ಗುತ್ತಿಗೆ ನೌಕರರ ಮುಷ್ಕರ: ದೂರವಾಣಿ ಸಂಪರ್ಕದಲ್ಲಿ ವ್ಯತ್ಯಯ


Team Udayavani, Feb 5, 2019, 5:32 AM IST

sudina-1.jpg

ಸುಬ್ರಹ್ಮಣ್ಯ: ಬಿಎಸ್ಸೆನ್ನೆಲ್‌ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸಂಸ್ಥೆ ಮೂರು ತಿಂಗಳ ವೇತನ ಬಾಕಿ ಇರಿಸಿದೆ. ಇದಕ್ಕೆ ರೋಸಿಹೋಗಿರುವ ಗುತ್ತಿಗೆ ನೌಕರರು ಫೆ. 1ರಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ವೇತನ ನೀಡುವಂತೆ ಗುತ್ತಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಳಿದ ಪರಿಣಾಮ ಗ್ರಾಮಾಂತರ ಪ್ರದೇಶಗಳ ದೂರವಾಣಿ ಸಂಪರ್ಕಗಳಲ್ಲಿ ವ್ಯತ್ಯಯ ಉಂಟಾಗಿದೆ.

ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌ ಸಂಸ್ಥೆಯಲ್ಲಿ 20ಕ್ಕೂ ಹೆಚ್ಚು ವರ್ಷಗಳಿಂದ ದಿನಗೂಲಿ ಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲೆಯಲ್ಲಿ 300ಕ್ಕೂ ಅಧಿಕ ಮಂದಿ ವಿವಿಧ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಟೆಲಿಕಾಂ ಇಲಾಖೆ ಇದ್ದಾಗ ದಿನಗೂಲಿ ಕಾರ್ಮಿಕರಾಗಿದ್ದ ಇವರನ್ನು ಬಳಿಕ ನಿಗಮವಾದ ಅನಂತರ ಗುತ್ತಿಗೆ ವ್ಯಾಪ್ತಿಗೆ ಒಳ±‌ಡಿಸಲಾಗಿತ್ತು. ಬಹುತೇಕ ಕೆಲಸಗಳನ್ನು ಇವರು ನಿರ್ವಹಿಸುತ್ತಿದ್ದಾರೆ.

ಖಾಯಂ ನೌಕರರಂತೆ ಬಿಎಸ್ಸೆನ್ನೆಲ್‌ನ ಕೇಂದ್ರ, ಕಚೇರಿಗಳಲ್ಲಿ ವಿನಿಮಯ ಕೇಂದ್ರದ ನಿರ್ವಹಣೆ, ಲೈನ್‌ ದುರಸ್ತಿ, ಎಂಡಿಎಫ್ ಟೆಸ್ಟಿಂಗ್‌, ಎಕ್ಸೆಂಜ್‌ ಹಾಗೂ ಮೊಬೈಲ್‌ ಟವರ್‌ಗಳ ಆಪರೇಟಿಂಗ್‌ ಸೇವೆ ನಡೆಸುತ್ತಿರುವ ಈ ಗುತ್ತಿಗೆ ಕಾರ್ಮಿಕ‌ರಿಗೆ ಗುತ್ತಿಗೆದಾರ ಮೂರು ತಿಂಗಳಿಂದ ವೇತನ ನೀಡಿಲ್ಲ.

ಸಂಸ್ಥೆ ಗಣನೀಯ ಪ್ರಮಾಣದಲ್ಲಿ ಆರ್ಥಿಕ ನಷ್ಟಕ್ಕೆ ಒಳಗಾಗಿರುವುದೇ ವೇತನ ಪಾವತಿ ಬಾಕಿಗೆ ಕಾರಣ ಎನ್ನುವುದು ಉನ್ನತ ಮೂಲಗಳ ಮಾಹಿತಿ. ಈ ಸಿಬಂದಿ ವೇತನ ನಿರ್ವಹಣೆ ಸಂಸ್ಥೆಗೆ ಕಷ್ಟವಾಗುತ್ತಿದೆ. ಇದರಿಂದಾಗಿ ಗುತ್ತಿಗೆ ಕಾರ್ಮಿಕರಿಗೆ ವೇತನ ಪಾವತಿ ಬಾಕಿಯಾಗಿದೆ.

