ಭಕ್ತಿಯ ಮೂಲಕ ಜೀವನಪಾಠ ತಿಳಿಸಿದ ಕನಕದಾಸರು 


Team Udayavani, Nov 19, 2018, 3:08 PM IST

ಮಾಡುವ ಕೆಲಸದ ಮೇಲೆ ಗಮನವಿಟ್ಟು, ಫ‌ಲಾಫ‌ಲಗಳ ವಿಚಾರ ಅವನಿಗೆ ಬಿಡು. ನಿಶ್ಚಿಂತೆಯಿಂದ ಬದುಕಿ ಎಂಬ ಸಂದೇಶವನ್ನು ಜಗತ್ತಿಗೆ ಸಾರಿದವರು ಕನಕದಾಸರು. ಕೀರ್ತನೆಗಳ ಮೂಲಕ ಸಾಮಾಜಿಕ ಪಿಡುಗಾದ ಜಾತಿ ಮನಃಸ್ಥಿತಿಯನ್ನು ವಿರೋಧಿಸಿದವರು. ಸಾಮಾಜಿಕ ಕಟ್ಟುಪಡುಗಳ ಹಿನ್ನಲೆಯಲ್ಲಿ ಮತ್ತು ಸದಾ ಕಾಲ ಒತ್ತಡದಲ್ಲಿ ಬದುಕು ನಡೆಸುತ್ತಿರುವ ಇಂದಿನ ಜನ ಸಮುದಾಯದ ದೃಷ್ಟಿಯಿಂದ ಗಮನಿಸಿದಾಗಲೂ ಕನಕದಾಸರ ಕೀರ್ತನೆಗಳು ತೀರಾ ಅವಶ್ಯವೇ ಸರಿ. ಅಂದ ಹಾಗೆ ನವೆಂಬರ್‌ 25ರಂದು ಕನಕ ಜಯಂತಿ.

ಜಪವ ಮಾಡಿದರೇನು ತಪವ ಮಾಡಿದರೇನೂ, ಕಪಟಗುಣ ವಿಪರೀತ ಕಲುಷ ಇದ್ದವರು. ಆದಿಗುರುವರಿಯದೆ ಅತ್ತಲಿತ್ತಲೂ ತೊಳಲಿ ವೇದಶಾಸ್ತ್ರಗಳ್ಳೋದಿ ಬಾಯಾರಲು ಆದಿಯನು ಕಾಣದಿಂದಿರುತಿದ್ದು, ಹಲವೆಂಟು ವಾದ ತರ್ಕದೊಳಿದ್ದ ಭೇದವಾದಿಗಳು  ಎಂದು ತಮ್ಮ ಕೀರ್ತಿನೆಯ ಕಾವ್ಯದಲ್ಲಿ ಡಾಂಭಿಕ ಭಕ್ತರ ನಿಜ ಸ್ವರೂಪವನ್ನು ಬಿಚ್ಚಿ ಗುರು, ಅರಿವು, ಭಕ್ತಿ ಹಾಗೂ ಜೀವನದ ಬಗ್ಗೆ ಜಗತ್ತಿಗೆ ಸಾರಿ ಹೇಳಿದವರು ಕನಕದಾಸರು.

ದಾಸ ಪರಂಪರೆ ಅಗ್ರಗಣ್ಯರಲ್ಲಿ ಕನಕದಾಸರು ಒಬ್ಬರು. 16ನೇ ಶತಮಾನದಲ್ಲಿಯೇ ಸಮಾಜಕ್ಕೆ ಅನಿಷ್ಟವಾಗಿರುವ ಜಾತಿ ವ್ಯವಸ್ಥೆಯ ವಿರುದ್ಧ ಕಹಳೆಮೊಳಗಿದ ಇವರು ಕೃಷ್ಣನ ಪರಮ ಭಕ್ತ. ಹಾವೇರಿ ಜಿಲ್ಲೆಯ ಬಾಡಗ್ರಾಮದಲ್ಲಿ 1509ರಲ್ಲಿ ಜನಿಸಿದ ಕನಕದಾಸರ ತಂದೆ ಬೀರಪ್ಪ, ತಾಯಿ ಬಚ್ಚಮ್ಮ. ಮೂಲ ಹೆಸರು ತಿಮ್ಮಪ್ಪ ನಾಯಕ. ಕುರುಬ ಜನಾಂಗದಲ್ಲಿ ಜನಿಸಿದ ಇವರು ಬಂಡಿಪುರದ ದಂಡನಾಯಕನ ವೃತ್ತಿ ನಿರ್ವಹಿಸುತ್ತಿದ್ದು ಯುದ್ಧವೊಂದರಲ್ಲಿ ಸೋಲು ಅನುಭವಿಸಿದ ಅನಂತರ ಹರಿಭಕ್ತರಾಗಿ ಕನಕದಾಸರೆಂದು ಚಿರಪರಿಚಿತರಾದರು.

