ರಸ್ತೆ ಅಭಿವೃದ್ಧಿ ಮಾಡಿ, ಮತ ಹಾಕ್ತೀವಿ!

ನೂಜಿಬಾಳ್ತಿಲ: ಪೂರ್ವಭಾವಿ ಸಭೆಯಲ್ಲಿ ಗ್ರಾಮಸ್ಥರ ನಿರ್ಧಾರ

Team Udayavani, Apr 2, 2019, 10:04 AM IST

sudi-2
ಕಲ್ಲುಗುಡ್ಡೆ : ನೂಜಿಬಾಳ್ತಿಲ ಗ್ರಾಮದ 2ನೇ ವಾರ್ಡ್‌ಗೆ ಸಂಬಂಧಪಟ್ಟ ಬದಿಬಾಗಿಲು, ಒರುಂಬಾಲು, ಲಾವತ್ತಡ್ಕ ಸಂಪರ್ಕಿಸುವ ರಸ್ತೆಗೆ ಡಾಮರು ಆಗಿಲ್ಲವೆಂದು ಆರೋಪಿಸಿ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದ ಗ್ರಾಮಸ್ಥರು ರವಿವಾರ ನೂಜಿಬಾಳ್ತಿಲದ ಒರುಂಬಾಳಿನಲ್ಲಿ ಸೇರಿ ಪೂರ್ವಭಾವಿ ಸಭೆ ನಡೆಸಿದರು. ರಸ್ತೆ ಅಭಿವೃದ್ಧಿಯಾದ ಬಳಿಕವೇ ಮತದಾನ ಮಾಡುವುದಾಗಿ ಗ್ರಾಮಸ್ಥರು ಒಟ್ಟಾಗಿ ಸಭೆಯಲ್ಲಿ ನಿರ್ಧಾರ ಪ್ರಕಟಿಸಿದರು.
ಶ್ರೀಧರ ಕಂಪ ಮಾತನಾಡಿ, ಬದಿಬಾಗಿಲಿನಿಂದ ಲಾವತ್ತಡ್ಕ ಸಂಪರ್ಕಿಸುವ ಈ ರಸ್ತೆ ಅಭಿವೃದ್ಧಿಗೆ 25 ವರ್ಷಗಳಿಂದ ಸಂಬಂಧಪಟ್ಟವರಿಗೆ ಮನವಿ ಮಾಡುತ್ತಿದ್ದು, ಅವರಿಂದ ಚುನಾವಣೆ ಸಂದರ್ಭ ಭರವಸೆ ದೊರೆತಿದೆಯೇ ವಿನಾ ರಸ್ತೆ ಡಾಮರು ಕಂಡಿಲ್ಲ. 2018ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದರೂ ಯಾವುದೇ ಬೆಳವಣಿಗೆ ನಡೆಯದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಬಹಿಷ್ಕರಿಸುವುದರೊಂದಿಗೆ ಇದನ್ನು ಸರ್ವಋತು ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಿದ ಬಳಿಕವೇ ಮತದಾನ ಮಾಡುವುದಾಗಿ ಗ್ರಾಮಸ್ಥರು ಹೇಳಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಕ್ರಮ ಕೈಗೊಂಡು ರಸ್ತೆ ಅಭಿವೃದ್ಧಿಗೊಳಿಸುವಂತೆ ಆಗ್ರಹಿಸಿದ್ದಾರೆ.
ಹಕ್ಕು ಚಲಾಯಿಸಿ
ನೀತಿ ತಂಡದ ರಾಜ್ಯ ಟ್ರಸ್ಟಿ ಸುಜಿತ್‌ ಸಿ.ಪಿ. ಇಚ್ಲಂಪಾಡಿ ಮಾತನಾಡಿ, ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ. ಅದು ನಮ್ಮ ಕರ್ತವ್ಯವೂ ಆಗಿದೆ. ನಮಗೆ ಸೂಕ್ತವಲ್ಲದ ಅಭ್ಯರ್ಥಿಗಳು ಇಲ್ಲವೆಂದ ಸಂದರ್ಭದಲ್ಲಿ ನೋಟಾ ಮತದಾನಕ್ಕೆ ಅವಕಾಶವಿದ್ದು, ಮತದಾನ ಬಹಿಷ್ಕಾರ ಸೂಕ್ತವಲ್ಲವೆಂದು ಸಲಹೆ ನೀಡಿದ ಅವರು ಈ ಭಾಗದ ರಸ್ತೆ ಅಭಿವೃದ್ಧಿ ಹೋರಾಟಕ್ಕೆ ಮುಂದಿನ ದಿನಗಳಲ್ಲಿ ನೀತಿ ತಂಡದ ವತಿಯಿಂದ ಬೆಂಬಲ ಸೂಚಿಸಿ, ರಸ್ತೆ ಅಭಿವೃದ್ಧಿಯಾಗುವಲ್ಲಿ ನಿಮ್ಮೊಂದಿಗೆ ಸದಾ ಇರುವುದಾಗಿ ಹೇಳಿದರು.