ಗ್ರಾಹಕರಿಗೆ ತೊಂದರೆ
ಗುತ್ತಿಗೆ ನೌಕರರು ಫೆ. 1ರಿಂದ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿದ್ದಾರೆ. ದೂರವಾಣಿ ದುರಸ್ತಿಗೆ ಸಿಬಂದಿ ಸಮಸ್ಯೆ ಎದುರಾಗಿದೆ. ಮೊಬೈಲ್‌ ಟವರ್‌ ನಿರ್ವಹಣೆ ಮಾಡುತ್ತಿರುವ ಗುತ್ತಿಗೆ ನೌಕರರು ಗೈರು ಹಾಜರಾಗಿರುವುದರಿಂದ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾ|ಗಳಲ್ಲಿ ದೂರವಾಣಿ, ಮೊಬೈಲ್‌ ಸೇವೆ ಅಸ್ತವ್ಯಸ್ತವಾಗಿದೆ. ಸುಳ್ಯದ ನಾಲ್ಕು, ಪುತ್ತೂರಿನ ಮೂರು, ಬೆಳ್ತಂಗಡಿಯ ಎರಡು ಮೊಬೈಲ್‌ ಟವರ್‌ಗಳಲ್ಲಿ ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿವೆ.

1.50 ಲಕ್ಷ ಕಾರ್ಮಿಕರು
ದೇಶದಲ್ಲಿ 1.50 ಲಕ್ಷ ಮಂದಿ ಬಿಎಸ್ಸೆನ್ನೆಲ್‌ ಸಂಸ್ಥೆಯಲ್ಲಿ ಕೇಬಲ್‌, ಹೌಸ್‌ ಕೀಪಿಂಗ್‌, ಸೆಕ್ಯೂರಿಟಿ, ಆಪ್ಟಿಕಲ್‌ ಫೈಬರ್‌ ಕೇಬಲ್‌ ಇತ್ಯಾದಿ ಕೆಲಸದಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದಾರೆ. ರಾಜ್ಯದಲ್ಲಿ 4,000 ಮತ್ತು ಅವಿಭಜಿತ ದ.ಕ. ಜಿಲ್ಲೆಯಲ್ಲಿ 700 ಕಾರ್ಮಿಕರಿದ್ದಾರೆ. ಅವರೆಲ್ಲರೂ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ಬಾಕಿ ವೇತನ ಬಿಡುಗಡೆ ಸಂಬಂಧ ಆಲ್‌ ಇಂಡಿಯನ್‌ ಬಿಎಸ್ಸೆನ್ನೆಲ್‌ ಕ್ಯಾಶುವಲ್‌ ಆ್ಯಂಡ್‌ ಕಾಂಟ್ರಾಕ್ಟ್ ವರ್ಕರ್ ಫೆಡರೇಶನ್‌ ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದೆ.

ಸಮಸ್ಯೆ ಆಗಿದೆ ಗುತ್ತಿಗೆ ನೌಕರರು ಮುಷ್ಕರಕ್ಕೆ ಇಳಿದ ಹಿನ್ನೆಲೆಯಲ್ಲಿ ಸಂಪರ್ಕ ಕ್ಷೇತ್ರದಲ್ಲಿ ವ್ಯತ್ಯಯಗಳು ಆಗಿವೆ. ಗ್ರಾಹಕರು ತೊಂದರೆ ಅನುಭವಿಸುತ್ತಿರುವ ಕುರಿತು ದೂರುಗಳು ಬಂದಿವೆ. ಉನ್ನತ ಮಟ್ಟದಲ್ಲಿ ಹಣ ಬಿಡುಗಡೆಯಾಗುತ್ತಿಲ್ಲ. ಸಮಸ್ಯೆಗಳಾಗುತ್ತಿರುವ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ.
-ದಿವಾಕರ, ವಿಭಾಗೀಯ ಅಭಿಯಂತರ, ಸುಳ್ಯ

ಹಣ ಬಿಡುಗಡೆಗೆ ಆಗ್ರಹಖಾಸಗಿಯವರಿಗೆ ಅನುಕೂಲ ಮಾಡಿಕೊಡಲು ಕೇಂದ್ರ ಸರಕಾರ ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌ ಅನ್ನು ಕಡೆಗಣಿಸುತ್ತಿದೆ. ಸುಧಾರಣೆಗೆ ಯಾವುದೇ ಕ್ರಮ ಜರಗಿಸುತ್ತಿಲ್ಲ. ಹೀಗಾಗಿ ಗುತ್ತಿಗೆ ನೌಕರರಿಗೆ ಸಂದಾಯವಾಗಬೇಕಿದ್ದ ಕೋಟಿಗಟ್ಟಲೆ ಮೊತ್ತವನ್ನು ಬಾಕಿ ಇರಿಸಿಕೊಂಡಿದೆ. ಬಾಕಿ ಇರಿಸಿರುವ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು. –
ವಸಂತ ಆಚಾರಿ, ಅಧ್ಯಕ್ಷರು, ಬಿಎಸ್ಸೆನ್ನೆಲ್‌ ನಾನ್‌ಪರ್ಮನೆಂಟ್ ವರ್ಕರ್ ಯೂನಿಯನ್‌

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.