ಬದುಕಿನ ಪಥ ಅರಿತುಬಾಳಿ


Team Udayavani, Oct 15, 2018, 2:26 PM IST

15-october-10.gif

ಪ್ರತಿಯೊಬ್ಬರಿಗೂ ಅವರದ್ದೇ ಆದ ಬದುಕಿನ ಪಥ ಇದೆ. ಅದನ್ನು ಅರಿತು ಜೀವನ ರೂಪಿಸಿಕೊಳ್ಳಬೇಕು. ಆಸೆ – ಆಕಾಂಕ್ಷೆಗಳಿಗೆ ಸ್ವ-ನಿಯಂತ್ರಣ ಹಾಕಿಕೊಂಡು ಜೀವನದಲ್ಲಿ ಸ್ಪಷ್ಟವಾದ ಗುರಿ, ಉದ್ದೇಶ, ಧ್ಯೇಯಗಳನ್ನು ಅಳವಡಿಸಿ ಕೊಳ್ಳಬೇಕು. ಅಲ್ಲದೆ ಅವುಗಳ ಈಡೇರಿಕೆಗೆ ಸನ್ಮಾರ್ಗವನ್ನು ಅನುಸರಿಸುವುದು ಕೂಡ ಮುಖ್ಯ. ಮನುಷ್ಯ ಜನ್ಮ ಸಾರ್ಥಕ ಎಂಬ ಮಾತಿದೆ. ಆದರೆ ಕೇವಲ ಮನುಷ್ಯರಾಗಿ ಬಾಳಿದರೆ ಸಾಲದು, ಸಿಕ್ಕ ಅವಕಾಶ ಸೇವೆಗೆ ಮೀಸಲು ಎಂಬ ಭಾವನೆ ಮೂಡಬೇಕು. ಆಗ ಮಾತ್ರ ವ್ಯಕ್ತಿಗೆ ಎಂಥ ಸ್ಥಾನಮಾನ ಸಿಕ್ಕರೂ ಆತ ಸಮಯದ ಸದ್ಬಳಕೆ ಮಾಡಿಕೊಂಡು ಮತ್ತೊಬ್ಬರಿಗೆ ಮಾದರಿಯಾಗಬಲ್ಲ.

ಬದುಕು ಸುಂದರ ಎನ್ನುವುದು ಎಷ್ಟು ನಿಜ. ಹಾಗೇ ಸಂಕೀರ್ಣ ಕೂಡ ಹೌದು. ಕಣ್ಣ ಮುಂದಿರುವ ಭೂಮಿಯ ಮೇಲಿನ ಬದುಕನ್ನು ಬಿಟ್ಟು ಕಲ್ಪನೆಯ ಸ್ವರ್ಗಕ್ಕೆ ಹಂಬಲಿಸೋದರಲ್ಲಿ ಅರ್ಥವಿಲ್ಲ. ಸುಖ ಬಯಸದವರು ಯಾರೂ ಇಲ್ಲ. ನಮ್ಮ ಮಧ್ಯಮ ವರ್ಗದ ಮನೆಯ ಒಂದು ಬದಿಯಲ್ಲಿರುವ ಬಂಗಲೆಯಂತಹ ಮನೆಯವರನ್ನು ನೋಡಿ ಹಲುಬುತ್ತೇವೆ. ಆದರೆ ಇನ್ನೊಂದು ಬದಿಯಲ್ಲಿರುವ ಹರುಕಲು ಗುಡಿಸಲಿನವನನ್ನು ನೋಡಿ ಕನಿಕರ ವ್ಯಕ್ತಪಡಿಸುವುದಿಲ್ಲ. ಬೇವು ಬೆಲ್ಲ ಮಿಶ್ರ ಮಾಡಿ ಬೆಲ್ಲವನ್ನು ಮಾತ್ರ ತಿನ್ನುವಂತಾಗಬೇಕು. ಇಂತಹ ಬದುಕು ಎಲ್ಲರಿಗೂ ಇಷ್ಟ. ಬದುಕೊಂದು ಈರುಳ್ಳಿಯಂತೆ. ಒಂದೊಂದೇ ಪದರ ಕಳಚಿದಷ್ಟು ಮತ್ತೊಂದು, ಕೊನೆಯ ಪದರ ತೆರೆಯುವಷ್ಟರಲ್ಲಿ ನಾವೇ ಇಲ್ಲ.

