ಬೇಸಗೆಯೊಂದಿಗೆ ಕರಟಿತು ಕೃಷಿಕರ ಬದುಕು!


Team Udayavani, Apr 5, 2019, 5:19 PM IST

sudina-
ಸವಣೂರು : ಕಳೆದ ಕೆಲ ದಿನಗ ಳಿಂದ ಬೆಂಕಿಯಂತೆ ಸುಡುತ್ತಿರುವ ಬಿಸಿಲಿನ ತಾಪ ತಡೆಯಲಾಗದೆ ಅಡಿಕೆ ಮರಗಳು ಕರಟಿ ಹೋಗಲಾರಂಭಿಸಿವೆ. ಇದರೊಂದಿಗೆ ಕೃಷಿಕರ ಬದುಕಿನ ಧಾರೆಯೂ ಚಿಂತಾಜನಕ ಸ್ಥಿತಿಯಲ್ಲಿದೆ! ಮಳೆಗಾಲದಲ್ಲಿ ಎಡಬಿಡದೆ ಸುರಿದ ವಿಪರೀತ ಮಳೆಯಿಂದಾಗಿ ಅಡಿಕೆ ಫಸಲಿಗೆ ಕೊಳೆರೋಗ ಬಾಧಿಸಿ ಕಂಗೆಟ್ಟಿದ್ದ ಕೃಷಿಕರ ಪಾಲಿಗೆ ಈ ಬಿಸಿಲ ಧಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಇದೇ ಸ್ಥಿತಿ ಮೇ ತಿಂಗಳ ಕೊನೆಯ ತನಕ ಮುಂದುವರಿದಲ್ಲಿ ಅಡಿಕೆ ಮರಗಳು ನಾಶವಾಗಿ ಮುಂದಿನ ಫಸಲು ನಷ್ಟವಾಗುತ್ತದೆ. 2 ದಿನದ ಹಿಂದೆ ಮಳೆ ಸುರಿದಿದ್ದರೂ, ಬಿಸಿಲಿನ ತೀವ್ರತೆ ಮತ್ತಷ್ಟು ಹೆಚ್ಚಿದೆ.
ತಾಲೂಕಿನ ಹಲವಾರು ಕಡೆಗಳಲ್ಲಿ ಅಡಿಕೆ ತೋಟಗಳು ಒಣಗಿ ಹೋಗಿವೆ. ಗ್ರಾಮಾಂತರ ಪ್ರದೇಶದ ಕೃಷಿಕರು ಅಡಿಕೆ ಕೃಷಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶತಾಯಗತಾಯ ಪ್ರಯತ್ನದಲ್ಲಿದ್ದಾರೆ. ಅಡಿಕೆ ಮರಗಳು ಕರಟಿ ಹೋಗುತ್ತಿರುವುದನ್ನು ತಪ್ಪಿಸಲು ಸಾಧ್ಯವಾಗದೆ ಅಸಹಾಯಕ ಸ್ಥಿತಿ ನಿರ್ಮಾಣವಾಗಿದೆ. ಕೆಲವೊಂದು ಕಡೆಗಳಲ್ಲಿನ ಕೊಳವೆಬಾವಿಗಳಲ್ಲಿಯೂ ನೀರು ಬರಿದಾಗಿದೆ. ಸರಕಾರ ಹೊಸ ಕೊಳವೆ ಬಾವಿ ಕೊರೆಯಲು ಅವಕಾಶ ಕೂಡ ನೀಡುತ್ತಿಲ್ಲ. ನೀರಿಲ್ಲದ ಪ್ರದೇಶಗಳಲ್ಲಿನ ಹೊಸ ಕೊಳವೆಬಾವಿ ಕೊರೆದು ಕೃಷಿ ಉಳಿಸಿಕೊಳ್ಳುವಂತೆಯೂ ಇಲ್ಲ. ಕೆಲವೊಂದು ಕಡೆಗಳಲ್ಲಿ ಕೊಳವೆ ಬಾವಿಗಳಲ್ಲಿ ನೀರು ಇದ್ದರೂ, ವಿದ್ಯುತ್‌ ಸಮಸ್ಯೆ ಕೃಷಿ ಉಳಿಸಿಕೊಳ್ಳುವ ರೈತರ ಪ್ರಯತ್ನಕ್ಕೆ ಅಡ್ಡಿಯಾಗಿದೆ.
