ಡಿಜಿಟಲ್‌ ವ್ಯವಹಾರ ಎಚ್ಚರ ಅಗತ್ಯ


Team Udayavani, Nov 4, 2019, 5:30 AM IST

Untitled-2

ಇಂದು ಹಣಕಾಸು ವ್ಯವಹಾರವೂ ಬೆರಳು ತುದಿಯಲ್ಲೇ ನಡೆಯುತ್ತಿರುವುದು ಗಮನಾರ್ಹವಾದ ಸಂಗತಿ. ಡಿಜಿಟಲ್‌ ಮಾಧ್ಯಮಗಳ ಮೂಲಕ ಹಣಕಾಸು ವ್ಯವಹಾರವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಮಾಡುತ್ತಿರುವುದನ್ನು ನಾವು ಗಮನಿಸಬಹುದು. ಆದರೆ ಇದರಿಂದ ಹಲವು ರೀತಿಯಲ್ಲಿ ಉಪಯೋಗವಾಗಿದೆ. ಆದರೆ ಅಷ್ಟೇ ಪ್ರಮಾಣದ ಎಚ್ಚರಿಕೆಯನ್ನು ನಾವು ವಹಿಸಬೇಕಾಗುತ್ತದೆ. ಈ ಇಂಟರ್‌ನೆಟ್‌ ಯುಗದಲ್ಲಿ, ಸುರಕ್ಷತೆಯ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ನಾವು ಎಲ್ಲೆಲ್ಲ ಎಚ್ಚರಿಕೆ ವಹಿಸಬೇಕು ಗೊತ್ತಾ? ಈ ಬಗ್ಗೆ ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಇಲ್ಲಿ ನೀಡಲಾಗಿದೆ.

ವಿಳಾಸ ನೋಡಿ
ಹಣಕಾಸು ವ್ಯವಹಾರ ನಡೆಸುವ ಸಂದರ್ಭದಲ್ಲಿ ಆನ್‌ಲೈನ್‌ ತಾಣ ಅಥವಾ ಬ್ಯಾಂಕ್‌ ವೆಬ್‌ಸೈಟ್‌ ತೆರೆಯುವಾಗ ಅದರ ವಿಳಾಸವನ್ನು (ಯು.ಆರ್‌.ಎಲ್‌) ಪರೀಕ್ಷಿಸಿ. ಮೋಸಗಾರರು ಬ್ಯಾಂಕ್‌ ವೆಬ್‌ಸೈಟ್‌ನೆ°à ಹೋಲುವ ನಕಲಿ ಜಾಲತಾಣಗಳನ್ನು ಸೃಷ್ಟಿಸಿಕೊಂಡಿರುತ್ತಾರೆ. ಅದರಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ ನೀಡಿದರೆ ಅದನ್ನು ಅವರು ದುರ್ಬಳಕೆ ಮಾಡಿಕೊಳ್ಳುತ್ತಾರೆ. ವಿಳಾಸ ನೋಡಿದರೆ ಅಸಲೀಯತ್ತು ಗೊತ್ತಾಗುತ್ತದೆ.

ಸಾರ್ವಜನಿಕ ವೈಫೈ ಬಳಕೆ ಬಗ್ಗೆ ಗಮನವಿರಲಿ
ವೈಯಕ್ತಿಕ ವ್ಯವಹಾರ ನಡೆಸಲು ಸುರಕ್ಷಿತ ಸ್ವಂತ ನೆಟ್‌ವರ್ಕ್‌ ಬರುವವರೆಗೆ ಕಾಯುವುದು ಉತ್ತಮ. ಸಾರ್ವಜನಿಕ ವೈಫೈಗಳಲ್ಲಿ ಹಣಕಾಸು ವ್ಯವಹಾರಗಳನ್ನು ಮಾಡದಿರುವುದು ಹೆಚ್ಚು ಸೂಕ್ತ.

