ಜೇನು ಕೃಷಿಯಿಂದ ಬದುಕಿನ ಖುಷಿ ಕಂಡ ಕುಮಾರ್‌


Team Udayavani, May 5, 2019, 6:04 AM IST

23

ಜೇನು ಕೃಷಿಯನ್ನೇ ನೆಚ್ಚಿಕೊಂಡು ಬದುಕಿನ ಖುಷಿ ಕಂಡವರು ಅನೇಕರಿದ್ದಾರೆ. ಅವರಲ್ಲಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಗೋಳಿಯಡ್ಕದ ಎಲ್. ಕುಮಾರ್‌ ಕೂಡ ಒಬ್ಬರು.

ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಕುಮಾರ್‌ ಅವರಿಗೆ ಜೇನು ಕೃಷಿಯಲ್ಲಿ 45 ವರ್ಷಗಳ ಅನುಭವವಿದೆ. ಈ ಬಗ್ಗೆ ಇತರರಿಗೆ ಮಾಹಿತಿ ನೀಡುವುದರೊಂದಿಗೆ 800 ಜೇನು ಪೆಟ್ಟಿಗೆಗಳಲ್ಲಿ ಜೇನು ಕೃಷಿ ಮಾಡುತ್ತಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿಯ ಮಾರ್ಥಂಡ ಎಂಬಲ್ಲಿ ಜೇನು ಕೃಷಿಯ ಬಗ್ಗೆ ಕಲಿತು, ಅಲ್ಲಿಯೇ ಜೇನು ಕೃಷಿ ಪ್ರಾರಂಭಿಸಿ, ಬಳಿಕ ಕೇರಳಕ್ಕೆ ಬಂದರು. ಅನಂತರ ಕರ್ನಾಟಕಕ್ಕೆ ಆಗಮಿಸಿ ಧರ್ಮಸ್ಥಳ ಸಹಿತ ಇತರೆಡೆ ಜೇನು ಕೃಷಿ ಮಾಡಿ, ಮೂರು ವರ್ಷಗಳಿಂದ ರೆಂಜಿಲಾಡಿಯ ಗೋಳಿಯಡ್ಕದಲ್ಲಿ ಜೇನು ಕೃಷಿಯನ್ನು ಮುಂದುವರಿಸುತ್ತಿದ್ದಾರೆ. ಇವರಿಗೆ ಪತ್ನಿ ರೇಖಾ ಹಾಗೂ ಅತ್ತೆ ಭವಾನಿ ಸಹಕರಿಸುತ್ತಿದ್ದಾರೆ.

24 ಎಕ್ರೆಯಲ್ಲಿ 800 ಪೆಟ್ಟಿಗೆ
ಕುಮಾರ್‌ ಅವರು ಹತ್ತಿರದ ಬೇರೆಯವರ ಜಮೀನಿನಲ್ಲಿ ಸುಮಾರು 24 ಎಕ್ರೆ ಜಾಗದ ರಬ್ಬರ್‌ ತೋಟದಲ್ಲಿ ಮರಗಳ ಮಧ್ಯೆ ಸುಮಾರು 800 ಪೆಟ್ಟಿಗೆಗಳಲ್ಲಿ ಜೇನು ಸಾಕಾಣಿಕೆ ನಡೆಸುತ್ತಿದ್ದಾರೆ. ಒಂದು ಪೆಟ್ಟಿಗೆಯಲ್ಲಿ ಸುಮಾರು 15ರಿಂದ 20 ಕೆ.ಜಿ. ಜೇನು ಪಡೆಯಬಹುದು ಎನ್ನುತ್ತಾರೆ ಕುಮಾರ್‌.

ಜೇನು ಕೃಷಿ ನಿರ್ವಹಣೆ
ಜೇನು ಸಾಕಾಣಿಕೆ (ಜೇನು ಪೆಟ್ಟಿಗೆ ಇಡುವ) ಪ್ರಾರಂಭಿಸುವ ಒಂದು ಕಿ.ಮೀ. ಸುತ್ತಳತೆಯಲ್ಲಿ ಹೂ ಬಿಡುವ, ಸಸ್ಯ ಸಂಪತ್ತಿನ, ಮಾಲಿನ್ಯ ರಹಿತ ಗಾಳಿ, ನೀರು, ಮಳೆ, ಬಿಸಿಲಿನಿಂದ ರಕ್ಷಣೆ, ನೆರಳಿನ ಪ್ರದೇಶ ಆಯ್ಕೆ ಮಾಡಬೇಕು. ಜೇನು ಕುಟುಂಬಗಳನ್ನು ವಾರಕ್ಕೊಮ್ಮೆ ಪರೀಕ್ಷಿಸಬೇಕು, 10- 15 ದಿನಕ್ಕೊಮ್ಮೆ ಪೆಟ್ಟಿಗೆ ಸ್ವಚ್ಛಗೊಳಿಸಬೇಕು. ನಿಸರ್ಗದಲ್ಲಿ ಪರಾಗ ಮತ್ತು ಮಕರಂದದ ಪ್ರಮಾಣ ಕಡಿಮೆಯಾದರೆ ಸಕ್ಕರೆ ಪಾಕ ಒದಗಿಸಬೇಕು. ಮಳೆಗಾಲಕ್ಕೆ 10- 15 ದಿನಗಳ ಮೊದಲು ಜೇನು ತುಪ್ಪ ಸಂಗ್ರಹಿಸುವುದು ನಿಲ್ಲಿಸಬೇಕು. ಜೇನುಗಳು ಮಳೆಗಾಲ ಮುಗಿದು ಸಸ್ಯಗಳು ಹೂ ಬಿಡುವ ಸಮಯದಲ್ಲಿ ವಂಶಾಭಿವೃದ್ಧಿಗೆ ಗಮನ ಕೊಡುತ್ತವೆ ಎನ್ನುತ್ತಾರೆ ಅವರು.

