ಸ್ಥಳ ಎಲ್ಲೇ ಆಗಲಿ.. ಮಂಗಳೂರಿಗೆ ಕೇಂದ್ರ ಬಸ್‌ ನಿಲ್ದಾಣ ಬರಲಿ


Team Udayavani, Apr 14, 2019, 6:05 AM IST

1304mlr102-blok

ಮಂಗಳೂರಿಗೆ ಸುಸಜ್ಜಿತ ಕೇಂದ್ರ ಬಸ್‌ ನಿಲ್ದಾಣ ಸುಮಾರು ಮೂರು ದಶಕಗಳ ಪ್ರಸ್ತಾವನೆ. ಬಹಳಷ್ಟು ಸಭೆಗಳು ನಡೆದಿವೆ, ಚರ್ಚೆಗಳು ಆಗಿವೆ. ಉದ್ದೇಶಿತ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಆನೇಕ ಪ್ರದೇಶಗಳನ್ನೂ ಗುರುತಿಸಲಾಗಿದೆ. ಕಡೆಗೆ ಪಂಪ್‌ವೆಲ್‌ ಬಳಿ ಸ್ಥಳವೂ ಆಯ್ಕೆಯಾಯಿತು. ವಿನ್ಯಾಸಗಳು ರಚನೆಯಾದವು. ಸಾಧ್ಯತೆ ವರದಿ ಸಿದ್ಧವಾಯಿತು. ಈ ಕಾಲಘಟ್ಟದಲ್ಲಿ ಬಸ್‌ ನಿಲ್ದಾಣದ ಪ್ರಸ್ತಾವ ಪಂಪ್‌ವೆಲ್‌ನಿಂದ ಕುಳೂರು, ಪಡೀಲ್‌ನತ್ತ ಮುಖ ಮಾಡಿದೆ. ಕಳೆದ ಮೂವತ್ತು ವರ್ಷಗಳಿಂದ ಸ್ಥಳ ಆಯ್ಕೆ ಬಿಟ್ಟರೆ ಬೇರೇನೂ ಆಗಿಲ್ಲ. ಈಗಲೂ ಇದೆ ಸ್ಥಿತಿಯಲ್ಲಿದೆ. ಸ್ಥಳ ಹುಡುಕಾಟಕ್ಕೆ ಶಾಶ್ವತ ಇತಿಶ್ರೀ ಹಾಡಬೇಕಾಗಿದೆ. ಸ್ಥಳ ಎಲ್ಲೇ ಆಗಲಿ.. ಮಂಗಳೂರಿಗೆ ಕೇಂದ್ರ ಬಸ್‌ ನಿಲ್ದಾಣ ಬರಲಿ.

ಮಂಗಳೂರು ನಗರ ಒಂದೆಡೆ ಸ್ಮಾರ್ಟ್‌ ಸಿಟಿಯಾಗಲು ಹೊರಟಿದೆ. ಇನ್ನೊಂದಡೆ ಬೆಂಗಳೂರು ಬಿಟ್ಟರೆ ರಾಜ್ಯದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿ ಗುರುತಿಸಿಕೊಂಡಿದೆ. ಶೈಕ್ಷಣಿಕ ಹಬ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ ನಗರಕ್ಕೆ ಇನ್ನೂ ಕೂಡ ಶಾಶ್ವತ ಕೇಂದ್ರ ಬಸ್‌ನಿಲ್ದಾಣ ಹೊಂದಲು ಸಾಧ್ಯವಾಗಿಲ್ಲ . ಪ್ರಸ್ತುತ ಸ್ಟೇಟ್‌ ಬ್ಯಾಂಕ್‌ ಬಳಿ ಇರುವ ತಾತ್ಕಾಲಿಕ ಕೇಂದ್ರ ಬಸ್‌ ನಿಲ್ದಾಣ ಬಸ್‌ಗಳಿಂದ ತುಂಬಿ ತುಳುಕುತ್ತಿವೆ. ಬಸ್‌ಗಳಿಗೆ ನಿಲ್ಲಲು ಜಾಗವಿಲ್ಲದೆ ಪಕ್ಕದ ರಸ್ತೆಗಳನ್ನು ಆಕ್ರಮಿಸಿಕೊಂಡಿವೆ.