ನಿಬಂಧನೆಗಳನ್ನು ತಿಳಿದುಕೊಳ್ಳಿ
ಶಾಪಿಂಗ್‌ ಮಾಡುವಾಗ, ಗ್ರಾಹಕರು ಪಾಲಿಸಬೇಕಿರುವ ನಿಬಂಧನೆಗಳ ಪಟ್ಟಿಯನ್ನು ಸಾಮಾನ್ಯವಾಗಿ ಯಾರೂ ಓದುವುದಿಲ್ಲ. ಆದರೆ ಅದನ್ನು ಓದುವುದರಿಂದ ತಿಳಿವಳಿಕೆ ಮತ್ತು ಜಾಗೃತಿ ಹೆಚ್ಚುತ್ತದೆ. ಆಯಾ ಉತ್ಪನ್ನದ ಕುರಿತಂತೆ ಬಳಕೆದಾರರ ರಿವ್ಯೂಗಳನ್ನು ಓದಿ.

ಬೇಕಾಬಿಟ್ಟಿ ಲಿಂಕ್‌ಗಳನ್ನು ಕ್ಲಿಕ್‌ ಮಾಡಬೇಡಿ
ವಿಶೇಷ ಡೀಲ್‌ಗ‌ಳು, ದರ ಕಡಿತ ಮಾರಾಟ ಅಥವಾ ಇನ್ನಾವುದೋ ಆಕರ್ಷಕ ಜಾಹೀರಾತಿಗೆ ಮರುಳಾಗಿ ಬ್ರೌಸರ್‌ ಬದಿಯಲ್ಲಿ ಕಾಣುವ ಲಿಂಕ್‌ಗಳನ್ನು ಕ್ಲಿಕ್‌ ಮಾಡಬೇಡಿ. ಅದರಿಂದ ಕಂಪ್ಯೂಟರ್‌ ಮತ್ತು ಸ್ಮಾರ್ಟ್‌ಫೋನ್‌ಗಳಿಗೆ ಮಾಲ್‌ ವೇರ್‌ಗಳು, ವೈರಸ್‌ಗಳು ದಾಳಿ ನಡೆಸಬಹುದು. ಅವು ಸ್ಮಾರ್ಟ್‌ಫೋನಿನಲ್ಲಿನ ಸೂಕ್ಷ್ಮ ಮಾಹಿತಿಯನ್ನು ಕದ್ದು ಮೂರನೆಯವರಿಗೆ ಕೊಡಬಹುದು. ಇದರಿಂದ ಎಚ್ಚರಿಕೆ ವಹಿಸಬೇಕಾಗುತ್ತದೆ.

ಇ-ಮೇಲ್‌ ಗಾಳ
“ನಿಮಗೆ ಒಂದು ಕೋಟಿ ರೂ. ಲಾಟರಿ ಹೊಡೆದಿದೆ. ಬಹುಮಾನದ ಮೊತ್ತ ನಿಮಗೆ ತಲುಪಲು ನಿರ್ದಿಷ್ಟ ಮೊತ್ತವನ್ನು ಡೆಪಾಸಿಟ್‌ ಆಗಿ ಕೊಡಬೇಕು. ನಂತರ ಅದನ್ನು ಮರಳಿಸಲಾಗುವುದು ಈ ರೀತಿಯ ಇಮೇಲ್‌ ಕಳಿಸಿ ಮೋಸ ಮಾಡುವ ದೊಡ್ಡ ಜಾಲವೇ ಇದೆ. ಇಂಥ ಇ-ಮೇಲ್‌ಗ‌ಳಿಗೆ ಪ್ರತಿಕ್ರಿಯಿಸಲು ಹೋಗಬಾರದು. ಬದಲಿಗೆ ಸ್ಪಾಮ್‌ ಪಟ್ಟಿಗೆ ಸೇರಿಸಿ ಅನಂತರ ಡಿಲೀಟ್‌ ಮಾಡಿಬಿಡಬೇಕು.

 - ವಿಜಯಕುಮಾರ್‌ ಎಸ್‌.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.