ಹೃದಯದಲ್ಲಿ ಪ್ರೀತಿಯ ಬೀಜ ಬಿತ್ತೋಣ


Team Udayavani, Jan 13, 2020, 5:44 AM IST

SHIV-3

“ಹೃದಯ ಅತ್ಯಂತ ಫ‌ಲವತ್ತಾದ ಜಾಗ. ಅಲ್ಲಿ ನೀವು ಪ್ರೇಮ, ದ್ವೇಷ, ಮತ್ಸರ, ಸೌಹಾರ್ದ ಏನನ್ನೇ ಬಿತ್ತಿದರೂ ಸೊಂಪಾಗಿ ಬೆಳೆಯುತ್ತದೆ. ಅದರಲ್ಲಿ ಬಿಡುವ ಫ‌ಲವನ್ನು ನಾವು ತಿನ್ನಲೇಬೇಕಿರುವುದು ಕಡ್ಡಾಯ. ಆದ್ದರಿಂದ ಬಿತ್ತುವಾಗಲೇ ಫ‌ಲದ ಬಗ್ಗೆ ಎಚ್ಚರವಿರಲಿ’ ಎನ್ನುವುದು ವಿವೇಕಾನಂದರ ಮಾತು. ಹೌದು… ನಮ್ಮ ಹೃದಯದಲ್ಲಿ ಪ್ರೀತಿಯ ಬೀಜ ಬಿತ್ತಿದರೆ ಅಲ್ಲಿ ಬೆಳೆಯುವುದು ಪ್ರೀತಿಯೇ. ಬೇರೆಯವರಿಗೂ ನಮ್ಮಿಂದ ಪ್ರೀತಿಯೇ ಹಂಚಲು ಸಾಧ್ಯ. ನಮ್ಮಲ್ಲಿ ದ್ವೇಷ, ಮತ್ಸರಗಳಿದ್ದರೆ ನಾವು ಯಾರನ್ನೂ ಪ್ರೀತಿಯಿಂದ ಕಾಣಲು ಸಾಧ್ಯವಿಲ್ಲ.

ನಮ್ಮ ಹೃದಯದೊಳಗಡೆ ಪ್ರೀತಿಯಿದ್ದರೆ ಎಲ್ಲರಲ್ಲೂ ನಾವು ಪ್ರೀತಿಯನ್ನೇ ಕಾಣುತ್ತೇವೆ. ದ್ವೇಷ, ಅಸೂಯೆಗಳು ಮನುಷ್ಯನಲ್ಲಿರುವ ಅನುಕಂಪ, ಮಾನವೀಯತೆಗಳನ್ನು ಕೊಲ್ಲುತ್ತವೆ. ಆ ವ್ಯಕ್ತಿಯಲ್ಲಿ ಪ್ರೀತಿಯನ್ನು ಕಾಣಲು ಸಾಧ್ಯವೇ ಇಲ್ಲ. ದ್ವೇಷದಿಂದ ಏನನ್ನೂ ಸಾಧಿಸಲು ಏನು ಸಾಧ್ಯವಿಲ್ಲ. ಮನೆ ಪಕ್ಕದಲ್ಲಿ ಇದ್ದ ಒಬ್ಬ ವ್ಯಕ್ತಿ ದ್ವೇಷ ದ್ವೇಷ ಎನ್ನುತ್ತಾ ತನ್ನ ಜೀವನವನ್ನೀಡಿ ದ್ವೇಷ ಸಾಧನೆಗೆ ಮೀಸಲಿರಿಸಿದ. ತನ್ನೊಂದಿಗಿದ್ದವರನ್ನೂ ಪ್ರೀತಿಸದೇ, ಅವರೊಂದಿಗೆ ಸಮಯ ಕಳೆಯದೆ ತನ್ನ ಜೀವನದ ಖುಷಿಯನ್ನೂ ಅನುಭವಿಸದೆ ದ್ವೇಷದ ಹಿಂದೆ ಹೊರಟ. ಆದರೆ ದ್ವೇಷ ಸಾಧನೆಯಲ್ಲೇ ಜೀವನ ಕಳೆಯುತ್ತಿದ್ದ ಆತನಿಗೆ ಒಂದು ದಿನ ಅಪಘಾತವಾಗಿ ಆಸ್ಪತ್ರೆ ಸೇರಿದ.ಆತನೊಂದಿಗಿದ್ದದ್ದು ಆತನ ದ್ವೇಷವೇ ಹೊರತು ಯಾರೂ ಜತೆಗಿರಲಿಲ್ಲ. ಆತನಿಗೇನೋ ತಾನು ಮತ್ತೆ ತನ್ನ ತಪ್ಪನ್ನು ತಿದ್ದಿಕೊಳ್ಳಲು ಅವಕಾಶ ಸಿಕ್ಕಿತು. ಆದರೆ ಇನ್ನು ಎಷ್ಟೋ ಮಂದಿಗೆ ಆ ಅವಕಾಶವೇ ಸಿಗುವುದಿಲ್ಲ. ತಾನು ಕಳೆದುಕೊಂಡಿರುವುದು ಏನು ಎನ್ನುವುದನ್ನು ತಿಳಿಯುವಾಗಲೇ ಜೀವನದ ಕೊನೆಯ ಹಂತದಲ್ಲಿರುತ್ತಾರೆ.

