ಹಣವನ್ನೂ ಹೂಡಿ, ಕೆಲಸವನ್ನೂ ಮಾಡಿ


Team Udayavani, Jul 16, 2018, 4:02 PM IST

16-july-20.jpg

ಯಾವುದೇ ಒಂದು ಯೋಜನೆಯಲ್ಲಿ ನಾವು ಬಂಡವಾಳ ತೊಡಗಿಸಿದರೆ ಆಗ ಹೂಡಿಕೆದಾರರಷ್ಟೇ ಆಗಿರುತ್ತೇವೆ. ಅದರ ಬದಲು ಹೂಡಿಕೆಯ ಹಿಂದೆಯೇ ಕೆಲಸ ಮಾಡಲು ತೊಡಗಿದರೆ ಉದ್ಯಮಿಗಳಾಗಿ ರೂಪುಗೊಳ್ಳುತ್ತೇವೆ ! ಹೂಡಿಕೆ ಎಂದ ತತ್‌ಕ್ಷಣ ಹೆಚ್ಚಿನವರಿಗೆ ಕೇವಲ ಷೇರು ಪೇಟೆಯ ಬಗೆಗೆ ಮಾತ್ರವೇ ಮನಸ್ಸು ಹೋಗುತ್ತದೆ. ಈಗ ಅದಕ್ಕೆ ಮ್ಯೂಚುವಲ್‌ ಫ‌ಂಡ್‌ ಕೂಡ ಸೇರಿಕೊಂಡಿದೆ. ಆದರೆ ಹೂಡಿಕೆ ಎಂದಾಗ ನಮ್ಮ ಹಣವನ್ನು ತೊಡಗಿಸಿ ಅದನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವುದು ಹಾಗೂ ಲಾಭದಾಯಕವಾಗಿ ಮಾಡಿಕೊಳ್ಳುವುದು ಎಂದಷ್ಟೇ ಎಲ್ಲರೂ ಲೆಕ್ಕ ಹಾಕುತ್ತಾರೆ.

ಯಾವಾಗಲೂ ಹೂಡಿಕೆಯನ್ನು ಹೀಗೆ ನೋಡಬಹುದು. ಮೊದಲನೆಯದು ಹಣ ಹೂಡಿದಾಗ ಅಲ್ಲಿ ನಮ್ಮ ಕೆಲಸ ಇಲ್ಲ. ಉದಾಹರಣೆಗೆ ಒಂದು ನಿವೇಶನವನ್ನು ಹೂಡಿಕೆಯ ಕಾರಣಕ್ಕೆ ಕೊಂಡರೆ ಒಮ್ಮೆ ಹಣ ಹೂಡಿ, ಆ ಜಾಗದಲ್ಲಿ ಬೇಲಿ ಹಾಕಿ ಬಿಟ್ಟರೆ ನಮ್ಮ ಕೆಲಸ ಅರ್ಧ ಮುಗಿದಂತೆ. ಆನಂತರದ ದಿನಗಳಲ್ಲಿ, ಅಗೀಗ ಹೋಗಿ ಏನಾದರೂ ಒತ್ತುವರಿ ಆಯಿತಾ? ಏನಾದರೂ ಮಾಡಿದ್ದರಾ ಎಂದು ನೋಡಿಕೊಂಡು ಬಂದರೆ ಸಾಕು. ಹಾಗೆಯೇ ಬ್ಯಾಂಕಿನ ಭದ್ರತಾ ಠೇವಣಿಯಲ್ಲಿ ಇಟ್ಟರೂ, ಬಾಂಡ್‌ಗಳಲ್ಲಿ ಹಾಕಿದರೂ, ಮ್ಯೂಚುವಲ್‌ ಫ‌ಂಡ್‌ನ‌ಲ್ಲಿ ಹಾಕಿದರೂ, ಷೇರಿನಲ್ಲಿ ತೊಡಗಿಸಿದರೂ ಎಲ್ಲರಿಗೂ ಹೂಡಿಕೆಯಲ್ಲಿ ಹಣ ತೊಡಗಿಸಿದೆನೆಂಬ ಸಮಾಧಾನ ಇದ್ದೇ ಇರುತ್ತದೆ. ಹೀಗೆ ಹೂಡಿಕೆ ಮಾಡಿದ ಹಣ ಬೆಳೆಯಲೇಬೇಕು. ಅದು ಬೆಳೆದೇ ತೀರುತ್ತದೆ ಎಂಬ ನಂಬಿಕೆಯೂ ಇರುತ್ತದೆ. ಇನ್ನೊಂದು ರೀತಿಯ ಹೂಡಿಕೆ ಇರುತ್ತದೆ. ಇಲ್ಲಿ ಹಣ ತೊಡಗಿಸಿ ನಾವು ಕೆಲಸವನ್ನು ಮಾಡಬೇಕು. ಇಂತಹ ಹಣ ತೊಡಗಿಸುವಿಕೆ ಸ್ವಂತ ಉದ್ಯಮವಾಗಿ, ಉದ್ಯೋಗವಾಗಿ ರೂಪುಗೊಳ್ಳುತ್ತದೆ.

