ಕ್ರಿಸ್ಮಸ್‌ಗೆ ತಯಾರಿ ಖರೀದಿ ಜೋರು


Team Udayavani, Dec 20, 2019, 5:39 AM IST

lead

ಭಾರತ ಹಬ್ಬಗಳ ದೇಶ. ಪ್ರತಿ ಹಬ್ಬಗಳೂ ಒಗ್ಗಟ್ಟಿನ ಮೂಲಮಂತ್ರವನ್ನು ಸಾರುವುದರೊಂದಿಗೆ ಸಂಭ್ರಮದ ಸಮಯವಾಗಿ ಜನರಿಗೆ ನೆಮ್ಮದಿ ನೀಡುವ ಸಂಕೇತವಾಗಿಯೂ ಇರುತ್ತವೆ. ಹಿಂದೂಗಳಿಗೆ ದೀಪಾವಳಿ, ಮುಸಲ್ಮಾನರಿಗೆ ರಂಜಾನ್‌, ಕ್ರೈಸ್ತರಿಗೆ ಕ್ರಿಸ್ಮಸ್‌ ಹಬ್ಬವೆಂದರೆ ಸಡಗರವೂ ಜೋರಾಗಿರುತ್ತದೆ. ಶಾಂತಿ, ಸೌಹಾರ್ದತೆ, ಒಗ್ಗಟ್ಟು ಹಾಗೂ ಸಹಬಾಳ್ವೆಯ ಸಂಕೇತವಾಗಿ ಭಾರತೀಯ ಹಬ್ಬಗಳು ಜನರ ಮನಸ್ಸಿನಲ್ಲಿ ಜನಜನಿತ. ಈ ಸಂದರ್ಭದಲ್ಲಿ ಖರೀದಿ ಭರಾಟೆಯೂ ಹೆಚ್ಚಿರುತ್ತದೆ.

ವರ್ಷಾಂತ್ಯದಲ್ಲಿ ಸಂಭ್ರಮ ನೀಡುವ ಹಬ್ಬವೆಂದರೆ ಕ್ರಿಸ್ಮಸ್‌. ವಾರಗಳ ಕಾಲ ಆಚರಿಸುವ ಕ್ರಿಸ್ಮಸ್‌ ಆಚರಣೆ, ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸುವಿಕೆ, ಪರಸ್ಪರ ಶುಭಾಶಯ ವಿನಿಮಯ, ಕ್ರಿಸ್ಮಸ್‌ ಕೇಕ್‌, ಹಬ್ಬದ ತಿಂಡಿಗಳನ್ನು ಪರಸ್ಪರ ಹಂಚಿಕೊಂಡು ಸಂಭ್ರಮಿಸುವುದು ವಾಡಿಕೆ. ಇದರೊಂದಿಗೆ ಹಬ್ಬಕ್ಕಾಗಿಯೇ ಒಂದಷ್ಟು ಹೊಸ ಖರೀದಿಗಳೂ ಮನಸ್ಸಿಗೆ ಮುದ ನೀಡುತ್ತವೆ.

ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್‌ ಸಡಗರ ಶುರುವಾಗಲಿದೆ. ಹಬ್ಬದ ಸಂಭ್ರಮಕ್ಕಾಗಿ ಮನೆಮಂದಿ ತಯಾರಾಗುತ್ತಿದ್ದರೆ, ಇತ್ತ ಮಾರುಕಟ್ಟೆಯಲ್ಲಿ ಕ್ರಿಸ್ಮಸ್‌ಗಾಗಿಯೇ ಹೊಸತು ಸಾಮಗ್ರಿಗಳ ಆಗಮನವಾಗಿದೆ. ಖರೀದಿ ಭರಾಟೆ ಜೋರಾಗಿದ್ದು, ಮಕ್ಕಳು, ಹಿರಿಯರೆನ್ನದೆ ಎಲ್ಲ ವಯಸ್ಸಿನವರೂ ಹಬ್ಬದ ಖುಷಿಯಲ್ಲಿದ್ದಾರೆ. ಹಬ್ಬಗಳು ಬಂತೆಂದರೆ ಮಾರುಕಟ್ಟೆಗಳಲ್ಲಿ ವ್ಯಾಪಾರದ ಸುಗ್ಗಿ. ಈ ಕ್ರಿಸ್ಮಸ್‌ಗೂ ಹೊಸ ಹೊಸ ವೈವಿಧ್ಯ ಐಟಂಗಳು ಮಾರುಕಟ್ಟೆಯಲ್ಲಿ ಜನರನ್ನು ಕೈ ಬೀಸಿ ಕರೆಯುತ್ತಿವೆ. ಕ್ರಿಸ್ಮಸ್‌ ಟ್ರೀಗಳು ಮಾರುಕಟ್ಟೆ ಪ್ರವೇಶಿಸಿವೆ. ಯಾವುದೇ ಫ್ಯಾನ್ಸಿ ಅಂಗಡಿಗಳಲ್ಲಿ ನೋಡಿದರೂ, ಹಚ್ಚ ಹಸುರಿನಿಂದ ಕಂಗೊಳಿಸುತ್ತಿರುವ ಕ್ರಿಸ್ಮಸ್‌ ಟ್ರೀಯನ್ನು ಕಾಣಬಹುದು. ರಾತ್ರಿ ವಿಭಿನ್ನ ದೀಪಗಳೊಂದಿಗೆ ಕಂಗೊಳಿಸುವ ಕ್ರಿಸ್ಮಸ್‌ ಟ್ರೀಗಳು ಸುಮಾರು 3 ಸಾವಿರ ರೂ.ಗಳವರೆಗೂ ಬೆಲೆ ಬಾಳುತ್ತವೆ. ಇದರ ಖರೀದಿಗಾಗಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗಳತ್ತ ಆಗಮಿಸುತ್ತಿದ್ದಾರೆ. ಕ್ರಿಸ್ಮಸ್‌ ಟ್ರೀಗೆ ಅಳವಡಿಸಲು ಮತ್ತು ಮನೆಯನ್ನು ಸಿಂಗರಿಸಲು ವೈವಿಧ್ಯ ಬಣ್ಣಗಳ ದೀಪಗಳೂ ಜನರನ್ನು ಆಕರ್ಷಿಸುತ್ತಿವೆ.

ಗೋದಲಿ ಪರಿಕರ
ಕ್ರಿಸ್ಮಸ್‌ನ ಇನ್ನೊಂದು ವಿಶೇಷತೆಯೆಂದರೆ ಗೋದಲಿ ರಚನೆ. ಇದಕ್ಕಾಗಿ ಗೋದಲಿ ಪರಿಕರಗಳನ್ನೊಳಗೊಂಡ ಸೆಟ್‌ಗಳು ಮಾರುಕಟ್ಟೆಯಲ್ಲಿ ಮಾರಾಟ ಕಾಣುತ್ತಿವೆ. ಯೇಸು ದೇವರು, ತಾಯಿ ಮೇರಿಮಾತೆ, ತಂದೆ ಜೋಸೆಫ್‌ ವಿಗ್ರಹಗಳು ಹಾಗೂ ವಿವಿಧ ಜಾನುವಾರುಗಳಿರುವ ಗೋದಲಿ ಪರಿಕರಗಳ ಸೆಟ್‌ನ್ನು ಜನ ಹೆಚ್ಚು ಖರೀದಿಸುತ್ತಿದ್ದಾರೆ. ಇದರೊಂದಿಗೆ ಮನೆ, ಮನೆ ಪರಿಸರದಲ್ಲಿರುವ ಮರಗಳು, ಗೋದಲಿ ರಚಿಸಿದ ಜಾಗ, ಚರ್ಚ್‌ ಮುಂತಾದೆಡೆಗಳಲ್ಲಿ ಸಿಂಗರಿಸಲು ವೈವಿಧ್ಯ ಗಾತ್ರದ ನಕ್ಷತ್ರಗಳು ಮಾರುಕಟ್ಟೆಗೆ ಬಂದಿದ್ದು, ಜನರ ಆಕರ್ಷಣೆಯ ಕೇಂದ್ರ ಬಿಂದು. ಗೋದಲಿ, ನಕ್ಷತ್ರ ಹೆಚ್ಚಿನ ಮಾರಾಟ ಕಾಣುತ್ತಿದೆ ಎನ್ನುತ್ತಾರೆ ಹಂಪನಕಟ್ಟೆ ಫ್ಯಾನ್ಸಿ ಅಂಗಡಿಯೊಂದರ ಮಾಲಕ ಗುರುರಾಜ್‌.