ಪ್ರತಿಯೊಬ್ಬರಲ್ಲೂ ಪ್ರೀತಿ ಕಾಣಿಸುವುದು ತಮಲ್ಲಿ ನಂಬಿಕೆಯಿದ್ದಾಗ. ನಮ್ಮಲ್ಲಿ ನಂಬಿಕೆಯಿದ್ದರೆ ಬೇರೆಯವರ ಮೇಲೂ ನಂಬಿಕೆ ಬರಲು ಸಾಧ್ಯ. ನಂಬಿಕೆಯಿದ್ದರೆ ಮಾತ್ರ ಪ್ರೀತಿ, ಸ್ನೇಹ. ನಂಬಿಕೆ ಮನುಷ್ಯ ಸಂಬಂಧಗಳ ಅಡಿಪಾಯ. ನಂಬಿಕೆಯೇ ಇಲ್ಲದಿದ್ದರೆ ಯಾವುದೇ ಸಂಬಂಧಗಳು ಬಾಳಿಕೆ ಬರುವುದು ಎರಡೇ ದಿನ. ಯಾವುದೇ ಸಂಬಂಧಗಳು ಉಳಿಯಬೇಕಾದರೆ ಅಲ್ಲಿ ನಂಬಿಕೆ ಬೇಕು. ಸಂಬಂಧಗಳಿಗಷ್ಟೇ ಅಲ್ಲ. ನಮ್ಮ ಕೆಲಸದಲ್ಲೂ ನಮಗೆ ನಂಬಿಕೆಯಿರಬೇಕು.

ಖುಷಿಯ ಮಾಪನ ಸಂಪತ್ತು ಆಗದಿರಲಿ
ಜೀವನದಲ್ಲಿ ಎಷ್ಟೇ ಸಂಪತ್ತು, ಸೌಂದರ್ಯ ಇದ್ದರೂ ಅದಾವುದೂ ಶಾಶ್ವತವಲ್ಲ ಎನ್ನುವುದು ಗೊತ್ತಿದ್ದರೂ ನಾವು ಅವುಗಳ ಬೆನ್ನತ್ತಿ ಸಂಬಂಧಗಳನ್ನು ಕಡೆಗಣಿಸುತ್ತೇವೆ. ಎಷ್ಟೇ ಬಡವನಾದರೂ ಆತ ಜೀವನದಲ್ಲಿ ಖುಷಿಯಲ್ಲಿರುತ್ತಾನೆ. ಯಾಕೆಂದರೆ ಆತನ ಖುಷಿಯ ಮಾಪನ ಹಣ, ಸೌಂದರ್ಯವಲ್ಲ. ಬದಲಾಗಿ ಜೀವನದ ಖುಷಿಯನ್ನು ಆತ ತನ್ನ ಜತೆಗಿದ್ದವರು, ತನ್ನ ಕೆಲಸ, ತನ್ನ ಸ್ವಾಭಿಮಾನದಲ್ಲೇ ಕಂಡಿರುತ್ತಾನೆ.

ಸಾಧನೆ, ಗುರಿಯ ಬೆನ್ನತ್ತಿ ಅಥವಾ ಸಂಪತ್ತಿನ ಹಿಂದೆ ಹೋಗಿ ಸಂಬಂಧಗಳನ್ನು ಕಳೆದುಕೊಳ್ಳುವುದು ಬೇಡ. ಒಂದು ದಿನ ಸಾಧನೆಯ ತುತ್ತತುದಿ ತಲುಪಿದ ಮೇಲೆ ನಮ್ಮ ಸಂತೋಷ ಆಚರಣೆಗೂ ಜತೆಗೆ ಯಾರೂ ಇರುವುದಿಲ್ಲ. ಗುರಿಯ ಜತೆಗೆ ಜತೆಗಿದ್ದವರಿಗೂ ಸಮಯ ನೀಡಿ. ಪ್ರೀತಿ ನೀಡಿ.

-  ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.