ಹಿಂಗಾರಗಳು ಕರಟಿವೆ ಜಿಲ್ಲೆಯ ಜೀವನಾಡಿ ಬೆಳೆಯಾಗಿರುವ ಅಡಿಕೆಗೆ ಜೀವಜಲದ ಬಾಧೆ ಒಂದು ಕಡೆಯಿಂದಾದರೆ, ಇನ್ನೊಂದು ಕಡೆಯಲ್ಲಿ  ಬಿಸಿಲಿನ ಧಗೆಯೂ ಅಡಿಕೆ ಮರವನ್ನು ಸುಡುತ್ತಿದೆ. ಜಿಲ್ಲೆಯಲ್ಲಿ ಎಲ್ಲೆಡೆ ಜಲಮಟ್ಟ ಕುಸಿದಿದ್ದು, ಕೃಷಿಕರ ನೀರಾಶ್ರಯದ ಕೆರೆ, ಬಾವಿಗಳು ಬತ್ತಿ ಹೋಗಿವೆ.
ತೀವ್ರತೆ ಹಿಂದಿಗಿಂತ ಹೆಚ್ಚು 2 ತಿಂಗಳಿನಿಂದ ಬಿಸಿಲ
ತಾಪ ಸಹಿಸಿಕೊಳ್ಳಲಾಗದೆ ಅಡಿಕೆ ಮರಗಳು ಸಾಯಲಾರಂಭಿಸಿವೆ. ಕಳೆದ ಮಳೆಗಾಲದಲ್ಲಿ ಕೊಳೆ ರೋಗದಿಂದ ಅಡಿಕೆ ಫಸಲು ಸಂಪೂರ್ಣವಾಗಿ ನಾಶವಾಗಿ ಹೋಗಿವೆ. ಈಗ ಬಿಸಿಲಿನ ತಾಪದಿಂದಾಗಿ ಕೃಷಿ ಸರ್ವನಾಶದತ್ತ ಸಾಗಿದೆ. ಕೃಷಿ ಉಳಿಸುವುದಕ್ಕಾಗಿ ಊರವರೆಲ್ಲ ಸೇರಿ ಹೊಳೆ ಯಲ್ಲಿದ್ದ ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕಲಾಗಿದ್ದರೂ, ಈ ಬಾರಿ ಬಹು ಬೇಗನೆ ನೀರು ಖಾಲಿಯಾಗಿದೆ. ಬಿಸಿಲಿನ ತೀವ್ರತೆ ಈ ಹಿಂದಿಗಿಂತಲೂ ಹೆಚ್ಚಾಗಿದೆ.
– ಬಿ.ಕೆ. ರಮೇಶ್‌ ಪಾಲ್ತಾಡಿ ಹಿರಿಯ ಕೃಷಿಕರು
ಉಪಬೆಳೆಗಳಿಗೂ ಕುತ್ತು ಕಳೆದ ಮಳೆಗಾಲದಲ್ಲಿ ಸಮೀಕ್ಷೆಯ ಪ್ರಕಾರ ಶೇ. 60ಕ್ಕೂ ಅಧಿಕ ಅಡಿಕೆ ಫಸಲು ಕೊಳೆರೋಗದಿಂದ ನಷ್ಟವಾಗಿತ್ತು. ಇದೀಗ ಮತ್ತೆ ಕಾಡಲಾರಂಭಿಸಿರುವ ಬಿಸಿಲ ಧಗೆಯಿಂದ ಅಡಿಕೆ ಮರಗಳೇ ಸಾಯುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಅಡಿಕೆಯ ಜತೆಗೆ ಉಪ ಬೆಳಗಳಾದ ಬಾಳೆ, ಕರಿಮೆಣಸು, ಕೊಕ್ಕೋ ಕೃಷಿಯೂ ನಾಶವಾಗುತ್ತಿದೆ. ಕೃಷಿಕರಿಗೆ ಇದು ಭಾರಿ ಹೊಡೆತ ಕೊಟ್ಟಿದೆ.
ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.