ವ್ಯಾಸರಾಯರ ಮೆಚ್ಚಿನ ಶಿಷ್ಯರಾದ ಕನಕದಾಸರು ಕಾಗಿನೆಲೆ ಆದಿಕೇಶವನ ಭಕ್ತರು. ಉಡುಪಿಯ ಕೃಷ್ಣನ ದರ್ಶನ ಸಿಗದೇ ಇರುವಾಗ ತಮ್ಮ ಭಕ್ತಿಯ ಮೂಲಕವೇ ಕೃಷ್ಣನನ್ನು ಕಿಂಡಿ ಮೂಲಕ ದರ್ಶನ ಪಡೆದವರು ಕನಕದಾಸರು. ದೇವರೇ ಒಲಿದ ಮೇಲೆ ಇನ್ನೇನಿದೆ ಈ ಜೀವಕೆ ಎಂಬಂತೆ ಅವರಿಗೆ ದೈವ ಸಾಕ್ಷಾತ್ಕಾರವಾದ ಮೇಲೆ ‘ಆತನೊಲಿದ ಮೇಲೆ ಇನ್ನಿತರ ಕುಲವಯ್ಯ’ ಎಂದು ಕೀರ್ತನೆಗಳ ಮೂಲಕನ ಸಾಮಾಜಿಕ ಪಿಡುಗಾದ ಜಾತಿ ಮನಸ್ಥಿತಿಯನ್ನು ವಿರೋಧಿಸುತ್ತಾರೆ.

ಮಾಯೆಯ ಬದುಕು ಸಲ್ಲ
ನಾವು ಹೇಗೆ ಯೋಚನೆ ಮಾಡುತ್ತೇವೋ ಅದರಂತೆಯೇ ಈ ಜಗತ್ತು ನಮ್ಮ ಮುಂದೆ ತೆರೆದುಕೊಳ್ಳುತ್ತಾ ಹೋಗುತ್ತದೆ. ಇದಕ್ಕೆ ಕನಕದಾಸರು ನೀ ಮಾಯೆಯೊಳಗೋ, ನಿನ್ನೊಳು ಮಾಯೆಯೇ, ನೀ ದೇಹದೊಳಗೋ, ನಿನ್ನೊಳು ದೇಹವೋ, ನಯನ ಬುದ್ಧಿಯ ಒಳಗೋ, ಬುದ್ಧಿ ನಯನದ ಒಳಗೋ, ನಯನ ಬುದ್ಧಿಗಳೆರಡೂ ನಿನ್ನೊಳಗೋ ಹರಿಯೇ ಎನ್ನುತ್ತಾ, ಈ ಕೀರ್ತನೆಯಲ್ಲಿ ಲೋಕದ ಸತ್ಯವಿದೆ. ದೃಷ್ಟಿ ಸರಿ ಇದ್ದಾಗ, ಇಡೀ ಜಗತ್ತು ಹೇಗೆ ನಡೆಯುತ್ತಿದೆಯೇ ಹಾಗೆಯೇ ಕಾಣುತ್ತದೆ. ನೀನು ನಿನ್ನ ಕಣ್ಣಿಗೆ ಕಂಡದ್ದೆ ಸತ್ಯ ಎಂದು ನಂಬಿ ಕುಳಿತೆಯೇ, ಅದರಾಚೆಗಿನ ಪಾರಮಾರ್ಥಿಕ ಸತ್ಯ ನಿನ್ನ ಅರಿವಿಗೆ ಬರಲಾರದು. ಹಾಗಾಗಿ ಕಣ್ಣಿಗೆ ಕಂಡದ್ದನ್ನು, ಬುದ್ಧಿಯ ಮೂಲಕ ಚಿಂತಿಸಿ, ಬುದ್ಧಿಗೆ ಹೊಳೆದದ್ದನ್ನು ಕಣ್ಣಿನ ಮೂಲಕ ನೋಡಿ ಪರಾಂಬರಿಸಿದಾಗ ಸತ್ಯ ತಿಳಿಯುತ್ತದೆ. ಮೊದಲು ನೋಡುವ ದೃಷ್ಟಿ ಬದಲಾಯಿಸಿಕೊಂಡಾಗ, ನಮ್ಮ ಮುಂದಿರುವ ಸುಂದರ ಸೃಷ್ಟಿ ಗೋಚರಿಸುತ್ತದೆ ಎನ್ನುತ್ತಾರೆ ಕನಕದಾಸರು.

