ಭೀತಿಯೇ ಎಲ್ಲ ದುಃಖಕ್ಕೂ ಕಾರಣ: ಸ್ವಾಮಿ ವಿವೇಕಾನಂದ
Team Udayavani, Sep 3, 2018, 12:49 PM IST
ಭಾರತ ಕಂಡ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಸ್ವಾಮಿ ವಿವೇಕಾನಂದ ಕೂಡ ಒಬ್ಬರು. ತಮ್ಮ ಚಿಂತನೆಗಳ ಮೂಲಕ ಅವರು ಜಗತ್ತಿನ ಗುರುಗಳಾದವರು. ಭಾರತದ ತಣ್ತೀಜ್ಞಾನ, ಯೋಗ, ವೇದಾಂತ ಎಲ್ಲವನ್ನೂ ಪಾಶ್ಚಿಮಾತ್ಯ ದೇಶಗಳಲ್ಲಿ ಪ್ರಚಾರಪಡಿಸಿದರು. ನಿನಗೆ ಯಾರು ಸಹಾಯ ಮಾಡುತ್ತಾರೆ ಅವರನ್ನು ಮರೆಯಬೇಡ, ನಿನ್ನನ್ನು ಯಾರು ಪ್ರೀತಿಸುತ್ತಾರೆ ಅವರನ್ನು ದ್ವೇಷಿಸಬೇಡ, ಯಾರು ನಿಮ್ಮನ್ನು ನಂಬುತ್ತಾರೋ ಅವರಿಗೆ ಮೋಸ ಮಾಡಬೇಡ ಎಂಬ ಮಾತುಗಳ ಮೂಲಕ ಹೇಗೆ ಬದುಕ ಬೇಕು, ಯಾವ ಆದರ್ಶವನ್ನು ಪಾಲಿಸಬೇಕು ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ.
ಯಾವುದಕ್ಕೂ ಅಂಜದಿರು; ಅದ್ಭುತ ಕಾರ್ಯವನ್ನು ಮಾಡಲು ಶಕ್ತನಾಗುವೆ. ಭೀತಿಯೇ ಪ್ರಪಂಚದ ಎಲ್ಲ ದುಃಖಗಳಿಗೂ ಮಹತ್ಕಾರಣ. ನಮ್ಮ ದುರವಸ್ಥೆಗಳಿಗೆಲ್ಲ ಭೀತಿಯೇ ಕಾರಣ. ನಿರ್ಭೀತಿ ಕ್ಷಣ ಮಾತ್ರದಲ್ಲಿ ಸ್ವರ್ಗವನ್ನೇ ಕೊಡಬಲ್ಲದು. ಎದ್ದು ನಿಲ್ಲು, ಜಾಗೃತನಾಗು ಮತ್ತು ಗುರಿ ತಲುಪುವವರೆಗೂ ನಿಲ್ಲದಿರು ಎನ್ನುವ ಸ್ವಾಮಿ ವಿವೇಕಾನಂದರ ಮಾತುಗಳಲ್ಲಿ ಧೈರ್ಯದಿಂದ ಮುನ್ನುಗ್ಗಿದರೆ ಯಾವುದೂ ಅಸಾಧ್ಯವಲ್ಲ ಎಂಬ ಅರ್ಥವೂ ಇದೆ. ಧರ್ಮದ ರಹಸ್ಯವಿರುವುದು ಸಿದ್ಧಾಂತಗಳಲ್ಲಲ್ಲ. ಅದರ ಅನುಷ್ಠಾನದಲ್ಲಿ. ಒಳ್ಳೆಯವರಾಗಿರುವುದು; ಒಳ್ಳೆಯದನ್ನು ಮಾಡುವುದು- ಇದೇ ಧರ್ಮದ ಸರ್ವಸ್ವ ಎಂದ ವಿವೇಕಾನಂದರ ನುಡಿಗಳು ಧರ್ಮದ ಹಾದಿ ಹೇಗಿರಬೇಕು ಎಂಬುದನ್ನು ತೋರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