ಹಂಪನಕಟ್ಟೆಯಿಂದ ನೆಹರೂ ಮೈದಾನದ ಬಳಿ ಹಾಕಿ ಮೈದಾನಕ್ಕೆ ತಾತ್ಕಾಲಿಕ ನೆಲೆಯಲ್ಲಿ ಸರ್ವಿಸ್‌ ಬಸ್‌ನಿಲ್ದಾಣವನ್ನು 1996ರ ಅ. 6ರಂದು ಸ್ಥಳಾಂತರಿಸಲಾಯಿತು. ಇಲ್ಲಿ ಕಳೆದ 23 ವರ್ಷಗಳಷ್ಟು ಸುದೀರ್ಘ‌ ಅವಧಿಯಿಂದ ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಈ ಬಸ್‌ ನಿಲ್ದಾಣ ಅಭಿವೃದ್ಧಿ ಕಾಣಲು ಸಾಧ್ಯವಾಗದೆ ತ್ರಿಶಂಕು ಸ್ಥಿತಿಯಲ್ಲಿದೆ.

ತಾತ್ಕಾಲಿಕ ಎಂಬ ಹಣೆಪಟ್ಟಿ ಇರುವುದರಿಂದ ಇದಕ್ಕೆ ತೇಪೆ ಹಾಕುವ ಕೆಲಸ ಮಾತ್ರ ಮಾಡಬಹುದಾಗಿದ್ದು , ಶಾಶ್ವತ ಕಾಮಗಾರಿಗಳನ್ನು ನಡೆಸುವಂತಿಲ್ಲ. ನಗರದ ಪರಿಸ್ಥಿತಿ ಹೇಗಿದೆ ಎಂದರೆ ಅತ್ತ ಹೊಸ ನಿಲ್ದಾಣವೂ ಇಲ್ಲ. ಅತ್ತ ಹಳೆಯ ನಿಲ್ದಾಣ ದುರಸ್ತಿಯೂ ಇಲ್ಲ.

ವಾಹನ ದಟ್ಟಣೆ
ಮಂಗಳೂರು ನಗರ ಅತಿಯಾದ ವಾಹನ ದಟ್ಟಣೆ ಎದುರಿಸುತ್ತಿದೆ. ಸಿಟಿ ಬಸ್‌, ಸರ್ವಿಸ್‌ ಬಸ್‌, ಎಕ್ಸ್‌ಪ್ರೆಸ್‌ ಬಸ್‌ಗಳು, ಟೂರಿಸ್ಟ್‌ ಬಸ್‌ಗಳು, ಅಂತಾರಾಜ್ಯ ಪರವಾನಿಗೆಯ ಬಸ್‌ಗಳು, ಶಾಲಾಕಾಲೇಜುಗಳ ಬಸ್‌ಗಳು ಸೇರಿದಂತೆ ಸುಮಾರು 4 ಸಾವಿರಕ್ಕೆ ಅಧಿಕ ಬಸ್‌ಗಳು ಇವೆ.

ಹಂಪನಕಟ್ಟೆ ಪ್ರದೇಶದಲ್ಲಿ ದಿನವೊಂದಕ್ಕೆ ಸಾವಿರಾರು ಬಸ್‌ಗಳು ಬರುತ್ತಿರುವುದರಿಂದ ಮಿತಿಮೀರಿದ ವಾಹನ ದಟ್ಟಣೆ ಸಮಸ್ಯೆ ಕಾಡುತ್ತಿದೆ. ಬಸ್‌ಗಳಿಗೆ ಹಂಪನಕಟ್ಟೆ ಪ್ರದೇಶಕ್ಕೆ ಪ್ರವೇಶಿಸಲು ಹೊಸದಾಗಿ ಪರವಾನಿಗೆ ಸಿಗುವುದಿಲ್ಲ.