ಕಾಡುವ ಮೂರು ಮದಗಳು
ಯೌವನ, ಅಧಿಕಾರ, ಹಣ ಎಂಬ ಮೂರು ಮದಗಳು ನಮ್ಮನ್ನು ಸಾಮಾನ್ಯವಾಗಿ ಕಾಡುತ್ತವೆ. ಯೌವನದ ಮದದಲ್ಲಿ ಅಡ್ಡದಾರಿ ಹಿಡಿದರೆ, ಹಣದ ಮದದಲ್ಲಿ ಏನು ಬೇಕಾದರೂ ಮಾಡಬಲ್ಲೆ ಎಂಬ ಅಹಂ ಕಾಡುತ್ತದೆ. ಅಧಿಕಾರವೂ ಯಾರನ್ನೂ ಲೆಕ್ಕಿಸಬೇಕಿಲ್ಲ ಎಂಬ ಭಾವ ಬೆಳೆಸುತ್ತದೆ. ಯಾರು ಇವುಗಳ ದಾಸರಾಗುತ್ತಾರೋ ಅವರ ವ್ಯಕ್ತಿತ್ವದ ಅಧಃಪತನವಾಗುತ್ತದೆ. ಆದರೆ ಈ ವಿಚಾರಗಳನ್ನು ಉತ್ತಮ ಕಾರ್ಯಕ್ಕಾಗಿ ಬಳಸಿದರೆ ಬದುಕಿನಲ್ಲಿ ಯಶಸ್ವಿಯಾಗಬಹುದು.

ಇತಿ ಮಿತಿ ಇರಲಿ
ಎತ್ತರಕ್ಕೆ ಬೆಳೆದಿರುವುದು ಬಾಗಲೇಬೇಕು. ಬಾಗಿದ್ದು ಬೀಳಲೇಬೇಕು. ಈ ನಿಜ ಸಂಗತಿಯನ್ನು ಅರಿತಾಗ ನಮ್ಮ ಬದುಕು ಇತಿಮಿತಿಯಲ್ಲಿ ನಡೆಯುತ್ತದೆ. ಸಕಲ ಜೀವರಾಶಿಗಳಲ್ಲಿ ಶ್ರೇಷ್ಠ ಎನಿಸಿರುವ ಮಾನವ ಜಿವನವನ್ನು ಉಪಯುಕ್ತವಾಗುವಂತೆ ಬಳಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ. ಇದನ್ನು ತಿಳಿದವರು ಸದಾ ಮನುಷ್ಯ ಸಂಬಂಧಗಳನ್ನು ಕಟ್ಟುವ ಸದಾಶಯದಿಂದ ಬದುಕುತ್ತಾರೆ. ಇಂತಹ ಮನೋಭಾವ ಇಲ್ಲವಾದರೆ ಅಹಂನಿಂದಾಗಿ ಪ್ರತಿನಿತ್ಯ ಸಂಕಟ ಎದುರಿಸುವಂತಾಗುತ್ತದೆ. ಪರಿವರ್ತನೆ ಜಗದ ನಿಯಮ. ನಾವು ಕೂಡ ಪರಿವರ್ತನೆಯ ಕಡೆ ಸಾಗಬೇಕೇ ವಿನಾ ಸಮಾಪ್ತಿಯ ಕಡೆಗಲ್ಲ. ಜಗತ್ತಿನ ಇಂದಿನ ವಿದ್ಯಮಾನಗಳು ಸಮಾಪ್ತಿಯೆಡೆಗೆ ಕೊಂಡೊಯ್ಯುತ್ತಿವೆ. ಇದರಿಂದ ಮೌಲ್ಯಗಳು ಕುಸಿಯುತ್ತಿವೆ. 

ಸ್ವ-ವಿಮರ್ಶೆ ಅಗತ್ಯ
ಎಲ್ಲವನ್ನು, ಎಲ್ಲರನ್ನೂ ಮೀರಿ ಬದುಕಬೇಕೆಂಬ ಆಸೆ. ಹಾಗಾಗಿ ನಾವು ಲಗಾಮಿಲ್ಲದ ಕುದುರೆಯಂತೆ ಓಡುತ್ತೇವೆ. ಸ್ವ-ವಿಮರ್ಶೆಯ ಮನೋಭಾವ ಬೆಳೆಸಿಕೊಂಡಾಗ ಆತ ಯಾರನ್ನೂ ದೂರಲಾರ, ತನ್ನ ಬದುಕಲ್ಲಿ ಏನೇ ನಡೆದರೂ ಅದು ತನ್ನಿಂದಲೇ ನಡೆದಿದೆ ಎನ್ನುವ ಧೋರಣೆ ತಳೆಯುತ್ತಾನೆ. ಸ್ವ-ವಿಮರ್ಶೆ ಎಂಬುದೊಂದು ಆತ್ಮಾವಲೋಕನದ ಘಟ್ಟ, ಇದೊಂದು ಆರೋಗ್ಯಕರ ಚಿಂತನೆ, ಇಂಥ ಚಿಂತನೆ ಬೆಳೆಸಿಕೊಂಡವನು ಎಲ್ಲರನ್ನೂ ಅವರಂತೆ ಕಾಣುತ್ತಾನೆ, ಬೇಡದ ಆಲೋಚನೆಗಳಿಗೆ ಲಗಾಮು ಹಾಕಿ ಮನಸ್ಸೆಂಬ ಕುದುರೆಯನ್ನು ಸ್ವಪಥದಲ್ಲಿ ಚಲಿಸುವಂತೆ ಮಾಡುತ್ತಾನೆ. 

ಗಣೇಶ ಕುಳಮರ್ವ

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.