ಸಂಘಟನಾತ್ಮಕವಾಗಿ ಬದುಕು ರೂಪಿಸಿ
Team Udayavani, Aug 27, 2018, 2:51 PM IST
ತಾಳ್ಮೆಗೆ ಇನ್ನೊಂದು ಹೆಸರೇ ಮಹಿಳೆ. ಗಂಭೀರ ಸಮಸ್ಯೆಗಳನ್ನು ಸಹನೆ, ಸಂಯಮದಿಂದ ನಿಭಾಯಿಸುವ ವಿಶೇಷ ಕೌಶಲ ಸ್ತ್ರೀಯರಲ್ಲಿದೆ. ಮಕ್ಕಳ ಪೋಷಣೆ, ಕುಟುಂಬ ನಿರ್ವಹಣೆ ಜತೆಗೆ ಇತರ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಚಾಪು ಮೂಡಿಸಿದ್ದಾರೆ. ಕೆಲಸದ ಒತ್ತಡ ಎಷ್ಟೇ ಇದ್ದರೂ ಎಲ್ಲವನ್ನು ನಿಭಾಯಿಸುವ ವಿಶೇಷ ಶಕ್ತಿ ಸ್ತ್ರೀಯರಿಗೆ ಇದೆ.
ಆಧುನಿಕತೆ ಬೆಳೆದಂತೆ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಸಾಮಾಜಿಕ ಕಟ್ಟುಪಾಡುಗಳನ್ನು ಮೀರಿ ತಮ್ಮ ಪ್ರತಿಭೆಯ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲುತ್ತಿದ್ದಾರೆ. ವಿಜ್ಞಾನ ಕ್ಷೇತ್ರದ ಸಂಶೋಧನೆಗಳಲ್ಲಿ ತೊಡಗಿಸಿಕೊಂಡಿರುವ ಹಲವಾರು ಮಹಿಳೆಯರು ತಮ್ಮ ವೃತ್ತಿ ಬದುಕಿನ ಜತೆ ಜತೆಗೆ ಕುಟುಂಬ ನಿರ್ವಹಣೆಯನ್ನೂ ಸರಿದೂಗಿಸಿಕೊಂಡು ಹೋಗುವ ಮೂಲಕ ಯಶಸ್ಸು ಗಳಿಸಿದ್ದಾರೆ. ಕುಟುಂಬ ವ್ಯವಸ್ಥೆ ಭಾರತ ದೇಶಕ್ಕೆ ಒಂದು ಕೊಡುಗೆ. ಕುಟುಂಬವನ್ನು ಮಹಿಳೆ ಹೊರತು ಮತ್ತೂಬ್ಬರೂ ನಿರ್ವಹಿಸಲು ಸಾಧ್ಯವಿಲ್ಲ. ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ. ಆದರೂ ಆಕೆಯ ಮೇಲಿನ ದೌರ್ಜನ್ಯ ಮಾತ್ರ ನಿಂತಿಲ್ಲ. ಇದನ್ನು ತಡೆಗಟ್ಟಬೇಕಾದರೆ ಪ್ರತಿಯೊಬ್ಬ ಮಹಿಳೆಯರೂ ಸಂಘಟಿತರಾಗಬೇಕು.
ಸಾಮಾಜಿಕವಾಗಿ ತೊಡಗಿಕೊಳ್ಳಿ
ಭಾರತ ಸಶಕ್ತ, ಸಂಪದ್ಭರಿತ ರಾಷ್ಟ್ರವಾಗಿ ಮೆರೆಯಲು ಪುರುಷರಷ್ಟೇ ಮಹಿಳೆಯರ ಕೊಡುಗೆಯು ಅವಶ್ಯ. ಹಾಗಾಗಿ ಮಹಿಳೆಯರು ಕೇವಲ ಅಡುಗೆ ಕೋಣೆಯಲ್ಲಿ ಬಂಧಿಯಾಗಿರದೆ, ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿ ಕೊಳ್ಳಬೇಕು. ಮಹಿಳೆಯರು ಧೈರ್ಯದಿಂದ ಸಾಮಾಜಿಕ ಚಟುವಟಿಗಳಲ್ಲಿ ಮುಂದುವರಿಯಲು ಹೋರಾಟ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯ. ಆ ಮೂಲಕ ತಮ್ಮ ಹಕ್ಕುಗಳನ್ನು ಪಡೆಯಲು ಮುಂದಾಗವುದು ಉತ್ತಮ. ಸ್ತ್ರೀಯರು ಸಂಘಟಿತರಾದಾಗ ಮಾತ್ರ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು, ಶೋಷಣೆ ವಿರುದ್ಧ ಹೋರಾಡಲು ಸಾಧ್ಯ. ಆದ್ದರಿಂದ ಅವರು ಕೆಚ್ಚು- ಸ್ವಾಭಿಮಾನವನ್ನು ಹೋರಾಟಕ್ಕೆ ಬಳಸಿಕೊಳ್ಳಬೇಕು.
ಅಂತಃಶಕ್ತಿ ಬಲಗೊಳಿಸಿ
ಸೃಜನಶೀಲ ಗುಣ, ವೈಜ್ಞಾನಿಕ ಚಿಂತನೆಗಳನ್ನು ಅಳವಡಿಸಿಕೊಂಡು, ಅಂತರಾಳದಲ್ಲಿರುವ ಅಂತಃಶಕ್ತಿಯನ್ನು ಬಲಗೊಳಿಸಲು ಸ್ತ್ರೀಯರು ಸಂಘಟನೆಗಳಲ್ಲಿ ಭಾಗಿಗಳಾಗುವುದು ಮುಖ್ಯ. ಆ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುವುದೇ ನಿಜವಾದ ಮಹಿಳಾ ಸಶಕ್ತೀಕರಣ.
ದೇಶದ ಪ್ರಗತಿಗೆ ಸಹಕಾರಿ
ಮಹಿಳೆಯರು ಶೈಕ್ಷಣಿಕ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಂಘಟಿತರಾಗಿ ಸ್ವೋದ್ಯೋಗ ಪ್ರಾರಂಭಿಸುವ ಮೂಲಕ ಆರ್ಥಿಕ ಸ್ವಾವಲಂಬನೆಗೆ ಪೂರಕ ಚಟುವಟಿಕೆಗಳನ್ನು ಕೈಗೊಳ್ಳುವುದು ದೇಶದ ಪ್ರಗತಿಗೆ ಸಹಕಾರಿ.
ಜಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…