ಧಗಧಗಿಸುತ್ತಿರುವ ಬೇಸಗೆಯಲ್ಲಿ ಆರೋಗ್ಯದ ಕಾಳಜಿ ಹೇಗೆ ?


Team Udayavani, Mar 3, 2020, 5:27 AM IST

summer

ಬೇಸಗೆ ಈಗಾಗಲೇ ಆರಂಭವಾಗಿದೆ. ವಾತಾವರಣದಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರುತ್ತಿದೆ. ಸೂರ್ಯನ ಕಿರಣಗಳ ತಾಪಕ್ಕೆ ನೆತ್ತಿ ಕಾವೇರುತ್ತಿದ್ದು, ಇಡೀ ದೇಹಕ್ಕೆ ಬೆಂಕಿಯ ಕಾವು ಕೊಟ್ಟಂತಾಗುತ್ತಿದೆ. ಪರಿಣಾಮ ನಮ್ಮ ದೇಹದಲ್ಲಿಯೂ ಒಂದಷ್ಟು ವ್ಯತ್ಯಯಗಳು ಆಗುತ್ತಿವೆ. ಈ ಹೊತ್ತು ಆರೋಗ್ಯದ ಕಾಳಜಿ ವಹಿಸುವುದು ಅನಿವಾರ್ಯ. ಮುನ್ನೆಚ್ಚರಿಕೆಯಾಗಿ ಒಂದಷ್ಟು ಕ್ರಮಗಳನ್ನು ತೆಗೆದುಕೊಂಡರೆ ಬೇಸಗೆಯಲ್ಲಿ ಕಾಡುವ ಕೆಲವು ಸಮಸ್ಯೆಗಳಿಂದ ಮುಕ್ತರಾಗಲು ಸಾಧ್ಯವಿದೆ. ಬೇಸಗೆ ಬೇಗೆಯ ನಡುವೆ ಆರೋಗ್ಯದ ಕಾಳಜಿ ಹೇಗೆ, ಪಾಲಿಸಬೇಕಾದ ನಿಯಮಗಳೇನು ಎಂಬಿತ್ಯಾದಿ ಸಲಹೆ, ಮಾಹಿತಿ ಇಲ್ಲಿದೆ.

ಸ್ವಚ್ಛತೆಗೆ ಆದ್ಯತೆ ನೀಡಿ
ಹಲವು ರೋಗಗಳಿಗೆ ಕಾರಣವಾಗುವ ಬ್ಯಾಕ್ಟೀರಿಯಾ ಮತ್ತು ವೈರಾಣುಗಳು ಪುಷ್ಕಳವಾಗಿ ಸಂವರ್ಧನೆಗೊಳ್ಳಲು ಬೇಸಗೆ ಕಾಲ ಹೇಳಿ ಮಾಡಿಸಿದ ಸಮಯ. ಜತೆಗೆ ಈ ವಾತಾವರಣವು ರೋಗಾಣುಗಳ ಬೆಳವಣಿಗೆಯನ್ನು ನೂರ್ಮಡಿಗೊಳಿಸುವಂತಿರುತ್ತದೆ. ಆರಂಭದಲ್ಲಿ ಕಡಿಮೆ ತೀವ್ರತೆಯ ಸೋಂಕುಗಳನ್ನಷ್ಟೆ ಹರಡುವ ರೋಗಾಣುಗಳು ಅನಂತರದ ದಿನಗಳಲ್ಲಿ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರಬಹುದು. ಅಲ್ಲದೆ, ಬೇಸಗೆಯ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು ಒಬ್ಬರಿಂದ ಮತ್ತೂಬ್ಬರಿಗೆ ಬಹುಬೇಗ ಹರಡುತ್ತವೆ. ಹಾಗಾಗಿ ರೋಗ ಬಾರದಂತೆ ತಡೆಯಲು ನಮ್ಮ ಸುತ್ತಮುತ್ತಲ ಪ್ರದೇಶಗಳನ್ನು ಸ್ವಚ್ಛವಾಗಿಡುವುದು ಮತ್ತು ವೈಯಕ್ತಿಕ ನೈರ್ಮಲ್ಯವೂ ಬಹು ಮುಖ್ಯ.

