ಕಾರ್ಪೊರೆಟ್‌ ತೆರಿಗೆ ಇಳಿಕೆ ಲಾಭವೋ ನಷ್ಟವೋ?


Team Udayavani, Nov 4, 2019, 5:00 AM IST

TAX

ಸೆಪ್ಟಂಬರ್‌ 20ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಕಾರ್ಪೊರೆಟ್‌ ತೆರಿಗೆಯನ್ನು ಶೇ. 30 ರಿಂದ ಶೇ. 20ಕ್ಕೆ ಇಳಿಸಲಾಗಿದೆ ಎಂದು ಘೋಷಿಸಿದರು.
ಆ ಘೋಷಣೆಯನ್ನು ಈ ವರ್ಷದ ನಾಲ್ಕನೇ ಬಜೆಟ್‌ ಅಂತಾನೂ ಕರೆಯುತ್ತಾರೆ. ಯಾಕೆಂದರೆ, ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸಲು ಈಗಾಗಲೇ ಮೂರು ಬಾರಿ ಬೇರೆ-ಬೇರೆ ರೀತಿಯಲ್ಲಿ ದೇಶದ ಆರ್ಥಿಕ ನೀತಿಯಲ್ಲಿ ತಿದ್ದುಪಡಿ ತಂದಿದ್ದಾರೆ. ಹಣವನ್ನು ಮಾರುಕಟ್ಟೆಗೆ ಪಂಪ್‌ ಮಾಡಿದ್ದಾರೆ. ಕಾರ್ಪೊರೆಟ್‌ ತೆರಿಗೆ ಕಡಿತಗೊಳಿಸಿದ್ದು ಕೂಡ ಆ ತಿದ್ದುಪಡಿಕೆಯಲ್ಲಿ ಒಂದು.

ದೇಶದ ಕಾರ್ಪೊರೆಟ್‌ ತೆರಿಗೆ, ಉಳಿದೆಲ್ಲ ದೇಶಗಳಿಗೆ ಹೋಲಿಸಿದರೆ ಅತೀ ಹೆಚ್ಚಾಗಿತ್ತು.ಷೇರು ಮಾರುಕಟ್ಟೆಯಲ್ಲಿ ಸೂಚ್ಯಂಕ ಏರಿಕೆ ಆ ದಿನ ಹಣಕಾಸು ಸಚಿವರ ಈ ನಿರ್ಧಾರಕ್ಕೆ ಪ್ರತಿಕ್ರಿಯೆ ಹೇಗಿತ್ತು ಅಂದರೆ, ಬಾಂಬೆ ಷೇರು ಮಾರುಕಟ್ಟೆಯ ಸೂಚ್ಯಂಕ ಒಂದೇ ದಿನಕ್ಕೆ 1,922 ಪಾಯಿಂಟ್‌ ಗಳಷ್ಟು ಏರಿಕೆಯನ್ನು ಕಂಡಿತ್ತು.

ಹತ್ತು ವರ್ಷಗಳಲ್ಲಿ ಈ ತರಹದ ಏರಿಕೆ ಕಂಡಿದ್ದು ಇದೇ ಮೊದಲ ಬಾರಿಗೆ. 2009ರ ಮೇ 18ರಂದು ಒಂದೇ ದಿನಕ್ಕೆ ಷೇರು ಮಾರುಕಟ್ಟೆಯ ಸೂಚ್ಯಂಕ ಶೇ. 14 ಅಂದರೆ 2,110 ಪಾಯಿಂಟ್‌ ಹೆಚ್ಚಾಗಿದ್ದು ಇತಿಹಾಸ. ಈ ತರಹದ ಒಂದು ಪರಿಣಾಮ ಬೀರುವ ಒಂದು ನೀತಿಯ ಬಗ್ಗೆ ಜನ ಸಾಮಾನ್ಯರೂ ಕೂಡ ಅರಿಯುವುದು ಮುಖ್ಯ. ಕಾಪೋರೆಟ್‌ ತೆರಿಗೆಯ ಲಾಭ ನಷ್ಟಗಳು ಬಗ್ಗೆ ತಿಳಿದು ಕೊಳ್ಳುವುದು ಸದ್ಯದ ಸಂಗತಿ. ಇದರ ಮಾಹಿತಿ ಈ ಕೆಳಗಿದೆ.

