ನಮ್ಮಲ್ಲೇ ಇದೆ ಸಂತೋಷದ ಕೀಲಿಕೈ


Team Udayavani, May 13, 2019, 6:00 AM IST

A1

ನಾವು ನಮ್ಮವರು ಎನ್ನುವ ಲೋಕವಿದೆಯಲ್ಲ ಅದೊಂದು ಕಂಪರ್ಟ್‌ ಝೋನ್‌ ಇದ್ದ ಹಾಗೆ. ನಮ್ಮ ಖುಷಿ, ಸಂತೋಷಗಳೆಲ್ಲ್ಲ ಈ ವಲಯದಲ್ಲೇ ಹಂಚಿ ಹೋಗಿರುತ್ತದೆ. ಎಲ್ಲಿಯೂ ಹೇಳದ ಮನದ ತುಮುಲಗಳನ್ನೆಲ್ಲ ತೆರೆದಿಡಲು ಈ ವಲಯವೇ ಸೂಕ್ತ ವೇದಿಕೆಯಾಗಿರುತ್ತದೆ.

ಮನದಾಳದ ದುಃಖವನ್ನು ಅಪರಿಚಿತ ವ್ಯಕ್ತಿ ಮತ್ತು ಆತ್ಮೀಯರೊಂದಿಗೆ ಹಂಚಿಕೊಂಡಾಗ ಅಲ್ಲಿ ಎರಡು ಭಿನ್ನ ಪ್ರತಿಕ್ರಿಯೆಗಳು ಬರಬಹುದು. ಅಪರಿಚಿತರು ನಮ್ಮ ಸಮಸ್ಯೆಗಳಿಗೆ ಮುಗುಳ್ನಕ್ಕು ಮುಂದೆ ನಡೆದು ಹೋಗಿಬಿಡುವರು. ಆದರೆ ನಮ್ಮವರು ಎನ್ನುವವರು ನಮ್ಮ ಖುಷಿಗೆ ಅವರು ದುಪ್ಪಟ್ಟು ಖುಷಿಪಟ್ಟು ನಮ್ಮ ಕಷ್ಟಗಳಿಗೆ ಮರುಗಿ ಅವರದ್ದೇ ಸಮಸ್ಯೆ ಎಂದು ಪರಿಹರಿಸಲು ಮುಂದೆ ಬರುತ್ತಾರೆ. ಇದೇ ಆತ್ಮೀಯರು ಮತ್ತು ಅಪರಿಚಿತರ ನಡುವೆ ಇರುವ ವ್ಯತ್ಯಾಸ.

ನಮ್ಮವರು ಎನ್ನುವ ಪ್ರಪಂಚದಲ್ಲಿ ಹೆಚ್ಚಿನ ನಿರೀಕ್ಷೆಗಳಿರುತ್ತವೆ. ನಮ್ಮ ಖುಷಿ, ಸಂತೋಷಗಳಿಗೆ ಸರಿಯಾದ ಪ್ರತಿಕ್ರಿಯೆ ಸಿಗದಿದ್ದರೆ ಯಾಕೆ ಹೀಗೆ ವರ್ತಿಸುತ್ತಿದ್ದಾರೆ ಎನ್ನುವ ಪ್ರಶ್ನೆಗಳು ಎದುರಾಗುವುದು. ಈ ರೀತಿಯ ಅನೇಕ ವಿಷಯಗಳು ನಮ್ಮವರಲ್ಲಿ ಹಂಚಿಕೊಂಡಾಗ ಅದಕ್ಕೆ ನಮ್ಮ ನಿರೀಕ್ಷೆಯ ಪ್ರತಿಕ್ರಿಯೆ ತೋರದಿದ್ದಾಗ ನಾವೇ ನೊಂದುಕೊಳ್ಳುತ್ತೇವೆ. ಎಷ್ಟೋ ಬಾರಿ ನಮ್ಮ ಖುಷಿ ಬೇರೆಯವರು ಕೊಡುವ ಪ್ರತಿಕ್ರಿಯೆಯನ್ನು ಆಧರಿಸಿರುತ್ತದೆ. ಆದರೆ ಅದು ಶಾಶ್ವತವಾಗಿರಲು ಹೇಗೆ ಸಾಧ್ಯ.

ಬಹಳ ಹಿಂದಿನಿಂದ ಬಂದ ಮಾತಿದೆ ನಮ್ಮ ಕಷ್ಟ ಸುಖಗಳನ್ನು ನಮ್ಮವರಲ್ಲೇ ಹಂಚಿಕೊಂಡು ಪರಿಹರಿಸಬೇಕು. ಹಾಗಂತ ಎಲ್ಲರೂ ನಿಮ್ಮ ಸಮಸ್ಯೆಗಳಿಗೆ ಕಿವಿಯಾಗುತ್ತಾರೆ ಎಂಬುದನ್ನು ನಂಬಬಾರದು. ನೀವು ಯಾರನ್ನು ಆತ್ಮೀಯ ಎಂದು ಎನಿಸುಕೊಳ್ಳುವ ವ್ಯಕ್ತಿ ನಿಮ್ಮನ್ನು ಅಪರೂಪಕ್ಕೆ ಪರಿಚಯವಾದ ಜಸ್ಟ್‌ ಫ್ರೆಂಡ್‌ ಅನ್ನುವ ಸ್ಥಾನದಲ್ಲಿ ಇಟ್ಟಿರಬಹುದು. ಆದರೆ ಅದು ನಿಮಗೆ ಗೊತ್ತಾಗುವ ಹೊತ್ತಿಗೆ ನೀವು ನೋವಿನ ಭಾವದಲ್ಲಿರುತ್ತೀರಿ ಆ ಕಾರಣಕ್ಕಾಗಿ ಎಲ್ಲರೂ ನಮ್ಮವರೆನ್ನುವ ಭ್ರಮಾ ಲೋಕದಲ್ಲಿ ತೇಲಿಬಿಡಬೇಡಿ. ಹಾಗಂತ ಎಲ್ಲ ಸಮಸ್ಯೆಗಳಿಗೂ ಇನ್ನೊಬ್ಬರ ಬಳಿಯೇ ಪರಿಹಾರ ಇದೆ ಎಂದು ನಂಬಿದರೆ ನಮ್ಮ ಬದುಕು ಪರಿಪೂರ್ಣವಾಗಲು ಸಾಧ್ಯವಿದೆ. ನಾವು ಬೆಳೆಯಬೇಕಾದರೆ ನಮ್ಮ ಸಂತೋಷವನ್ನು ನಾವೇ ಹುಡುಕಲು ಕಲಿಯಬೇಕು. ಆಗ ಬದುಕು ನಮಗೆ ಸಾಕಷ್ಟು ಅನುಭವವನ್ನು ಕಟ್ಟಿಕೊಡುತ್ತದೆ.

-ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.