿ ಸಂಬಂಧಗಳನ್ನು ಉಳಿಸಿಕೊಳ್ಳುವುದರಲ್ಲಿ ನಾವು ಯಶಸ್ವಿಯಾಗುತ್ತೇವೆ. ಮಾತನಾಡುವಾಗ ಇನ್ನೊಬ್ಬರ ಮನಸ್ಸಿಗೆ ನೋವಾಗದಂತೆ ಮಾತನಾಡಬೇಕು. ಇಲ್ಲವಾದಲ್ಲಿ ಮೌನವಾಗಿದ್ದು ಬಿಡಬೇಕು. ಇನ್ನೊಬ್ಬರನ್ನು ನೋಯಿಸುವುದಕ್ಕಿಂತ ಸುಮ್ಮನಿರುವುದು ತುಂಬಾ ಉತ್ತಮ. ಮೌನವಾಗಿರುವುದು ಎಲ್ಲರಿಗೂ ಆಗಲಿಕ್ಕಿಲ್ಲ . ಸ್ವಲ್ಪ ಕಷ್ಟವಾಗಬಹುದು ಆದರೆ ಅದನ್ನು ಕಷ್ಟವಾದರೂ ಸರಿಯೇ ಅಳವಡಿಸಿಕೊಂಡಲ್ಲಿ ಮುಂದೆ ಎದುರಾಗುವ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ ನಿಲ್ಲಬಹುದು. ಮೌನ ಬಂಗಾರದಷ್ಟು ಬೆಲೆ ಬಾಳುವಂತದು, ಯಾವಾಗಲೂ ಅದಕ್ಕಿರುವ ಬೆಲೆ ಕಡಿಮೆಯಾಗುವುದಿಲ್ಲ. ಹಾಗಾಗಿ ಮಾತನಾಡಿ ಹಾಳು ಮಾಡಿಕೊಳ್ಳುವ ಸಂದರ್ಭಗಳನ್ನು ಮೌನವಾಗಿ ಗೆದ್ದು ಬಿಡಿ. ಆ ಸಮಯದಲ್ಲಿ ನೀವು ಸೋತಿರಿ ಎಂದು ಅನಿಸಿದರೂ ತಲೆ ಕೆಡಿಸಿಕೊಳ್ಳಬೇಡಿ ಯಾಕೆಂದರೆ ಯಾರಿಗೂ ಅರಿವಾಗದ ರೀತಿಯಲ್ಲಿ ನೀವು ಗೆದ್ದು ಬೀಗಿರುತ್ತೀರಿ.

- ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.