ಜಾಗ ಇದೆ..ಜಾರಿಯಾಗುತ್ತಿಲ್ಲ
ಹಲವಾರು ಪ್ರದೇಶಗಳು ಪ್ರಸ್ತಾಪಕ್ಕೆ ಬಂದು ಕಡೆಗೆ ಪಂಪ್‌ವೆಲ್‌ನಲ್ಲಿ ಸ್ಥಳ ಆಯ್ಕೆಯಾಯಿತು. ವಿಸ್ತಾರವಾದ ಹಾಗೂ ಸರ್ವಸಜ್ಜಿತ ಬಸ್‌ನಿಲ್ದಾಣಕ್ಕೆ ಒಟ್ಟು 17.5 ಎಕ್ರೆ ಜಾಗವನ್ನು ಅಂದಾಜಿಸಲಾಯಿತು. ರಾಷ್ಟ್ರೀಯ ಹೆದ್ದಾರಿ 66ಕ್ಕೆ ತಾಗಿಕೊಂಡಂತೆ ಪ್ರಥಮ ಹಂತದಲ್ಲಿ ಸುಮಾರು 8 ಎಕ್ರೆ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಯಿತು. ಇದರಲ್ಲಿ ಪ್ರಸ್ತುತ ಉಳಿದುಕೊಂಡಿರುವ 7.33 ಎಕ್ರೆ ಪ್ರದೇಶಕ್ಕೆ ಮಣ್ಣುತುಂಬಿಸುವ ಕಾರ್ಯ ನಡೆದು 3 ವರ್ಷಗಳಾಗುತ್ತಾ ಬಂದಿವೆೆ. ಲಭ್ಯವಿರುವ 7.33 ಎಕ್ರೆ ಜಾಗವನ್ನು ಇಟ್ಟುಕೊಂಡು ಯಾವ ರೀತಿ ಸುಸಜಿcತ ಬಸ್‌ನಿಲ್ದಾಣ ನಿರ್ಮಿಸಬಹುದು ಎಂಬ ಬಗ್ಗೆ ಸಾಧ್ಯತಾ ವರದಿ ಹಾಗೂ ನಕ್ಷೆ ಸಿದ್ಧಗೊಂಡಿತ್ತು. ಈ ನಡುವೆ ಇಲ್ಲಿ ಇಂಟರ್‌ಲಾಕ್‌ ಅಳವಡಿಸಿ ತಾತ್ಕಾಲಿಕವಾಗಿ ಪ್ರಾಯೋಗಿಕ ನೆಲೆಯಲ್ಲಿ ಸರ್ವಿಸ್‌ ಬಸ್‌ನಿಲ್ದಾಣವನ್ನು ಸ್ಥಳಾಂತರಿಸುವ ಬಗ್ಗೆಯೂ ಪ್ರಸ್ತಾವಿಸಲಾಗಿತ್ತು¤. ಮುಖ್ಯಮಂತ್ರಿಯ ಎರಡನೇ ಹಂತದ ವಿಶೇಷ 100 ಕೋಟಿ ರೂ. ಅನುದಾನದಲ್ಲಿ ನಿರ್ದಿಷ್ಟ ಮೊತ್ತವನ್ನು ನೂತನ ಬಸ್‌ ನಿಲ್ದಾಣದ ಅಭಿವೃದ್ಧಿಗೆ ವಿನಿಯೋಗಿಸುವ ಬಗ್ಗೆ ತೀರ್ಮಾನವಾಗಿತ್ತು. ಆದರೆ ಯಾವುದೂ ಕಾರ್ಯರೂಪಕ್ಕೆ ಬರಲಿಲ್ಲ.

ಪಂಪ್‌ವೆಲ್‌ನಲ್ಲಿ ಫ್ಲೈಓವರ್‌ ನಿರ್ಮಾಣವಾಗುತ್ತಿದೆ. ಈ ಹಂತದಲ್ಲಿ ಇಲ್ಲಿ ಬಸ್‌ ನಿಲ್ದಾಣ ನಿರ್ಮಾಣವಾದರೆ ಸಂಚಾರ ವ್ಯವಸ್ಥೆ ಬಾಧಿತವಾಗಲಿದೆ. ತಾಂತ್ರಿಕ ಸಮಸ್ಯೆಗಳು ಉದ್ಬವವಾಗಲಿವೆ. ನಿಲ್ದಾಣಕ್ಕೆ ಬಸ್‌ಗಳ ಆಗಮನ ನಿರ್ಗಮನಕ್ಕೆ ಸಮಸ್ಯೆಯಾಗಲಿದೆ ಎಂಬ ವಾದವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮುಂದಿಡುತ್ತಿದೆ.

