ಸುಖಗಳನ್ನು ಹೆಕ್ಕಿತೆಗೆಯೋಣ


Team Udayavani, Sep 16, 2019, 5:52 AM IST

worry

ಯಾವುದೇ ಚಿಂತೆಯಲ್ಲಿ ಮೆಲ್ಲಗೆ ಹೆಜ್ಜೆ ಹಾಕುತ್ತಿರುವಾಗ ಬೇಲಿಯಿಂದ ತೂರಿ ಬಂದ ಸುಮದ ಘಮಕ್ಕೆ ನಮ್ಮ ಮನ ಅರಳುತ್ತದೆ. ತುಂಬಿದ ರಸ್ತೆಗಳಲ್ಲಿ ಆಟವಾಡುವ ಪುಟ್ಟ ನಾಯಿಮರಿಗಳು ನಮ್ಮನ್ನು ಅರೆಗಳಿಗೆ ಬಾಲ್ಯದ ಲೋಕಕ್ಕೆ ಕೊಂಡುಹೋಗುತ್ತವೆ. ದೇವರ ಸೃಷ್ಟಿಯಲ್ಲಿ ಸರ್ವವೂ ಸುಖಮಯವಾಗಿದೆ. ಕಣ್ತೆರೆದು ನೋಡುವ ವ್ಯವಧಾನ, ಶುದ್ಧ ಮನೋಭಾವ ಮಾತ್ರ ಬೇಕಾಗಿದೆ.

ಹಾಲಿನಂತಹ ಬೆಳದಿಂಗಳು ಚೆಲ್ಲಿ ಹಿತ ನೀಡುವ ಚಂದಿರ ಕಾರ್ಮೋಡಗಳ ನಡುವೆ ಸಿಕ್ಕಿ ಮರೆಯಾಗುತ್ತಾನೆ. ಸ್ವಲ್ಪ ಸಮಯದ ಅನಂತರ ಬೆಳ್ಳಿ ಮೋಡಗಳ ನಡುವೆ ಮತ್ತೆ ಬೆಳ್ಳನೆಯ ನಗು ಬೀರುತ್ತಾನೆ. ಅಮಾವಾಸ್ಯೆ ದಿನ ಸಂಪೂರ್ಣ ಮಾಯವಾಗುವ ಚಂದಿರ ಹುಣ್ಣಿಮೆಯ ದಿನ ಬಾಗಿಲು ಮುಚ್ಚಿ ಮಲಗಿದರೂ ಕಿಂಡಿಯಿಂದ ನಾವಿದ್ದಲ್ಲಿಗೆ ಬಂದು “ತಂಪು’ ನೀಡುತ್ತಾನೆ. ಬದುಕಿನಲ್ಲೂ ಹಾಗೆಯೇ ಸುಖ ದುಃಖಗಳು ಒಂದರ ಹಿಂದೆ ಬಂದು ನಮ್ಮ ಜೀವನದಲ್ಲಿ ಕಣ್ಣುಮುಚ್ಚಾಲೆ ಆಡುತ್ತಾ ಇರುತ್ತವೆ.

ಬದುಕಿನಲ್ಲಿ ಗೊಂದಲ
ಬದುಕನ್ನು ನಾವೆಷ್ಟು ಪ್ರೀತಿಸುತ್ತೇವೆಯೋ ಅದೇ ರೀತಿ ಬದುಕು ನಮ್ಮನ್ನು ಪ್ರೀತಿಸುವುದಿಲ್ಲ. ಶಾಂತವಾಗಿ ಕುಳಿತು ಸದಾ ಒಂದಲ್ಲ ಒಂದು ವಿಷಯದತ್ತ ಅವಲೋಕಿಸುತ್ತಾ ಇದ್ದರೂ ಎಲ್ಲೋ ಏನೋ ತಪ್ಪಾಗಿದೆಯೋ ಅನಿಸುತ್ತದೆ. ಇದು ನನ್ನೊಬ್ಬನಲ್ಲಿ ಮಾತ್ರವೇ? ನಾನೊಬ್ಬನೇ ಹೀಗಾ? ಇರಲಿಕ್ಕಿಲ್ಲ ಎಂದು ನಾನೇ ಸಮಾಧಾನಪಟ್ಟುಕೊಳ್ಳುವುದಿದೆ. ಆದರೆ ಹತ್ತರಲ್ಲಿ ಹನ್ನೊಂದು ನಾನ್ಯಾಕೆ ಆಗಬೇಕು ಎಂದುಕೊಂಡಾಗ ಮತ್ತೆ ಅದೇ ವ್ಯಥೆ ತೀರಕ್ಕೆ ಬಡಿಯುವ ಅಲೆಗಳಂತೆ ನೊಂದ ಮನಕ್ಕೆ ಮತ್ತೆ ನೋವು ಉಂಟಾಗುತ್ತದೆ.

