ಗೇರು ಬೀಜ ಆರಂಭಿಕ ಫಸಲು ಕಡಿಮೆ ಬೆಳೆಗಾರರಲ್ಲಿದೆ ನಿರೀಕ್ಷೆ


Team Udayavani, Feb 2, 2020, 5:11 AM IST

Gonku-1

ಈ ವರ್ಷವೂ ಗೇರು ಮರಗಳು ಹೂ ಬಿಡಲು ತಡವಾಗಿದೆ. ಜತೆಗೆ ಆರಂಭಿಕ ಫಸಲೂ ಕಡಿಮೆಯಾಗಿದೆ. ಗೇರು ಬೀಜ ಬೆಳೆಯುವ ಪ್ರಮಾಣ ಕಡಿಮೆ ಇರುವುದು ಮತ್ತು ಬೇಡಿಕೆ ಇರುವುದರಿಂದ ಮಾರುಕಟ್ಟೆಯಲ್ಲಿ ಸ್ಥಿರ ಧಾರಣೆಯ ಸಾಧ್ಯತೆಯೊಂದಿಗೆ ಹವಾಮಾನ ಗುಣಾತ್ಮಕವಾಗಿ ಪರಿಣಮಿಸಿದರೆ ಗೇರು ಬೆಳೆಗಾರರಿಗೆ ಲಾಭವಾಗುವ ನಿರೀಕ್ಷೆ ಇದೆ.
ಸಾಮಾನ್ಯವಾಗಿ ಡಿಸೆಂಬರ್‌ ತಿಂಗಳ ಅಂತ್ಯದಲ್ಲಿ ಹೂ ಬಿಟ್ಟು ಜನವರಿ ತಿಂಗಳಲ್ಲಿ ಫಸಲು ತುಂಬಿಕೊಳ್ಳುವ ಗೇರು ಹಣ್ಣಿನ ಮರಗಳು ಕಳೆದ ವರ್ಷದಂತೆ ಈ ಬಾರಿಯೂ ತಡವಾಗಿ ಹೂಬಿಟ್ಟು ಈಗ ನಿಧಾನವಾಗಿ ಫಸಲು ತುಂಬಿಕೊಳ್ಳುತ್ತಿವೆ. ಈ ಕಾರಣದಿಂದ ಗೇರು ಕೃಷಿಕರಲ್ಲಿ ಒಂದಷ್ಟು ಆತಂಕವಿದ್ದರೂ ಮುಂದೆ ಫಸಲು ಉಳಿದುಕೊಳ್ಳುವ ನಿರೀಕ್ಷೆಯೂ ಇದೆ.

ಸಾಮಾನ್ಯವಾಗಿ ಗೇರು ಕೃಷಿ ಚಳಿಗಾಲ ಹಾಗೂ ಮಳೆಗಾಲದ ಮಧ್ಯೆ ಫಲ ನೀಡುತ್ತದೆ. ಮೇ ತಿಂಗಳ ಅಂತ್ಯದಲ್ಲಿ ಹತ್ತನಾವಧಿಯ ಸಮಯಕ್ಕೆ ಗೇರು ಫಸಲು ಮುಗಿಯುವುದು ಕ್ರಮ. ಗೇರು ಕೃಷಿಯ ಲಾಭ -ನಷ್ಟ ಮಳೆಯನ್ನು ಅವಲಂಭಿಸಿರುವುದರಿಂದ ಮಾರ್ಚ್‌, ಎಪ್ರಿಲ್‌ ತಿಂಗಳಲ್ಲಿ ಮಳೆ ಬಿರುಸು ಪಡೆದುಕೊಳ್ಳಲಿದ್ದರೆ, ನಿರೀಕ್ಷಿತ ಗೇರು ಬೀಜ ಫಸಲು ಕೈಗೆ ಸಿಗುವ ಹಾಗೂ ಉತ್ತಮ ದರ ಲಭಿಸುವ ನಿರೀಕ್ಷೆಯಲ್ಲಿ ಗೇರು ಕೃಷಿಕರಿದ್ದಾರೆ.

ವಾತಾವರಣದ ವ್ಯತ್ಯಾಸ
ಕಳೆದ ವರ್ಷ ಹವಾಮಾನದಲ್ಲಿ ಉಂಟಾದ ವೈಪರೀತ್ಯ, ಡಿಸೆಂಬರ್‌ ತಿಂಗಳವರೆಗೂ ಸುರಿದ ಮಳೆಯಿಂದ ಗೇರು ಮರಗಳು ಹೂ ಬಿಡಲು ತಡವಾಗಿತ್ತು. ಈ ವರ್ಷವೂ ಅದೇ ಸ್ಥಿತಿ ನಿರ್ಮಾಣವಾಗಿದೆ. ಅನಂತರದಲ್ಲಿ ವಾತಾವರಣ ಇನ್ನೂ ಮುಂದುವರಿದಿರುವುದರಿಂದ ಗೇರು ಮರಗಳು ಹೂ ಬಿಡಲು ತಡವಾಗಿದೆ. ಆರಂಭದಲ್ಲಿ ಚಳಿ, ಅನಂತರದಲ್ಲಿ ಸೆಕೆಯ ವಾತಾವರಣ ಗೇರು ಫಸಲಿಗೆ ಪೂರಕ. ಫೆಬ್ರವರಿ ತಿಂಗಳಲ್ಲಿ ವಾತಾವರಣ ಬಿಸಿ ಏರಿದಂತೆ ಗೇರು ಫಸಲು ಕುದುರಿಕೊಳ್ಳುತ್ತದೆ ಎನ್ನುವುದು ಗೇರು ಕೃಷಿ ತಜ್ಞರ ಅಭಿಪ್ರಾಯ.

