ಆಧುನಿಕತೆಯ ಸವಾಲು ಸಮರ್ಥವಾಗಿ ಎದುರಿಸಿ 


Team Udayavani, Jul 30, 2018, 2:53 PM IST

30-july-13.jpg

ಸಮಾಜದಲ್ಲಿ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸುವ ಶಕ್ತಿ ಮಹಿಳೆಯರಲ್ಲಿದೆ. ಸಾಮರಸ್ಯದಿಂದ ಪರಂಪರೆಯ ಧ್ಯೋತಕವಾಗಿ ಆಕೆ ಕಾರ್ಯ ನಿರ್ವಹಿಸುತ್ತಾಳೆ. ಬದುಕಿನ ಎಲ್ಲ ಮಜಲುಗಳನ್ನು ದಾಟಿ ಸಾಧನೆ ಮಾಡಿರುವ ಮಹಿಳೆಯರು ಆಧುನಿಕತೆಯ ಎಲ್ಲ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಬಲ್ಲರು. 

ಮಹಿಳೆ ಸಮಾಜದಲ್ಲಿ ಮಗಳಾಗಿ, ಹೆಂಡತಿಯಾಗಿ, ತಾಯಿಯಾಗಿ, ಅಕ್ಕ- ತಂಗಿಯಾಗಿ ಹಲವಾರು ಪಾತ್ರಗಳನ್ನು ನಿರ್ವಹಿಸುತ್ತಾಳೆ. ಇವುಗಳ ಜತೆಗೆ ಬುದ್ಧಿವಂತಿಕೆ, ಉತ್ತಮ ಸಾಮರ್ಥ್ಯ, ನಡೆ- ನುಡಿ, ಆತ್ಮಸ್ಥೈರ್ಯ, ಹೋರಾಟದ ಮನೋಭಾವ, ಉತ್ತಮ ವ್ಯಕ್ತಿತ್ವ, ಶಿಸ್ತು- ಸಂಯಮ, ಸಾಮಾನ್ಯ ಜ್ಞಾನ ಅಳವಡಿಸಿಕೊಂಡು ಉತ್ತಮ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಎಲ್ಲ ರಂಗಗಳಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಸಂಘಟನೆ ಮೂಲಕ ಮಹಿಳೆಯರು ವ್ಯವಹಾರದಲ್ಲಿರುವ ಸವಾಲು ಮತ್ತು ಸಂಕಷ್ಟಗಳನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಆಗ ಸಮಾಜದಲ್ಲಿ ವಿಶೇಷ ಸ್ಥಾನಮಾನ ಸಿಗಲು ಸಾಧ್ಯವಾಗುತ್ತದೆ.

ಮಹಿಳೆಯರು ಇಂದು ಹೆಚ್ಚುಹೆಚ್ಚು ಉನ್ನತ ಶಿಕ್ಷಣ ಪಡೆಯುತ್ತಿರುವುದು ಸಮಾಜದ ಸವಾಲು ಹಾಗೂ ಸಮಸ್ಯೆ ಎದುರಿಸಲು ಪೂರಕವಾಗಲಿದೆ. ಮಹಿಳೆಯರು ಕೀಳರಿಮೆ ಬಿಟ್ಟು ಪರಿಪೂರ್ಣ ಜ್ಞಾನ ಹೊಂದಿದರೆ ಸಾಮಾಜಿಕವಾಗಿ ಬಲಿಷ್ಠರಾಗಬಹುದು. ವಿವಿಧ ಇಲಾಖೆಗಳಲ್ಲಿ ತರಬೇತಿ ಹಾಗೂ ಹಣ ಕಾಸಿನ ಸೌಲಭ್ಯವಿದ್ದು, ಅವುಗಳನ್ನು ಪಡೆಯವುದರ ಮೂಲಕ ಆರ್ಥಿಕ ಪ್ರಗತಿ ಸಾಧಿಸಬಹುದು.

ಮಹಿಳೆಯರು ಸಂಘಟಿತರಾಗಿ
ದೇಶದ ಸರ್ವತೋಮುಖ ಅಭಿವೃದ್ಧಿಯು ಮಹಿಳೆಯರ ಕೈಯಲ್ಲಿದೆ. ಆದರೆ ಮಹಿಳೆಯರ ಮೇಲೆ ಹಿಂದಿನಿಂದಲೂ ದೌರ್ಜನ್ಯ, ತಾರತಮ್ಯ, ಶೋಷಣೆ, ಅಸಮಾನತೆ ನಡೆಯುತ್ತಿದೆ. ಅದರ ವಿರುದ್ಧ ಮಹಿಳೆಯರು ಸಂಘಟಿತರಾಗಿ ಹೋರಾಟ ನಡೆಸಿ. ಸರಕಾರ ಮಹಿಳೆಯರಿಗಾಗಿ ಹಲವು ಸೌಲಭ್ಯ ಕಲ್ಪಿಸಿದೆ. ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು. ಅಪನಂಬಿಕೆ, ಮೌಡ್ಯಗಳಿಂದ ಹೊರಬರಬೇಕು. ಅಂಬೇಡ್ಕರ್‌, ಬಸವಣ್ಣ ಅವರು ಸಾರಿದ ಸಮಾನತೆಯ ಅರಿವು ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. 