ನಿರ್ಜಲೀಕರಣದ ಬಗ್ಗೆ ಎಚ್ಚರಿಕೆ ವಹಿಸಿ
ಸಾಮಾನ್ಯವಾಗಿ ಬೇಸಗೆ ದಿನಗಳಲ್ಲಿ ದೇಹದಲ್ಲಿ ನೀರಿನಂಶ ಹೆಚ್ಚಿನ ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ. ಆದ್ದರಿಂದ ದೇಹವನ್ನು ತಂಪಾಗಿಡಲು ಎಳನೀರು, ಕಲ್ಲಂಗಡಿ, ಕರಬೂಜದಂತಹ ಪಾನೀಯ, ಹಣ್ಣುಗಳನ್ನು ತಿನ್ನಿ. ಸೊಗದೆ ಬೇರು, ಜೀರಿಗೆ, ನಿಂಬೆ, ಮೂಸಂಬಿ, ಪುನರ್ಪುಳಿ ಹೀಗೆ ನೈಸರ್ಗಿಕ ಹಣ್ಣು, ಬೇರು ಇತ್ಯಾದಿಗಳಿಂದ ತಯಾರಿಸುವ ತಂಪು ಪಾನೀಯಗಳನ್ನು, ನೀರಿನ ಅಂಶ ಹೆಚ್ಚು ಇರುವ ಆಹಾರ ಪದಾರ್ಥಗಳನ್ನು ಸೇವಿಸಿ. ಇದರಿಂದ ದಾಹ ಕಡಿಮೆಯಾಗುವುದರೊಂದಿಗೆ ನಿರ್ಜಲೀಕರಣ ಸಮಸ್ಯೆಯಿಂದ ದೂರ ಉಳಿಯಬಹುದು.

ಸಸ್ಯಾಹಾರಕ್ಕೆ ಆದ್ಯತೆ ನೀಡಿ
ಕೆಂಪು ಮಾಂಸವನ್ನು ತಿನ್ನುವುದನ್ನು ಕಮ್ಮಿ ಮಾಡಿ. ಬೇಸಗೆಯ ದಿನಗಳಲ್ಲಿ ಮಾಂಸಹಾರಕ್ಕಿಂತ ಸಸ್ಯಾಹಾರಕ್ಕೆ ಆದ್ಯತೆ ನೀಡಿ. ಅದರಲ್ಲಿಯೂ ದೇಹಕ್ಕೆ ತಂಪು ನೀಡುವ ಬಸಳೆ, ಸೌತೆಕಾಯಿ, ಸೋರೆಕಾಯಿ, ಬೂದು ಕುಂಬಳ, ಕ್ಯಾರೆಟ್‌, ಮೂಲಂಗಿ ಮತ್ತು ಸೊಪ್ಪು ತರಕಾರಿಗಳನ್ನು ನಿತ್ಯದ ಆಹಾರದಲ್ಲಿ ಬಳಸುವುದು ಆರೋಗ್ಯಕ್ಕೆ ತುಂಬಾ ಉಪಕಾರಿ.

ನೀರನ್ನು ಕುದಿಸಿ ಆರಿಸಿ ಕುಡಿಯಿರಿ
ಈ ಸಂದರ್ಭದಲ್ಲಿ ಪದೇ ಪದೆ ಬಾಯಾರಿಕೆ, ದಣಿವು ಆಗುತ್ತಿರುತ್ತದೆ. ಹಾಗೆಂದು ಎಲ್ಲೆಂದರಲ್ಲಿ ದೊರೆಯುವ ನೀರನ್ನು ಸೇವಿಸುವುದು ಒಳಿತಲ್ಲ. ನೀರನ್ನು ಚೆನ್ನಾಗಿ ಕುದಿಸಿ, ಆರಿಸಿ ಕುಡಿಯುವುದನ್ನು ರೂಢಿಸಿಕೊಳ್ಳಿ. ಏಕೆಂದರೆ ಕಾಮಾಲೆ ಸೇರಿದಂತೆ ಕೆಲವು ಸಾಂಕ್ರಾಮಿಕ ರೋಗಗಳು ನೀರಿನಿಂದಲೇ ಹರಡುವುದರಿಂದ ಮುಂಜಾಗ್ರತೆ ವಹಿಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.

