ಸ್ವಿಮ್ಮಿಂಗ್‌ ಹಾಟ್‌ಸ್ಪಾಟ್‌ ನಿರ್ಮಾಣವಾಗಲಿ


Team Udayavani, Apr 14, 2019, 6:29 AM IST

swimming-pool

ನಗರಗಳಲ್ಲಿ ನೀರಿನ ಸಮಸ್ಯೆ ತಲೆ ದೋರದಂತೆ ಅನೇಕ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಯಾಕೆಂದರೆ ನಗರದ ಆವಶ್ಯಕತೆಗಳು ಹೆಚ್ಚಾಗಿರುತ್ತವೆ. ಜತೆಗೆ ಅಭಿವೃದ್ಧಿಯ ನೆಲೆಯಲ್ಲಿ ಇದು ಮುಖ್ಯವಾಗಿರುತ್ತದೆ. ಆದರೆ ನೀರಿನ ಸಮಸ್ಯೆ ಎಂಬುದು ನಗರದ ಜನರು ಮಾತ್ರವಲ್ಲ ಆಡಳಿತವನ್ನೂ ಹೈರಾಣಾಗಿಸಿ ಬಿಡುತ್ತದೆ.

ಹೀಗಾಗಿ ನೀರಿನ ಸಮಸ್ಯೆ ಎದುರಿಸಲು ಒಂದಲ್ಲ ಒಂದು ರೀತಿಯ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿರುತ್ತವೆ. ನೀರಿನ ಸಂರಕ್ಷಣೆ ಯಾವ ರೀತಿಯಲ್ಲಿ ಮಾಡಬಹುದು ಎಂಬ ಕೆಲವು ಚಿಂತನೆಗಳು, ಯೋಜನೆಗಳು ನಮ್ಮ ಬಳಿ ಇದೆಯಾದರೂ ಸ್ವಿಮ್ಮಿಂಗ್‌ ಪೂಲ್‌ನ ವಿಚಾರದಲ್ಲಿ ನಾವು ಹಿಂದೆ ಇದ್ದೇವೆ. ಯಾಕೆಂದರೆ ನಮ್ಮ ನಗರಗಳಲ್ಲಿ ಒಂದೆರಡು ಸಾರ್ವಜನಿಕ ಸ್ವಿಮ್ಮಿಂಗ್‌ ಪೂಲ್‌ಗ‌ಳಿವೆ. ಉಳಿದಂತೆ ಖಾಸಗಿ ಸ್ವಿಮ್ಮಿಂಗ್‌ ಪೂಲ್‌ಗ‌ಳು ಇರುತ್ತವೆ. ಆದರೆ ಸಾರ್ವಜನಿಕವಾಗಿ ಅತೀ ಹೆಚ್ಚು ಸ್ವಿಮ್ಮಿಂಗ್‌ ಪೂಲ್‌ಗ‌ಳನ್ನು ನಿರ್ಮಿಸಬೇಕು ಎಂಬ ಚಿಂತನೆ ಇದ್ದರೆ ಪ್ಯಾರಿಸ್‌ನಲ್ಲಿ ಅಳವಡಿಸಿದ ಯೋಜನೆಯನ್ನು ಜಾರಿಗೆ ತರಬಹುದು.

ಸ್ವಿಮ್ಮಿಂಗ್‌ ಹಾಟ್‌ಸ್ಪಾಟ್‌
ಗ್ರಾಮೀಣ ಮಟ್ಟಕ್ಕಿಂತ ಹೆಚ್ಚಾಗಿ ನಗರ ಪ್ರದೇಶಗಳು ಬೇಸಗೆ ಸಂದರ್ಭದಲ್ಲಿ ಸುಡು ಬಿಸಿಲು ಕಾಡುತ್ತದೆ. ಯಾವುದಾದರೂ ಸ್ವಿಮ್ಮಿಂಗ್‌ ಪೂಲ್‌ ಇದ್ದರೆ ಸಾಕು ಹಾರಿ ಬಿಡೋಣ ಎಂದೆನಿಸುತ್ತದೆ. ಆದರೆ ನಗರದಲ್ಲಿ ಸಾರ್ವಜನಿಕರಿಗಾಗಿ ಹೆಚ್ಚು ಸ್ವಿಮ್ಮಿಂಗ್‌ಪೂಲ್‌ಗ‌ಳನ್ನು ನಿರ್ಮಿಸುವುದು ಅಸಾಧ್ಯ. ಮಾತ್ರವಲ್ಲ ಅದರ ನಿರ್ವಹಣೆಯೂ ಕಷ್ಟ. ಆದರೆ ಇದಕ್ಕೆಲ್ಲಾ ಪರಿಹಾರ ಎಂಬಂತೆ ಪ್ಯಾರಿಸ್‌ನ ಆಡಳಿತ ಮಂಡಳಿ ಕೈಗೊಂಡ ವಿನೂತನ ಯೋಜನೆಯೇ ಸ್ವಿಮ್ಮಿಂಗ್‌ ಹಾಟ್‌ಸ್ಪಾಟ್‌. ಹೌದು ಹರಿಯುತ್ತಿರುವ ನದಿಯನ್ನೇ ಸ್ವಿಮ್ಮಿಂಗ್‌ ಪೂಲ್‌ಗ‌ಳಾಗಿ ಪರಿವರ್ತಿಸುವುದು.

