ದೇಹ ಕಾಯೋ ಸೈನಿಕ


Team Udayavani, Nov 9, 2019, 5:00 AM IST

ss-12

ನಮ್ಮ ಸುತ್ತಲೂ ಕಾಯಿಲೆ ಹರಡುವ ವೈರಸ್‌ಗಳು, ಬ್ಯಾಕ್ಟೀರಿಯಾಗಳು ಮತ್ತು ಪರಾವಲಂಬಿ ಜೀವಿಗಳು ಬೇಕಾದಷ್ಟಿವೆ. ಹಾಗಿದ್ದೂ ನಾವ್ಯಾಕೆ ಪದೇ ಪದೆ ಕಾಯಿಲೆ ಬೀಳುವುದಿಲ್ಲ ಗೊತ್ತಾ? ನಮ್ಮೊಳಗೂ ಸೈನಿಕರಿದ್ದಾರೆ!

ಇಂದು ಬಹುತೇಕ ರಾಷ್ಟ್ರಗಳು ಸೇನೆಯನ್ನು ಹೊಂದಿವೆ. ನೆರೆಹೊರೆಯ ರಾಷ್ಟ್ರಗಳಿಂದ ಅದೆಂಥದ್ದೇ ತೊಂದರೆ ಎದುರಾದರೂ ಸೇನೆ ರಕ್ಷಣೆ ಒದಗಿಸುತ್ತದೆ. ದೇಶಕ್ಕೆ, ಸೇನಾ ವ್ಯವಸ್ಥೆ ಯಾವ ರೀತಿ ಬಲವನ್ನು ನೀಡುತ್ತದೆಯೋ ಅದೇ ರೀತಿ ನಮ್ಮ ದೇಹದಲ್ಲೂ ಒಂದು ರಕ್ಷಣಾ ವ್ಯವಸ್ಥೆ ಇದೆ ಎನ್ನುವುದು ಸೋಜಿಗದ ಸಂಗತಿ. ನಮ್ಮ ದೇಹದೊಳಗಿರುವ ರಕ್ಷಣಾ ವ್ಯವಸ್ಥೆ, ರೋಗ ರುಜಿನಗಳು ಮತ್ತು ಬಾಹ್ಯ ಪರಿಸರದಲ್ಲಿನ ಕಲ್ಮಶಗಳಿಂದ ನಮಗೆ ರಕ್ಷಣೆಯನ್ನು ಒದಗಿಸುತ್ತದೆ.

ಭದ್ರವಾದ ರಕ್ಷಣಾ ವ್ಯವಸ್ಥೆ
ನಮ್ಮ ದೇಹದ ರಕ್ಷಣಾ ವ್ಯವಸ್ಥೆ ಸದೃಢವಾಗಿದ್ದಾಗ ವೈರಸಳ ಕಾಟ, ಆಟ ನಡೆಯುವುದಿಲ್ಲ. ಅವುಗಳು ಶಕ್ತಿ ಕಳೆದುಕೊಂಡು ದುರ್ಬಲವಾಗಿಬಿಡುತ್ತವೆ. ಅದಕ್ಕೆ ಮುಖ್ಯ ಕಾರಣ- ನಮ್ಮ ರಕ್ತದಲ್ಲಿರುವ ಕಣಗಳು. ಅದರಲ್ಲೂ ರೋಗ ನಿರೋಧಕ ಶಕ್ತಿಯನ್ನು ಹೊಂದುವಲ್ಲಿ ಟಿ ಕೋಶಗಳು ಪ್ರಮುಖ ಪಾತ್ರ ವಹಿಸುತ್ತವೆ. ಎಳೆಯ ವಯಸ್ಸಿನಲ್ಲಿ ಮನುಷ್ಯನ ದೇಹ ಅತಿ ಹೆಚ್ಚು ಟಿ ಕೋಶಗಳನ್ನು ಉತ್ಪಾದಿಸುತ್ತದೆ. ಹೀಗಾಗಿ ಚಿಕ್ಕ ವಯಸ್ಸಿನಲ್ಲಿ ರೋಗ ಹರಡುವ ವೈರಸ್‌ ಪ್ರವೇಶಿಸಿದಾಗ, ಒಂದೋ ದೇಹದ ರಕ್ಷಣಾ ವ್ಯವಸ್ಥೆ ಅದನ್ನು ಹೊಡೆದೋಡಿಸುತ್ತದೆ, ಇಲ್ಲವೇ ಕಾಯಿಲೆಗೆ ತುತ್ತಾದರೂ ದೇಹ ಬಹಳ ಬೇಗ ಚೇತರಿಸಿಕೊಂಡುಬಿಡುತ್ತದೆ. ವಯಸ್ಸಾಗುತ್ತಿದ್ದಂತೆ ರಕ್ತದಲ್ಲಿ ಟಿ ಕೋಶಗಳ ಉತ್ಪಾದನೆ ಕಡಿಮೆಯಾಗುತ್ತಾ ಹೋಗುತ್ತದೆ. ಹೀಗಾಗಿಯೇ ಮುಪ್ಪಿನಲ್ಲಿ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚು, ಜತೆಗೆ ಕಾಯಿಲೆಗೆ ತುತ್ತಾದಾಗ ಅದರಿಂದ ಚೇತರಿಕೆಯೂ ನಿಧಾನ. ಟಿ ಕೋಶಗಳಂತೆಯೇ ನಮ್ಮ ರಕ್ಷಣಾ ವ್ಯವಸ್ಥೆಯಲ್ಲಿ ಹಲವು ಬಗೆಯ ಸೈನಿಕ ಕೋಶಗಳಿವೆ. ಅವೆಲ್ಲ, ನಮಗೆ ರಕ್ಷಣೆ ನೀಡುವ ಕೆಲಸದಲ್ಲಿ ನಿರತವಾಗಿರುತ್ತವೆ.