ಬೇಸಗೆಯಲ್ಲಿ ಬೆನ್ನೇರುವ ಸಮಸ್ಯೆಗಳು
ಬೇಸಗೆ ಅವಧಿಯಲ್ಲಿ ಶರೀರದ ಶಕ್ತಿ ಮತ್ತು ಜೀರ್ಣಶಕ್ತಿ ಕಡಿಮೆಯಾಗುತ್ತದೆ. ಈ ಸಮಯದಲ್ಲಿ ಮೂಗಿನಿಂದ ರಕ್ತಸ್ರಾವವಾಗುವುದು, ಉರಿಮೂತ್ರ, ಬೆವರುಸಾಲೆ ಬರುವುದು, ಸೆಕೆಬೊಕ್ಕೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಜತೆಗೆ ಈ ಸಮಯದಲ್ಲಿ ಜಲಾಶಯಗಳು ಬತ್ತಿ ನೀರು ಸಾಂದ್ರವಾಗಿರುತ್ತದೆ, ಮಲಿನವಾಗಿರುತ್ತದೆ. ಇದರಿಂದ ವಾಂತಿಭೇದಿ, ಭೇದಿ,ವಿಷಮಶೀತ ಜ್ವರ (ಟೈಫಾಯ್ಡ), ಕಾಮಾಲೆ ಮುಂತಾದ ಕಾಯಿಲೆಗಳು ಬರುತ್ತವೆ. ಬೇಸಗೆಯಲ್ಲಿನ ಈ ಕಾಯಿಲೆಗಳಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕಾಳಜಿ ವಹಿಸಬೇಕು.

ಚರ್ಮ ಬಿರುಸಾಗುತ್ತದೆ
ಈ ಸಮಯದಲ್ಲಿ ಚರ್ಮ ಹಾಗೂ ಕೂದಲ ಸಂಬಂಧಿ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತವೆ. ಹಾಗಾಗಿ ಚರ್ಮ ಮತ್ತು ಕೂದಲ ಆರೈಕೆಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಸೂರ್ಯನ ಕಿರಣಗಳಿಂದ ಚರ್ಮಕ್ಕಾಗುವ ಹಾನಿಯನ್ನು ತಪ್ಪಿಸಲು ಮೈಯನ್ನು ಸಂಪೂರ್ಣ ಮುಚ್ಚುವಂತಹ ದಿರಿಸುಗಳ ಧಾರಣೆ ಅಗತ್ಯ. ಅದರಲ್ಲೂ ಈ ದಿನಗಳಲ್ಲಿ ಸಡಿಲವಾದ ನೂಲಿನ ಬಟ್ಟೆಗಳನ್ನು, ಹತ್ತಿ ಬಟ್ಟೆಯನ್ನು ಉಪಯೋಗಿಸಿದರೆ ಇನ್ನೂ ಉತ್ತಮ.

ಕೂದಲ ಕಾಳಜಿ
ಸೂರ್ಯನ ಕಾವಿನಿಂದ ತಲೆಗೂದಲು ಒಣಗುವ, ಬಿರುಸಾಗುವ ಮತ್ತು ಮಸುಕಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಹಾಗಾಗಿ ತೆಂಗಿನಕಾಯಿ, ಆಲಿವ್‌ ಮತ್ತು ಅವಕಾಡೊ ಎಣ್ಣೆಯನ್ನು ಕೂದಲಿನ ತುದಿಯಿಂದ ಬುಡದವರೆಗೂ ಹಚ್ಚಿ. ಇದು ನೆತ್ತಿಯನ್ನು ತಣ್ಣಗಿಡುತ್ತದೆ. ಕೂದಲಿಗೆ ನೇರಳಾತೀತ ಕಿರಣಗಳಿಂದ ರಕ್ಷಣೆ ಒದಗಿಸುವುದು ಮಾತ್ರವಲ್ಲದೆ, ನೆತ್ತಿಯಲ್ಲಿ ಆದ್ರìತೆಯ ಅಂಶ ಉಳಿಯಲು ಸಹಾಯ ಮಾಡುತ್ತದೆ.

ಸಮತೋಲನ ಕಾಪಾಡಿಕೊಳ್ಳಿ
ಸೂರ್ಯನ ತಾಪದಿಂದ ಮನುಷ್ಯನ ದೇಹದಲ್ಲಿ ಬೆವರು ಜಾಸ್ತಿ ಉತ್ಪತ್ತಿಯಾಗುತ್ತದೆ. ಪರಿಣಾಮ ಶರೀರದಲ್ಲಿ ಇರುವ ನೀರಿನಂಶ ಮತ್ತು ಲವಣಗಳು ಕಡಿಮೆಯಾಗುತ್ತ ಇರುತ್ತವೆ. ಅದನ್ನು ಸಮತೋಲನ ಮಾಡಬೇಕಾದರೆ ಅದಷ್ಟು ಹೆಚ್ಚು ದ್ರವ ಪದಾರ್ಥಗಳನ್ನು ತೆಗೆದುಕೊಳ್ಳಬೇಕು. ಜತೆಗೆ ದಣಿವು ಆರಿಸಲು ತಂಪು ಪಾನೀಯಗಳಿಗಿಂತ ನೈಸರ್ಗೀಕ ಪೇಯಗಳಾದ ಎಳನೀರು, ಕಬ್ಬಿನ ಹಾಲು, ಮಜ್ಜಿಗೆ ಮತ್ತು ಕಲ್ಲಂಗಡಿ ಕಬೂìಜ ಶೀತ ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮ. ಶೀತ ಜಲಸ್ನಾನ ಮಾಡುವುದರಿಂದ ಸಮತೋಲನ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.
-ಕೃಷ್ಣ ರಾಘವ್‌ ಹೆಬ್ಟಾರ್‌
ವೈದ್ಯರು, ಆಯುರ್ವೇದ ವಿಭಾಗ
ಕೆ.ಎಂ.ಸಿ, ಮಣಿಪಾಲ

