ಉಳಿತಾಯವೆಂಬ ದಿನ ನಿತ್ಯದ ಜಪ 


Team Udayavani, Oct 8, 2018, 3:15 PM IST

8-october-15.gif

ನಾನು ಓದಲಿಲ್ಲ ಹಾಗಾಗಿ ನನ್ನ ಮಕ್ಕಳಾದರೂ ಓದಬೇಕು. ನಾನೇನೋ ಒಂದು ಚಿಕ್ಕ ಕೆಲಸ ಮಾಡಿಕೊಂಡು ಇದ್ದೇನೆ. ಆದರೆ ನನ್ನ ಮಗ ಹಾಗಿರಬಾರದು ಎಂದು ಯೋಚಿಸುವ ಹಾಗೆ, ಕುಡಿತದ ಚಟ ಇರುವ ತಂದೆಗೆ ತನ್ನ ಮಗ ಕುಡುಕನಾಗಬಾರದು ಎಂಬ ಮಹತ್ವದ ಬಯಕೆ ಇರುತ್ತದೆ. ತಮ್ಮ ಜೀವನವನ್ನು ಕೇವಲ ಖರ್ಚು ಮಾಡುವುದಲ್ಲೇ ಕಳೆಯುವವರು, ಮಕ್ಕಳಿಗೆ ನಮ್ಮ ಹಾಗೆ ಖರ್ಚು ಮಾಡಬೇಡಿ ಎಂದು ಹೇಳಬೇಕಾಗಿದೆ. ನಾವಂತೂ ಉಳಿಸಲಿಲ್ಲ, ನೀವಾದರೂ ಉಳಿಸಿ ಎಂದು ಹೇಳುತ್ತಾರೆ. ನಾವಂತೂ ಭವಿಷ್ಯವನ್ನು ಸರಿಯಾಗಿ ಪ್ಲ್ಯಾನ್  ಮಾಡಲಿಲ್ಲ. ಆದರೆ ನೀವು ಹಾಗೆ ಮಾಡಬೇಡಿ ಎಂದು ಬುದ್ಧಿ ಹೇಳುತ್ತಾರೆ.

ಈಗ ಕಾಲ ಹೇಗೆ ಬದಲಾಗಿದೆ ಎಂದರೆ ಹಳೆಯ ಕಾಲದ ಎಷ್ಟೋ ಆರ್ಥಿಕ ವಿಷಯಗಳು ಬದಲಾವಣೆಯ ಹೊಡೆತದಿಂದ ಈಗ ಸಮರ್ಪಕವಾಗಿ ಆಗದೇ ಇರಬಹುದು. ಬಾಡಿಗೆಗೆ ಮನೆ ಕಟ್ಟಿಸಿ ಕೊಟ್ಟರಾಯಿತು ಬಿಡಿ ಎನ್ನುವ ಮಾತು ಈಗ ಸೂಕ್ತವಾದದ್ದಲ್ಲ. ಇಳಿ ವಯಸ್ಸಿನಲ್ಲಿ ಮಕ್ಕಳು ನೋಡಿಕೊಳ್ಳುತ್ತಾರೆ ಬಿಡು ಎನ್ನುವ ನಿಶ್ಚಿಂತೆ ಈಗ ಹೆಚ್ಚಿನವರಿಗೆ ಇಲ್ಲ. ಮಕ್ಕಳ ಖರ್ಚುಗಳನ್ನು ಅವರು ನಿಭಾಯಿಸಿಕೊಳ್ಳುವುದೇ ಕಷ್ಟವಾಗಿರುವಾಗ ಅವರು ಇಳಿವಯಸ್ಸಿನ ತಂದೆ ತಾಯಿಯರನ್ನು ಆರೈಕೆ ಮಾಡುವ, ನೋಡಿಕೊಳ್ಳುವ ಜವಾಬ್ದಾರಿ ಹೊರುವುದು ವಿರಳ.

ಬ್ಯಾಂಕಿನಿಂದ ಬದುಕುವ ಬಡ್ಡಿ ಹಣದಲ್ಲಿ ಬದುಕಬಹುದಾ? ಎಂದರೆ, ಅದು ಹೇಗೆ ಸಾಕಾಗತ್ತೆ? ಮತ್ತೆ ಮರು ಪ್ರಶ್ನೆ ಏಳುತ್ತದೆ. ಅಂದರೆ ಆಯಾ ಕಾಲದ ಅಗತ್ಯಕ್ಕೆ ಅನುಗುಣವಾಗಿ ಹಣಕಾಸು ಯೋಜನೆಗಳನ್ನು ರೂಪಿಸಿಕೊಳ್ಳಬೇಕಾಗುತ್ತದೆ. ಆದರೆ ಉಳಿತಾಯ ಮಾತ್ರ ಎಲ್ಲ ಕಾಲಕ್ಕೂ ಅನ್ವಯಿಸುವ ಪರಮ ಸತ್ಯ.

ಮೇಲ್ನೋಟಕ್ಕೆ ಉಳಿತಾಯ ಎಂದರೆ ದುಡ್ಡು ಉಳಿಸುವುದು ಎನ್ನಿಸುತ್ತದೆ. ನಿಜ ಏನೆಂದರೆ, ಉಳಿತಾಯ ಎನ್ನುವುದು ಒಂದು ಮನೋಭಾವನೆ. ಅಗತ್ಯ, ಅನಗತ್ಯ ಖರ್ಚುಗಳ ಬಗೆಗೆ ಇರುವ ಸ್ಪಷ್ಟ ಅರಿವು. ಈ ಅರಿವು ಮೂಡಲು ಮನಸ್ಸು ಹದಗೊಳ್ಳಬೇಕು. ಹದಗೊಳ್ಳುವುದು ಹೇಗೆ? ವಿವೇಕದಿಂದಲೇ ಹೊರತು ಬೇರೆ ದಾರಿ ಇಲ್ಲ.

ಹಣಕಾಸಿನ ನಿರ್ವಹಣೆಯ ವಿಷಯದಲ್ಲಿಯೂ ಮನೆಯೇ ಮೊದಲ ಪಾಠ ಶಾಲೆ. ಎಷ್ಟು ಚಿಕ್ಕ ಸಂಬಳ, ಒಬ್ಬರ ದುಡಿಮೆ, ಸಣ್ಣ ವ್ಯವಹಾರ ಇದ್ದಾಗಲೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದ ಎಷ್ಟೋ ಉದಾಹರಣೆಗಳಿವೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.