ಆತ್ಮವಿಶ್ವಾಸದಿಂದ ಮುನ್ನಡೆಯಿರಿ
ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಇರಿಸಿಕೊಂಡು ಯಾವುದೇ ಸಮಸ್ಯೆ ಬಂದರೂ ಧೃತಿಗೆಡದೆ, ದೃಢವಾಗಿದ್ದು, ಸಮರ್ಥವಾಗಿ ಎದುರಿಸಲು ಸಿದ್ಧರಾಗಬೇಕು. ಶಿಕ್ಷಣದ ಜತೆಗೆ ಸದಾ ಚಟುವಟಿಕೆಗಳಲ್ಲಿ ತೊಡಗಿ, ಆತ್ಮವಿಶ್ವಾಸ ವೃದ್ಧಿಕೊಂಡು ಮುನ್ನಡೆಯಿರಿ.

ಸೃಜನಶೀಲ ಚಿಂತನೆ ಅಳವಡಿಸಿ
ಇಂದು ಪ್ರ ಪಂಚವೇ ನಮ್ಮ ಅಂಗೈಯಲ್ಲಿದೆ ಎನ್ನುವಷ್ಟು ತಂತ್ರಾಜ್ಞಾನ ಅಭಿವೃದ್ಧಿ ಹೊಂದಿದೆ. ಕೈಯಲ್ಲಿರುವ ಒಂದು ಪುಟ್ಟ ಮೊಬೈಲ್‌ ಫೋನ್‌ ಮೂಲಕ ನಾವು ವಿಶ್ವದ ಎಲ್ಲ ಆಗುಹೋಗುಗಳನ್ನು ಕ್ಷಣಾರ್ಧದಲ್ಲಿ ತಿಳಿದುಕೊಳ್ಳಬಹುದು. ಹಾಗೆ ನಮ್ಮ ಬಗೆಗೂ ಪ್ರಪಂಚಕ್ಕೆ ತಿಳಿಯಪಡಿಸಬಹುದು. ಇದು ಡಿಜಿಟಲ್‌ ಕ್ರಾಂತಿಯ ಪರಿಣಾಮ.

ಡಿಜಿಟಲ್‌ ಯುಗದ ಸವಾಲುಗಳನ್ನು ಎದುರಿಸಲು ಮಹಿಳೆಯರು ಸೃಜನಶೀಲ ಚಿಂತನೆಯನ್ನು ಅಳವಡಿಸಿಕೊಂಡು , ಆ ಮೂಲಕ ಯಶಸ್ಸು ಸಾಧಿಸಲು ಪ್ರಯತ್ನಿಸಬೇಕು. ಅನುಭವದ ಕೊರತೆಗಳು ಇದ್ದಾಗ ವೈಫ‌ಲ್ಯಗಳು ಎದುರಾಗುವುದು ಸಹಜ. ಅವುಗಳನ್ನು ಸವಾಲಾಗಿ ಸ್ವೀಕರಿಸಿ ದಿಟ್ಟತನದಿಂದ ಪ್ರಯತ್ನಶೀಲರಾಗಿ. ವೈಯಕ್ತಿಕ ಕೌಶಲಗಳ ಮೂಲಕ ಡಿಜಿಟಲ್‌ ಯುಗದ ಓಟದಲ್ಲಿ ಹಿಂದೆ ಬೀಳದೆ ಪ್ರಗತಿ ಸಾಧಿಸಿ.

ವಿಜ್ಞಾನ, ತಂತ್ರಜ್ಞಾನ ಸಾಕಷ್ಟು ಬೆಳವಣಿಗೆ ಸಾಧಿ ಸಿದ್ದು, ಜೀವನದ ಅವಿಭಾಜ್ಯ ಅಂಗವಾಗಿ ಬಿಟ್ಟಿವೆ. ಆದ್ದರಿಂದ ನವೀನ ಆವಿಷ್ಕಾರಗಳ ಸದುಪಯೋಗಗಳ ಬಗ್ಗೆ ಅರಿತು ಬಳಸಿದಾಗ ಡಿಜಿಟಲ್‌ ಯುಗದ ಸವಾಲುಗಳನ್ನು ಸಲೀಸಾಗಿ ಎದುರಿಸಬಹುದು. ಮಹಿಳೆಯರು ತಮ್ಮಲ್ಲಿರುವ ಸುಪ್ತ ಪ್ರತಿಭೆ, ಕೌಶಲಗಳನ್ನು ಅಭಿವೃದ್ಧಿಪಡಿಸಿ ಆರ್ಥಿಕವಾಗಿ ಸ್ವತಂತ್ರರಾಗಲು ಡಿಜಿಟಲೀಕರಣದ ಸವಾಲುಗಳ ಬಗ್ಗೆ ಅರಿತುಕೊಳ್ಳವುದು ಅತೀ ಅಗತ್ಯ. ಇಂದು ಹೆಚ್ಚಿನ ಆರ್ಥಿಕ ವ್ಯವಹಾರ, ವಾಣಿಜ್ಯ ವಹಿವಾಟುಗಳು ಡಿಜಿಟಲೀಕರಣಗೊಂಡಿರುವುದರಿಂದ ಅವುಗಳ ಕುರಿತಾಗಿ ಅಧ್ಯಯನ ಮಾಡಿ ತೊಡಗಿಕೊಳ್ಳುವುದು ಆರ್ಥಿಕ ಭದ್ರತೆ ದೃಷ್ಟಿಯಿಂದ ಸಹಕಾರಿ.

 ಜಿಕೆ 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.