ಎಚ್ಚರಿಕೆ ವಹಿಸಿ
ವಾರದಿಂದ ಜಿಲ್ಲೆಯ ಕೆಲ ಭಾಗಗಳಲ್ಲಿ ಮಳೆ ಆಗಿದ್ದು, ಮುಂಬರುವ ದಿನಗಳಲ್ಲಿಯೂ ಮಳೆ ಬರುವ ಸಾಧ್ಯತೆ ಇದೆ. ಆದರೆ ಇದು ಅನಿರ್ದಿಷ್ಟಾವಧಿಯಾಗಿದ್ದು, ಬಿಸಿಲು ಮಳೆ ಸುರಿಯುವುದರಿಂದ ಆರೋಗ್ಯದಲ್ಲಿ ಏರುಪೇರಾಗಬಹುದು. ಜತೆಗೆ ಮಳೆಯ ನೀರು ನಿಂತು ಕೊಳಚೆ ಆಗುವುದರಿಂದ ಆರೋಗ್ಯದ ಕುರಿತು ಹೆಚ್ಚಿನ ಜಾಗ್ರತೆವಹಿಸುವುದು ಉತ್ತಮ.

ನೆನಪಿನಲ್ಲಿಡಬೇಕಾದ ಸಂಗತಿ
– ಬಿಗಿ ಬಟ್ಟೆಗಳನ್ನು ಧರಿಸುವುದು ಬೇಡ. ಸಡಿಲ ಉಡುಗೆತೊಡುಗೆ ಧರಿಸಿದರೆ ಉತ್ತಮ. ಬಿಗಿಯಾದ ಉಡುಪನ್ನು ಧರಿಸುವುದ ರಿಂದ ಬೆವರಿಗೆ ತುರಿಕೆ, ಕಜ್ಜಿಗಳಾಗಬಹುದು.
– ಶುಷ್ಕ, ಹಳಸಿದ, ಉಪ್ಪು, ಅತೀಖಾರ, ಮಸಾಲೆಯುಕ್ತ ಮತ್ತು ಕರಿದ ಪದಾರ್ಥ ಹಾಗೂ ಉಪ್ಪಿನಕಾಯಿ, ಹುಣಸೇಹಣ್ಣು ಮುಂತಾದ ಹುಳಿ, ಕಹಿ ಮತ್ತು ಒಗರು ರಸದ ಪದಾರ್ಥಗಳನ್ನು ಅತಿಯಾಗಿ ತಿನ್ನುವುದನ್ನು ತಡೆಯಬೇಕು.
– ಬೇಸಗೆಯಲ್ಲಿ ಲಘು ಆಹಾರಕ್ರಮ ಒಳ್ಳೆಯದು. ಅದರಲ್ಲೂ ಹಣ್ಣುಗಳನ್ನು ಹೆಚ್ಚಾಗಿ ಸೇವಿಸಿ. ಹೊಟ್ಟೆ ತುಂಬಾ ತಿನ್ನುವ ಬದಲು ಸ್ವಲ್ಪ-ಸ್ವಲ್ಪ ಆಹಾರವನ್ನು ಆಗಾಗ ತಿನ್ನಿ.
– ಕಾಫಿ- ಟೀ ಸೇವನೆ ಕಡಿಮೆ ಮಾಡಬೇಕು. ಕಾಬೋìನೇಟೆಡ್‌ ಪಾನೀಯಗಳನ್ನು ತ್ಯಜಿಸಬೇಕು. ನೈಸರ್ಗಿಕ ಪಾನೀಯಗಳನ್ನು, ಬೆಚ್ಚಗಿನ ಮಸಾಲೆ ರಹಿತ ಶುದ್ಧ ಆಹಾರವನ್ನು ಸೇವಿಸಬೇಕು.
– ಈ ಸಮಯದಲ್ಲಿ ಕಡಿಮೆ ವ್ಯಾಯಾಮ ಮಾಡುವುದು ಒಳಿತು. ಜತೆಗೆ ತಾಜಾ ಆಹಾರ ಸೇವನೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ.

-ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.