ನಿಮ್ಮನ್ನು ನೀವು ತಿಳಿದುಕೊಳ್ಳಿ 


Team Udayavani, Sep 24, 2018, 1:25 PM IST

24-sepctember-14.jpg

ಜಗತ್ತಿನಲ್ಲಿ ಎಲ್ಲರೂ ಒಂದೇ ತೆರನಾಗಿ ಇರುವುದಿಲ್ಲ. ಕೆಲವರು ತಮಗನಿಸಿದ್ದನ್ನು ಮುಕ್ತವಾಗಿ ಹಂಚಿಕೊಂಡರೆ, ಇನ್ನು ಕೆಲವರು ಅಂತರ್ಮುಖಿಗಳಾಗಿರುತ್ತಾರೆ. ಉದ್ಯೋಗ ಕ್ಷೇತ್ರದಲ್ಲಿ ಅಂತರ್ಮುಖಿಗಳಾಗಿರುವವರು ಹೆಚ್ಚು ಸವಾಲುಗಳನ್ನು ಎದುರಿಸಬೇಕಾಗುತ್ತದೆ.

ಅಂತರ್ಮುಖಿಗಳು ಹೆಚ್ಚು ಅನುಭವ, ಜ್ಞಾನವಿದ್ದರೂ ಅದನ್ನು ತೋರ್ಪಡಿಸದೆ ತಮ್ಮ ಕೆಲಸಗಳನ್ನು ತಮ್ಮಷ್ಟಕ್ಕೆ ಮಾಡಿಕೊಂಡು ಹೋಗುತ್ತಾರೆ. ತುಂಬಾ ತಿಳಿದುಕೊಂಡಿರುತ್ತಾರೆ. ಆದರೆ ಅವರು ಅದನ್ನು ವ್ಯಕ್ತಪಡಿಸಲು ಹಿಂಜರಿಯುತ್ತಾರೆ. ಯಾರ ವಿಷಯಕ್ಕೂ ಅವರು ಭಾಗಿಯಾಗುವುದಿಲ್ಲ, ವಿಷಯಗಳ ಬಗ್ಗೆ ತಿಳಿದಿದ್ದರೂ ಅದನ್ನು ಸ್ಪಷ್ಟಿಕರಿಸುವುದಿಲ್ಲ. ಹೀಗಾಗಿ ವೃತ್ತಿ ಕ್ಷೇತ್ರದಲ್ಲಿ ಎಲ್ಲರಿಗಿಂತ ಒಂದು ಹೆಜ್ಜೆ ಹಿಂದೆಯೇ ಉಳಿದುಬಿಡುತ್ತಾರೆ.

ಅಂತರ್ಮುಖವಾಗಿರುವುದು ನಮ್ಮ ದೌರ್ಬಲ್ಯವಲ್ಲ ಎಂದು ಭಾವಿಸಿ ಅದನ್ನೇ ತಮ್ಮ ಶಕ್ತಿಯನ್ನಾಗಿ ಮಾಡಲು ಬದುಕಿನಲ್ಲಿ ಕೆಲವೊಂದಷ್ಟು ಅಂಶಗಳನ್ನು ಸೇರಿಸಿಕೊಳ್ಳುವುದು ಬಹುಮುಖ್ಯ.

· ನೀವು ತುಂಬಾ ನಾಚಿಕೆ ಸ್ವಭಾವದವರು, ಸಮಾಜದೊಂದಿಗೆ ಬೆರೆಯುವುದು ಕಷ್ಟವಾದಾಗ ನೀವು ನಿಮ್ಮನ್ನು ಜಗತ್ತಿಗೆ ತೋರ್ಪಡಿಸಲು ಸಿಗುವ ಹೊಸ ಏಣಿಯನ್ನು ಏರಬೇಕು. ನಿಮ್ಮಲ್ಲಿರುವ ಸೃಜನಶೀಲ ವ್ಯಕ್ತಿತ್ವವನ್ನು ಜಗತ್ತಿಗೆ ಪರಿಚಯಿಸಬೇಕು.

· ನಮ್ಮ ಕೆಲಸಗಳನ್ನು ನಾವೇ ಮಾಡಬೇಕು. ಸಂದರ್ಭಕ್ಕನುಗುಣವಾಗಿ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು. ಅದು ಅತಿಯಾಗಿ ಇರದೆ ನಮ್ಮತನವನ್ನು ಪ್ರಸ್ತುತಪಡಿಸುವಂತಿರಬೇಕು. ನಿಮ್ಮ ಪ್ರತಿಭೆ ಕೆಲಸದಲ್ಲಿ ಕಾಣುವಂತಿರಬೇಕು. ಇದಕ್ಕೆ ಮೊದಲೇ ಯೋಜನೆ ರೂಪಿಸಿಕೊಳ್ಳಿ ಮತ್ತು ಅದನ್ನು ಪಾಲಿಸಿ.