ವಯಸ್ಸಾದಾಗ ಏನಾಗುತ್ತದೆ?
ಮನುಷ್ಯನ ದೇಹಕ್ಕೆ ಆಯಸ್ಸು ಎಂಬುದಿರುವಂತೆಯೇ ನಮ್ಮ ರಕ್ಷಣಾ ವ್ಯವಸ್ಥೆಯಲ್ಲಿರುವ ಕೋಶಗಳಿಗೂ ಆಯಸ್ಸು ಇರುತ್ತದೆ. ಅದು ಮುಗಿದಾಗ ಮತ್ತೆ ಅದರ ಸ್ಥಾನವನ್ನು ತುಂಬಲು ಹೊಸ ಟಿ ಕೋಶಗಳು ಹುಟ್ಟಿಕೊಳ್ಳುತ್ತವೆ. ಇದು ನಿರಂತರ ಪ್ರಕ್ರಿಯೆ. ಮೊದಲೇ ಹೇಳಿದಂತೆ, ಮನುಷ್ಯನಿಗೆ ವಯಸ್ಸಾಗುತ್ತಿದ್ದಂತೆ ಟಿ ಕೋಶಗಳ ಉತ್ಪಾದನೆ ಕಡಿಮೆಯಾಗುತ್ತಾ ಹೋಗುತ್ತದೆ. ಮುದಿ ಟಿ ಕೋಶಗಳು ಅವಸಾನಗೊಳ್ಳುತ್ತವೆ, ಹೊಸ ಟಿ ಕೋಶಗಳ ಉತ್ಪಾದನೆ ನಿಲ್ಲುತ್ತದೆ. ಅಯ್ಯಯ್ಯೋ, ಹಾಗಾದರೆ ನಮ್ಮ ದೇಹದ ರಕ್ಷಣಾ ವ್ಯವಸ್ಥೆ ದುರ್ಬಲವಾಗುವುದಿಲ್ಲವೇ? ಎಂಬ ಪ್ರಶ್ನೆ ಮೂಡುವುದು ಸಹಜ. ಅಲ್ಲೇ ಇರುವುದು ಸ್ವಾರಸ್ಯ. ವಯಸ್ಸಾಗುತ್ತಿದ್ದಂತೆಯೇ ಹೊಸ ಕೋಶಗಳ ಉತ್ಪಾದನೆ ನಿಲ್ಲುತ್ತದೆ ನಿಜ, ಆದರೆ ಅದೇ ಸಮಯಕ್ಕೆ ದೇಹದಲ್ಲಿ ಮೊದಲೇ ಇರುವ ಟಿ ಕೋಶಗಳ ಆಯಸ್ಸು ಹೆಚ್ಚುತ್ತಾ ಹೋಗುತ್ತದೆ. ಅಂದರೆ, ಅವು ಬಹಳ ಬೇಗ ಅವಸಾನಗೊಳ್ಳುವುದಿಲ್ಲ. ಅವು ದೇಹದ ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು ಭದ್ರವಾಗಿ ನೆಲೆಯೂರಿಬಿಡುತ್ತವೆ. ಹೀಗಾಗಿ, ಕಡೆಯವರೆಗೂ ದೇಹದಲ್ಲಿ ಆರೋಗ್ಯಕರ ಸಂಖ್ಯೆಯ ಟಿ ಕೋಶಗಳು ಇದ್ದೇ ಇರುತ್ತವೆ.

ನಮ್ಮ ದೇಹದ ರಕ್ಷಣಾ ವ್ಯವಸ್ಥೆ ವಯಸ್ಸಾದ ಮೇಲೂ ಚೆನ್ನಾಗಿ ಇರಬೇಕೆಂದರೆ, ನಾವು ಕೆಲ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು.

– ಒಳ್ಳೆಯ ನಿದ್ದೆ
– ಹಣ್ಣು , ತರಕಾರಿ ಸೇವನೆ
– ನೀರು ಸೇವನೆ
– ವ್ಯಾಯಾಮ

- ಹರ್ಷವರ್ಧನ್‌ ಸುಳ್ಯ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.