ಸ್ಮಾರ್ಟ್‌ಸಿಟಿ ಯೋಜನೆಯಡಿ ವಿವಾದವನ್ನು ಬೆನ್ನಟ್ಟಿಕೊಂಡೇ ಪ್ರಾರಂಭವಾದ ಈ ಯೋಜನೆ ಇನ್ನೂ ಇದರಿಂದ ಮುಕ್ತವಾಗಿಲ್ಲ. ಈಗ ಈ ಯೋಜನೆಯನ್ನು ಸ್ಮಾರ್ಟ್‌ ಸಿಟಿ ಯೋಜನೆಯಡಿಯಲ್ಲಿ ಕೈಗೆತ್ತಿಗೊಳ್ಳಲು ನಿರ್ಧರಿಸಲಾಗಿದೆ. ಆದರೆ ಪಂಪ್‌ವೆಲ್‌ ಬದಲು ನಗರ ಬೇರೆ ಪ್ರದೇಶದಲ್ಲಿ ಬಸ್‌ ನಿಲ್ದಾಣ ನಿರ್ಮಿಸುವ ಚಿಂತನೆ ಆರಂಭವಾಗಿದೆ. ಪಡೀಲ್‌ ಅಥವಾ ಕೊಟ್ಟಾರ ಚೌಕಿ ಬಳಿ ನೂತನ ಬಸ್‌ ನಿಲ್ದಾಣ ನಿರ್ಮಿಸುವ ಪ್ರಸ್ತಾವನೆ ಕೇಳಿ ಬರುತ್ತಿದೆ. ಇದಕ್ಕಾಗಿ ಮತ್ತೆ ಆರಂಭದಿಂದಲೇ ಎಲ್ಲ ಪ್ರಕ್ರಿಯೆಗಳು ನಡೆಯಬೇಕಾಗಿದೆ. ಇದು ಮತ್ತಷ್ಟು ಕಾಲಾವಕಾಶವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ.

ನೂತನ ಕೇಂದ್ರ ಬಸ್‌ ನಿಲ್ದಾಣ ಪ್ರಸ್ತಾವನೆ ರೂಪುಗೊಂಡು ಬಹಳಷ್ಟು ವರ್ಷಗಳಾಗಿವೆ. ಪ್ರಸ್ತಾವನೆ ಯೋಜನೆಯಾಗಿ ಅನುಷ್ಠಾನದ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾಗಿದೆ. ಜಾಗ ಗುರುತಿಸುವುದರಲ್ಲೇ ಕಾಲಹರಣ ಮಾಡದೆ ಅನುಷ್ಠಾನಕ್ಕೆ ವೇಗವನ್ನು ನೀಡುವ ಕಾರ್ಯ ನಡೆಯಬೇಕಾಗಿದೆ.

ಯೋಜನೆಯಾಗಿಯೇ ಉಳಿದಿದೆ
ಮಂಗಳೂರು ನಗರಕ್ಕೆ ಸುಸಜ್ಜಿತ ಬಸ್‌ ನಿಲ್ದಾಣ ಪ್ರಸ್ತಾವಕ್ಕೆ ಮೂರು ದಶಕಗಳ ಇತಿಹಾಸವಿದೆ. ಬಸ್‌ ನಿಲ್ದಾಣವನ್ನು ನೆಹರೂ ಮೈದಾನದ ಹಾಕಿ ಕ್ರೀಡಾಂಗಣಕ್ಕೆ ತಾತ್ಕಾಲಿಕ ನೆಲೆಯಲ್ಲಿ ಸ್ಥಳಾಂತರ ಮಾಡುವಾಗಲೇ ಸೂಕ್ತ ಪ್ರದೇಶದಲ್ಲಿ ವಿಶಾಲ ಮತ್ತು ಸುಸಜ್ಜಿತ ಬಸ್‌ನಿಲ್ದಾಣವನ್ನು ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ಭರತ್‌ಲಾಲ್‌ ಮೀನ ಅವರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಈ ನಿಟ್ಟಿನಲ್ಲಿ ಒಂದಷ್ಟು ಪ್ರಕ್ರಿಯೆಗಳು ಕೂಡ ನಡೆದಿತ್ತು. ಆದರೆ ಅವರು ಜಿಲ್ಲೆಯಿಂದ ವರ್ಗಾವಣೆಯಾದ ಬಳಿಕ ಅದು ನನೆಗುದಿಯಲ್ಲಿ ಬಿತ್ತು. ಹೊಸ ಬಸ್‌ ನಿಲ್ದಾಣ ನಿರ್ಮಾಣ ಅಂದಿನಿಂದ ಇಂದಿನವರೆಗೆ ಬರೇ ಯೋಜನೆಯಾಗಿಯೇ ಉಳಿದುಕೊಂಡಿದೆ ವಿನ ಅನುಷ್ಠಾನಕ್ಕೆ ಬಂದಿಲ್ಲ.

–   ಕೇಶವ ಕುಂದರ್‌

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.