ಹೊಸ ಬಟ್ಟೆ ರಂಗು
ಹಬ್ಬ ಎಂದ ಮೇಲೆ ಹೊಸ ಬಟ್ಟೆ ತೊಡದೇ ಇದ್ದರೆ ಆ ಹಬ್ಬ ಪರಿಪೂರ್ಣವಾಗು ವುದೇ ಇಲ್ಲ. ಯಾವುದೇ ಹಬ್ಬ ಇರಲಿ, ಭಾರತೀಯರು ಹೊಸ ಬಟ್ಟೆ ತೊಟ್ಟು ಖುಷಿ ಪಡುವುದು ತಲೆತಲಾಂತರದಿಂದ ನಡೆದುಕೊಂಡು ಬಂದ ವಾಡಿಕೆ. ಅದರಂತೆ ಈ ಕ್ರಿಸ್ಮಸ್‌ಗೂ ಹೊಸ ಬಟ್ಟೆ ಖರೀದಿಯ ಬಿರುಸು ಜೋರಾಗಿದೆ. ಹೊಸ ಗೌನ್‌, ಹೊಸ ಸೀರೆ ಖರೀದಿಯಲ್ಲಿ ಹೆಂಗಳೆಯರು ತೊಡಗಿದ್ದರೆ, ಹೊಸ ಕುರ್ತಾ, ಶರ್ಟ್‌ ಖರೀದಿಯ ಖುಷಿಯಲ್ಲಿ ಪುರುಷರಿದ್ದಾರೆ. ಮಕ್ಕಳಿಗೂ ವಿವಿಧ ನಮೂನೆಯ, ವಿವಿಧ ಶೈಲಿಯ ಬಟ್ಟೆ ಬರೆಗಳು ಬಟ್ಟೆ ಅಂಗಡಿಗಳಲ್ಲಿ ಕಾಯುತ್ತಿವೆ.

ಹೊಸ ಬಟ್ಟೆ ಖರೀದಿ
ಕ್ರಿಸ್ಮಸ್‌ ಹಬ್ಬಕ್ಕಾಗಿ ಕ್ರಿಸ್ಮಸ್‌ ಟ್ರೀ, ನಕ್ಷತ್ರಗಳ ಖರೀದಿ ಸಾಮಾನ್ಯವಾಗಿ ಇರುತ್ತದೆ. ಇದರೊಂದಿಗೆ ಮನೆಮಂದಿಯೆಲ್ಲ ಹೊಸ ಬಟ್ಟೆ ಹಾಕಿ ಖುಷಿ ಪಡುವುದು ಪ್ರತಿ ವರ್ಷದ ಸಂಭ್ರಮಗಳಲ್ಲೊಂದು. ಹಾಗಾಗಿ ಈ ಹಬ್ಬಕ್ಕಾಗಿ ನಾವೂ ಹೊಸ ಬಟ್ಟೆ ಖರೀದಿಸುತ್ತಿದ್ದೇವೆ.
– ಜೇಸನ್‌ ಗ್ರಾಹಕ

-ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.