ಪರಿಸರ ಸ್ನೇಹಿ ಎಲೆಕ್ಟ್ರಿಕ್‌ ಬೈಕ್‌ಗಳು


Team Udayavani, Sep 20, 2019, 5:14 AM IST

t-44

ದಿನೇ ದಿನ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆಯಾಗುತ್ತಿರುವುದು ವಾಹನ ಚಾಲಕರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ಹೀಗಾಗಿ ಪೆಟ್ರೋಲ್‌, ಡಿಸೇಲ್‌ ವಾಹನಗಳಿಗೆ ಪರ್ಯಾಯವಾಗಿ ಎಲೆಕ್ಟ್ರಿಕ್‌ ವಾಹನಗಳು ಮಾರುಕಟ್ಟೆಗೆ ಬಂದಿವೆ. ಈಗಾಗಲೇ ಪ್ರತಿಷ್ಠಿತ ಕಂಪೆನಿಗಳು ಈ ಕುರಿತ ಪ್ರಯೋಗಗಳನ್ನು ನಡೆಸಿವೆೆ. ಮಾರುಕಟ್ಟೆಗೆ ಬರಲಿರುವ ಎಲೆಕ್ಟ್ರಿಕ್‌ ಬೈಕ್‌ಗಳ ಮಾಹಿತಿ ಇಲ್ಲಿದೆ.

ಕೇಂದ್ರ ಸರಕಾರ ಎಲೆಕ್ಟ್ರಿಕ್‌ ವಾಹನಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಈಗಾಗಲೇ ಅನೇಕ ಪ್ರತಿಷ್ಠಿತ ಕಂಪೆನಿಗಳು ಎಲೆಕ್ಟ್ರಿಕ್‌ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸಿವೆ. ಅದರಲ್ಲಿಯೂ ಎಲೆಕ್ಟ್ರಿಕ್‌ ಬೈಕ್‌ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿದ್ದು, ಪೆಟ್ರೋಲ್‌ ಮತ್ತು ಡಿಸೇಲ್‌ ಬಳಕೆಯ ವಾಹನಗಳಿಗೆ ಹೋಲಿಕೆ ಮಾಡಿದರೆ ನಿರ್ವಹಣೆ ಸುಲಭ.

ಒಂದು ಬಾರಿ ಬ್ಯಾಟರಿ ಚಾರ್ಜ್‌ ಮಾಡಿದರೆ ಸಾಕು ನಿಗದಿತ ಕಿಲೋ ಮೀಟರ್‌ ಸಂಚರಿಸಬಹುದು. ಅಲ್ಲದೆ, ಪರಿಸರಕ್ಕೂ ಹಾನಿಯಿಲ್ಲ. ಜತೆಗೆ ಈ ವಾಹನಗಳ ಶಬ್ದ ಕೂಡ ಕಡಿಮೆ ಇರುತ್ತದೆ. ಮಂಗಳೂರು ಮಾರುಕಟ್ಟೆಗೆ ಇನ್ನೇನು ಕೆಲ ತಿಂಗಳಿನಲ್ಲಿ ಎಲೆಕ್ಟ್ರಿಕ್‌ ಬೈಕ್‌ಗಳು ಪ್ರವೇಶಿಸಲಿವೆ.

ಮಹಿಂದ್ರಾ ಸಂಸ್ಥೆಯು ಸದ್ಯದಲ್ಲಿಯೇ ಮೊಜೋ ಎಂಬ ಎಲೆಕ್ಟ್ರಿಕ್‌ ಬೈಕ್‌ ಬಿಡುಗಡೆ ಮಾಡಲಿದ್ದು, ಒಂದು ಬಾರಿ ಬ್ಯಾಟರಿ ಚಾರ್ಜ್‌ ಮಾಡಿದರೆ ಬರೋಬ್ಬರಿ 250 ಕಿ.ಮೀ. ಮೈಲೇಜ್‌ ನೀಡುವ ಬೈಕ್‌ ಇದಾಗಲಿದೆ.