ದೇವರ ಸೃಷ್ಟಿಯಲ್ಲಿ
ಸರ್ವವೂ ಸುಖಮಯ
ಯಾವುದೋ ಚಿಂತೆಯಲ್ಲಿ ಮೆಲ್ಲಗೆ ಹೆಜ್ಜೆ ಹಾಕುತ್ತಿರುವಾಗ ಬೇಲಿಯಿಂದ ತೂರಿ ಬಂದ ಸುಮದ ಘಮಕ್ಕೆ ನಮ್ಮ ಮನ ಅರಳುತ್ತದೆ. ತುಂಬಿದ ರಸ್ತೆಗಳಲ್ಲಿ ಆಟವಾಡುವ ಪುಟ್ಟ ನಾಯಿಮರಿಗಳು ನಮ್ಮನ್ನು ಅರೆಗಳಿಗೆ ಬಾಲ್ಯದ ಲೋಕಕ್ಕೆ ಕೊಂಡುಹೋಗುತ್ತವೆ. ಹಾಲುಗಲ್ಲದ ಕಂದ ನಮ್ಮನ್ನು ನೋಡಿ ಹಲ್ಲಿಲ್ಲದ ಬಾಯಿಯಿಂದ ಮುದ್ದಾಗಿ ನಕ್ಕಾಗ ತಲೆ ಮೇಲೆ ಆಕಾಶ ಬಿದ್ದರೂ ಏನೋ ಹಿತವಾದ ಭಾವ ಮೂಡುತ್ತದೆ. ಹೀಗೆ ದೇವರ ಸೃಷ್ಟಿಯಲ್ಲಿ ಸರ್ವವೂ ಸುಖಮಯವಾಗಿದೆ. ಕಣ್ತೆರೆದು ನೋಡುವ ವ್ಯವಧಾನ, ಶುದ್ಧ ಮನೋಭಾವ ಮಾತ್ರ ಬೇಕಾಗಿದೆ.

“ಅಹಂಕಾರ’ ದುಃಖಗಳಿಗೆ ಮೂಲ ಕಾರಣ
ಗಂಡ ಹೆಂಡತಿ , ಅಪ್ಪ ಮಕ್ಕಳು, ಗೆಳೆಯರ ನಡುವೆ ಮನಸ್ತಾಪ ಬರಲು ಮುಖ್ಯ ಕಾರಣ ನಾವೇ ಆಗಿದ್ದೇವೆ. ನಾನೇ ಸರಿ, ನಾವೆಂದೂ ತಪ್ಪು ಮಾಡುವುದಿಲ್ಲ ಎನ್ನುವ ಅಹಂಕಾರ ಇತರರು ನಮ್ಮಂತೆ ಎನ್ನುವ ಭಾವದ ಅಭಾವ ನಮ್ಮ ಬಹುತೇಕ ದುಃಖಗಳಿಗೆ ಮೂಲ ಕಾರಣ. ಹರೆಯದಲ್ಲಿ ಅರಿಯದೆ “ಪ್ರೀತಿ’ಯೆಂಬ ಜಾರುಬಂಡೆಯಲ್ಲಿ ಜಾರಿದಾಗ ದುಃಖ ಮೂಡಿ ಮನದ ಮನೆಯಲ್ಲಿ ಮನೆ ಮಾಡುತ್ತದೆ. ತಿಳಿಗೇಡಿ ವಯಸ್ಸಿನಲ್ಲಿ ತಿಳಿಯದ ಕೆಲಸಗಳಿಗೆ ತಿಳಿದವರಿಂದ ತಿಳಿಯದೇ ಕೈಹಾಕಿದರೆ ಕಷ್ಟ , ನಷ್ಟ ಕಟ್ಟಿಟ್ಟ ಬುತ್ತಿ. ಸುಖ ನೀಡುವ ವಿಪುಲ ಅವಕಾಶಗಳು ನಮ್ಮನ್ನು ಸುತ್ತುವರಿದಿರುತ್ತವೆ. ಆದರೆ ದುಃಖದ ಕಡಲಿನಲ್ಲಿ ಮುಳುಗಿರುವ ನಮಗೆ ಅವು ಕಾಣುವುದೇ ಇಲ್ಲ. ದುಃಖ ಅದೆಷ್ಟು ನೋವು, ಅವಮಾನ, ಹಿಂಸೆ, ಹತಾಶೆಗಳನ್ನು ನಮ್ಮ ಮುಂದೆ ರಾಶಿ ಹಾಕಿದ್ದರೂ ಅವುಗಳತ್ತ ಚಿತ್ತ ಹರಿಸದೇ ಭರ್ಜರಿ ಸುಖ ನೀಡುವ ದೃಶ್ಯಗಳತ್ತ, ಸುಮಧುರ ಸಂಬಂಧಗಳತ್ತ ಗಮನಹರಿಸಿದರೆ ಜಗತ್ತಿನಲ್ಲಿ ಸರ್ವವೂ ಸುಖಮಯ ಎಂದೆನಿಸದೇ ಇರದು. ದುಃಖಗಳನ್ನು ಮೀರಿ ನಿಂತರೆ ಸುಖದ ಸಾಲುಗಳೇ ನಮ್ಮನ್ನು ಅಪ್ಪಿಕೊಳ್ಳಲು ಕಾದು ನಿಲ್ಲುತ್ತವೆ ಎಂಬುದಂತೂ ಸತ್ಯ.