· ಸಾರ್ವಜನಿಕ ಸ್ಥಳಗಳಲ್ಲಿ ಮಾತನಾಡುವುದು, ಸ್ನೇಹಿತರೊಂದಿಗೆ ಬೇರೆಯುವುದು, ಸಾಮಾಜಿಕ ಸಂವಹನ ಇವು ಯಾವುದೂ ನಿಮ್ಮ ಕ್ಷೇತ್ರವಲ್ಲ. ಆದರೆ ನಿಮ್ಮ ಪ್ರತಿಭೆಯನ್ನು ತೋರ್ಪಡಿಸಲು ಇವೆಲ್ಲವೂ ವೇದಿಕೆ. ನಿಮ್ಮ ಆಸಕ್ತಿಯನ್ನು ನೀವೇ ಗುರುತಿಸಿಕೊಳ್ಳಿ. ನಿಮ್ಮ ಕೌಶಲಗಳನ್ನು ಪ್ರದರ್ಶನಕ್ಕೆ ಇಟ್ಟಾಗ ಮಾತ್ರ ಅದು ಇನ್ಮೊಬ್ಬರಿಗೆ ತಿಳಿಯಲು ಸಾಧ್ಯ. ಹೀಗಾಗಿ ಪ್ರತಿಯೊಂದು  ಕೆಲಸವನ್ನೂ ಕ್ರಿಯಾಶೀಲತೆಯಿಂದ ಕೆಲಸ ಮಾಡಿ.

· ಜನ ಏನಾಂತಾರೋ ಎಂದುಕೊಂಡು ಹೆಚ್ಚಿನವರು ಅಂತರ್ಮುಖಿಯಾಗಿ ಬಿಡುತ್ತಾರೆ. ಯಾರೊಂದಿಗೂ ಸರಿಯಾಗಿ ಮಾತನಾಡುವುದಿಲ್ಲ. ಇದರ ಪ್ರಯೋಜನ ನಿಮ್ಮ ಸಹೋದ್ಯೋಗಿಗಳು ಪಡೆಯಬಹುದು. ಹೀಗಾಗಿ ನಿಧಾನವಾಗಿಯಾದರೂ ನಿಮಗೆ ಸರಿ ಎಣಿಸಿದ್ದನ್ನು ಹಂಚಿಕೊಳ್ಳಿ. ಸಂವಾದ, ಸಭೆಯಲ್ಲಿ ಎಲ್ಲರ ಮುಂದೆ ಮಾತನಾಡಲು ಹಿಂಜರಿಕೆಯಾದರೆ ಕನ್ನಡಿ ಮುಂದೆ ನಿಂತು ಮಾತನಾಡಿ ಅಭ್ಯಾಸ ಮಾಡಿಕೊಳ್ಳಿ.

· ಸಹೋದ್ಯೋಗಿಗಳೊಂದಿಗೆ ಆದಷ್ಟು ಬೇರೆಯಬೇಕು, ನೀವು ಅವರೊಂದಿಗೆ ಪಾರ್ಟಿಗೆ ಹೋಗಬೇಕಾಗಿಲ್ಲ. ಆದರೆ ಬಿಡುವಿನ ವೇಳೆ ಕಾಫಿಗೆ ಹೋಗಿ ಅವರೊಂದಿಗೆ ಮಾತನಾಡಿ. ಆಗ ನಿಮಗೆ ಅವರ ವ್ಯಕ್ತಿತ್ವ ತಿಳಿಯುತ್ತದೆ ಮಾತ್ರ ವಲ್ಲ ನಿಮ್ಮನ್ನು ಅವರು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.

· ದಿನದ 24 ಗಂಟೆಯಲ್ಲಿ ನಿಮಗಾಗಿ ಕೆಲವು ಹೊತ್ತು ಮೀಸಲಿಡಿ. ಆ ಸಂದರ್ಭದಲ್ಲಿ ನೀವು ನಿಮ್ಮ ಆಗು ಹೋಗುಗಳ ಬಗ್ಗೆ ವಿಶ್ಲೇಷಿಸಿ. ಇದು ನಿಮ್ಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. 

ಪ್ರೀತಿ ಆರ್‌. ಭಟ್‌

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.