ವಿಭಿನ್ನ ಡಿಸೈನ್‌ಹೊಂದಿರುವ ಬೈಕ್‌ ಇದಾಗಲಿದೆ. ಈಗಾಗಲೇ ಸಾಮಾನ್ಯ ಮೋಜೋ ಬೈಕ್‌ಗಳು ಮಾರುಕಟ್ಟೆಯಲ್ಲಿದ್ದು, 295 ಸಿ.ಸಿ. ಎಂಜಿನ್‌ ಸಾಮರ್ಥ್ಯವನ್ನು ಹೊಂದಿವೆ. ಸಿಕ್ಸ್‌ ಸ್ಪೀಡ್‌ ಗೇರ್‌ ಬಾಕ್ಸ್‌ನೊಂದಿಗೆ 27.2- ಬಿಎಚ್‌ಪಿ ಮತ್ತು 30-ಎನ್‌ಎಂ ಟಾರ್ಕ್‌ ಉತ್ಪಾದನಾ ಗುಣವನ್ನು ಹೊಂದಿದೆ.

ರಿಸಲಾ ಎಲೆಕ್ಟ್ರಿಕ್‌ ಮೋಟಾರ್‌ ಸಂಸ್ಥೆಯು ಭಾರತದಲ್ಲಿ ಎವೋಲೆಟ್‌ ಹೆಸರಿನ ಎಲೆಕ್ಟ್ರಿಕ್‌ ಸ್ಕೂಟರ್‌ ಬೈಕ್‌ ಬಿಡುಗಡೆಗೊಳಿಸಿದ್ದು, ಕೆಲವು ಸಮಯದಲ್ಲಿ ತನ್ನ ಶೋ ರೂಂಗೆ ಬರಲಿದೆ. ಈ ಸ್ಕೂಟರ್‌ನ ಅಂದಾಜು ಮೌಲ್ಯ 40,000 ರೂ. ಇದ್ದು, ಒಂದು ಬಾರಿ ಚಾರ್ಜ್‌ ಮಾಡಿದರೆ 60 ರಿಂದ 65 ಕಿ.ಮೀ. ಮೈಲೇಜ್‌ ನೀಡುತ್ತದೆ.

ಎಲೆಕ್ಟ್ರಿಕ್‌ ವಾಹನಗಳ ಬಗ್ಗೆ ಇತೀ¤ಚಿನ ದಿನಗಳಲ್ಲಿ ಜಾಗೃತಿ ಮೂಡುತ್ತಿದೆ. ಅದೇ ಕಾರಣಕ್ಕೆ ಮಾರುಕಟ್ಟೆಗೆ ಲಗ್ಗೆ ಇಡಲು ಆರಂಭಿಸಿದೆ. ಪರಿಸರ ಸ್ನೇಹಿ ವಾಹನ ಇದಾಗಿದೆ. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಲೆಕ್ಟ್ರಿಕ್‌ ವಾಹನಗಳನ್ನು ಬಳಕೆ ಮಾಡುವ ಸಲುವಾಗಿ ಸರಕಾರವು ಪ್ರತ್ಯೇಕವಾದ ನೀತಿಯನ್ನು ರೂಪಿಸಬೇಕಿದೆ. ವಿದೇಶಗಳಲ್ಲಿ ವಿದ್ಯುತ್‌ಚಾಲಿತ ವಾಹನಗಳನ್ನು ಹೆಚ್ಚಾಗಿ ಉಪಯೋಗ ಮಾಡಲಾಗುತ್ತಿದೆ. ಆದರೆ ಭಾರತದಲ್ಲಿ ಇದರ ಬಳಕೆ ಕಡಿಮೆ. ಪರಿಸರ ಸ್ನೇಹಿಯಾಗಿಸುವ ಉದ್ದೇಶದಿಂದ ರಾಜ್ಯದಲ್ಲಿಯೂ ಎಲೆಕ್ಟ್ರಿಕ್‌ ವಾಹನಗಳು ಬಳಕೆ ಮಾಡಲು ಮತ್ತಷ್ಟು ಪ್ರೋತ್ಸಾಹ ನೀಡಬೇಕಿದೆ.