ಕಾರ್ಪೊರೆಟ್‌ ತೆರಿಗೆ ಏನು? ಎಷ್ಟು?
ಒಂದು ಕಂಪೆನಿಯ ಒಟ್ಟೂ ಲಾಭದ ಮೇಲೆ ಏನು ತೆರಿಗೆ ಅನ್ವಯಿಸುತ್ತದೆಯೋ ಅದನ್ನು ಕಾರ್ಪೊರೆಟ್‌ ತೆರಿಗೆ ಎನ್ನುತ್ತಾರೆ. ಉದಾ ಹರಣೆಗೆ, ಒಂದು ಕಂಪೆನಿ ಒಂದು ಕೋಟಿ ರೂ. ಲಾಭ ಮಾಡಿದರೆ ತೆರಿಗೆ, ಮೇಲೆ¤ರಿಗೆ, ಎಜುಕೇಶನ್‌ ಸೆಸ್‌ ಎಲ್ಲ ಸೇರಿ 35.41 ಲಕ್ಷ ರೂ. ತೆರಿಗೆ ಕೊಡಬೇಕಿತ್ತು. ಈಗ ಅದನ್ನು ಹತ್ತು ಪ್ರತಿಶತ ಕಡಿಮೆ ಮಾಡಿ 25.41 ಲಕ್ಷ ರೂ. ಗೆ ಇಳಿಸಿದ್ದಾರೆ. ಇಷ್ಟು ಸರಳವಾಗಿಲ್ಲ ಲೆಕ್ಕಾಚಾರ. ಅದರಲ್ಲಿ ಹಲವು ಪದರಗಳಿವೆ. ತೆರಿಗೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಇಲ್ಲಿ ಸಂಕ್ಷಿಪ್ತವಾಗಿ ಹೇಳಲಾಗಿದೆ. ಪ್ರತಿ ವರ್ಷ ಕಂಪೆನಿ ಗಳಿಸುವ ಲಾಭಕ್ಕೆ ಅನುಸಾರವಾಗಿ, ದೇಶೀಯ ಹಾಗೂ ಅಥವಾ ವಿದೇಶದ ಕಂಪೆನಿಯ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಕಾರ್ಪೊರೆಟ್‌ ತೆರಿಗೆಯ ವಿನಾಯಿತಿಯು ನಮ್ಮ ದೇಶದ ಬೊಕ್ಕಸದ ಸುಮಾರು 1.45 ಲಕ್ಷ ಕೋಟಿ ರೂ. ಕಡಿಮೆ ಮಾಡಲಿದೆ.

ಸಾಮಾನ್ಯ ಜನಕ್ಕೆ ಏನು ಲಾಭ?
ಇಂದು ಸಾಮಾನ್ಯರು ಕೂಡ ಮ್ಯೂಚುವಲ್‌ ಫಂಡ್‌, ಎಸ್‌ಐಪಿ ಅಂತ ತಾವು ಗಳಿಸಿದ ಆದಾಯದಲ್ಲಿ ಸ್ವಲ್ಪ ಹಣವನ್ನು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುತ್ತಾರೆ. ಒಬ್ಬರು 4-5 ಸಾವಿರ, ಇನ್ನೊಬ್ಬರು 10-15 ಸಾವಿರ ಹೀಗೆ, ಅವರವರ ದೈನಂದಿನ ಬದುಕಿನ ಖರ್ಚಿನಲ್ಲಿ ಉಳಿಸಿದ ಹಣ ಅದು. ಕಳೆದ ಎರಡು ವರ್ಷಗಳಲ್ಲಿ ಇಂತಹ ಸುಮಾರು ಮೂರು ಲಕ್ಷ ಕೋಟಿ ರೂ. ಹಣ ಮಾರುಕಟ್ಟೆಯಲ್ಲಿ ಹೂಡಿಕೆಯಾಗಿದೆ. ದಿನವೂ ಷೇರು ಮಾರುಕಟ್ಟೆ ಕುಸಿಯುತ್ತಿದ್ದರೆ, ಎಕನಾಮಿ ದುರ್ಬಲವಾಗುತ್ತಿದ್ದರೆ ನಷ್ಟ ಯಾರಿಗೆ? ಸಾಮಾನ್ಯ ಜನರಿಗೆ ತಾನೇ? ಕಳೆದ ಎರಡು ವರ್ಷಗಳಲ್ಲಿ ಸಾಮಾನ್ಯ ಜನರ ಹೂಡಿಕೆ 3 ಲಕ್ಷ ಕೋಟಿ. ಇದಕ್ಕೆ ಹೋಲಿಸಿದರೆ ವಿದೇಶಿ ಬಂಡವಾಳ, ದೊಡ್ಡ ದೊಡ್ಡ ಹೂಡಿಕೆದಾರರಿಂದ ಬಂದ ಹಣ ಕೇವಲ 20,000 ಕೋಟಿ ಮಾತ್ರ. ಇಂಥ ಸಂದರ್ಭ ಹಣಕಾಸು ಸಚಿವರು ತಂದ ತೆರಿಗೆ ವಿನಾಯಿತಿ ಸಾಮಾನ್ಯರಲ್ಲಿ ವಿಶ್ವಾಸ ಹೆಚ್ಚಿಸುತ್ತದೆ, ಅವರು ಹೂಡಿದ ಹಣಕ್ಕೆ ಡಿವಿಡೆಂಡ್‌ ಮೂಲಕ, ಷೇರಿನ ಬೆಲೆ ಏರುವುದರ ಮೂಲಕ ಲಾಭ ಸಿಗುತ್ತದೆ.

 -ವಿಕ್ರಮ್‌ ಜೋಶಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.