ಹೆಣ ಕೊಂಡೊಯ್ಯಲೂ ಆಗದು!
ಸುದೀಶ್‌ ಮಂಜೋಳಿ ಮಾತನಾಡಿ, ರಸ್ತೆ ಅವ್ಯವಸ್ಥೆಯಿಂದ ಬಹಳಷ್ಟು ತೊಂದರೆಯಾಗಿದೆ. ಯಾರಾದರೂ ಮೃತಪಟ್ಟರೆ ಮಳೆಗಾಲದಲ್ಲಿ ಹೆಣವನ್ನು ಬದಿಬಾಗಿಲು ಎನ್ನುವಲ್ಲಿ ಜನರ ದರ್ಶನಕ್ಕೆ ಇಡಬೇಕಾದ ಪರಿಸ್ಥಿತಿ ಒದೆ. ಬಳಿಕ ಎತ್ತಿಕೊಂಡು ಹೋಗಬೇಕಾಗಿರುವುದು ಇಲ್ಲಿನವರ ದೌರ್ಭಾಗ್ಯ. ಮಳೆಗಾಲದಲ್ಲಿ ಈ ರಸ್ತೆಯ ಅವಸ್ಥೆ ಹೇಳತೀರದು ಎಂದು ಆಕ್ರೋಶ ವ್ಯಕ್ತಪಡಿಸಿ, ರಸ್ತೆ ಸರಿಪಡಿಸಿದ ಬಳಿಕವೇ ಮತದಾನ ಮಾಡುವುದೆಂದರು.
ಐವರು ಅಧ್ಯಕ್ಷರಾದರೂ ಸಾಧ್ಯವಾಗಿಲ್ಲ
ನೂಜಿಬಾಳ್ತಿಲ ಗ್ರಾ.ಪಂ. ಮಾಜಿ ಅಧ್ಯಕ್ಷ ವಸಂತ ಪೂಜಾರಿ ಮಾತನಾಡಿ, 2ನೇ ವಾರ್ಡ್‌ ನನ್ನನ್ನು, ಸದಾ ನಂದ ಗೌಡ ಅವರನ್ನು ಸೇರಿ ಐವರು ಅಧ್ಯಕ್ಷರನ್ನು ನೀಡಿದ್ದು, ಆದರೂ ಈ ರಸ್ತೆ ಅಭಿವೃದ್ಧಿಗೊಳಿಸುವಲ್ಲಿ ಅಸಾಧ್ಯವಾಗಿರುವುದು ದುರಂತ ಎಂದರು. ಆನಂದ ಮಿತ್ತಂಡೇಲು, ಪೂವಪ್ಪ ಮಿತ್ತಂಡೇಲು, ವಿನೋದ ಮಿತ್ತಂಡೇಲು, ಪುರುಷೋತ್ತಮ ಮಿತ್ತಂಡೇಲು, ಹರೀಶ್‌ ಮಂಜೋಳಿ, ರಂದಿಪ್‌ ಮಂಜೋಳಿ, ಅನೂಪ್‌ ಮಂಜೋಳಿ, ಪುರುಷೋತ್ತಮ ಕಂಪ, ಅನಿಸ್‌ ಕಂಪ, ಆಲಿಸ್‌ ಚಾಕೋ ಕಂಪ, ಗೀತಾ ಪಲಯಮಜಲು, ಭವ್ಯಾ ಮಿತ್ತಂಡೇಲು, ಅಂಕಿತಾ ಕಂಪ, ಸುಬಾಸ್‌ ಪಲಯಮಜಲು, ಯೋಗೀಶ್‌ ಮಿತ್ತಂಡೇಲು, ಉಮೇಶ್‌ ಗೌಡ ಮಿತ್ತಂಡೇಲು,  ಬಿನೀಶ್‌ ಮಂಜೋಳಿ, ವಿದ್ಯಾಧರ ಮಂಜೋಳಿ, ರದೀಶ್‌ ಪಲಯಮಜಲು, ಪುರಂದರ ಮಿತ್ತಂಡೇಲು, ಅಶೋಕ ಮಿತ್ತಂಡೇಲು ಪಾಲ್ಗೊಂಡಿದ್ದರು.
ಭೇಟಿ ನೀಡದ ಅಧಿಕಾರಿಗಳು
ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭ ರಸ್ತೆ ಅಭಿವೃದ್ಧಿಯಾಗಿಲ್ಲವೆಂದು ಇಲ್ಲಿಯ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ಅತೀ ಕಡಿಮೆ ಮತದಾನ ನೂಜಿಬಾಳ್ತಿಲ ಗ್ರಾಮದ ಈ ವಾರ್ಡ್‌ನಲ್ಲಿ ಆಗಿದ್ದು, ಯಾವ ಕಾರಣಕ್ಕೆ ಕಡಿಮೆ ಮತದಾನವಾಗಿದೆ ಎನ್ನುವ ಬಗ್ಗೆ ಗ್ರಾಮಸ್ಥರಲ್ಲಿ ವಿಚಾರಿಸಲೂ ಯಾವೊಬ್ಬ ಅಧಿಕಾರಿ ಅಥವಾ ಸಂಬಂಧಪಟ್ಟವರು ಇತ್ತ ಕಡೆ ಸುಳಿದಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.