ಲಾಭದಾಯಕ ಕೃಷಿ
ಜೇನು ಕೃಷಿ ಲಾಭದಾಯಕವಾಗಿದ್ದು, ಜನವರಿಯಿಂದ ಮೇ ತಿಂಗಳ ನಡುವಿನಲ್ಲಿ ಜೇನು ತುಪ್ಪ ತೆಗೆಯುತ್ತಿದ್ದೇನೆ. ಈ ಸಂದರ್ಭದಲ್ಲಿ ದೇರಾಜೆಯಲ್ಲಿನ ಅನುಭವಿ ಕಾರ್ಮಿಕರು ಕೆಲಸಕ್ಕೆ ಬರುತ್ತಾರೆ. ಉಳಿದ ದಿನಗಳಲ್ಲಿ ನಾನೇ ಮನೆಯವರೊಂದಿಗೆ ಜೇನು ಕೃಷಿಯನ್ನು ನೋಡಿಕೊಳ್ಳುತ್ತಿದ್ದೇನೆ ಎನ್ನುತ್ತಾರೆ ಕುಮಾರ್‌.

ಜೇನಿನ ಪೆಟ್ಟಿಗೆಯಿಂದ ಅದರ ಪಟ್ಟನ್ನು ಬೇರ್ಪಡಿಸಿ ಯಂತ್ರದ ಮೂಲಕ ತುಪ್ಪವನ್ನು ತೆಗೆದು ಶುದ್ಧ ತುಪ್ಪವನ್ನು ಡಬ್ಬದಲ್ಲಿ ಜಾಗ್ರತೆಯಾಗಿ ಶೇಖರಿಸಲಾಗುತ್ತದೆ. ಬಳಿಕ ತುಪ್ಪವನ್ನು ಮಂಗಳೂರು ಅಥವಾ ಜೇನು ಸಾಕಾಣಿಕೆಯ ಸೊಸೈಟಿಗೆ ಮಾರಾಟ ಮಾಡುತ್ತೇನೆ. ಜೇನಿನ ಪಟ್ಟಿನಿಂದ ತುಪ್ಪ ಬೇರ್ಪಡಿಸಿ ಉಳಿದ ಅಂಟಿನಿಂದ ಮೇಣ ತಯಾರಿಸಿ ಇದರಿಂದಲೂ ಆದಾಯ ಗಳಿಸಬಹುದು ಎಂದು ಅವರು ವಿವರಿಸುತ್ತಾರೆ.

ಇವರ ಬಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಸೇರಿದಂತೆ ಅನೇಕ ಮಂದಿ ಬಂದು ಜೇನು ಸಾಕಾಣಿಕೆಯ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಪಡೆದುಕೊಳ್ಳುತ್ತಿದ್ದಾರೆ.

ಮಳೆಗಾಲದಲ್ಲಿ ಎಚ್ಚರಿಕೆ ಅಗತ್ಯ
ಮಳೆಗಾಲದಲ್ಲಿ ನೀರು ಒಳಹೋಗದಂತೆ ಜೇನು ಪೆಟ್ಟಿಗೆಗೆ ಪ್ಲಾಸ್ಟಿಕ್‌ನಿಂದ ಮೇಲ್ಭಾಗ ಮುಚ್ಚಬೇಕಾಗಿದ್ದು, ಅಲ್ಲದೇ ಜೇನು ಪೆಟ್ಟಿಗೆಗೆ ಇರುವೆಗಳು ಬಾರದಂತೆ ಪೆಟ್ಟಿಗೆಯ ಸುತ್ತಲೂ ಇರುವೆ ನಾಶಕ ಸಿಂಪಡಿಸಬೇಕು. ಜೇನು ಪೆಟ್ಟಿಗೆಯ ಬಳಿ ವಾರದಲ್ಲೊಮ್ಮೆ ಭೇಟಿ ನೀಡಿ ಪರಿಶೀಲಿಸುವುದು ಉತ್ತಮ. ಅಲ್ಲದೆ, ಇವುಗಳ ಆಹಾರಕ್ಕಾಗಿ ಸಕ್ಕರೆ ನೀರನ್ನು ಪೆಟ್ಟಿಗೆಯಲ್ಲಿ ತಂದಿಡಬೇಕು.

ದಯಾನಂದ ಕಲ್ನಾರ್

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.