ಸುಖದ ಸಾವಿರ ರೂಪದಿಂದ ಸಂಬಂಧ ಗಟ್ಟಿ
ಮಾಡಿದ ತಪ್ಪನ್ನು ಮನ್ನಿಸಿ ತಿದ್ದಿ ತೀಡಿ ಮುದ್ದಿಸುವ ಗುರುಗಳು, ಸಮಸ್ಯೆ ಹೆಗಲಿಗೇರಿದಾಗ ಪರಿಹಾರ ಹುಡುಕೋಣ ಎನ್ನುವ ಜೀವದ ಗೆಳೆಯರು, ನಾವು ನಿಮ್ಮ ಬೆನ್ನಿಗಿದ್ದೇವೆ ಎನ್ನುವ ಅಣ್ಣತಮ್ಮಂದಿರು, ನಾಡಿಮಿಡಿತ ಅರಿತು ಪ್ರೀತಿಯ ಧಾರೆ ಹರಿಸುವ ಸಂಗಾತಿ , ಖುಷಿಯ ಕಾರಂಜಿ ಹರಿಸುವ ಮಕ್ಕಳು ಹೀಗೆ ಸುಖದ ಸಾವಿರ ರೂಪಗಳನ್ನು ಎದುರಿಗಿಟ್ಟುಕೊಂಡು ಮುಂದುವರಿದರೆ ಸಂಬಂಧ ಗಟ್ಟಿಯಾಗುತ್ತದೆ.

ಚಿಕ್ಕ ಸುಖಗಳನ್ನು
ಅಲ್ಲಲ್ಲಿ ಹೆಕ್ಕಿ ತೆಗೆಯೋಣ
ಕಷ್ಟ ನಷ್ಟಗಳು ಬದುಕಿನ ಬಾಗಿಲಿಗೆ ಬಂದು ನಿಂತಾಗ ದುಃಖ ಉಮ್ಮಳಿಸಿ ಬರುತ್ತದೆ. ಕಣ್ಣೀರು ಕೆನ್ನೆಯನ್ನು ತೋಯಿಸುತ್ತದೆ. ಮೊದಲ ಸಲದ ಅವಮಾನ, ಹತಾಶೆ, ಬೇಸರ ಕಂಡು ಬದುಕು ಇಂದಿಗೇ ಕೊನೆಗೊಳ್ಳುವುದೇ ಎಂದೆನಿಸುತ್ತದೆ. ಜೀವಿಸುವವನು ಸತ್ತವನಿಗಿಂತ ಎಷ್ಟೋ ಮೇಲು, ಸುಖವಂತನು ದುಃಖೀತನಿಗಿಂತ ಅಷ್ಟೇ ಮೇಲು. ಸಿಕ್ಕಿದ ಚಿಕ್ಕ ಚಿಕ್ಕ ಸುಖಗಳನ್ನು ಹೆಕ್ಕಿ ಪಡೆಯಬೇಕು. ಅದೇ ಸುಖೀ ಜೀವನ.

-  ಜಯಾನಂದ ಅಮೀನ್‌ ಬನ್ನಂಜೆ

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.