ನದಿಗಳ ಇಕ್ಕೆಲಗಳಲ್ಲಿ ಸ್ವಿಮ್ಮಿಂಗ್‌ ಪೂಲ್‌ ಮಾದರಿಯಂತೆ ಅನೇಕ ಚೌಕಟ್ಟುಗಳನ್ನು ನಿರ್ಮಿಸಿ ಆ ಮುಖೇನ ಹೆಚ್ಚಿನ ಜನರಿಗೆ ಈಜಲು ಅವಕಾಶ ಕೊಡುವುದಾಗಿದೆ. ಇದರಿಂದಾಗಿ ಸ್ವಿಮ್ಮಿಂಗ್‌ ಪೂಲ್‌ಗ‌ಳಲ್ಲಿ ಬಳಸುವ ಕ್ಲೋರಿನ್‌ ನೀರಿನಿಂದ ಮುಕ್ತಿ ಪಡೆದು ಕ್ಲೋರಿನ್‌ ರಹಿತ ಉತ್ತಮ ನೀರಲ್ಲಿ
ಮನೋರಂಜನೆ ಪಡೆಯಬಹುದಾಗಿದೆ. ಈ ಮೂಲಕ ಬೇಸಗೆಯಲ್ಲಿ ಈಜುಕೊಳಕ್ಕಾಗಿ ತತ್ತರಿಸುವ ಜನರಿಗೆ ಮುಕ್ತಿ ದೊರೆತಂತಾಗುತ್ತದೆ.ಇಲ್ಲಿನ ಈ ಪೂಲ್‌ಗ‌ಳು ಮಕ್ಕಳಿಗೆ ಮತ್ತು ಹಿರಿಯರಿಗೆ ಎನ್ನುವಂತೆ 2 ವಿಭಾಗಗಳಲ್ಲಿ ವಿಂಗಡಿಸಲಾಗಿರುತ್ತದೆ. ದಿನದಲ್ಲಿ ಸಾವಿರಾರು ಈಜುಗಾರರು ಇಲ್ಲಿಗೆ ಆಗಮಿಸುತ್ತಾರೆ.

ನಮ್ಮ ನಗರದಲ್ಲೂ ನಿರ್ಮಾಣವಾಗಲಿ
ಸ್ಮಾರ್ಟ್‌ ನಗರಿಯಾಗಿ ಬೆಳೆಯುತ್ತಿರುವ ಕಡಲ ತೀರಕ್ಕೆ ಅಂಟಿಕೊಂಡಿರುವ ನಮಮ್‌ ಮಂಗಳೂರು ಸುತ್ತಮುತ್ತ ಹಲವಾರು ನದಿಗಳು ಹರಿಯುತ್ತಿವೆ.

ಈ ನದಿಗಳಿಗೆ ಪ್ಯಾರಿಸ್‌ನಲ್ಲಿರುವ ಬಾಸ್ಸಿನ್‌ ಡೆ ವಿಲ್ಲೆಟ್‌ ಈಜುಕೊಳದ ಟಚ್‌ ಕೊಟ್ಟರೆ ಅದು ಅನಂತರ ಪ್ರವಾಸೋದ್ಯಮವಾಗಿ ಬೆಳೆಯುವುದರಲ್ಲಿ ಸಂಶಯವಿಲ್ಲ. ಮಾತ್ರವಲ್ಲದೇ ಒಂದಷ್ಟು ಕಠಿನ ಕ್ರಮಗಳನ್ನು ಕೈಗೊಂಡರೆ ಇದರಿಂದ ನದಿ ಮಾಲಿನ್ಯ ತಡೆಗಟ್ಟrಲೂ ಸಾಧ್ಯವಿದೆ.

– ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.