ಕನಕರು ಸುಮಾರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಅಲ್ಲದೆ ಸುಳಾದಿ, ಉಗಾಭೋಗಗಳಂತಹ ಸಾಹಿತ್ಯದಲ್ಲಿಯೂ ಇವರ ಕೊಡುಗೆಗಳನ್ನು ಕಾಣಬಹುದು. ಮೋಹನ ತರಂಗಿಣಿ, ನಳ ಚರಿತ್ರೆ, ರಾಮಧಾನ್ಯ ಚರಿತೆ, ಹರಿ ಭಕ್ತಿ ಸಾರ, ನೃಸಿಂಹಸ್ತವ (ಉಪಲಬ್ಧವಿಲ್ಲ) ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಕನಕದಾಸರ ರಾಮಧ್ಯಾನ ಚರಿತೆಯಲ್ಲಿ ಅಕ್ಕಿ ಮತ್ತು ರಾಗಿಯ ನಡುವೆ ನಡೆಯುವ ಕುಲದ ಕಲಹ ಮತ್ತು ಅದನ್ನು ಶ್ರೀರಾಮಚಂದ್ರ ಬಗೆಹರಿಸುವ ವಿಧಾನ ಹಾಗೂ ಕುಲ ನಿರ್ಧರಿತವಾಗುವುದು ಬಣ್ಣದಿಂದಲ್ಲ ಬದಲಾಗಿ ಅವುಗಳ ಸಾಮರ್ಥ್ಯದಿಂದ ಎಂಬುದನ್ನು ಸೃಜನಶೀಲವಾಗಿ ಸಮಾಜಕ್ಕೆ ತಿಳಿಸಿಕೊಟ್ಟಿದ್ದಾರೆ.

ಸಾಮಾಜಿಕ ಕಟ್ಟುಪಾಡುಗಳ ಹಿನ್ನಲೆಯಲ್ಲಿ ಮತ್ತು ಸದಾ ಕಾಲ ಒತ್ತಡದಲ್ಲಿ ಬದುಕು ನಡೆಸುತ್ತಿರುವ ಇಂದಿನ ಜನಸಮುದಾಯದ ದೃಷ್ಟಿಯಿಂದ ಗಮನಿಸಿದಾಗಲೂ ಕನಕದಾಸರ ಕೀರ್ತನೆಗಳು ತೀರಾ ಅವಶ್ಯವೇ ಸರಿ. ಅವುಗಳ ಒಳಾರ್ಥವನ್ನು ಅರಿತುಕೊಂಡು ಬದುಕಿನಲ್ಲಿ ಕೊಂಚವಾದರೂ ಅಳವಡಿಸಿಕೊಂಡಾಗ ಬದುಕು ಬದಲಾಗುತ್ತದೆ ಎನ್ನುವುದರಲ್ಲಿ ಸಂದೇಹವೇ ಇಲ್ಲ

ಭುವನಾ ಬಾಬು, ಪುತ್ತೂರು

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.