ಚಹಾ ಸೊಳ್ಳೆಗೆ ಔಷಧಿ
ಗೇರು ಕೃಷಿಗೆ ಚಹಾ ಸೊಳ್ಳೆಯ ಕಾಟ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಔಷಧಿಯಾಗಿ ಬಳಕೆಯಾಗುತ್ತಿದ್ದ ಮೊನೋಪೊಟಸ್‌ಗಿಂತಲೂ ಕರಾಟೆ ಎಂಬ ಔಷಧ ಬಳಕೆಗೆ ಗೇರು ಕೃಷಿಕರು ಇಂದು ಆಸಕ್ತಿ ತೋರುತ್ತಿದ್ದಾರೆ.

100 ಲೀ. ನೀರಿಗೆ 125 ಮಿಲಿ ಕರಾಟೆ ಔಷಧದ ಬಳಕೆ ಹಾಗೂ ಇದರ ಜತೆಗೆ 15; 15; 15 ಎನ್ನುವ ಔಷಧಿಯನ್ನು 100 ಲೀ. ಗೆ ಅರ್ಧ ಕೆ.ಜಿ.ಯಂತೆ ಬಳಕೆ ಮಾಡಿದರೆ ಚಹಾ ಸೊಳ್ಳೆಯ ಕಾಟದ ವಿರುದ್ಧ ಪರಿಣಾಮಗಾರಿ ಎನ್ನುವುದು ಬೆಳೆಗಾರರ ಅಭಿಪ್ರಾಯ.

ಏರಿಕೆಯ ಬೆಲೆ
2015ನೇ ಸಾಲಿನಲ್ಲಿ ಕೆ.ಜಿ.ಗೆ 80ರಿಂದ 90 ರೂ.ಗೆ ಖರೀದಿಯಾಗಿದ್ದ ಗೇರುಬೀಜ 2016ನೇ ಸಾಲಿನಲ್ಲಿ ಗರಿಷ್ಠ 120-130 ರೂ., 2017ರಿಂದ 2019ರ ತನಕದ ಸಾಲಿನಲ್ಲಿ ಸಾಲಿನಲ್ಲಿ 130-150 ರೂ. ತನಕ ಮಾರುಕಟ್ಟೆಯಲ್ಲಿ ಖರೀದಿಯಾಗಿದೆ ಮತ್ತು ಧಾರಣೆಯಲ್ಲಿ ಸ್ಥಿರತೆಯನ್ನೂ ಉಳಿಸಿಕೊಂಡಿತ್ತು. ಕಳೆದ ಕೆಲವು ವರ್ಷಗಳಿಂದ 50 ರೂ. ಗಡಿ ದಾಟಲು ಆರಂಭವಾಗಿದ್ದ ಗೇರು ಬೀಜದ ದರ 150 ರೂ. ಮೀರಿ ದಾಖಲೆಯೊಂದಿಗೆ ರಬ್ಬರ್‌, ಅಡಿಕೆಯ ಮಧ್ಯೆ ಅಳಿದುಳಿದ ಗೇರು ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. ಬೇಡಿಕೆ ಏರುತ್ತಿರುವುದು ಮತ್ತು ಇಳುವರಿಯಲ್ಲಿ ಇಳಿಕೆಯಾಗುತ್ತಿರುವುದರಿಂದ ಈ ಬಾರಿಯೂ 150 ರೂ. ತನಕ ಧಾರಣೆ ಲಭಿಸುವ ನಿರೀಕ್ಷೆ ಇದೆ.

ಮಳೆಗೆ ಫಲ
ಗೇರು ಮರ ಹೂಬಿಟ್ಟ ಬಳಿಕ ಅಂದರೆ ಮಾರ್ಚ್‌ ಹಾಗೂ ಎಪ್ರಿಲ್‌ ತಿಂಗಳಲ್ಲಿ ಒಂದೆರಡು ಸಾಮಾನ್ಯ ಮಳೆಯಾದರೆ ಗೇರು ಬೀಜ ಫಸಲು ಹೆಚ್ಚಾಗುತ್ತದೆ. ಆದರೆ ನಿರಂತರ ಮಳೆ ಸುರಿದರೆ ಅಥವಾ ಮಂಜಿನ ವಾತಾವರಣ ಹೆಚ್ಚಿದ್ದರೆ ಮಾತ್ರ ಫಸಲು ಕರಟುವ ಜತೆಗೆ ಒದ್ದೆಯಾದ ಗೇರು ಬೀಜಕ್ಕೆ ಬೆಲೆಯೂ ಕಡಿಮೆಯಾಗುತ್ತದೆ.

-ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.