ಆರ್‌ವಿ
ರಿವೋಲ್ಟ್ ಮೋಟಾರ್ಸ್‌ ಆರ್‌ವಿ ಎಲೆಕ್ಟ್ರಿಕ್‌ ಬೈಕ್‌ ಅನ್ನು ದೇಶೀಯ ಮಾರುಕಟ್ಟೆಗೆ ಇತ್ತೀಚೆಗೆ ಪರಿಚಯಿಸಿತ್ತು. ಸದ್ಯ ಈ ಬೈಕ್‌ ಬೆಲೆಯನ್ನು ಅನಾವರಣಗೊಳಿಸಲಿಲ್ಲ. ಬೈಕಿನ ಮುಂಭಾಗದಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್‌ಗ್ಳ ಜೊತೆಗೆ ಎಲ್‌ಇಡಿ ಡಿಆರ್‌ಎಲ್‌ಗ‌ಳನ್ನು ಅಳವಡಿಸಲಾಗಿದೆ. ಬೈಕ್‌ನ ಮುಂಭಾಗ ಅಪ್‌ಸೆçಡ್‌ ಡೌನ್‌ ಫೋರ್ಕ್‌ ಗಮನಸೆಳೆಯುತ್ತದೆ. ಇನ್ನು, ಈ ಬೈಕ್‌ ಸಂಪೂರ್ಣ ಎಲೆಕ್ಟ್ರಿಕ್‌ ಆಗಿದ್ದು, ಕೀ ಲೆಸ್‌ ಆಗಿದೆ. ಕೀ ಹಾಕುವ ಜಾಗದಲ್ಲಿ ಪವರ್‌ ಬಟನ್‌ ಅನ್ನು ನೀಡಲಾಗಿದ್ದು, ಇದನ್ನು ರಿವೋಲ್ಟ್ನ ಸ್ಮಾರ್ಟ್‌ ಫೋನ್‌ ಆ್ಯಪ್‌ ನಿಯಂತ್ರಿಸುತ್ತದೆ.

ಹಾರ್ಲೆ ಡೇವಿಡ್ಸನ್‌
ಹಾರ್ಲೆ ಡೇವಿಡ್ಸನ್‌ ಬೈಕ್‌ ದುಬಾರಿ ಮೌಲ್ಯವನ್ನು ಹೊಂದಿದ ಎಲೆಕ್ಟ್ರಿಕ್‌ ಬೈಕ್‌ ಅನ್ನು ಅನಾವರಣಗೊಳಿಸಿದೆ. 4.3 ಟಚ್‌ ಸ್ಕ್ರೀನ್‌ ಹೊಂದಿದ್ದು, 103.5 ಬಿಎಚ್‌ಪಿ ಪವರ್‌ ಹಾಗೂ 116 ಎನ್‌ಎಂ ಪೀಕ್‌ ಟಾರ್ಕ್‌ ಉತ್ಪಾದಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಒಂದು ಬಾರಿ ಚಾರ್ಜ್‌ ಮಾಡಿದರೆ 225 ಕಿ.ಮೀ. ಮೈಲೇಜ್‌ ರೇಂಜ್‌ ಇದ್ದು, ಸಾಮಾನ್ಯ ಚಾರ್ಜರ್‌ ಮೂಲಕ ಚಾರ್ಜ್‌ ಮಾಡುವುದಾದರೆ 12 ಗಂಟೆಗಳ ಸಮಯ ತೆಗೆದುಕೊಳ್ಳಲಿದೆ. ಡಿಸಿ ಫಾಸ್ಟ್‌ ಚಾರ್ಜಿಂಗ್‌ನಲ್ಲಿ 60 ನಿಮಿಷಗಳಲ್ಲಿ ಚಾರ್ಜ್‌ ಮಾಡಬಹುದಾಗಿದೆ.

ಹೀರೋ
ಹೀರೋ ಸಂಸ್ಥೆಯು ಹೊಸ ಎರಡು ಎಲೆಕ್ಟ್ರಿಕ್‌ ಸ್ಕೂಟರ್‌ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಆಪ್ಟಿಮಾ ಇಆರ್‌ ಮತ್ತು ಎನ್‌ವೈಎಕ್ಸ್‌ ಇಆರ್‌ ಸ್ಕೂಟರ್‌ ಅನ್ನು ಮಾರುಕಟ್ಟೆಗೆ ಪರಿಚಯ ಮಾಡಿದೆ. ಆಪ್ಟಿಮಾ ಇಆರ್‌ ಸ್ಕೂಟರ್‌ ಬೆಲೆ 68,721 ರೂ. ಆಗಿದ್ದು, ಎನ್‌ವೈಎಕ್ಸ್‌ ಇಆರ್‌ ಸ್ಕೂಟರ್‌ ಬೆಲೆ 69,754 ರೂ. ಆಗಿದೆ. ಒಂದು ಬಾರಿ ಚಾರ್ಜ್‌ ಮಾಡಿದರೆ 100 ಕಿ.ಮೀ. ಮೈಲೇಜ್‌ ನೀಡುವ ಸಾಮರ್ಥ್ಯವನ್ನು ಹೊಂದಿದೆ.

-   ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.