ಉದ್ಯಮಿಗಳಾಗಿ
ನಾವು ಕೇವಲ ಹಣ ತೊಡಗಿಸಿದರೆ ಹೂಡಿಕೆದಾರರು ಆಗಬಹುದು. ಆದರೆ ಹಣ ತೊಡಗಿಸಿ ಕೆಲಸ ಮಾಡಿದರೆ ಉದ್ಯಮಿಗಳಾಗಿ ರೂಪಗೊಳ್ಳುತ್ತೇವೆ. ಸಣ್ಣ ಸಣ್ಣ ಉಳಿತಾಯ, ಸಣ್ಣ ಸಣ್ಣ ಕೆಲಸದಿಂದ ಆರಂಭವಾದ ಎಷ್ಟೋ ಉದ್ಯಮಗಳೇ ಈಗ ಎತ್ತರಕ್ಕೆ ಬೆಳೆದಿದೆ. ಎತ್ತರಕ್ಕೆ ಏರಬೇಕು ಎಂಬ ಆಸೆ ಮತ್ತು ಎತ್ತರೆತ್ತರ ಬೆಳೆಯ ಬಲ್ಲೆ  ಎಂಬ ಭರವಸೆಯೇ ಎಲ್ಲ ಹಣ ಹೂಡಿಕೆಯ ಹಿಂದಿರುವ ಆಶಯ.

ಹೂಡಿಕೆ ಜಾಣತನ
ಕನಕಪುರ ಸಮೀಪದ ಆ ಮಹಿಳೆ ತಾನು ಹಾಲು ಮಾರಿ ಬಂದ ಹಣವನ್ನು ಹಾಗೇ ಇಟ್ಟುಕೊಳ್ಳುತ್ತಾಳೆ. ಒಂದು ನಿರ್ದಿಷ್ಟ ಹಬ್ಬದ ಸಂದರ್ಭದಲ್ಲಿ ಕೆಲವು ವಿಶೇಷ ಸನ್ನಿವೇಷಗಳಲ್ಲಿ ಕುರಿಗಳು, ಅದರಲ್ಲೂ ಎಳೆಯ ಕುರಿ ಮರಿಗಳು ಕಡಿಮೆ ಬೆಲೆಗೆ ಸಿಗುತ್ತವಂತೆ. ಹಾಗೆ ಸಿಕ್ಕ ಕುರಿ ಮರಿಗಳು ಹಾಗೂ ಮರಿ
ಹಾಕಬಹುದಾದ ಕುರಿಗಳನ್ನು ಕೊಂಡು ತಂದು, ಬೆಳೆಸಿ ಅನಂತರ ಅದನ್ನು ಹೆಚ್ಚಿನ ದರಕ್ಕೆ ಮಾರುತ್ತಾಳೆ. ಕುರಿಗಳು ಹಾಗೂ ಮರಿಗಳನ್ನು ಹೀಗೆ ನಾಲ್ಕೈದು   ತಿಂಗಳು ಸಾಕಿ ಮಾರುವುದರಿಂದ ಹಾಕಿದ ಹಣ ಅಧಿಕ ಲಾಭ ತರುತ್ತಿದೆಯಂತೆ.

ಸುಧಾಶರ್ಮ ಚವತ್ತಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.